ಕಲ್ಪ ಮೀಡಿಯಾ ಹೌಸ್ | ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ |
ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೆಲಿ – ಶಿವಮೊಗ್ಗ ಟೌನ್ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
ರೈಲು ಸಂಖ್ಯೆ. 06103 ತಿರುನಲ್ವೆಲಿ ಯಿಂದ ಆಗಸ್ಟ್ 17 2025, ಭಾನುವಾರ ಸಂಜೆ 4.20ಕ್ಕೆ ಹೊರಟು ಸೋಮವಾರ ಮಧ್ಯಾಹ್ನ 01.00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ.
ರೈಲು ಸಂಖ್ಯೆ. 06104 ಶಿವಮೊಗ್ಗ ಟೌನ್ ನಿಂದ ಆಗಸ್ಟ್ 18 2025, ಸೋಮವಾರ ಮಧ್ಯಾಹ್ನ 2.20ಕ್ಕೆ ಹೊರಟು ಮಂಗಳವಾರ ಬೆಳಗ್ಗೆ 10.45ಕ್ಕೆ ತಿರುನಲ್ವೆಲಿಗೆ ತಲುಪಲಿದೆ.ಎಲ್ಲೆಲ್ಲಿ ಸ್ಟಾಪ್?
ಈ ರೈಲು ಎರಡು ಮಾರ್ಗಗಳಲ್ಲಿ ಕಲ್ಲಿದೈಕುರ್ಚಿ, ಅಂಬಾಸಮುದ್ರಂ, ಕಿಜಕಡೈಯಂ, ಪವೂರುಚತ್ರಂ, ತೆಂಕಾಸಿ ಜಂಕ್ಷನ್, ಕಡಯನಲ್ಲೂರು, ಶಂಕರನ್ಕೊವಿಲ್, ರಾಜಪಾಳಯಂ, ಶ್ರೀವಿಲ್ಲಿಪುತ್ತೂರು, ಶಿವಕಾಶಿ, ವಿರುದುನಗರ ಜಂಕ್ಷನ್, ಮದುರೈ ಜಂಕ್ಷನ್, ಕೊಡೈಕನಾಲ್ ರಸ್ತೆ, ದಿಂಡಿಗುಲ್ ಜಂಕ್ಷನ್, ಕರೂರ್ ಜಂಕ್ಷನ್, ನಮಕ್ಕಲ್, ಸೇಲಂ ಜಂಕ್ಷನ್, ಕುಪ್ಪಂ, ಬಂಗಾರಪೇಟೆ ಜಂಕ್ಷನ್, ಕೃಷ್ಣರಾಜಪುರಂ, ಎಸ್ಎಂವಿಟಿ ಬೆಂಗಳೂರು, ಚಿಕ್ಕಬಾಣವರ, ತುಮಕೂರು, ಅರಸೀಕೆರೆ, ಬೀರೂರು, ತರೀಕೆರೆ ಮತ್ತು ಭದ್ರಾವತಿ ನಿಲ್ದಾಣಗಳಲ್ಲಿ ನೀಲುಗಡೆಗೊಳ್ಳಲಿದೆ.
ಎಷ್ಟು ಬೋಗಿ?
ಈ ವಿಶೇಷ ರೈಲು ಒಟ್ಟು 18 ಬೋಗಿಗಳನ್ನು ಹೊಂದಿರಲಿದ್ದು: ಟು ಟೈರ್ ಎಸಿ 1, ತ್ರಿ ಟೈರ್ ಎಸಿ 2, ಸ್ಲೀಪರ್ 9, ಜನರಲ್ 4, ಸಿಟ್ಟಿಂಗ್ ಕಮ್ ಲಗೇಜ್ ಕೋಚ್ – 2 ಬೋಗಿಗಳನ್ನು ಹೊಂದಿರುತ್ತದೆ.
ಬುಕ್ಕಿಂಗ್ ಹೇಗೆ?
ಪ್ರಯಾಣಿಕರು IRCTC ಹಾಗೂ RailOne ಮೂಲಕ ಅಥವಾ ನಿಮ್ಮೂರಿನ ರೈಲು ನಿಲ್ದಾಣಗಳ ಕಾಯ್ದಿರಿಸುವ ಕೌಂಟರ್’ಗಳಲ್ಲಿ ಟಿಕೆಟ್ ಬುಕ್ ಮಾಡಿಕೊಳ್ಳಬಹುದು. ಮಾಹಿತಿಗಾಗಿ 139 ಸಂಖ್ಯೆಗೆ ಸಂಪರ್ಕಿಸಬಹುದು.
ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ ಅವಧಿ ವಿಸ್ತರಣೆ
ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ, ರೈಲು ಸಂಖ್ಯೆ 07355/07356 ಹುಬ್ಬಳ್ಳಿ – ರಾಮೇಶ್ವರಂ – ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂವರೆಗಷ್ಟೇ ಸಂಚರಿಸಲಿದೆ. ಈ ರೈಲು ಈಗಿರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ಚಲಿಸುವುದನ್ನು ಮುಂದುವರಿಸುತ್ತದೆ.
ಈ ಹಿಂದೆ ಆಗಸ್ಟ್ 30, 2025 ರವರೆಗೆ ಓಡಲು ಸೂಚಿಸಲಾಗಿದ್ದ ರೈಲು ಸಂಖ್ಯೆ 07355 ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್’ ಪ್ರೆಸ್ ರೈಲು ಈಗ ಸೆಪ್ಟೆಂಬರ್ 27, 2025 ರವರೆಗೆ ನಾಲ್ಕು ಟ್ರಿಪ್’ಗಳಿಗೆ ವಿಸ್ತರಿಸಲಾಗಿದೆ, ಆದರೆ, ಈ ರೈಲು ರಾಮೇಶ್ವರಂ ಬದಲು ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ.
ಅದೇ ರೀತಿ, ಆಗಸ್ಟ್ 31, 2025 ರವರೆಗೆ ಸಂಚರಿಸಲು ಸೂಚಿಸಲಾಗಿದ್ದ, ರೈಲು ಸಂಖ್ಯೆ 07356 ರಾಮೇಶ್ವರಂ – ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲು ಈಗ ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 28, 2025 ರವರೆಗೆ ನಾಲ್ಕು ಟ್ರಿಪ್’ಗಳಿಗೆ ಚಲಿಸಲಿದೆ, ಇದು ರಾಮೇಶ್ವರದ ಬದಲಿಗೆ ರಾಮನಾಥಪುರಂನಿಂದ ತನ್ನ ಪ್ರಯಾಣವನ್ನು ಆರಂಭಿಸಲಿದೆ.
ಶಿವಮೊಗ್ಗದವರಿಗೂ ಅನುಕೂಲ
ಸಂಚಾರ ಅವಧಿ ವಿಸ್ತರಣೆಯಾಗಿರುವ ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂ ರೈಲು ಹುಬ್ಬಳ್ಳಿಯಿಂದ ಹೊರಟು, ದಾವಣಗೆರೆ, ಬೀರೂರು, ಯಶವಂತಪುರ, ಸೇಲಂ, ತಿರುಚನಾಪಲ್ಲಿ ಮಾರ್ಗವಾಗಿ ರಾಮನಾಥಂಪುರಂ ತಲುಪಲಿದೆ.
ಹೀಗಾಗಿ, ಶಿವಮೊಗ್ಗ ಭಾಗದಿಂದ ರಾಮೇಶ್ವರಂ, ರಾಮನಾಥಪುರಂ ತೆರಳುವ ಪ್ರಯಾಣಿಕರು ಬೀರೂರು ನಿಲ್ದಾಣದಿಂದ ರೈಲು ಹತ್ತಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post