No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬೆಳುವಾಯಿಯಿಂದ ಆರಂಭವಾದ ಈ ಯುವತಿಯ ಸಾಧನೆ ದೆಹಲಿವರೆಗೂ ತಲುಪಿದ ಹಾದಿ ಇದು

ಅನುಷಾ ಜೈನ್ ಎಂಬ ಬಹುಮುಖ ಪ್ರತಿಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2020
in Special Articles
0
ಬೆಳುವಾಯಿಯಿಂದ ಆರಂಭವಾದ ಈ ಯುವತಿಯ ಸಾಧನೆ ದೆಹಲಿವರೆಗೂ ತಲುಪಿದ ಹಾದಿ ಇದು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹಿಂದೆ ಗುರು ಮುಂದೆ ಗುರಿಯಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬ ಮಾತಿಗೆ ಶ್ರೇಷ್ಠ ಉದಾಹರಣೆಯಾಗಿರುವ ಹಾಗೂ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ಮೂಲಕ ಮಿಂಚಿರುವ ಬಹುಮುಖ ಪ್ರತಿಭೆ ಕು.ಅನುಷಾ ಜೈನ್ ಅವರೇ ಇಂದಿನ ನಮ್ಮ ಲೇಖನದ ಕೇಂದ್ರ ಬಿಂದು.


ಮೂಲತಃ ಬೆಳುವಾಯಿಯವರಾದ ಸುದರ್ಶನ್ ಜೈನ್ ಹಾಗೂ ನಾಗರತ್ನ ಜೈನ್ ದಂಪತಿಗಳ ಪುತ್ರಿಯಾದ ಅನುಷಾ, ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಬೆಳುವಾಯಿಯ ಸರಕಾರಿ ಶಾಲೆಯಲ್ಲಿ ಮುಗಿಸಿ, ನಂತರ ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದ್ರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ಪಡೆದಿದ್ದಾರೆ. ಇದರೊಂದಿಗೆ ಪದವಿ ಶಿಕ್ಷಣವನ್ನು ಸಾಂಸ್ಕೃತಿಕ ಕಲೆಗಳ ಆಲಯ ಎಂದೇ ಹೆಸರು ಪಡೆದಿರುವ ಆಳ್ವಾಸ್ ಕಾಲೇಜಿನಲ್ಲಿ ಓದುತ್ತಿರುವುದು ವಿಶೇಷ. ಬಾಲ್ಯದಿಂದಲೇ ಕಲೆಯ ಕಡೆಗೆ ಹೆಚ್ಚಿನ ಒಲವು ಹೊಂದಿರುವ ಇವರು ಭಾಷಣ, ನಾಟಕ, ನೃತ್ಯ, ಸಂಗೀತ, ಚಿತ್ರಕಲೆ, ಯೋಗ, ಆಟ-ಪಾಠ ಮುಂತಾದವುಗಳಲ್ಲಿ ಮುಂಚುಣಿಯಲ್ಲಿದ್ದು, ಬಹುಮುಖ ಪ್ರತಿಭೆಯೆಂದೇ ಗುರುತಿಸಿಕೊಂಡಿದ್ದಾರೆ.


ಪ್ರತಿಭಾ ಕಾರಂಜಿಯಿಂದ ಹಿಡಿದು ನಾನಾ ಬಗೆಯ ಸ್ಪರ್ಧೆಗಳಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟಗಳಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಸಮಾಜಕ್ಕೆ ಪರಿಚಯಿಸಿಕೊಂಡಿದ್ದಾರೆ. ಭರತನಾಟ್ಯ, ಯಕ್ಷಗಾನ, ಮೋಹಿನಿ ಅಟ್ಟಂ, ನಾಟಕ ಮುಂತಾದ ಹಲವು ನೃತ್ಯ ಪ್ರಕಾರಗಳಲ್ಲಿ ಪರಿಣಿತರಾಗಿದ್ದು, ಭರತನಾಟ್ಯವನ್ನು ವಿದುಷಿ ಸುಖದಾ ಬರ್ವೆ ಇವರಲ್ಲಿ ಸತತ 12 ವರ್ಷಗಳಿಂದ ಅಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕ ಪರೀಕ್ಷಾ ಮಂಡಳಿ ಆಯೋಜಿಸುವ ಜೂನಿಯರ್, ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು ಈಗ ಪೂರ್ವ ವಿದ್ವತ್ ತಯಾರಿಯಲಿದ್ದಾರೆ.

ಯಕ್ಷಗಾನವನ್ನು ಶ್ರೀ ದೇವಾನಂದ ಭಟ್ ಅವರಲ್ಲಿ 5 ವರ್ಷ ಅಭ್ಯಾಸ ಮಾಡಿದ್ದು ಮೋಹಿನಿ ಅಟ್ಟಂ ಹಾಗೂ ಕಥಕ್ ನೃತ್ಯ ಪದ್ಧತಿಯನ್ನು ಆಳ್ವಾಸ್ ಕಾಲೇಜಿನ ನೃತ್ಯ ಗುರುಗಳ ಬಳಿ ಅಭ್ಯಾಸ ಮಾಡುತ್ತಿದ್ದಾರೆ.

ಕೇವಲ ಕಲೆಯಲ್ಲಿ ಮಾತ್ರವಲ್ಲ ಶೈಕ್ಷಣಿಕ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದು ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶೇ.93ರಷ್ಟು ಅಂಕ ಪಡೆದು ಪಿಯುಸಿಯಲ್ಲಿಯೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ರಾಷ್ಟ್ರಮಟ್ಟದ ವಿಜ್ಞಾನ ಮಾದರಿಯಲ್ಲಿ ಭಾಗವಹಿಸಿ ಎಲ್ಲರ ಪ್ರಶಂಸೆಗೂ ಪಾತ್ರರಾಗಿದ್ದಾರೆ.

ಮಕ್ಕಿಮನೆ ಕಲಾವೃಂದದ ಮೂಲಕ ಕರ್ನಾಟಕ ರಾಜ್ಯದಾದ್ಯಂತ ಏಕವ್ಯಕ್ತಿ ಪ್ರದರ್ಶನ ಹಾಗೂ ಗುಂಪು ನೃತ್ಯಗಳ ಮೂಲಕ ತಮ್ಮ ನೃತ್ಯದ ಛಾಪು ಮೂಡಿಸಿ ಹಲವಾರು ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.


ಇವರು ಕಲಾಶ್ರೀ ಪುರಸ್ಕಾರ, ಚಿಗುರು ಪುರಸ್ಕಾರ ಹಾಗೂ ಎನ್’ಸಿಸಿಯಲ್ಲಿ ಚಿನ್ನದ ಪದಕ ಗೆದ್ದು ಉತ್ತಮ ಕೆಡೆಟ್ ಎಂದು ಗುರುತಿಸಿಕೊಂಡು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್’ಗೆ ಆಯ್ಕೆಯಾಗಿದ್ದರು.


ಹೀಗೆ ತಮ್ಮ ಪ್ರತಿಭೆಯ ಮೂಲಕ ವಿಶ್ವ ಆಳ್ವಾಸ್ ನುಡಿಸಿರಿ, ಆಳ್ವಾಸ್ ವಿರಾಸತ್, ಧರ್ಮಸ್ಥಳ ಲಕ್ಷದೀಪೋತ್ಸವ ಹಾಗೂ ಮಹಾಮಸ್ತಕಾಭಿಷೇಕ ಉತ್ಸವಗಳಲ್ಲಿ ನೃತ್ಯದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಹೀಗೆಯೇ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಇವರು ತಮ್ಮ ಸಾಧನೆ ಮಾಡಲಿ ಎಂದು ಆ ಭಗವಂತನಲ್ಲಿ ಬೇಡುತ್ತ ಇವರ ಭವಿಷ್ಯ ಉಜ್ವಲವಾಗಲಿ ಎಂದು ಆಶಿಸೋಣ.

ಲೇಖನ ಸಹಕಾರ: ರೋಹನ್ ಪಿಂಟೋ ಗೇರುಸೊಪ್ಪ


Get in Touch With Us info@kalpa.news Whatsapp: 9481252093

Tags: Anusha JainBeluvaiKannada News WebsiteMoodbidriPratibha KaranjiSouth KendraSpecial ArticleYakshaganaಅನುಷಾ ಜೈನ್ಪ್ರತಿಭಾ ಕಾರಂಜಿಬೆಳುವಾಯಮೂಡಬಿದ್ರೆಯಕ್ಷಗಾನ
Share207Tweet123Send
Previous Post

ಕಂದಾಯ ಇಲಾಖಾ ನೌಕರರ ವಸತಿ ಸಹಕಾರಿಗೆ ಅವಿರೋಧ ಆಯ್ಕೆ

Next Post

ಕಳ್ಳ ನಾಯಕರ ಸ್ವಾರ್ಥಕ್ಕಾಗಿ ಸಿಎಎ ವಿರೋಧಿ ನಿರ್ಣಯದ ಫಲ ಎಂತಹ ಅನಾಹುತ ತಂದೀತು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಳ್ಳ ನಾಯಕರ ಸ್ವಾರ್ಥಕ್ಕಾಗಿ ಸಿಎಎ ವಿರೋಧಿ ನಿರ್ಣಯದ ಫಲ ಎಂತಹ ಅನಾಹುತ ತಂದೀತು ಗೊತ್ತಾ?

ಕಳ್ಳ ನಾಯಕರ ಸ್ವಾರ್ಥಕ್ಕಾಗಿ ಸಿಎಎ ವಿರೋಧಿ ನಿರ್ಣಯದ ಫಲ ಎಂತಹ ಅನಾಹುತ ತಂದೀತು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

ಅಕ್ರಮ ಪಡಿತರ ಅಕ್ಕಿ ದಂಧಕೋರರಿಂದ ಲಂಚ | ಬಳ್ಳಾರಿ ಎಸ್ಪಿ ಗನ್’ಮ್ಯಾನ್ ಸೇರಿ ಮೂವರ ಬಂಧನ

May 8, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL