No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ವಸಂತೋತ್ಸವದ ರಂಗೇರುವಂತೆ ಮಾಡಿದ ‘ವಸಂತ ಸೇನೆ’ ನಾಟಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 26, 2025
in Special Articles
0
ವಸಂತೋತ್ಸವದ ರಂಗೇರುವಂತೆ ಮಾಡಿದ ‘ವಸಂತ ಸೇನೆ’ ನಾಟಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ವಸಂತ ಋತುವಿನ ಈ ಹೊತ್ತಿನಲ್ಲಿ ವಸಂತೋತ್ಸವದ ರಂಗೇರುವಂತೆ ಮಾಡಿದ್ದು ಕುವೆಂಪುರಂಗಮಂದಿರದಲ್ಲಿ ಪ್ರದರ್ಶಿತಗೊಂಡ ವಸಂತ ಸೇನೆ ಎಂಬ ನಾಟಕ. ಹೊರಗೆ ಮಿಂಚು, ಗುಡುಗು ಸಹಿತವಾಗಿ ಧೋ ಎಂದು ಮಳೆ ಸುರಿದು ಇಳೆ ತಂಪಾದರೆ ರಂಗಮಂದಿರದ ಒಳಗೆ ಮನಸ್ಸು ತಂಪಾಗುವಂತೆ ಮಾಡಿದ್ದು ಈ ನಾಟಕ.

ಸಂಸ್ಕೃತದಲ್ಲಿ ನಾವು ಓದಿದ ನಾಟಕ ಅದು 10 ಅಂಕಗಳದ್ದಾದರೂ ಅದನ್ನು ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರ ಅನುವಾದ ಆಧರಿಸಿ ರಂಗ ರೂಪಕ್ಕೆ ಇಳಿಸುವುದೆಂದರೆ ಅದು ಸಾಹಸದ ಕೆಲಸ. ಆ ಸಾಹಸ ಮಾಡಿರುವುದು ನಾಟಕದ ನಿರ್ದೇಶಕರಾದ ಶ್ರೀ ವೈದ್ಯ ಅವರು.
“ನಾಟ್ಯಂ ಭಿನ್ನ ರುಚೇರ್ ಜನಸ್ಯ ಬಹುದಾಪ್ಯೇಕಮ್” ಸಮಾರಾಧನಮ್ ಎನ್ನುವ ಮಾತನ್ನು ನೆನಪಿಸಿದ್ದು ಈ ವಸಂತಸೇನೆ. ಹಾಗೆಯೇ ‘ಕಾವ್ಯೇಷು ನಾಟಕಂ ರಮ್ಯಮ್ ಎಂದು ಹೇಳಿರುವುದು ಸಹ ಇಂಥವುಗಳಿಂದಲೇ ಎನ್ನುವುದು ಮತ್ತೆ ಪ್ರಮಾಣಿತವಾಯಿತು. ನಾಟಕದ ಆರಂಭದಲ್ಲಿಯೇ ಸೂತ್ರದಾರ ಹಾಗೂ ನಟಿಯರು ಬಂದು ಇಡೀ ನಾಟಕದ ಪಾತ್ರಗಳ ಪರಿಚಯ ಮಾಡುವ ರೀತಿಯೇ ಸಂಪೂರ್ಣ ನಾಟಕವನ್ನು ಸೆಳೆಯುವಂತಾಯ್ತು. ಹಾಗೆ ನಾಟಕದ ಆ್ಯಂಥಮ್ ಆದಂತಹ ಗಜವದನ ಹೇರಂಬ… ಪ್ರಸ್ತುತಿಯಂತೂ ಬಹು ಸೊಗಸಾದ ಆರಂಭವನ್ನು ನಾಟಕಕ್ಕೆ ನೀಡಿತು.
ಪ್ರಸ್ತುತ ಈ ನಾಟಕ ಶೂದ್ರಕನು ಸಂಸ್ಕೃತ ನಾಟಕಗಳ ಸಾಂಪ್ರದಾಯಿಕ ಕಥೆಗಳಿಂದ ಹೊರಬಂದು ವಾಸ್ತವಿಕ ಸಾಮಾಜಿಕ ನಾಟಕವನ್ನು ರಚಿಸಿದನೆಂದು ಸಾಬೀತುಪಡಿಸುತ್ತದೆ. ಸಾಮಾನ್ಯ ಜನರ ಜೀವನ ಮತ್ತು ಸಮಾಜದ ವಾಸ್ತವತೆ ಚಿತ್ರಿಸುವಲ್ಲಿ ಅವನ ಕೈಚಳಕ ಅಪ್ರತಿಮವಾಗಿದೆ. ಸಮಕಾಲೀನ ಸಮಾಜದ ಆರ್ಥಿಕ ಸ್ಥಿತಿಯನ್ನು ಇದರಲ್ಲಿ ಪ್ರಾಮಾಣಿಕವಾಗಿ ಚಿತ್ರಿಸಲಾಗಿದೆ. ಆ ಸಮಾಜದಲ್ಲಿ ಶ್ರೀಮಂತರು ಮತ್ತು ಬಡವರ ನಡುವಿನ ವರ್ಗ ವಿಭಜನೆ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಅಧಿಕಾರದಲ್ಲಿರುವ ಪುರುಷರು ತಮ್ಮ ಸ್ವಂತ ಅಗತ್ಯಗಳನ್ನು ಪೂರೈಸಲು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದರು. ಕ್ರೂರ ರಾಜನ ವಿರುದ್ಧದ ದಂಗೆ ಮತ್ತು ಅಂತಿಮವಾಗಿ ಆರ್ಯಕನನ್ನು ಸಾಮಾನ್ಯ ಜನರ ಪ್ರತಿನಿಧಿಯಾಗಿ ನೇಮಿಸುವುದನ್ನು ನೀತಿವಂತ ಜನರು ಪ್ರಾಮಾಣಿಕ ಮತ್ತು ಧೈರ್ಯಶಾಲಿ ರಾಜಕಾರಣಿಯನ್ನು ಅಧಿಕಾರಕ್ಕೆ ಸ್ಥಾಪಿಸುವ ಮೂಲಕ ಭ್ರಷ್ಟ ರಾಜ್ಯಾಧಿಕಾರವನ್ನು ಉರುಳಿಸಲು ಮಾಡಿದ ಕ್ರಾಂತಿಯ ಕ್ರಿಯೆಯಾಗಿ ಇದನ್ನು ಕಾಣಬಹುದು. ಸಮಕಾಲಿನ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಸನ್ನಿವೇಶಗಳು ಇಂದಿನ ದಿನಗಳಂತೆಯೇ ಇರುವುದನ್ನು ಈ ನಾಟಕದಲ್ಲಿ ಕಾಣುತ್ತೇವೆ.

ಶೂದ್ರಕನು ತಿಳಿಹಾಸ್ಯದ ಶೈಲಿಯಲ್ಲಿ ಶಕಾರನ ಪಾತ್ರ ಸೃಷ್ಟಿ ಮಾಡಿದ್ದಾನೆ. ಅದಕ್ಕೆ ನಾಗಭೂಷಣ್ ಅವರು ನ್ಯಾಯ ಒದಗಿಸಿದ್ದಾರೆ. ನಾಟಕದ ಸಂವಾದಗಳಂತು ನಾಟಕವನ್ನು ಜೀವಂತಗೊಳಿಸುತ್ತವೆ. ಈ ನಾಟಕ ರಾಜಕೀಯ, ಪ್ರೇಮ, ವಂಚನೆ, ಧರ್ಮ, ತ್ಯಾಗ ಮತ್ತು ನ್ಯಾಯದ ದರ್ಶನ ವಿಷಯಗಳನ್ನು ಒಳಗೊಂಡ ನಾಟಕವಾಗಿದೆ. ಜನಸಾಮಾನ್ಯರ ಬದುಕನ್ನು ನಾಟಕದ ಕೇಂದ್ರೀಕೃತವಾಗಿಸಿರುವುದು ಶೂದ್ರಕನ ವೈಶಿಷ್ಟ್ಯ. ಅದನ್ನು ಸಮರ್ಥವಾಗಿ ಈ ನಾಟಕದಲ್ಲಿ ಬಹಳ ಚೆನ್ನಾಗಿ ಅಭಿನಯಿಸಿದ್ದಾರೆ. ನಾಟಕದಲ್ಲಿನ ಪ್ರತಿಯೊಂದು ದೃಶ್ಯ ಪ್ರೇಕ್ಷಕರ ಮನತಣಿಸುವಂತೆಯೇ ಮಾಡಿತು.
ರಂಗ ವಿನ್ಯಾಸದ ಕಲ್ಪನೆಯಂತೂ ಬಹು ಸೊಗಸಾಗಿತ್ತು. ಅದಕ್ಕೆ ಪೂರಕವಾಗಿ ವಸ್ತ್ರ ವಿನ್ಯಾಸವು ಕೂಡ ಸೇರಿಕೊಂಡಿತು. ನಾಟಕದ ಇನ್ನೊಂದು ಅಂಶ ಹಿನ್ನೆಲೆ ಸಂಗೀತ. ಗಜಾನನ ಶರ್ಮಾ ಅವರು ಇದಕ್ಕಾಗಿ ಸಾಹಿತ್ಯವನ್ನು ಬರೆದು ಕೊಟ್ಟ ಹಾಡಿದ ಹಾಡುಗಳಂತೂ ನಾಟಕದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿತು ಎಂದರೆ ತಪ್ಪಾಗಲಾರದು. ವಸಂತೋತ್ಸವವೇ ಮೊದಲಾದ ಸಂದರ್ಭಗಳಲ್ಲಿ ಮಾಡಿದ ನೃತ್ಯ ಸಂಯೋಜನೆಯು ಕೂಡ ತುಂಬಾ ಚೆನ್ನಾಗಿತ್ತು. ನಾಟಕದ ಎಲ್ಲಾ ಪಾತ್ರಧಾರಿಗಳ ಮನಮುಟ್ಟುವ ಸಂವಹನ, ಆಂಗಿಕ ಅಭಿನಯ ಮತ್ತು ಭಾವಾಭಿವ್ಯಕ್ತಿ ಪ್ರೇಕ್ಷಕರ ಮನಗೆಲ್ಲುತ್ತದೆ. ಉತ್ತಮ ನಿರ್ದೇಶನ, ಬೆಳಕಿನ ವಿನ್ಯಾಸ, ರಂಗಸಜ್ಜಿಕೆ ಇಡೀ ಕಥಾ ಹಂದರಕ್ಕೆ ಪೂರಕವಾಗಿದ್ದು ಎಲ್ಲ ನಟರ ಅಭಿನಯ ಮನಮುಟ್ಟುವಂತಿತ್ತು.

ಶಕಾರನ ಪಾತ್ರದ ಮುಖ್ಯ ಗುಣಲಕ್ಷಣಗಳು ಅವನ ಅಸಂಗತ ಮಾತು, ಅತಿಯಾದ ಅಸಹ್ಯಕರ ಕಾಮ ಮತ್ತು ತುಂಟತನ ಇದನ್ನು ನಾಗಭೂಷಣ್ ಅವರು ಅದ್ಭುತವಾಗಿ ನಿರ್ವಹಿಸಿದರೆ, ಅವರ ಜೊತೆಗಾರನದೂ ಸಹ ಒಳ್ಳೆಯ ಅಭಿನಯವೇ. ವಸಂತಸೇನೆಯ ಪಾತ್ರಕ್ಕೆ ತಮ್ಮ ನೃತ್ಯ ನಟನೆಯ ಮೂಲಕ ಲಕ್ಷ್ಮಿ ಜೀವ ತುಂಬಿದರೆ, ನಾಗರಾಜ್ ನೀಲ್ ಅವರದ್ದು ಸಹ ಚಾರುದತ್ತನಾಗಿ ಅಷ್ಟೇ ಸೊಗಸಾದ ಅಭಿನಯ. ಹಾಗೆಯೇ ಮೈತ್ರೇಯ, ರದನಿಕೆ, ಶರ್ಮಿಲಕ, ರಾಣಿಯ ಸಖಿ, ಜೂಜುಕೋರರು ಎಲ್ಲರದ್ದೂ ಒಳ್ಳೆಯ ಅಭಿನಯವೇ ಆಗಿತ್ತು.
ಈ ಪ್ರಾಚೀನ ನಾಟಕವು ಸಂಪೂರ್ಣವಾಗಿ ಸಮಕಾಲೀನ ವಾಸ್ತವಿಕ ಛಾಯೆಯನ್ನು ಹೊಂದಿದೆ. ಆದ್ದರಿಂದ ಅದರ ಆಧುನಿಕ ಪ್ರಾತಿನಿಧ್ಯವನ್ನು ನಿಸ್ಸಂದೇಹವಾಗಿ ಪ್ರಸ್ತುತವಾಗಿಸುತ್ತದೆ. ನಾಟಕದಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದರ ನಡುವಿನ ಸಂಘರ್ಷ ಚಿತ್ರಿಸಲಾಗಿದೆ. ಕೊನೆಯಲ್ಲಿ ಒಳ್ಳೆಯದು ಕೆಟ್ಟದ್ದನ್ನು ಮೀರಿ ಬೆಳೆಯುತ್ತದೆ. ಸತ್ಯ ಮತ್ತು ನ್ಯಾಯವನ್ನು ಸ್ಥಾಪಿಸುತ್ತದೆ ಎನ್ನುವುದನ್ನು ಬಹಳ ಚೆನ್ನಾಗಿ ಚಿತ್ರಿಸಲಾಗಿದೆ.

http://kalpa.news/wp-content/uploads/2025/03/PES-Video.mp4

ಆರಂಭದಲ್ಲಿ ಚತುಷಷ್ಟಿ ಕಲೆಗಳ ಕುರಿತಾದ ಕೊಂಚ ವಿವರಣೆ ನಾಟಕದಲ್ಲಿನ ಟ್ರೈಲರ್ ತರ ಅನಿಸಿದರೆ, ಗಣಿಕಾ ಸ್ತ್ರೀಯಾದ ವಸಂತ ಸೇವೆ ಚಾರುದತ್ತ ನಿರ್ವ್ಯಾಜ ಪ್ರೇಮ, ಶರ್ವಿಲಕ ಕಳ್ಳತನ ಮಾಡುವುದು ಸಹ ಸದುದ್ದೇಶಕ್ಕಾಗಿಯೇ ಹಾಗಾಗಿ ಅದರಿಂದ ಮುಂದೆ ಒಳ್ಳೆಯದೇ ಆಗುತ್ತದೆ. ಚಾರುದತ್ತನ ಸಜ್ಜನಿಕೆಯ ಗುಣವು ಸಹ ಅವನಿಗೆ ವರ ವಾಗುವುದು. ಜೂಜುಕೋರನಾಗಿದ್ದ ವ್ಯಕ್ತಿ ಮನಃಪರಿವರ್ತನೆಗೊಂಡು ಬೌದ್ಧ ಬಿಕ್ಷುವಾಗಿ ತನ್ನ ಋಣದ ಕಾರಣಕ್ಕಾಗಿ ವಸಂತಸೇನೆಯನ್ನು ಕಾಪಾಡುವುದು ಎಂಬೆಲ್ಲ ಅಂಶಗಳು ಸಹ ಮೌಲ್ಯಗಳನ್ನು ಹೇಳುವಂತೆ ಕವಿ ಚಿತ್ರಿಸಿದ್ದನ್ನು ಕಲಾವಿದರು ಅಭಿನಯಿಸಿದ್ದು ಸಹೃದಯ ಪ್ರೇಕ್ಷಕರಿಗೆ ಸಂತಸ ತಂದಿತು.

ಬಹು ಮುಖ್ಯವಾಗಿ ಹೇಳಬೇಕೆಂದರೆ ಚಾರುದತ್ತನ ಮನೆಗೆ ವಸಂತ ಸೇನೆ ಬಂದಾಗಿನ ದೃಶ್ಯ, ಕಳ್ಳ ಕದಿಯುವ ಸಲುವಾಗಿ ಕನ್ನ ಹಾಕುವ ದೃಶ್ಯ, ವಸಂತೋತ್ಸವದ ನೃತ್ಯದ ಸನ್ನಿವೇಶ, ಎತ್ತಿನ ಗಾಡಿಗಳನ್ನು ರಂಗಕ್ಕೆ ಅಳವಡಿಸಿದ ದೃಶ್ಯಾವಳಿಗಳು ಪ್ರೇಕ್ಷಕನ ಮನದಲ್ಲಿ ಹಾಗೆ ಅಚ್ಚಳಿಯದೆ ಉಳಿಯುವಂತಾಯ್ತು.
ಪ್ರತಿ ಅಂಕ ಮುಗಿದ ಮೇಲೆ ಬೀಳುತ್ತಿದ್ದ ಚಪ್ಪಾಳೆಗಳು ಒಟ್ಟಾರೆ ನಾಟಕದ ಯಶಸ್ಸನ್ನು ಸಾರುತ್ತಿದ್ದವು. ಈ ರೀತಿಯ ಕಲ್ಪನೆ ಕಣ್ಣಲ್ಲಿ ಮೂಡಿಸಿಕೊಂಡು ಅದನ್ನು ಕಲಾವಿದರ ಮೂಲಕ ನಮ್ಮೆದುರಿಗೆ ಪ್ರಸ್ತುತಪಡಿಸಿದ ವೈದ್ಯ ಅವರಿಗೊಂದು ಎಲ್ಲರ ಅಭಿಮಾನದ ಅಭಿನಂದನೆ ಸಲ್ಲಲೇ ಬೇಕು. ಹಾಗೆಯೇ ಪಾತ್ರಕ್ಕೆ ಒಪ್ಪುವಂತಹ ಕಲಾವಿದರನ್ನು ಆಯ್ಕೆ ಮಾಡಿರುವುದೇ ಅವರ ಮೊದಲ ಜಯ. ಅದಕ್ಕೆ ತಕ್ಕದಾದ ಸಂಗೀತ ನೀಡಿದ ಸಾತ್ ಇದೆಯಲ್ಲ ಅದು ಅಮೋಘ. ಶ್ರೀಯುತ ಕಾಳಮಂಜಿ ಅವರ ಸೊಗಸಾದ ಸಂಗೀತಕ್ಕೆ ಧನಿಯಾದವರೂ ಸಹ ಇಲ್ಲಿ ಸ್ಮರಣೀಯರು.

ಒಟ್ಟಾರೆ ಇಡೀ ನಾಟಕ ವಾರಾಂತ್ಯದಲ್ಲಿ ನೀಡಿದ ರಸದೌತಣ ಎಂದರೆ ಅದು ಅತಿಶಯೋಕ್ತಿ ಅಲ್ಲ. ಒಂದು ಅಪೂರ್ವ ರಂಗ ಪ್ರಯೋಗವನ್ನು ಯಶಸ್ವಿಯಾಗಿ ನಿರ್ವಹಿಸಿದ ಮತ್ತು ನಿರ್ದೇಶಿಸಿದ ಶ್ರೀವೈದ್ಯ ಹಾಗೂ ಇಡೀ ತಂಡ ಇಲ್ಲಿ ಅಭಿನಂದನೆಗೆ ಅರ್ಹ.

ಡಾ. ಮೈತ್ರೇಯಿ ಆದಿತ್ಯಪ್ರಸಾದ್
ಸಂಸ್ಕೃತ ಉಪನ್ಯಾಸಕರು
ಪೇಸ್ ಕಾಲೇಜು ಶಿವಮೊಗ್ಗ.
ಚಿತ್ರ ಕೃಪೆ: ಆದಿತ್ಯ ಪ್ರಸಾದ್ ಎಂ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: ವಿಶೇಷ ಲೇಖನ
Share196Tweet123Send
Previous Post

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ

Next Post

ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ: ವೀರೇಶ್ ಕ್ಯಾತನಕೊಪ್ಪ ಇಂಗಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ: ವೀರೇಶ್ ಕ್ಯಾತನಕೊಪ್ಪ ಇಂಗಿತ

ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ: ವೀರೇಶ್ ಕ್ಯಾತನಕೊಪ್ಪ ಇಂಗಿತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

May 14, 2026
ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

May 14, 2026
ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ | ಶೀಘ್ರ ಆಡಿಷನ್‌

ಭಾರತದ ಮೊಟ್ಟಮೊದಲ ಪ್ಯಾನ್ ಇಂಡಿಯಾ ರಿಯಾಲಿಟಿ ಶೋ ‘ಬಿಗ್ ಪಿಚ್ಚರ್’ ಚಾಲನೆ | ಶೀಘ್ರ ಆಡಿಷನ್‌

May 14, 2026
ಮುಗಿದ ಕಗ್ಗಂಟು | ಕೇರಳದ ನೂತನ ಮುಖ್ಯಮಂತ್ರಿಯಾಗಿ ಸತೀಶನ್ ಆಯ್ಕೆ

ಮುಗಿದ ಕಗ್ಗಂಟು | ಕೇರಳದ ನೂತನ ಮುಖ್ಯಮಂತ್ರಿಯಾಗಿ ಸತೀಶನ್ ಆಯ್ಕೆ

May 14, 2026
ಶಿಕಾರಿಪುರ | ಕುಮದ್ವತಿ ಪ್ರಥಮ ದರ್ಜೆ ಕಾಲೇಜಿಗೆ ಕುವೆಂಪು ವಿವಿಯ ಎರಡು ರ‍್ಯಾಂಕ್

ಶಿಕಾರಿಪುರ | ಕುಮದ್ವತಿ ಪ್ರಥಮ ದರ್ಜೆ ಕಾಲೇಜಿಗೆ ಕುವೆಂಪು ವಿವಿಯ ಎರಡು ರ‍್ಯಾಂಕ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL