No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Saturday, February 7, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ವೈಕುಂಠ ಏಕಾದಶಿಯ ಮಹತ್ವ ಹಾಗೂ ವ್ರತವನ್ನಾಚರಿಸುವ ರೀತಿ ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2022
in Special Articles
0
ವೈಕುಂಠ ಏಕಾದಶಿಯ ಮಹತ್ವ ಹಾಗೂ ವ್ರತವನ್ನಾಚರಿಸುವ ರೀತಿ ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | |

ಹಿಂದೂಗಳಲ್ಲಿ ಅತ್ಯಂತ ಮುಗ್ಧ ಸಾಮಾನ್ಯ ವ್ಯಕ್ತಿಯ ದೃಷ್ಟಿಯಲ್ಲಿ ಕೂಡಾ ‘ಏಕಾದಶಿ ಮತ್ತು ಉಪವಾಸ ಎರಡು ಒಂದೇ ಅರ್ಥವುಳ್ಳ ಶಬ್ದಗಳು’ ಆಧ್ಯಾತ್ಮಿಕ ಸಾಧನೆಯಲ್ಲಿ ಆದ ಪಾಪಗಳು, ಪ್ರಾಯಶ್ಚಿತ್ತಗಾಗಿಯೂ ಅಥವಾ ಮನೋವೃತ್ತಿಗಳ ನಿಯಂತ್ರಣಗಳ ಮೂಲಕ ಆತ್ಮ ಸಂಯಮದ ಪ್ರಾಪ್ತಿಗಾಗಿಯೂ ನಿರಶನ ವ್ರತ ಸಹಕಾರಿ ಎನ್ನುವುದು ಹಿಂದೂಗಳ ಶೃದ್ಧೆಯಾಗಿದೆ. ನಿರಾಹಾರದಿಂದ ಮನಸ್ಸಿನ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಮನದ ನಿಯಮನ ಸುಲಭವಾಗುತ್ತದೆ. ಅಂತರಾತ್ಮದ ಕಡೆ ಅಭಿಮುಖವಾಗಿ ನೆಲೆಗೊಳ್ಳಲು ಸಾಧ್ಯವಾಗುತ್ತದೆ.

ಧರ್ಮಶಾಸ್ತ್ರಗಳು ಹೇಳುವಂತೆ ಅಶ್ವಮೇಧ ಸಹಸ್ರಾಣಿ, ವಾಜಪೇಯಾಯುತಾನಿಚ | ಏಕಾದಶೋ ಉಪವಾಸಸ್ಯ ಕಲಂ ನಾರಹಂತಿ ಷೋಡಶಿಃ|

ಅರ್ಥ : ಒಂದು ಏಕಾದಶಿ ಉಪವಾಸವೆಂಬುದು ಅಶ್ವಮೇಧಯಾಗ ಹಾಗೂ ವಾಜಪೇಯ ಯಾಗಕ್ಕೆ ಸಮಾನವಾದದ್ದು ಎಂದು ಧರ್ಮಶಾಸ್ತ್ರ ಹೇಳುತ್ತದೆ.

ಮಾನವನಿಂದ ಹನ್ನೊಂದು ಜ್ಞಾನೇಂದ್ರಿಯ, ಕರ್ಮೇಂದ್ರಿಯಗಳಿಂದ ಆದ ಪಾಪವನ್ನು ಏಕಾದಶಿ ವ್ರತದಿಂದ ನಾಶಪಡಿಸಬಲ್ಲದು ಎಂದು ಶಾಸ್ತ್ರಗಳು ಪ್ರಮಾಣಿಕರಿಸಿದೆ.

ಏಕಾದಶೇಂದ್ರಿಯೇ ಪಾಪಂ ಯತ್‌ಕೃತಂ ಭವತಿ ಪ್ರಭೋ | ಏಕಾದಶಿ ಉಪವಾಸನ್ ತತ್ ಸರ್ವಂ ವಿಲೆಯಂ ವಜೇತ್ |

ಅರ್ಥ : ಮನುಷ್ಯನು ಮಾಡಿದ ತಪ್ಪುಗಳಿಗೆ, ಪಾಪಕಾರ್ಯಗಳಿಗೆ, ಪ್ರಾಯಶ್ಚಿತ್ತ ಆಗಬೇಕಾದರೆ ‘ಏಕಾದಶಿ ವ್ರತ’ ಮಾಡಬೇಕು. ಅದರಲ್ಲೂ ವೈಕುಂಠ ಏಕಾದಶಿ ಸರ್ವಶ್ರೇಷ್ಠವಾಗಿದೆ. ಪ್ರತಿ ತಿಂಗಳಿಗೆ ಶುಕ್ಲಪಕ್ಷ, ಕೃಷ್ಣಪಕ್ಷದಲ್ಲಿ ಏಕಾದಶಿ ಬರುತ್ತದೆ. ಅಂದರೆ ವರ್ಷಕ್ಕೆ ೨೪ ಏಕಾದಶಿಯಾಗುತ್ತದೆ. (ಕಾಮದ ಏಕಾದಶಿ, ವರುಧಿನಿಏಕಾದಶಿ, ಮೋಹಿನಿ, ಅಪರ, ನಿರ್ಜಲ, ಜೇಷ್ಠಯೋಗಿನಿ, ಪ್ರಥಮ ಏಕಾದಶಿ, ಕಾಮ್ಯದಏಕಾದಶಿ, ಪುತ್ರದಏಕಾದಶಿ, ಇಂದಿರಾ, ಪಾಶಾಂಕುಶ, ರಮಾಏಕಾದಶಿ, ಪ್ರಭೋದಿನಿ ಏಕಾದಶಿ, ಉತ್ಪತ್ತಿ, ಮೋಕ್ಷ, ಸಫಲ, ವೈಕುಂಠ ಏಕಾದಶಿ, ಪಾಪ ವಿಮೋಚನ ಏಕಾದಶಿ, ಅಮಲಕ ಏಕಾದಶಿ ವಿಜಯ ಏಕಾದಶಿ, ಜಯ ಏಕಾದಶಿ.)

ಪದ್ಮ ಪುರಾಣದಲ್ಲಿ ಹೇಳಲಾದ ಕಥೆಯನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಮುರನೆಂಬ ರಾಕ್ಷಸನು ದೇವತೆಗಳಿಗೆ ತುಂಬಾ ಉಪಟಳ ಕೋಡುತ್ತಿದ್ದ. ಆಗ ವಿಷ್ಣುವೇ ಆ ರಾಕ್ಷಸನ ಸಂಹಾರಕ್ಕೆ ಮುಂದಾಗುತ್ತಾನೆ. ವಿಷ್ಣುವಿನ ಅಂಶದಿಂದ ಪ್ರಕಟಗೊಂಡ ‘ಹೈನಮತಿ’ ಎಂಬ ಸ್ತ್ರೀ ದೇವತೆ ಆ ರಾಕ್ಷಸನನ್ನು ಸಂಹರಿಸುತ್ತಾಳೆ. ಆಗ ವಿಷ್ಣುವು ಸಂಪ್ರೀತಗೊಂಡು ಏನಾದರೂ ವರವನ್ನು ಕೇಳು ಎಂದು ಆ ದೇವತೆಗೆ ಹೇಳುತ್ತಾನೆ. ಆಗ ಅವಳು ‘ಯಾರು ಈ ವೈಕುಂಠ ಏಕಾದಶಿ ದಿನದಂದು ವ್ರತವನ್ನು ಆಚರಿಸಿ ನಿನ್ನ ಸ್ಮರಣೆ ಮಾಡುತ್ತಾರೋ ಅವರಿಗೆಲ್ಲ ಮೋಕ್ಷವನ್ನು ಕರುಣಿಸು’ ಎಂದು ಬೇಡುತ್ತಾಳೆ.

ಇನ್ನೊಂದು ಪೌರಾಣಿಕ ಕಥೆಯ ಪ್ರಕಾರ ಹಿಂದೆ ಒಬ್ಬ ರಕ್ಕಸಿಯ ಕಾಟದಿಂದ ಏಕಾದಶಿ ವ್ರತವನ್ನು ತ್ಯಜಿಸಿ, ಉಪವಾಸನಾದಿ ವ್ರತಗಳನ್ನು ಮಾಡದೇ ವ್ರತ ಭೃಷ್ಟನಾದಂತಹ ತನ್ನ ಭಕ್ತ ರುಕ್ಮಾಂಗಧನನ್ನು ವಿಷ್ಣುವು ಉದ್ದರಿಸಿ ಅಂದು ವೈಕುಂಠಕ್ಕೆ ಕರೆದೊಯ್ದ ದಿನ, ಅದು ಕೂಡ ‘ವೈಕುಂಠ ಏಕಾದಶಿ’ಯಾಗಿತ್ತು.

ವ್ರತವನ್ನಾಚರಿಸುವ ರೀತಿ:

ಈ ಏಕಾದಶಿಯನ್ನು ‘ಮುಕ್ಕೋಟಿ ಏಕಾದಶಿ’, ‘ಮೋಕ್ಷ ಏಕಾದಶಿ’ ಎಂದೂ ಕರೆಯುತ್ತಾರೆ. ಅಂದು ರಾಜಸ ತಾಮಸ ಪದಾರ್ಥಗಳನ್ನು ಸ್ವಿಕರಿಸದೇ ಅಶಕ್ತರು, ರೋಗಿಗಳು, ಹಾಲು, ಹಣ್ಣು, ಶಾಬು ಅಕ್ಕಿಯಿಂದ ಮಾಡಿದ ಪದಾರ್ಥಗಳನ್ನು ಉಪಯೋಗಿಸಬಹುದು, ಅನ್ನ ಸ್ವೀಕಾರ ನಿಷಿದ್ಧ. ಮದ್ಯಪಾನ, ಮಾಂಸಾಹಾರ ಸೇವನೆ ನಿಷಿದ್ಧ, ದೇಹದ ಆತ್ಮದ ನಿಗ್ರಹಕ್ಕಾಗಿ ಆ ದಿನ ಉಪವಾಸವಿದ್ದರೆ ತುಂಬಾ ಉತ್ತಮ ಎಂಬುದು ನಮ್ಮ ಸಂಪ್ರದಾಯ ಹೇಳುತ್ತದೆ.

ಅಂದು ಭಗವಾನ ವಿಷ್ಣುವಿಗೆ ತುಳಸಿ ಅರ್ಚನೆ, ವಿಷ್ಣು ಸಹಸ್ರನಾಮ ಪಾರಾಯಣ, ಮನೆಯಲ್ಲಿ ಘಂಟಾನಾದ (ಮನೆಯ ದೇವರಿಗೆ ಪೂಜೆ) ಮತ್ತು ವೈಕುಂಠ ದ್ವಾರದ ಮೂಲಕ (ಉತ್ತರದ್ವಾರದ) ಭಗವಂತನ ದರ್ಶನ ಮಾಡಬೇಕು.

ಆ ದಿನ ನಾವು ಮಾಡುವ ಪದಾರ್ಥಗಳಿಗೆ ಈರುಳ್ಳಿ, ಬೆಳ್ಳುಳ್ಳಿ, ಕ್ಯಾರೇಟ್, ಬೀಟರೋಟ್ ಬಳಸಬಾರದು. ಅನ್ನದಿಂದ ಮಾಡಿದ ಪದಾರ್ಥಗಳನ್ನು ಸ್ವೀಕರಿಸದೇ, ಅವಲಕ್ಕಿ, ಶಾಬು ಅಕ್ಕಿಯಿಂದ ಮಾಡಿದ ಪದಾರ್ಥ ಸ್ವೀಕರಿಸಬಹುದು.

ದಕ್ಷಿಣಭಾರತದ ತಿರುಪತಿ, ತಮಿಳುನಾಡಿನ ರಂಗನಾಥ ದೇವಾಲಯದಲ್ಲಿ ವೈಕುಂಠ ಏಕಾದಶಿ ದಿನದಿಂದ 21 ದಿನದ ವರೆಗೂ ವಿಶೇಷ ಪೂಜೆ ಇರುತ್ತದೆ. ಹಾಗೇಯೇ ಶ್ರೀಕೃಷ್ಣನು ಅರ್ಜುನನಿಗೆ ರಣರಂಗದಲ್ಲಿ ‘ಗೀತೆಯ ಭೋಧನೆ’ ಮಾಡಿದ ದಿನವು ಇದೇ ಆಗಿದೆ. ಅದಕ್ಕಾಗಿ ವೈಕುಂಠ ಏಕಾದಶಿಯಂದು ‘ಗೀತಾಜಯಂತಿ”ಯನ್ನು ಆಚರಿಸುತ್ತಾರೆ. ಅಂದು ಗೀತಾ ಪಾರಾಯಣವನ್ನು ಮಾಡಲಾಗುತ್ತದೆ.

ಇಂತಹ ಒಂದು ವಿಶಿಷ್ಟ ದಿನವನ್ನು ಆಚರಿಸೋಣ ಹಾಗೂ ಉತ್ತರದ್ವಾರದಿಂದ ವಿಷ್ಣುವಿನ ದರ್ಶನ ಪಡೆದು ಆತನ ಕೃಪೆಗೆ ಪಾತ್ರರಾಗೋಣ, ಆಯುರಾರೋಗ್ಯ, ನೆಮ್ಮದಿಯ ಜೀವನವನ್ನು ಪಡೆಯೋಣ.

ಆಧಾರ : Sanatan.org/kannada

ಸಂಗ್ರಹ :
ಶ್ರೀ. ಪುಂಡಲೀಕ ಪೈ
ಸನಾತನ ಸಂಸ್ಥೆ
(ಸಂಪರ್ಕ : 9448500120)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial ArticleVaikuntha Ekadashiವೈಕುಂಠ ಏಕಾದಶಿ
Share197Tweet123Send
Previous Post

ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು: ಬಿ.ಕೆ. ಮೋಹನ್

Next Post

ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡ

ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಹುಗಲವಳ್ಳಿ ಚಿನ್ನೇಗೌಡ ನಿಧನ

ಹುಗಲವಳ್ಳಿ ಚಿನ್ನೇಗೌಡ ನಿಧನ

February 7, 2026
ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

February 7, 2026
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

February 7, 2026
ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

February 7, 2026
ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

February 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL