No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ರೈತ ಬಾಂಧವರೇ, ಈ ಒಂದು ಆ್ಯಪ್ ನಿಮ್ಮ ಜೀವನವನ್ನೇ ಬದಲಿಸಬಹುದು…!

ಅನ್ನದಾತನಿಗೆ ನೆರವಾಗಲು ಬಂದಿದೆ ಉತ್ಸಾಹಿ ಯುವಕರ ಅಗ್ರಿ ಫೈ ಎಂಬ ಸ್ಟಾರ್ಟಪ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 18, 2021
in Special Articles
0
ರೈತ ಬಾಂಧವರೇ, ಈ ಒಂದು ಆ್ಯಪ್ ನಿಮ್ಮ ಜೀವನವನ್ನೇ ಬದಲಿಸಬಹುದು…!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತದ ಬೆನ್ನೆಲುಬು ಕೃಷಿ/ರೈತ ಎಂಬುದು ಸರ್ವಥಾ ವಿಧಿತವಾಗಿದ್ದರೂ ಬಹಳಷ್ಟು ಕೃಷಿಕರಿಗೆ ಇಂದಿನ ಯುಗದ ತಂತ್ರಜ್ಞಾನಕ್ಕೆ ತಕ್ಕಂತೆ ಸಹಕಾರ ದೊರೆಯದೇ ತೊಂದರೆಯಾಗುತ್ತಿರುವುದೂ ಸಹ ತಿಳಿದಿರುವ ವಿಚಾರ. ಈ ರೀತಿಯ ರೈತರಿಗೆ ನೆರವಾಗುವ ಉದ್ದೇಶದಿಂದ ಆರಂಭವಾಗಿದೆ ‘ಅಗ್ರಿ ಫೈ’ ಎಂಬ ಸ್ಟಾರ್ಟಪ್.

ಸಮಗ್ರ ಕೃಷಿ ಬೆಳವಣಿಗೆಗಾಗಿ ರೈತರನ್ನು ಒಳಗೊಂಡಂತೆ ಈ ಸಂಬಂಧಿತ ಎಲ್ಲ ರೀತಿಯ ವ್ಯಾಪಾರಸ್ಥರನ್ನು ಒಂದೇ ಪ್ಲಾಟ್’ಫಾರಂ ಅಡಿಯಲ್ಲಿ ತಂದು, ಈ ಕ್ಷೇತ್ರವನ್ನು ಬಲವರ್ಧನೆಗೊಳಿಸುವ ಉದ್ದೇಶವನ್ನು ಈ ಆ್ಯಪ್ ಹೊಂದಿದ್ದು, ಇದಕ್ಕಾಗಿ ಒಂದು ಬಲಿಷ್ಠ ತಂಡ ಕಾರ್ಯ ನಿರ್ವಹಿಸುತ್ತಿದೆ.

ಪ್ರಮುಖವಾಗಿ, ಉತ್ತಮ ರೈತರು ಹಾಗೂ ವ್ಯಾಪಾರಸ್ಥರನ್ನು ಗುರುತಿಸಿ ಅವರಿಗೆ ಸಾಲಸೌಲಭ್ಯ ಒದಗಿಸುವ ಉದ್ದೇಶವನ್ನು ಈ ಅಗ್ರಿ ಫೈ ಆ್ಯಪ್ ಹೊಂದಿದೆ.

ಯಾಕೆ ಈ ಆ್ಯಪ್?
ದೇಶ, ವ್ಯವಸ್ಥೆ ಹಾಗೂ ಬ್ಯಾಂಕಿಂಗ್ ವ್ಯವಸ್ಥೆ ಎಷ್ಟೇ ಮುಂದುವರೆಯುತ್ತಿದ್ದರೂ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಈಗಲೂ ಕೃಷಿ ಸಾಲ ಸೌಲಭ್ಯ ಅಷ್ಟು ಸುಲಭವಾಗಿಲ್ಲ. ಸಹಕಾರಿ ಹಾಗೂ ಖಾಸಗಿ ಬ್ಯಾಂಕ್’ಗಳು ಎಷ್ಟೇ ಇದ್ದರೂ ರೈತರಿಗೆ ಅಗತ್ಯವಾಗಿರುವ ಸಾಲ ಸಿಗುವುದು ಒಂದಷ್ಟು ದುಸ್ತರವಾಗಿದೆ. ಹೀಗಾಗಿ, ಇಂದಿಗೂ ಬಹಳಷ್ಟು ರೈತರು ಬೀಜ, ರಸಗೊಬ್ಬರ ಅಂಗಡಿ ಮಾಲೀಕರು ಹಾಗೂ ಎಂಪಿಎಂಸಿ ಮಾರುಕಟ್ಟೆಯಲ್ಲಿನ ಉತ್ಪನ್ನ ಖರೀದಿ ಮಾಡುವ ವ್ಯಾಪಾರಸ್ಥರನ್ನೇ ಅವಲಂಭಿಸಿದ್ದು, ರೈತನಿಗೆ ವರ್ಷದ ಬೆಳೆ ಬೆಳೆಯಲು ಅಗತ್ಯವಾದ ಬೀಜ, ರಸಗೊಬ್ಬರ ನೀಡುತ್ತಾರೆ. ಆನಂತರ, ಬೆಳೆ ಬಂದಾಗ ಆ ಹಣವನ್ನು ವಾಪಸ್ ಪಡೆಯುತ್ತಾರೆ. ಹೀಗೆ ಕೃಷಿಗೆ ನೆರವು ನೀಡುವಂತಹ ವ್ಯಾಪಾರಿಗಳೂ ಸಹ ಸೀಮಿತ ರೈತರೊಂದಿಗೆ ಮಾತ್ರ ವ್ಯವಹರಿಸುತ್ತಾರೆ. ಇಂತಹ ವ್ಯಾಪಾರಸ್ಥರನ್ನು ಗುರುತಿಸಿ ಅವರಿಗೆ ಅಗತ್ಯವಾದ ಸಾಲ ಸೌಲಭ್ಯವನ್ನು ಸುಲಭವಾಗಿ ನೀಡುವ ಉದ್ದೇಶವನ್ನು ಇದು ಹೊಂದಿದೆ.

ಎನ್’ಬಿಎಫ್’ಸಿ ಜೊತೆ ಒಪ್ಪಂದ
ಇನ್ನು, ಈ ಕುರಿತಂತೆ ಕಲ್ಪ ಮೀಡಿಯಾ ಹೌಸ್ ಜೊತೆಯಲ್ಲಿ ಮಾತನಾಡಿದ ಅಗ್ರಿ ಫೈ ಮಾತೃಸಂಸ್ಥೆ ಅಗ್ರಿನೋವ್ ಟೆಕ್ನಾಲಜೀಸ್ ಫ್ರೈ.ಲಿ. ಸಹ ಸ್ಥಾಪಕ ಕೆ.ಆರ್. ರಘುಚಂದ್ರ, ಕೃಷಿ ಕ್ಷೇತ್ರದಲ್ಲಿ ದೈನಂದಿನವಾಗಿ ತೊಡಗಿಸಿಕೊಂಡ ವ್ಯಾಪಾರಸ್ಥರಿಗೆ ಸರಳವಾಗಿ ಸಾಲಸೌಲಭ್ಯ ಒದಗಿಸುವ ಸಲುವಾಗಿ ಕೆಲವು ಬ್ಯಾಂಕಿಂಗ್ ರಹಿತ ಹಣಕಾಸು ಸಂಸ್ಥೆಗಳೊಂದಿಗೆ ನಮ್ಮ ಸಂಸ್ಥೆ ಒಪ್ಪಂದ ಮಾಡಿಕೊಂಡಿದೆ. ಆರಂಭಿಕವಾಗಿ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ವ್ಯಾಪಕವಾಗಿ ದೇಶದಾದ್ಯಂತ ವಿಸ್ತರಣೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.ಈಗಾಗಲೇ ಕೃಷಿ ಕ್ಷೇತ್ರದಲ್ಲಿ ವಾಣಿಜ್ಯ ಚಟುವಟಿಕೆ ನಡೆಸುತ್ತಿರುವವರು ಈ ಅ್ಯಪ್ ಡೌನ್’ಲೋಡ್ ಮಾಡಿಕೊಂಡು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಸಿಬ್ಬಂದಿ ಅವರ ವಹಿವಾಟು ಬಗ್ಗೆ ವರದಿ ತಯಾರಿಸಿ ಸಾಲ ಕೊಡಿಸಲು ನೆರವು ನೀಡುತ್ತಿದ್ದಾರೆ. ಕೃಷಿ ವ್ಯಾಪಾರಸ್ಥರಿಗೆ ಸಾಲದ ನೆರವು ನೀಡುವ ಮೂಲಕ ರೈತರಿಗೆ ಸಹಾಯವಾಗುತ್ತದೆ. ಇದಲ್ಲದೆ, ರೈತರಿಗೆ ನೇರವಾಗಿ ಕೆಲವು ತಾಂತ್ರಿಕ ಮಾಹಿತಿ ಸಹ ಒದಗಿಸಲು ವ್ಯವಸ್ಥೆ ಸಿದ್ಧಪಡಿಸಲಾಗುತ್ತದೆ ಎಂದರು.

ಹೇಗೆ ಕೆಲಸ ಮಾಡುತ್ತದೆ?
ಎರಡೂ ರಾಜ್ಯದ ಯಾವುದೇ ಜಿಲ್ಲೆ ಅಥವಾ ಹೋಬಳಿಯ ರೈತರು ತಮ್ಮ ಜಮೀನು ಹಾಗೂ ತಾವು ಬೆಳೆಯುವ ಬೆಳೆಯ ವಿವರವನ್ನು ಮೊದಲು ಈ ಆ್ಯಪ್’ನಲ್ಲಿ ದಾಖಲಿಸಬೇಕು. ಆನಂತರ ಆ ಪ್ರದೇಶದಲ್ಲಿ ಯಾವ ಕಾಲದಲ್ಲಿ ಮಳೆ ಬರುತ್ತದೆ, ಈ ವರ್ಷ ಯಾವ ಬೆಳೆ ಹೇಗೆ ಇಳುವರಿ ಬರಬಹುದು, ಯಾವ ಬೆಳೆಗೆ ಮಾರುಕಟ್ಟೆಯ ದರ ಎಷ್ಟಿರಬಹುದು, ಮುಂದಿನ ಮೂರು ನಾಲ್ಕು ತಿಂಗಳಲ್ಲಿ ಬೇಡಿಕೆ ಸೃಷ್ಟಿಸುವಂತ ಧಾನ್ಯ ಅಥವಾ ತೋಟಗಾರಿಕಾ ಬೆಳೆ ಯಾವವು, ಬೆಳೆಗೆ ತಗುಲಬಹುದಾದ ರೋಗದ ಮಾಹಿತಿ ಮತ್ತು ಅದಕ್ಕೆ ಪರಿಹಾರ ಹೀಗೆ ಹತ್ತು ಹಲವು ಪ್ರಯೋಜನಗಳನ್ನು ರೈತರೂ ಪಡೆದುಕೊಳ್ಳಬಹುದು.

(ಮುಂದಿನ ಲೇಖನ ಶೀಘ್ರದಲ್ಲೇ ನಿರೀಕ್ಷಿಸಿ: ರೈತರೇ, ಕೃಷಿ ಖಾತಾ ಆ್ಯಪ್ ಡೌನ್’ಲೋಡ್ ಮಾಡಿ-ಸುಲಭ ಸಾಲಸೌಲಭ್ಯ ಪಡೆಯಿರಿ)

Tags: Agri AppAgricultural commercial activityAgricultureAgrifiAgrinnov Technologies Pvt. LtdCooperative BankFarmerKannada News WebsiteKrishi KhathaLatest News KannadaNBFCStartupಅಗ್ರಿ ಫೈಅಗ್ರಿನೋವ್ ಟೆಕ್ನಾಲಜೀಸ್ ಫ್ರೈ.ಲಿಎನ್’ಬಿಎಫ್’ಸಿಕೃಷಿಕೃಷಿ ವಾಣಿಜ್ಯ ಚಟುವಟಿಕೆರೈತಸಹಕಾರಿ ಬ್ಯಾಂಕ್ಸ್ಟಾರ್ಟಪ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾನಸಿಕ, ದೈಹಿಕ ಆರೋಗ್ಯ ಸಧೃಡತೆಗೆ ಕ್ರೀಡೆ ಸಹಕಾರಿ: ಅಶ್ವಥನಾರಾಯಣ ಶೆಟ್ಟಿ ಅಭಿಪ್ರಾಯ

Next Post

ಕನ್ನಡ ಬಾವುಟ ಸುಟ್ಟು ಹಾಕಿದ ದುಷ್ಟರನ್ನು ಗಡಿಪಾರು ಮಾಡುವಂತೆ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡ ಬಾವುಟ ಸುಟ್ಟು ಹಾಕಿದ ದುಷ್ಟರನ್ನು ಗಡಿಪಾರು ಮಾಡುವಂತೆ ಒತ್ತಾಯ

ಕನ್ನಡ ಬಾವುಟ ಸುಟ್ಟು ಹಾಕಿದ ದುಷ್ಟರನ್ನು ಗಡಿಪಾರು ಮಾಡುವಂತೆ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Bangalore Heritage Festival

ಹೆರಿಟೇಜ್ ಹಬ್ಬ | ಬೆಂಗಳೂರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

June 15, 2026
ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

June 15, 2026
Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

June 15, 2026
Narayana Super Specialty Clinic Shivamogga

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

June 15, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL