ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ಜನದಟ್ಟಣೆ ನಿವಾರಿಸಲು, ನೈಋತ್ಯ ರೈಲ್ವೆಯು (South Western Railways) ಎಸ್’ಎಸ್’ಎಸ್ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು (Chikkamagaluru) ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಓಡಿಸಲು ನಿರ್ಧರಿಸಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ವಿಶೇಷ ರೈಲುಗಳ ವಿವರ ಹೀಗಿದೆ.
Also Read>> ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ
ಜೂನ್ 20 21, 2026 ರಂದು 07341 ಸಂಖ್ಯೆಯ ಎಸ್’ಎಸ್’ಎಸ್ ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್ಪ್ರೆಸ್ ರೈಲು ಹುಬ್ಬಳ್ಳಿಯಿಂದ ಬೆಳಗ್ಗೆ 5 ಗಂಟೆಗೆ ಹೊರಟು, ಅದೇ ದಿನ ಬೆಳಗ್ಗೆ 11:15 ಗಂಟೆಗೆ ಚಿಕ್ಕಮಗಳೂರು ತಲುಪಲಿದೆ.
ಮರು ಪ್ರಯಾಣದಲ್ಲಿ ಈ ರೈಲು 07342 ಸಂಖ್ಯೆಯ ವಿಶೇಷ ರೈಲು ಜೂನ್ 20 21, 2026 ರಂದು ಚಿಕ್ಕಮಗಳೂರಿನಿಂದ 17:30 ಗಂಟೆಗೆ ಹೊರಟು, ಅಂದೇ 23:20 ಗಂಟೆಗೆ ಎಸ್’ಎಸ್’ಎಸ್ ಹುಬ್ಬಳ್ಳಿ (Hubli) ನಿಲ್ದಾಣಕ್ಕೆ ಆಗಮಿಸಲಿದೆ.
ವಿಶೇಷ ರೈಲಿನಲ್ಲಿ ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲು ಮಾರ್ಗಮಧ್ಯೆ ಕುಂದಗೋಳ, ಸಂಶಿ, ಯಳವಿಗಿ, ಹಾವೇರಿ, ರಾಣೇಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ರಾಮಗಿರಿ, ಅಜ್ಜಂಪುರ, ಬೀರೂರು, ಕಡೂರು, ಬಿಸ್ಲೆಹಳ್ಳಿ, ಸಖರಾಯಪಟ್ಟಣ ಹಾಗೂ ಕಣಿವೆಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
ವಿಶೇಷ ರೈಲಿನಲ್ಲಿ ಎಷ್ಟು ಬೋಗಿ ಇರಲಿವೆ?
ಈ ವಿಶೇಷ ರೈಲಿನಲ್ಲಿ ಒಟ್ಟು 10 ಬೋಗಿಗಳು ಒಳಗೊಂಡಿದ್ದು, ಇದರಲ್ಲಿ ಒಂದು ಸ್ಲೀಪರ್ ಕ್ಲಾಸ್, 7 ಸಾಮಾನ್ಯ ದರ್ಜೆ ಮತ್ತು 2 ದ್ವಿತೀಯ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ದಿವ್ಯಾಂಗಜನ ಕಂಪಾರ್ಟ್ಮೆಂಟ್ ಬೋಗಿಗಳು ಇರಲಿವೆ.
ಎಲೇಕೆರೆ ಲೆವೆಲ್ ಕ್ರಾಸಿಂಗ್ ಶಾಶ್ವತ ಬಂದ್
ಚನ್ನಪಟ್ಟಣ ರೈಲು ನಿಲ್ದಾಣದ ಸಮೀಪದ ಎಲೇಕೆರೆ ಗ್ರಾಮದಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ (ಎಲ್ಸಿ) ಗೇಟ್ ಸಂಖ್ಯೆ 47 (ಕಿ.ಮೀ. 55/200-300) ಅನ್ನು 18 ಜೂನ್ 2026 (ಗುರುವಾರ) ಸಂಜೆ 5:00 ಗಂಟೆಯಿಂದ ಶಾಶ್ವತವಾಗಿ ಮುಚ್ಚಲಾಗುವುದು.
ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು | ಪ್ರಯಾಣಿಕರು ಅದೃಷ್ಟವಶಾತ್ ಪಾರು
ಸಾರ್ವಜನಿಕರು ರಸ್ತೆ ಮೇಲ್ಸೇತುವೆಯ ಮಾರ್ಗವನ್ನು ಬಳಸುವಂತೆ ಕೋರಲಾಗಿದೆ.
ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವಿನ ರಸ್ತೆ ಕೆಳಸೇತುವೆ (ಆರ್’ಯು ಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ (Indian Railway) ಮಾಹಿತಿ ನೀಡಿದ್ದು, ಮೈಸೂರಿನಿಂದ ಅರಸೀಕೆರೆ, ಶಿವಮೊಗ್ಗ, ತಾಳಗುಪ್ಪ ಹಾಗೂ ಯಶವಂತಪುರ ಸಂಚರಿಸುವ ಹಲವು ರೈಲುಗಳ ಸಂಚಾರ ರದ್ದು ಹಾಗೂ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
Also Read>> ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

ಜೂನ್ 18 ಮತ್ತು 23ರಂದು ಈ ರೈಲುಗಳ ಸಂಚಾರ ರದ್ದು
- ಅರಸೀಕೆರೆ-ಮೈಸೂರು ದೈನಂದಿನ ಪ್ಯಾಸೆಂಜರ್ (ರೈಲು ಸಂಖ್ಯೆ 56267)
- ಮೈಸೂರು-ತಾಳಗುಪ್ಪ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16206)
- ತಾಳಗುಪ್ಪ-ಮೈಸೂರು ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16205)
ಜೂನ್ 18 ಮತ್ತು 23ರಂದು ಈ ರೈಲುಗಳ ಸಂಚಾರ ಭಾಗಶಃ ರದ್ದು
ಮೈಸೂರು-ಶಿವಮೊಗ್ಗ ಟೌನ್ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16225) ರೈಲನ್ನು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳಿಸಲಾಗಿದ್ದು, ಈ ರೈಲು ಮೈಸೂರಿನ ಬದಲಿಗೆ ಅರಸೀಕೆರೆಯಿಂದಲೇ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
Also Read>> ಮೈಸೂರಿನ ಪಬ್ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ
ಜೂನ್ 18 ಮತ್ತು 23ರಂದು ತಡವಾಗಿ ಸಂಚರಿಸುವ ರೈಲು
ಮೈಸೂರು-ಯಶವಂತಪುರ ದೈನಂದಿನ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16208) ರೈಲಿನ ಸಂಚಾರವನ್ನು ಮಾರ್ಗಮಧ್ಯೆ ಕ್ರಮವಾಗಿ 30 ನಿಮಿಷ ಮತ್ತು 120 ನಿಮಿಷ ನಿಯಂತ್ರಿಸಲಾಗುತ್ತದೆ.
ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ನವೀಕರಣ ಕಾಮಗಾರಿಗಳ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಘೋಷಿಸಲಾಗಿದೆ.
ಪ್ರಮುಖವಾಗಿ ಶಿವಮೊಗ್ಗ-ತಾಳಗುಪ್ಪಗೆ ಆಗಮಿಸುವ ಹಾಗೂ ತೆರಳುವ ಒಟ್ಟು ಏಳು ರೈಲುಗಳ ಸಂಚಾರದಲ್ಲಿ ನಿಗದಿತ ದಿನಗಳಂದು ಬದಲಾವಣೆ ಮಾಡಲಾಗಿದ್ದು, ಈ ಕುರಿತ ಮಾಹಿತಿ ಹೀಗಿದೆ.
ಈ ರೈಲುಗಳ ಸಂಚಾರ ಆಗಸ್ಟ್ 4ರಂದು ರದ್ದು
- 16581 ಸಂಖ್ಯೆಯ ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್
- 16582 ಸಂಖ್ಯೆಯ ಶಿವಮೊಗ್ಗ ಟೌನ್-ಯಶವಂತಪುರ ಎಕ್ಸ್’ಪ್ರೆಸ್

ಈ ರೈಲುಗಳು ಭಾಗಷಃ ರದ್ದು
- 20652 ಸಂಖ್ಯೆಯ ತಾಳಗುಪ್ಪ-ಕೆಎಸ್ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
- 12090 ಸಂಖ್ಯೆಯ ಶಿವಮೊಗ್ಗ ಟೌನ್-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
- 12089 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಕೆಎಸ್’ಆರ್ ಬೆಂಗಳೂರು-ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದೆ.
ಈ ರೈಲುಗಳ ಮಾರ್ಗ ಬದಲಾವಣೆ
16228 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್’ಪ್ರೆಸ್ ರೈಲು 2026ರ ಆಗಸ್ಟ್ 3ರಂದು ಅರಸೀಕೆರೆ-ಹಾಸನ-ಕೃಷ್ಣರಾಜನಗರ-ಮೈಸೂರು ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಅಲ್ಲದೇ, ಈ ರೈಲು ಅಂದು ತಿಪಟೂರು, ತುಮಕೂರು, ಯಶವಂತಪುರ, ಮಲ್ಲೇಶ್ವರಂ, ಕೆಎಸ್’ಆರ್ ಬೆಂಗಳೂರು, ಕೃಷ್ಣದೇವರಾಯ ಹಾಲ್ಟ್, ನಾಯಂಡಹಳ್ಳಿ, ಕೆಂಗೇರಿ, ಬಿಡದಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಹನಕೆರೆ, ಮಂಡ್ಯ, ಎಲಿಯೂರು, ಪಾಂಡವಪುರ, ನಾಗನಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
16227 ಸಂಖ್ಯೆಯ ಮೈಸೂರು-ತಾಳಗುಪ್ಪ ಎಕ್ಸ್’ಪ್ರೆಸ್ ರೈಲು 2026ರ ಆಗಸ್ಟ್ 3ರಂದು ಮೈಸೂರು-ಕೃಷ್ಣರಾಜನಗರ-ಹಾಸನ-ಅರಸೀಕೆರೆ ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಅಲ್ಲದೇ, ರೈಲಿಗೆ ಅಂದು ಮದ್ದೂರು, ಚನ್ನಪಟ್ಟಣ, ರಾಮನಗರಂ, ಬಿಡದಿ, ಹೆಜ್ಜಾಲ, ಕೆಂಗೇರಿ, ಜ್ಞಾನಭಾರತಿ, ನಾಯಂಡಹಳ್ಳಿ, ಕೆಎಸ್’ಆರ್ ಬೆಂಗಳೂರು, ಮಲ್ಲೇಶ್ವರಂ, ಯಶವಂತಪುರ, ತುಮಕೂರು, ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ರೈಲ್ವೆ ಇಲಾಖೆ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುನ್ನ ವೇಳಾಪಟ್ಟಿ ಪರಿಶೀಲಿಸಿ ಸಹಕರಿಸುವಂತೆ ಮನವಿ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















