Wednesday, March 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಭಕ್ತರ ಮನೋಭಿಷ್ಟಗಳನ್ನು ಈಡೇರಿಸುವ ಕರುಣಾಮೂರ್ತಿ ಶ್ರೀವಾದಿರಾಜರು

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆರಾಧನೆಗೆ ಸಕಲ ಸಿದ್ದತೆ

March 11, 2020
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನಂಬಿ ಬಂದ ಭಕ್ತರ ಪಾಲಿನ ಕಾಮಧೇನುವಾಗಿ, ಮನೋಭಿಷ್ಟಗಳನ್ನು ಕರುಣಿಸುತ್ತಿರುವ ಶ್ರೀವಾದಿರಾಜರ ಆರಾಧನೆ ಮಾರ್ಚ್ 12ರ ನಾಳೆ ನಡೆಯಲಿದ್ದು, ಇದಕ್ಕಾಗಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಸಕಲ ಸಿದ್ದತೆ ನಡೆದಿದೆ.

ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥರ ಆದೇಶದಂತೆ ಶ್ರೀ ವಾದಿರಾಜ ಗುರುಸಾರ್ವಭೌಮರ ಆರಾಧನೆ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಆರಾಧನಾ ಮಹೋತ್ಸವದ ಪ್ರಯುಕ್ತ ವಾದಿರಾಜರ ವಿರಚಿತ ಹಾಡುಗಳು, ಹೋಮ-ಹವನ-ಗ್ರಂಥ ಪಾರಾಯಣ-ಪ್ರವಚನ-ಭಜನೆ-ತೊಟ್ಟಿಲು ಪೂಜೆ-ರಥೋತ್ಸವವನ್ನು ಏರ್ಪಡಿಸಲಾಗಿದೆ.

ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಯು. ಕೇಶವಾಚಾರ್ಯ ಅವರು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ್ದು, ಶ್ರೀವಾದಿರಾಜ ಗುರುಸಾರ್ವಭೌಮರ ಆರಾಧನೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ತನು-ಮನ-ಧನ ರೂಪದಲ್ಲಿ ಸೇವೆ ಸಲ್ಲಿಸಿ ಶ್ರೀ ವಾದಿರಾಜಗುವಂತರ್ಗತ ಹಯಗ್ರೀವ ರೂಪಿ ಶ್ರೀ ಕೃಷ್ಣ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ವಿನಂತಿಸಿದ್ದಾರೆ.

ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀವಾದಿರಾಜ ಗುರುಸಾರ್ವಭೌಮರು
ಶ್ರೀ ಮಧ್ವಾಚಾರ್ಯರು ಹಾಗೂ ಶ್ರೀಶ್ರೀ ವಾದಿರಾಜ ಗುರುಸಾರ್ವಭೌಮರು ಒಂದೇ ಸನ್ನಿಧಿಯಲ್ಲಿ ಇರುವುದು ಬೆಂಗಳೂರಿನ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಮಾತ್ರ. ಈ ರೀತಿ ಒಂದೇ ಸನ್ನಿಧಾನದಲ್ಲಿ ಇರುವುದು ವಿರಳ!! ನನ್ನ ಜ್ಞಾನಕ್ಕೆ ತಿಳಿದ ಹಾಗೆ ಕರ್ನಾಟಕದಲ್ಲಿ ಎಲ್ಲಿಯೂ ಇಲ್ಲ!!
ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ವಿಶ್ವಸಂತರು. ಇಂತಹ ಶ್ರೀಗಳು ಮಧ್ವ ಹಾಗೂ ವೈಷ್ಣವ ಸಿದ್ಧಾಂತ ಉಳಿಯಬೇಕು ಎಂಬ ಉದ್ದೇಶದಿಂದ ಪೂರ್ಣಪ್ರಜ್ಞ ವಿದ್ಯಾಪೀಠ ಎಂಬ ಗುರುಕುಲ ಪ್ರತಿಷ್ಠಾಪಿಸಿದರು. ನಿತ್ಯ ಉಪಾಸಾನೆಗೆ ಕೇಂದ್ರ ಬಿಂದುವಾಗಿ ಶ್ರೀ ಕೃಷ್ಣ ಪರಮಾತ್ಮನನ್ನು ಹಾಗೂ ಶ್ರೀ ಮಧ್ವಾಚಾರ್ಯ ಗುರುಗಳನ್ನು ಪ್ರತಿಷ್ಠಾಪಿಸಿದರು.


ನಮ್ಮೊಂದಿಗೆ ಮಾತನಾಡಿದ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಯು. ಕೇಶವಾಚಾರ್ಯ ಅವರು, ಕೋಟೇಶ್ವರದ 3500 ಭಕ್ತರ ಪ್ರಾರ್ಥನೆಯಂತೆ ಸೋಂದಾ ಕ್ಷೇತ್ರಕ್ಕೆ ಹೋಗಿ ಬರಲು ದೂರವಾಗುತ್ತದೆ. ಶ್ರೀ ವಾದಿರಾಜರ ಉಪಾಸನೆ ಆಗಬೇಕು ಎಂದು ಕೋಟೇಶ್ವರದ ಮಹಾ ಬಂಧುಗಳ ವಿನಂತಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಾಲಿಗ್ರಾಮ ಶಿಲೆಯ ಶ್ರೀ ವಾದಿರಾಜರ ಶಿಲಾಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದರು ಎನ್ನುತ್ತಾರೆ.

ಮಧ್ವಾಚಾರ್ಯರ ಗುರು ಪರಂಪರೆಯ 200 ವರುಷಗಳ ನಂತರ ವಾದಿರಾಜರು ಬಂದಿದ್ದು. ಮಹಾನ್ ವಿದ್ವಾಂಸರು, ಮಹಾಜ್ಞಾನಿಗಳು, ಕ್ರಾಂತಿಕಾರರು, ವ್ಯಾಸರಾಜರ ಸಮಕಾಲೀನರು ಹಾಗೂ ಮಧ್ವಾಚಾರ್ಯರ ಭಾವಿ ಸಮೀರರು ಎನ್ನುತ್ತಾರೆ ಅವರು.

ವಾದಿರಾಜ ಗುರುಸಾರ್ವಭೌಮರ ಆರಾಧನೆ
ಬದುಕನ್ನು ಸರ್ವ ವಿಷಯದಲ್ಲಿಯೂ ಭಗವಂತನಿಗೆ ಮೀಸಲಿಟ್ಟವರು ವಾದಿರಾಜ ಗುರುಸಾರ್ವಭೌಮರು. ಅವರು ರಚಿಸಿದ ಗ್ರಂಥಗಳ ಪಠನ, ಹಾಡುಗಳ ಶ್ರವಣ ನಿಜವಾದ ಆರಾಧನೆಯಾಗಿದೆ.

ವಾದಿರಾಜರು ದಾಸ, ವ್ಯಾಸ ಸಾಹಿತ್ಯದಲ್ಲಿ ಪಳಗಿದವರು. ಕನ್ನಡ, ಸಂಸ್ಕೃತದಲ್ಲಿ ಬಹುಕೃತಿಯನ್ನು ರಚಿಸಿದವರು. ವ್ಯಾಸರ ಕೃತಿಗಳನ್ನು ತಮ್ಮೊಳಗೆ ತುಂಬಿಕೊಂಡು ವ್ಯಾಸರದಾಸ ಎಂದೆನಿಸಿಕೊಂಡವರು.

ಗುರು ವಾದಿರಾಜರ ಮಹಾಭಾರತ ತಾತ್ಪರ್ಯ ನಿರ್ಣಯಕ್ಕೆ ಬರೆದ ವ್ಯಾಖ್ಯಾನ ಅತ್ಯಂತ ಸುಂದರವಾಗಿದ್ದು, ಸಂಶೋಧನಾತ್ಮಕವಾಗಿದೆ.
ಶ್ರೀವಾದಿರಾಜರು ಇಡೀ ಭರತ ಖಂಡವನ್ನು ನಾಲ್ಕು ಬಾರಿ ಸಂಚರಿಸಿ ಪ್ರಪ್ರಥಮ ಪ್ರವಾಸ ಸಾಹಿತ್ಯವೆನ್ನಬಹುದಾದ ತೀರ್ಥ ಪ್ರಬಂಧ ಎಂಬ ಕೃತಿ ರಚಿಸಿದರು.

ಶ್ರೀ ವಾದಿರಾಜರು ಕನಕ ಬಂದಾಗ ಭಕ್ತ ಶ್ರೀ ಕೃಷ್ಣ ಪರಮಾತ್ಮನ ನೋಡುವ ಮನದ ಇಂಗಿತವನ್ನು ಕನಕದಾಸರ ಮುಖ ನೋಡಿ ತಿಳಿದು ಅವರು ಪರಮಾತ್ಮನ ದರ್ಶನಕ್ಕೆ ಅನುವು ಮಾಡಿಕೊಟ್ಟರು!!

ಉಡುಪಿಯಲ್ಲಿ ಕನಕದಾಸರ ಭಕ್ತಿಗೆ ಒಲಿದ ಶ್ರೀ ಕೃಷ್ಣ ಅವರಿಗೆ ಗೋಡೆಯ ಕಿಂಡಿಯಲ್ಲಿ ದರ್ಶನ ಕೊಟ್ಟ!!

ಅದನ್ನು ಕನಕನ ಕಿಂಡಿ ಎಂದು ಕರೆದು ಕೃಷ್ಣನ ಮೊದಲ ಧೂಳಿ ದರ್ಶನ ಕಿಂಡಿಯ ಮೂಲಕವೇ ನಡೆಯಬೇಕು ಎಂಬ ಪದ್ಧತಿಯನ್ನು ರೂಢಿಗೆ ತಂದು ಕನಕ ಭಕ್ತಿಗೆ ಉಡುಪಿಯಲ್ಲೊಂದು ಐತಿಹಾಸಿಕ ದಾಖಲೆ ಸೃಷ್ಟಿಸಿದರು.

ಉಡುಪಿಯ ಅಷ್ಟ ಮಠಗಳಲ್ಲಿ ಶ್ರೀಕೃಷ್ಣನ ಪೂಜೆ ಎರಡು ತಿಂಗಳಿಗೊಮ್ಮೆ (ಪರ್ಯಾಯ) ನಡೆಯುವ ವ್ಯವಸ್ಥೆ ಇದ್ದಿತು. ಅದನ್ನು ಶ್ರೀವಾದಿರಾಜರು ಎರಡು ವರ್ಷಗಳಿಗೆ ವಿಸ್ತರಿಸಿ ದೇಶ ಸಂಚಾರ ಮತ್ತು ಅಧ್ಯಯನಗಳಿಗೆ ವಿಶೇಷ ಅನುಕೂಲ ಕಲ್ಪಿಸಿದರು.

ಶ್ರೀವಾದಿರಾಜರು ತಮ್ಮ ಜೀವಿತಾವಧಿಯಲ್ಲಿ ಒಟ್ಟು ಐದು ಬಾರಿ ಪರ್ಯಾಯ ಪೀಠವನ್ನಲಂಕರಿಸಿದ ಮೊದಲ ಯತಿವರೇಣ್ಯರು. ಸಶರೀರರಾಗಿ ವೃಂದಾವನ ಪ್ರವೇಶ ಮಾಡಿದರು. ಇಂತಹ ಮಹಾನ್ ಪುರುಷರ ನಾಮಸ್ಮರಣೆ ಕೇವಲ ಆರಾಧನೆ ಸಮಯಕ್ಕೆ ಸೀಮಿತವಾಗದೆ ನಿರಂತರ ನಡೆಯಬೇಕು.

ಪೂರ್ಣಪ್ರಜ್ಞ ವಿದ್ಯಾಪೀಠದ ಬಗ್ಗೆ
ದೇಶ ಹಾಗೂ ಹಿಂದೂ ಧರ್ಮಕ್ಕೆ ತನ್ನದೇ ಆದ ರೀತಿಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ವಿದ್ಯಾಪೀಠ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ನಗರದ ಪ್ರಮುಖ ಆಧ್ಯಾತ್ಮಿಕ ಸಂಸ್ಥೆಯಾಗಿದೆ.

ವೇದ, ಉಪನಿಷತ್ತುಗಳ ಸಮಗ್ರ ಮತ್ತು ಗಾಢ ಅಧ್ಯಯನದ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಪರಿಪೂರ್ಣ ಜ್ಞಾನವನ್ನು ಈ ಸಂಸ್ಥೆ ನೀಡುತ್ತದೆ.

ಆಧ್ಯಾತ್ಮಿಕ ಆಚಾರ-ವಿಚಾರ ಮತ್ತು ಸಂಸ್ಕೃತ ಅಧ್ಯಯನದಲ್ಲಿ ಇಡೀ ದೇಶದಲ್ಲಿಯೇ ಗಣ್ಯ ಸಂಸ್ಥೆಯಾಗಿದೆ. 1957-58 ರ ಸುಮಾರಿಗೆ ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ ಕತ್ರಿಗುಪ್ಪೆ ರಸ್ತೆಯಲ್ಲಿ ಮೂರುವರೆ ಎಕರೆ ನಿವೇಶದಲ್ಲೂ ಸಮುಚ್ಚಯ ನಿರ್ಮಿಸಲಾಯಿತು. ಆರಂಭದ ದಿನದಿಂದಲೂ ವಿದ್ಯಾರ್ಥಿ ಸಮುದಾಯಕ್ಕೆ ಶಾಲಾ ಕೊಠಡಿ, ವಸತಿಗೃಹ, ಗ್ರಂಥ ಭಂಡಾರ, ಸಭಾಗೃಹಗಳನ್ನು ಒದಗಿಸಿದೆ. ವಿದ್ಯಾಪೀಠದ ಆವರಣದಲ್ಲಿ ಶ್ರೀಕೃಷ್ಣನ ಗುಡಿಯನ್ನು 1980 ರಲ್ಲಿ ನಿರ್ಮಿಸಲಾಯಿತು.

ಸನ್ನಿಧಾನ
ಶ್ರೀ ಕೃಷ್ಣ ಪರಮಾತ್ಮ, ಶ್ರೀ ಮಧ್ವಾಚಾರ್ಯರು, ಶ್ರೀವಾದಿರಾಜ ಗುರುಸಾರ್ವಭೌಮರು, ಶ್ರೀಗುರು ರಾಘವೇಂದ್ರ ಸ್ವಾಮಿಗಳು, ಶ್ರೀ ದುರ್ಗಾದೇವಿ ಅಮ್ಮನವರು, ಶ್ರೀನಾಗದೇವರು, ಮನೋನಿಯಾಮಕ ರುದ್ರ ದೇವರು ಮತ್ತು ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಮೂಲ ಬೃಂದಾವನ ಇಲ್ಲಿದೆ.


Get in Touch With Us info@kalpa.news Whatsapp: 9481252093

Tags: Ananth KallapuraKannada News WebsiteLatestNewsKannadaMadhwa TraditionMadhwacharyaPejawar MuttPoornaprajna VidyapeethaSri VadirajaruSri Vishvesha Teertha SwamijiSri Vishwa Prasanna Thirtharuಪೂರ್ಣಪ್ರಜ್ಞ ವಿದ್ಯಾಪೀಠಪೇಜಾವರ ಮಠವೈಷ್ಣವ ಸಿದ್ಧಾಂತಶ್ರೀ ಮಧ್ವಾಚಾರ್ಯರುಶ್ರೀ ವಾದಿರಾಜ ಗುರುಸಾರ್ವಭೌಮರು
Previous Post

ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ

Next Post

ಮಹಿಳೆಯರ ಮೇಲೆ ದೌರ್ಜನ್ಯ ನಡೆದಲ್ಲಿ ಸಹಾಯವಾಣಿಯನ್ನು ಸಂಪರ್ಕಿಸಿ

kalpa

kalpa

Next Post

ಮಹಿಳೆಯರ ಮೇಲೆ ದೌರ್ಜನ್ಯ ನಡೆದಲ್ಲಿ ಸಹಾಯವಾಣಿಯನ್ನು ಸಂಪರ್ಕಿಸಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

March 29, 2023

ಸ್ವಸ್ತಿಶ್ರೀ ಭಟ್ಟಾರಕರು ವ್ಯಕ್ತಿಯಲ್ಲ, ವ್ಯಕ್ತಿತ್ವವೂ ಅಲ್ಲ, ಅವರೊಂದು ಪರಂಪರೆ

March 29, 2023

ಲಿಂಗತ್ವ ಅಲ್ಪಸಂಖ್ಯಾತರನ್ನು ಕಡೆಗಣಿಸದಿರಿ: ನ್ಯಾ. ಮಲ್ಲಿಕಾರ್ಜುನಗೌಡ

March 29, 2023
File Image

ಮೀಸಲಾತಿ ನಿರ್ಣಯ ಸ್ವಾಗತಿಸಿ, ಪ್ರತಿಭಟನೆ ಕೈಬಿಡಿ: ಶಾಸಕ ಅಶೋಕ ನಾಯ್ಕ ಮನವಿ

March 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

March 29, 2023

ಸ್ವಸ್ತಿಶ್ರೀ ಭಟ್ಟಾರಕರು ವ್ಯಕ್ತಿಯಲ್ಲ, ವ್ಯಕ್ತಿತ್ವವೂ ಅಲ್ಲ, ಅವರೊಂದು ಪರಂಪರೆ

March 29, 2023

ಲಿಂಗತ್ವ ಅಲ್ಪಸಂಖ್ಯಾತರನ್ನು ಕಡೆಗಣಿಸದಿರಿ: ನ್ಯಾ. ಮಲ್ಲಿಕಾರ್ಜುನಗೌಡ

March 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!