No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Sunday, April 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಭಕ್ತರ ಮನೋಭಿಷ್ಟಗಳನ್ನು ಈಡೇರಿಸುವ ಕರುಣಾಮೂರ್ತಿ ಶ್ರೀವಾದಿರಾಜರು

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆರಾಧನೆಗೆ ಸಕಲ ಸಿದ್ದತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2020
in Special Articles
0
ಭಕ್ತರ ಮನೋಭಿಷ್ಟಗಳನ್ನು ಈಡೇರಿಸುವ ಕರುಣಾಮೂರ್ತಿ ಶ್ರೀವಾದಿರಾಜರು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನಂಬಿ ಬಂದ ಭಕ್ತರ ಪಾಲಿನ ಕಾಮಧೇನುವಾಗಿ, ಮನೋಭಿಷ್ಟಗಳನ್ನು ಕರುಣಿಸುತ್ತಿರುವ ಶ್ರೀವಾದಿರಾಜರ ಆರಾಧನೆ ಮಾರ್ಚ್ 12ರ ನಾಳೆ ನಡೆಯಲಿದ್ದು, ಇದಕ್ಕಾಗಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಸಕಲ ಸಿದ್ದತೆ ನಡೆದಿದೆ.

ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥರ ಆದೇಶದಂತೆ ಶ್ರೀ ವಾದಿರಾಜ ಗುರುಸಾರ್ವಭೌಮರ ಆರಾಧನೆ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಆರಾಧನಾ ಮಹೋತ್ಸವದ ಪ್ರಯುಕ್ತ ವಾದಿರಾಜರ ವಿರಚಿತ ಹಾಡುಗಳು, ಹೋಮ-ಹವನ-ಗ್ರಂಥ ಪಾರಾಯಣ-ಪ್ರವಚನ-ಭಜನೆ-ತೊಟ್ಟಿಲು ಪೂಜೆ-ರಥೋತ್ಸವವನ್ನು ಏರ್ಪಡಿಸಲಾಗಿದೆ.

ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಯು. ಕೇಶವಾಚಾರ್ಯ ಅವರು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ್ದು, ಶ್ರೀವಾದಿರಾಜ ಗುರುಸಾರ್ವಭೌಮರ ಆರಾಧನೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ತನು-ಮನ-ಧನ ರೂಪದಲ್ಲಿ ಸೇವೆ ಸಲ್ಲಿಸಿ ಶ್ರೀ ವಾದಿರಾಜಗುವಂತರ್ಗತ ಹಯಗ್ರೀವ ರೂಪಿ ಶ್ರೀ ಕೃಷ್ಣ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ವಿನಂತಿಸಿದ್ದಾರೆ.

ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀವಾದಿರಾಜ ಗುರುಸಾರ್ವಭೌಮರು
ಶ್ರೀ ಮಧ್ವಾಚಾರ್ಯರು ಹಾಗೂ ಶ್ರೀಶ್ರೀ ವಾದಿರಾಜ ಗುರುಸಾರ್ವಭೌಮರು ಒಂದೇ ಸನ್ನಿಧಿಯಲ್ಲಿ ಇರುವುದು ಬೆಂಗಳೂರಿನ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಮಾತ್ರ. ಈ ರೀತಿ ಒಂದೇ ಸನ್ನಿಧಾನದಲ್ಲಿ ಇರುವುದು ವಿರಳ!! ನನ್ನ ಜ್ಞಾನಕ್ಕೆ ತಿಳಿದ ಹಾಗೆ ಕರ್ನಾಟಕದಲ್ಲಿ ಎಲ್ಲಿಯೂ ಇಲ್ಲ!!
ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ವಿಶ್ವಸಂತರು. ಇಂತಹ ಶ್ರೀಗಳು ಮಧ್ವ ಹಾಗೂ ವೈಷ್ಣವ ಸಿದ್ಧಾಂತ ಉಳಿಯಬೇಕು ಎಂಬ ಉದ್ದೇಶದಿಂದ ಪೂರ್ಣಪ್ರಜ್ಞ ವಿದ್ಯಾಪೀಠ ಎಂಬ ಗುರುಕುಲ ಪ್ರತಿಷ್ಠಾಪಿಸಿದರು. ನಿತ್ಯ ಉಪಾಸಾನೆಗೆ ಕೇಂದ್ರ ಬಿಂದುವಾಗಿ ಶ್ರೀ ಕೃಷ್ಣ ಪರಮಾತ್ಮನನ್ನು ಹಾಗೂ ಶ್ರೀ ಮಧ್ವಾಚಾರ್ಯ ಗುರುಗಳನ್ನು ಪ್ರತಿಷ್ಠಾಪಿಸಿದರು.


ನಮ್ಮೊಂದಿಗೆ ಮಾತನಾಡಿದ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಯು. ಕೇಶವಾಚಾರ್ಯ ಅವರು, ಕೋಟೇಶ್ವರದ 3500 ಭಕ್ತರ ಪ್ರಾರ್ಥನೆಯಂತೆ ಸೋಂದಾ ಕ್ಷೇತ್ರಕ್ಕೆ ಹೋಗಿ ಬರಲು ದೂರವಾಗುತ್ತದೆ. ಶ್ರೀ ವಾದಿರಾಜರ ಉಪಾಸನೆ ಆಗಬೇಕು ಎಂದು ಕೋಟೇಶ್ವರದ ಮಹಾ ಬಂಧುಗಳ ವಿನಂತಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಾಲಿಗ್ರಾಮ ಶಿಲೆಯ ಶ್ರೀ ವಾದಿರಾಜರ ಶಿಲಾಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದರು ಎನ್ನುತ್ತಾರೆ.

ಮಧ್ವಾಚಾರ್ಯರ ಗುರು ಪರಂಪರೆಯ 200 ವರುಷಗಳ ನಂತರ ವಾದಿರಾಜರು ಬಂದಿದ್ದು. ಮಹಾನ್ ವಿದ್ವಾಂಸರು, ಮಹಾಜ್ಞಾನಿಗಳು, ಕ್ರಾಂತಿಕಾರರು, ವ್ಯಾಸರಾಜರ ಸಮಕಾಲೀನರು ಹಾಗೂ ಮಧ್ವಾಚಾರ್ಯರ ಭಾವಿ ಸಮೀರರು ಎನ್ನುತ್ತಾರೆ ಅವರು.

ವಾದಿರಾಜ ಗುರುಸಾರ್ವಭೌಮರ ಆರಾಧನೆ
ಬದುಕನ್ನು ಸರ್ವ ವಿಷಯದಲ್ಲಿಯೂ ಭಗವಂತನಿಗೆ ಮೀಸಲಿಟ್ಟವರು ವಾದಿರಾಜ ಗುರುಸಾರ್ವಭೌಮರು. ಅವರು ರಚಿಸಿದ ಗ್ರಂಥಗಳ ಪಠನ, ಹಾಡುಗಳ ಶ್ರವಣ ನಿಜವಾದ ಆರಾಧನೆಯಾಗಿದೆ.

ವಾದಿರಾಜರು ದಾಸ, ವ್ಯಾಸ ಸಾಹಿತ್ಯದಲ್ಲಿ ಪಳಗಿದವರು. ಕನ್ನಡ, ಸಂಸ್ಕೃತದಲ್ಲಿ ಬಹುಕೃತಿಯನ್ನು ರಚಿಸಿದವರು. ವ್ಯಾಸರ ಕೃತಿಗಳನ್ನು ತಮ್ಮೊಳಗೆ ತುಂಬಿಕೊಂಡು ವ್ಯಾಸರದಾಸ ಎಂದೆನಿಸಿಕೊಂಡವರು.

ಗುರು ವಾದಿರಾಜರ ಮಹಾಭಾರತ ತಾತ್ಪರ್ಯ ನಿರ್ಣಯಕ್ಕೆ ಬರೆದ ವ್ಯಾಖ್ಯಾನ ಅತ್ಯಂತ ಸುಂದರವಾಗಿದ್ದು, ಸಂಶೋಧನಾತ್ಮಕವಾಗಿದೆ.
ಶ್ರೀವಾದಿರಾಜರು ಇಡೀ ಭರತ ಖಂಡವನ್ನು ನಾಲ್ಕು ಬಾರಿ ಸಂಚರಿಸಿ ಪ್ರಪ್ರಥಮ ಪ್ರವಾಸ ಸಾಹಿತ್ಯವೆನ್ನಬಹುದಾದ ತೀರ್ಥ ಪ್ರಬಂಧ ಎಂಬ ಕೃತಿ ರಚಿಸಿದರು.

ಶ್ರೀ ವಾದಿರಾಜರು ಕನಕ ಬಂದಾಗ ಭಕ್ತ ಶ್ರೀ ಕೃಷ್ಣ ಪರಮಾತ್ಮನ ನೋಡುವ ಮನದ ಇಂಗಿತವನ್ನು ಕನಕದಾಸರ ಮುಖ ನೋಡಿ ತಿಳಿದು ಅವರು ಪರಮಾತ್ಮನ ದರ್ಶನಕ್ಕೆ ಅನುವು ಮಾಡಿಕೊಟ್ಟರು!!

ಉಡುಪಿಯಲ್ಲಿ ಕನಕದಾಸರ ಭಕ್ತಿಗೆ ಒಲಿದ ಶ್ರೀ ಕೃಷ್ಣ ಅವರಿಗೆ ಗೋಡೆಯ ಕಿಂಡಿಯಲ್ಲಿ ದರ್ಶನ ಕೊಟ್ಟ!!

ಅದನ್ನು ಕನಕನ ಕಿಂಡಿ ಎಂದು ಕರೆದು ಕೃಷ್ಣನ ಮೊದಲ ಧೂಳಿ ದರ್ಶನ ಕಿಂಡಿಯ ಮೂಲಕವೇ ನಡೆಯಬೇಕು ಎಂಬ ಪದ್ಧತಿಯನ್ನು ರೂಢಿಗೆ ತಂದು ಕನಕ ಭಕ್ತಿಗೆ ಉಡುಪಿಯಲ್ಲೊಂದು ಐತಿಹಾಸಿಕ ದಾಖಲೆ ಸೃಷ್ಟಿಸಿದರು.

ಉಡುಪಿಯ ಅಷ್ಟ ಮಠಗಳಲ್ಲಿ ಶ್ರೀಕೃಷ್ಣನ ಪೂಜೆ ಎರಡು ತಿಂಗಳಿಗೊಮ್ಮೆ (ಪರ್ಯಾಯ) ನಡೆಯುವ ವ್ಯವಸ್ಥೆ ಇದ್ದಿತು. ಅದನ್ನು ಶ್ರೀವಾದಿರಾಜರು ಎರಡು ವರ್ಷಗಳಿಗೆ ವಿಸ್ತರಿಸಿ ದೇಶ ಸಂಚಾರ ಮತ್ತು ಅಧ್ಯಯನಗಳಿಗೆ ವಿಶೇಷ ಅನುಕೂಲ ಕಲ್ಪಿಸಿದರು.

ಶ್ರೀವಾದಿರಾಜರು ತಮ್ಮ ಜೀವಿತಾವಧಿಯಲ್ಲಿ ಒಟ್ಟು ಐದು ಬಾರಿ ಪರ್ಯಾಯ ಪೀಠವನ್ನಲಂಕರಿಸಿದ ಮೊದಲ ಯತಿವರೇಣ್ಯರು. ಸಶರೀರರಾಗಿ ವೃಂದಾವನ ಪ್ರವೇಶ ಮಾಡಿದರು. ಇಂತಹ ಮಹಾನ್ ಪುರುಷರ ನಾಮಸ್ಮರಣೆ ಕೇವಲ ಆರಾಧನೆ ಸಮಯಕ್ಕೆ ಸೀಮಿತವಾಗದೆ ನಿರಂತರ ನಡೆಯಬೇಕು.

ಪೂರ್ಣಪ್ರಜ್ಞ ವಿದ್ಯಾಪೀಠದ ಬಗ್ಗೆ
ದೇಶ ಹಾಗೂ ಹಿಂದೂ ಧರ್ಮಕ್ಕೆ ತನ್ನದೇ ಆದ ರೀತಿಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ವಿದ್ಯಾಪೀಠ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ನಗರದ ಪ್ರಮುಖ ಆಧ್ಯಾತ್ಮಿಕ ಸಂಸ್ಥೆಯಾಗಿದೆ.

ವೇದ, ಉಪನಿಷತ್ತುಗಳ ಸಮಗ್ರ ಮತ್ತು ಗಾಢ ಅಧ್ಯಯನದ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಪರಿಪೂರ್ಣ ಜ್ಞಾನವನ್ನು ಈ ಸಂಸ್ಥೆ ನೀಡುತ್ತದೆ.

ಆಧ್ಯಾತ್ಮಿಕ ಆಚಾರ-ವಿಚಾರ ಮತ್ತು ಸಂಸ್ಕೃತ ಅಧ್ಯಯನದಲ್ಲಿ ಇಡೀ ದೇಶದಲ್ಲಿಯೇ ಗಣ್ಯ ಸಂಸ್ಥೆಯಾಗಿದೆ. 1957-58 ರ ಸುಮಾರಿಗೆ ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ ಕತ್ರಿಗುಪ್ಪೆ ರಸ್ತೆಯಲ್ಲಿ ಮೂರುವರೆ ಎಕರೆ ನಿವೇಶದಲ್ಲೂ ಸಮುಚ್ಚಯ ನಿರ್ಮಿಸಲಾಯಿತು. ಆರಂಭದ ದಿನದಿಂದಲೂ ವಿದ್ಯಾರ್ಥಿ ಸಮುದಾಯಕ್ಕೆ ಶಾಲಾ ಕೊಠಡಿ, ವಸತಿಗೃಹ, ಗ್ರಂಥ ಭಂಡಾರ, ಸಭಾಗೃಹಗಳನ್ನು ಒದಗಿಸಿದೆ. ವಿದ್ಯಾಪೀಠದ ಆವರಣದಲ್ಲಿ ಶ್ರೀಕೃಷ್ಣನ ಗುಡಿಯನ್ನು 1980 ರಲ್ಲಿ ನಿರ್ಮಿಸಲಾಯಿತು.

ಸನ್ನಿಧಾನ
ಶ್ರೀ ಕೃಷ್ಣ ಪರಮಾತ್ಮ, ಶ್ರೀ ಮಧ್ವಾಚಾರ್ಯರು, ಶ್ರೀವಾದಿರಾಜ ಗುರುಸಾರ್ವಭೌಮರು, ಶ್ರೀಗುರು ರಾಘವೇಂದ್ರ ಸ್ವಾಮಿಗಳು, ಶ್ರೀ ದುರ್ಗಾದೇವಿ ಅಮ್ಮನವರು, ಶ್ರೀನಾಗದೇವರು, ಮನೋನಿಯಾಮಕ ರುದ್ರ ದೇವರು ಮತ್ತು ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಮೂಲ ಬೃಂದಾವನ ಇಲ್ಲಿದೆ.


Get in Touch With Us info@kalpa.news Whatsapp: 9481252093

Tags: Ananth KallapuraKannada News WebsiteLatestNewsKannadaMadhwa TraditionMadhwacharyaPejawar MuttPoornaprajna VidyapeethaSri VadirajaruSri Vishvesha Teertha SwamijiSri Vishwa Prasanna Thirtharuಪೂರ್ಣಪ್ರಜ್ಞ ವಿದ್ಯಾಪೀಠಪೇಜಾವರ ಮಠವೈಷ್ಣವ ಸಿದ್ಧಾಂತಶ್ರೀ ಮಧ್ವಾಚಾರ್ಯರುಶ್ರೀ ವಾದಿರಾಜ ಗುರುಸಾರ್ವಭೌಮರು
Share228Tweet123Send
Previous Post

ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ

Next Post

ಮಹಿಳೆಯರ ಮೇಲೆ ದೌರ್ಜನ್ಯ ನಡೆದಲ್ಲಿ ಸಹಾಯವಾಣಿಯನ್ನು ಸಂಪರ್ಕಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಹಿಳೆಯರ ಮೇಲೆ ದೌರ್ಜನ್ಯ ನಡೆದಲ್ಲಿ ಸಹಾಯವಾಣಿಯನ್ನು ಸಂಪರ್ಕಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL