ನವದೆಹಲಿ: ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇಂದು ಪಾಲ್ಗೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿರುವ ಬೆನ್ನಲ್ಲೇ, ಮುಖರ್ಜಿ ಪುತ್ರಿ ತಮ್ಮ ತಂದೆಗೇ ಎಚ್ಚರಿಕೆ ನೀಡಿದ್ದಾರೆ.
ಈಗ ಕಾಂಗ್ರೆಸ್ ನಾಯಕಿಯೂ ಆಗಿರುವ ಪ್ರಣವ್ ಮುಖರ್ಜಿ ಪುತ್ರಿ ಶರ್ಮಿಷ್ಟಾ ಮುಖರ್ಜಿ ತಂದೆಯ ನಿರ್ಧಾರದ ವಿರುದ್ಧವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬಿಜೆಪಿ ಹಾಗೂ ಸಂಘಪರಿವಾರ ಸುಳ್ಳು ಕಥೆಗಳನ್ನು ಹರಡುವುದಕ್ಕೆ ಪ್ರಣಬ್ ಮುಖರ್ಜಿ ಅತ್ಯುತ್ತಮ ಅವಕಾಶ ಒದಗಿಸುತ್ತಿದ್ದಾರೆ, ಅವರ ಭಾಷಣವನ್ನು ಮರೆಯಲಾಗುತ್ತದೆ, ಆದರೆ ದೃಶ್ಯಗಳು ಮಾತ್ರ ಉಳಿಯುತ್ತವೆ ಎಂದು ಶರ್ಮಿಷ್ಟಾ ಮುಖರ್ಜಿ ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಶರ್ಮಿಷ್ಟಾ, ಬಿಜೆಪಿಯ ಸುಳ್ಳು ಪ್ರಚಾರ ಮಾಡುವ ವಿಭಾಗ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಮಾಜಿ ರಾಷ್ಟ್ರಪತಿಗಳು ಅರ್ಥಮಾಡಿಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಅವರ ಭೇಟಿ ಬಿಜೆಪಿ ಹಾಗೂ ಸಂಘಪರಿವಾರ ಸುಳ್ಳು ಕಥೆಗಳನ್ನು ಹರಡುವುದಕ್ಕೆ ಅವಕಾಶ ಒದಗಿಸಿಕೊಡುತ್ತಿದ್ದು ತಮ್ಮ ಭೇಟಿ ದೂರಗಾಮಿ ಪರಿಣಾಮಗಳನ್ನು ಬೀರಲಿದೆ ಎಂದೂ ಎಚ್ಚರಿಸಿದ್ದಾರೆ.
Hope @CitiznMukherjee now realises from todays’ incident, how BJP dirty tricks dept operates. Even RSS wouldn’t believe that u r going 2 endorse its views in ur speech. But the speech will be forgotten, visuals will remain & those will be circulated with fake statements. 1/2
— Sharmistha Mukherjee (@Sharmistha_GK) June 6, 2018
Discussion about this post