No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು ಶ್ರೀ ವಿಜಯೀಂದ್ರತೀರ್ಥರು

ಭಕ್ತಾನಾಂ ಮಾನಸಾಂಭೋಜ..

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 17, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು ಶ್ರೀ ವಿಜಯೀಂದ್ರತೀರ್ಥರು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶ್ರೀವಿಜಯೀಂದ್ರತೀರ್ಥರು ಗುರುರಾಜರೂ ಹೌದು! ರಾಜಗುರುಗಳೂ ಹೌದು ! ಎಲ್ಲಾ ಶಾಸ್ತ್ರಗಳಲ್ಲಿ ತಲಸ್ಪರ್ಶಿ ಪಾಂಡಿತ್ಯ ಅವರದು. ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು. ಸದ್‌ವೈಷ್ಣವ ಸಿದ್ಧಾಂತದಲ್ಲಿ ವೀರನಿಷ್ಠೆಯವರು, ಪ್ರಮಾಣಪ್ರಮೇಯಗಳ ಪರಿಜ್ಞಾನ ಸಂಪನ್ನರು. ಆಡಿದ ಮಾತೆಲ್ಲ ಗ್ರಂಥವಾಗುವ ಧೀಮಂತರು, ವಿಮತೀಯ ವಿದ್ವಾಂಸರನ್ನೂ ಪುರಸ್ಕರಿಸುವ ಉದಾರಿಗಳು. ಸಾಮಾನ್ಯ ಭಕ್ತರಿಗೆ ಶ್ರೀಹರಿವಾಯುಗಳ ಅನುಗ್ರಹ ತಲುಪಿಸುವ ಹರಿದಾರಿಗಳು.

ಪರಕೀಯರ ಆಕ್ರಮಣ ವೇದ ಸಂಸ್ಕೃತಿಯ ನಾಶ. ಕುಹಕಿಗಳು, ಸ್ವಾರ್ಥಕ್ಕೋಸ್ಕರ ದೇಶದ್ರೋಹಿಗಳಾಗಿ ಪರದೇಶೀಯರ ಸಂಸ್ಕೃತಿಯನ್ನು ಅವಲಂಬಿಸಿ ರಾಷ್ಟ್ರವಿಘಾತಕರಾಗಿದ್ದಾರೆ. ಇದನ್ನು ತಡೆಯಲು ಶ್ರೀವಿಜಯೀಂದ್ರತೀರ್ಥರು ತೋರಿದ ಮಾರ್ಗ ಐಕ್ಯಮತ್ಯ, ರಾಷ್ಟ್ರಪ್ರೇಮ, ದೈವಭಕ್ತಿ ಮತ್ತು ಯುವಕರಲ್ಲಿ ಸದ್ಭಾವನೆ ಉಂಟು ಮಾಡಿತು, ವಿಜಯನಗರದ ರಕ್ಷಣೆಗೆ ಬಹಳಷ್ಟು ಶ್ರಮಿಸಿದ ಶ್ರೀವಿಜಯೀಂದ್ರರ ಉಪದೇಶ ಎಲ್ಲಾ ಮಾಂಡಲೀಕರನ್ನು ಐಕ್ಯಮತ್ಯ ಮತ್ತು ಕೆಚ್ಛೆದೆಯ ಸಾಹಸ ಪ್ರದರ್ಶನಕ್ಕೆ ಕಾರಣವಾಯಿತು. ಯಾವುದೇ ರಾಜ್ಯಗಳ ಅವನತಿಗೆ ಕಾರಣ, ಸನಾತನ ಸಂಸ್ಕೃತಿಯ ತಿರಸ್ಕಾರ, ಇದು ಆಗಬಾರದು ಎಂಬ ಸಾಮಾಜಿಕ ಪ್ರಜ್ಞೆಯನ್ನು ತೋರಿಸಿದವರು ಶ್ರೀವಿಜಯೀಂದ್ರರು.

ದ್ವೈತ ದುಂದುಭಿಯನ್ನು ಅವ್ಯಾಹತವಾಗಿ ಮೊಳಗುವಂತೆ ಮಾಡಿದವರೇ ಶ್ರೀವಿಜಯೀಂದ್ರ ತೀರ್ಥರು, ಇವರ ಹರಿತವಾದ ಶೈಲಿ, ಕೂಲಂಕುಷ ವಿಮರ್ಶಾದೃಷ್ಟಿ, ಸ್ವಸಿದ್ಧಾಂತ ನಿಷ್ಠೆ, ಸಂಪ್ರದಾಯ ಸಂರಕ್ಷಣಾ ದೀಕ್ಷೆಗಳೆಲ್ಲವೂ ಸಮಕಾಲೀನ ಶೈವ, ಅದ್ವೈತ ವಿಶಿಷ್ಟಾದ್ವೈತ ದಿಗ್ಧಂತಿ ಪಂಡಿತರನ್ನೂ ಮೂಕೂಭೂತರನ್ನಾಗಿ ಮಾಡಿತು. ಅವರು ತರ್ಕ, ಮೀಮಾಂಸಾ ಶಾಸ್ತ್ರಗಳಲ್ಲಿ ಎಂತಹ ಪ್ರಕಾಂಡ ಪಂಡಿತರೋ ಅಂತೆಯೇ ಕಾವ್ಯ ನಾಟಕ ಅಲಂಕಾರಾದಿಗಳಲ್ಲಿಯೂ ಪರಿಣಿತರು. ಆದ್ದರಿಂದಲೇ ಅವರು ಬಗೆಬಗೆಯ ಸಾಹಿತ್ಯ ಮಾಧ್ಯಮಗಳನ್ನು ಉಪಯೋಗಿಸಿಕೊಂಡು ಮಧ್ವರಾದ್ಧಾಂತದ ಸರ್ವತೋಮುಖ ವಿಕಾಸಕ್ಕೆ ಕಾರಣರಾದವರು.

ಶ್ರೀ ವಿಜಯೀಂದ್ರ ಮಹಾಸ್ವಾಮಿಗಳು ಆಸ್ತಿಕ ಸಮಾಜದ ಅಕ್ಷಯ ಆಸ್ತಿ. ಗುರುಗಳು ವೇದಾಂತ ಸಾಮ್ರಾಜ್ಯದ ದಿಗ್ಗಜರೆನಿಸಿದ, ವ್ಯಾಸತ್ರಯ ರಚಿಸಿದ, ಶ್ರೀವ್ಯಾಸರಾಜಗುರುಸಾರ್ವಭೌಮರು. ಶಿಷ್ಯ ಪ್ರಶಿಷ್ಯರ ವೈಭವವೂ ಅಂತಹದ್ದೇ, ಮಹಾಜ್ಞಾನಿಗಳಾದ ವ್ಯಾಖ್ಯಾತರಾದ ಶ್ರೀ ಸುಧೀಂಧ್ರ ಸ್ವಾಮಿಗಳಂತಹ ಶಿಷ್ಯರನ್ನೂ, ಅತ್ಯಂತ ದಯಾಳುಗಳಾದ ಭಕ್ತರಿಗೆ ಸರ್ವಾಭಿಷ್ಟವನ್ನು ಕೊಡತಕ್ಕಂತಹ ಶ್ರೀ ರಾಘವೇಂದ್ರ ಸ್ವಾಮಿಗಳ ಪರಮಗುರುಗಳು ಅಂತ ಅಂದರೇ ಶ್ರೀ ವಿಜಯೀಂದ್ರ ಮಹಾಸ್ವಾಮಿಗಳ ಸೌಭಾಗ್ಯಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ, ಎಣೆ ಇಲ್ಲದ ವೈಭವ ಇವರದ್ದು, ಶ್ರೀಗಳನ್ನು ದಿನನಿತ್ಯ ನೆನಪಿಸಿಕೊಳ್ಳದೇ ಇರುವ ಮಾಧ್ವ ಸಾಧಕವರ್ಗವೇ ಇಲ್ಲ ಎಂದರೆ ತಪ್ಪಾಗಲಾರದು.

ತಾತ್ವಿಕ ಪ್ರಪಂಚದಲ್ಲಿ ವಿಶೇಷ ಸಾಧನೆಗೈದಂತೆ ಶ್ರೀ ವಿಜಯೀಂದ್ರ ತೀರ್ಥರು ಸಾಮಾಜಿಕವಾಗಿಯೂ ಜನರಲ್ಲಿ ಭಕ್ತಿ ಸಿದ್ಧಾಂತ ಪ್ರತಿಪಾದನೆಯಲ್ಲಿ ಹಿಂದಿಲ್ಲ, ಇಂದಿನ ಗೌಡಸಾರಸ್ವತ ಮಠವಾದ ಕಾಶೀಮಠದ ಮೂಲಸ್ಥಾಪನೆಯು ಶ್ರೀ ವಿಜಯೀಂದ್ರರಿಂದಲೇ ಆಯಿತೆಂಬುವುದು ಅವರ ಸಾಮಾಜಿಕ ಚಿಂತನೆಗೆ ದ್ಯೋತಕವಾಗಿದೆ.

ಕಾರುಣ್ಯ ಸಿಂಧುಗಳಾದ ಶ್ರೀ ವಿಜಯೀಂದ್ರರ ಮಹಿಮೆ ಅಪಾರ. ಸಾಮರಸ್ಯ ಸೌಹಾರ್ಧತೆಗೆ ಮಾದರಿಯಾದವರು. ಮಾನವೀಯತೆಯ ಪರಾಕಾಷ್ಠತೆ, ಕಲೆಯ ಎಲ್ಲಾ ಪ್ರಕಾರಗಳಿಗೆ ಅವರು ಕೊಟ್ಟು ಪ್ರೋತ್ಸಾಹ ಸಂಸ್ಕೃತಿಯ ಉಳಿವಿಗೆ ಕೊಟ್ಟ ದೊಡ್ಡ ಕೊಡುಗೆ, ಸ್ನೇಹ ಅಭಿಮಾನಕ್ಕೆ ಮತ್ತೊಂದು ಹೆಸರೇ ಶ್ರೀ ವಿಜಯೀಂದ್ರರು.

ಶ್ರೀ ರಾಯರ ‘ಇಂದು ಎನಗೆ ಗೋವಿಂದದಂಥ ಕೃತಿಗೆ ಶ್ರೀ ವಿಜಯೀಂದ್ರರ ‘‘ಪಾಪ ವಿಮೋಚನ ಸ್ಫೂರ್ತಿಯಾಗಿದೆ ಎಂದರೆ ಇನ್ನು ವೇದಾಂತ ಗ್ರಂಥಗಳ ಬಗ್ಗೆ ಹೆಚ್ಚೇನು ಹೇಳುವುದು.

ಕುಂಭಕೋಣದಲ್ಲಿ ದ್ವೈತಸಿದ್ಧಾಂತ ಪತಾಕೆಯನ್ನು ಶತಮಾನಗಟ್ಟಲೆ ಹಾರುವಂತೆ ಮಾಡಿದ್ದು ಇವರ ಪಾಠ ಪ್ರವಚನಗಳ ಫಲಶ್ರುತಿ. ಕುಂಭಕೋಣದ ಪ್ರಭುಗಳೆಂದೇ ಖ್ಯಾತರಾದ ಇವರ ಮಹಿಮೆಯನ್ನು ಅಲ್ಲಿನ ಕಲ್ಲುಬಂಡೆಗಳೂ ಸಹ ಇಂದಿಗೂ ಸಾರುವುವು.

ಗ್ರಂಥ ರಚನೆ ಶ್ರೀ ವಿಜಯೀಂದ್ರತೀರ್ಥರ ಸಾಧನೆಗಳ ಕಿರೀಟದ ಮಹಾಮಣಿ, ಒಂದಲ್ಲ, ಎರಡಲ್ಲ, ನೂರಾನಾಲ್ಕು ಗ್ರಂಥಗಳನ್ನು ರಚಿಸಿದ ಕೀರ್ತಿ ಇವರದು. ಅವು ಕೇವಲ ಗ್ರಂಥಗಳಾಗಿರದೇ ಗ್ರಂಥರತ್ನಗಳಾಗಿವೆ ಎಂಬ ಶ್ರೀ ಗುರುಗುಣಸ್ತವನದ ಮಾತು ಅಕ್ಷರಶಃ ನಿಜವಾದುದು. ಸಂಖ್ಯೆ ಹಾಗೂ ಸತ್ತ್ವ ಎರಡರಲ್ಲೂ ಸಹ ಹಿರಿಮೆಯನ್ನು ಹೀಗೆ ಕಾಪಾಡಿಕೊಂಡವರ ಸಂಖ್ಯೆ ವಾಙ್ಮಯ ಪ್ರಪಂಚದಲ್ಲಿಯೇ ಅದ್ಭುತವೆನ್ನಿಸುವಂತಹುದು .ಶ್ರೀ ವಾದಿರಾಜರ ಸಹಪಾಠಿಗಳಾಗಿ ಶ್ರೀ ವಿಜಯೀಂದ್ರರ ಸ್ಮರಣೆ ಸಾರ್ಥಕ. ಕರ್ತವ್ಯ ಕೂಡ ಆದರೆ ಗ್ರಂಥಸಂರಕ್ಷಣೆಯ ಬಗ್ಗೆ ಆಸ್ಥೆ ಇಲ್ಲದ ನಮ್ಮ ಜನತೆಯ ಔದಾಸೀನ್ಯದಿಂದಾಗಿ ಆ ಬಗ್ಗೆ ವಿಶೇಷ ವಿವರಗಳು ಇಂದು ಲಭ್ಯವಾಗಿಲ್ಲ. ಅವರಿಂದ ರಚಿತ ಎಂಬುದಾಗಿ ಕೆಲವು ಕೃತಿಗಳು ಮಾತ್ರ ಇಂದು ಉಪಲಬ್ಧವಿದೆ.

ಕಾವೇರಿ ತೀರದಲ್ಲಿ ಜನಿಸಿದ್ದ ಇವರು ಅದೇ ಕಾವೇರಿ ತೀರದ ಕುಂಭಕೋಣದ ತಮ್ಮ ಮಠದಲ್ಲಿ ಶ್ರೀಮೂಲರಘುಪತಿಯ ಪೂಜಾದಿಗಳನ್ನು ಮುಗಿಸಿ, ಮೌನಯುಕ್ತ ಶ್ರೀಹರಿಯಧ್ಯಾನಾಸಕ್ತರಾಗಿ ಕುಳಿತು, ಓಂಕಾರೋಚ್ಛಾರಣೆ ಮಾಡುತ್ತಾ ಮಾಡುತ್ತಾ ಭೌತಿಕ ದೇಹವನ್ನು ತೊರೆದು ಪರಗತಿಗೆ ತೆರಳಿದ ಇಚ್ಛಾಮರಣಿಗಳು. ಶ್ರೀಸುಧೀಂದ್ರತೀರ್ಥರು ಶಾಸ್ತ್ರೋಕ್ತ ರೀತಿಯಲ್ಲಿ, ವಿಶಿಷ್ಟ ಸುಂದರ ಬೃಹತ್ ಬೃಂದಾವನವನ್ನು ಸ್ಥಾಪಿಸಿದರು. ಬೃಂದಾವನದ ಎದುರಿಗೆ ಶ್ರೀ ಲಕ್ಷ್ಮೀನಾರಾಯಣದೇವರ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಇದು ಇಂದಿಗೂ ಬೃಂದಾವನದಲ್ಲಿ ಸದಾ ವಿಷ್ಣುಪರ ಚಿಂತನೆಯನ್ನು ಮಾಡುವ ವಿಷ್ಣುತತ್ಪರರು ಎಂಬುದು ಸೂಚಿತ ಹಾಗೂ ‘ವಿಠ್ಠಲ ‘ಶ್ರೀವಿಷ್ಣುತೀರ್ಥರು ‘ಶ್ರೀವಿಜಯೀಂದ್ರರು ಹೀಗೆ ಮೂರು ಬಾರಿ ಜನ್ಮಾಂತರವಾದರೂ ವಿಷ್ಣುವಿಕಾರವಿಲ್ಲದ ಕೇವಲ ವಿಷ್ಣು ವಿಜಯಕಾರರಿವರು ಎಂಬುದೂ ತಿಳಿಯುತ್ತದೆ. ಈ ರೀತಿಯಲ್ಲಿ ಬೃಂದಾವನದಲ್ಲಿ ತೇಜೋರೂಪದಿಂದ ಇದ್ದು ತಮ್ಮ ಭಕ್ತರಿಗೆ ಕಾಮಧೇನು ಕಲ್ಪವೃಕ್ಷವಾಗಿ ಅನುಗ್ರಹಿಸುತ್ತಿದ್ದಾರೆ.

ಶ್ರೀ ವಿಜಯೀಂದ್ರರ ವ್ಯಕ್ತಿತ್ವ
ಶ್ರೀವಿಜಯಿಂದ್ರತೀರ್ಥರು ಕುಬೇರನಂತೆ, ದಾತರಾರು, ಧರೆಯಂತೆ ಕ್ಷಮಾಶೀಲರು, ಅವೈದಿಕವಾದ, ಅಧರ್ಮ, ಭಗವದ್ವೇಷನಿರಾದವರನ್ನು ಕಂಡಾಂಗ ಅವರ ಕೋಪ ಪ್ರಲಯಾಗ್ನಿ ಸಮಾನವಾಗುತ್ತಿತ್ತು. ಹಿಮವತ್ಪರ್ವದಂತೆ ಧೈರ್ಯಶಾಲಿಗಳು, ಯುಧಿಷ್ಠಿರನಂತೆ ಸತ್ಯಶೀಲರು. ಸಹಸ್ರಫಣಿಯಾದ ಆದಿಶೇಷನಂತೆ ವಾಗ್ವೈಖರೀ, ವಿರಾಜಿತರವರು. ಜಯ ಗಳಿಸುವುದರಲ್ಲಿ ಅಂಗಾರಕನಂತೆ ಪರಾಕ್ರಮಿಗಳು, ಭೂಸುರರ ಭೂಪತಿಗಳ ಸಭೆಗಳಲ್ಲಿ ವಾದ ಮತ್ತು ಜ್ಞಾನವಿಷಯದಲ್ಲಿ, ವಾಯುದೇವರಂತೆ ಸಮರ್ಥರು. ಐಶ್ವರ್ಯದಲ್ಲಿ ಸಂಪದಧಿದೇವತೆ ಲಕ್ಷ್ಮೀಯಂತೆ ಪೂರ್ಣರು, ಶ್ರೇಷ್ಠದಾನಿಗಳು, ಸರ್ವಶಾಸ್ತ್ರವನ್ನು ಚೆನ್ನಾಗಿ ತಿಳಿದವರು. ಶ್ರೀಶೇಷಶಾಯಿಯಾದ ರಮಾರಮಣವನ್ನು ಪೂಜಿಸಿ, ಸಂತೋಷಪಡಿಸಿ, ಸರ್ವಲೋಕಗಳಲ್ಲಿ ಸರ್ವರಿಂದ ಪೂಜ್ಯರಾದ ಶ್ರೀವಿಜಯಿಂದ್ರ ಮುನೀಂದ್ರರು ಜಗತ್ತಿನಲ್ಲಿ ಮಾನವೋತ್ತಮರಿಂದ ಮಾನಿತರಾದರು. ಇಂಥಾ ಮಹಿಮೆಯು ಅವರಿಗೆ ಶ್ರೀಬ್ರಹ್ಮಕರಾರ್ಚಿತ, ಶ್ರೀಮೂಲರಾಮಚಂದ್ರ ಮತ್ತು ಶ್ರೀ ಸರ್ವಜ್ಞರಕಾರ್ಚಿತ ಶ್ರೀ ದಿಗ್ವಿಜಯ ರಾಮದೇವರ ಪೂಜಾಫಲದಿಂದ ಲಭ್ಯವಾಯಿತು. ಶ್ರೀವಿಜಯಿಂದ್ರರು ವೈದಿಕ ಸತ್ತತ್ವಗಳು, ಧರ್ಮ, ಸಂಸ್ಕೃತಿಗಳನ್ನು ರಕ್ಷಣ-ಪೋಷಣ-ಪ್ರಾಸಾರಾದಿಗಳಿಂದ ರೂಢಮೂಲವಾಗುವಂತೆ ಮಾಡಿದ ಮಹಾನುಭಾವರು. ಅವರ ಅಪ್ರತಿಹತ ಪಂಡಿತ್ಯ ಪ್ರತಿಭೆಗಳು, ಸರ್ವತೋಮುಖವಾದುವು. ‘‘ಸರ್ವತಂತ್ರ ಸ್ವತಂತ್ರ ವೈದಿಕ ಮತಸ್ಥಾಪನಾಚಾರ್ಯರು’’ ಎಂಬ ಅವರ ಬಿರುದು ಅನ್ವರ್ಥಕವಾದುದು. ಹದಿನಾರನೆಯ ಶತಮಾನದಲ್ಲಿ ಅವರ ಕೀರ್ತಿ ಅಜರಾಮರವಾಗಿತ್ತು. ಅದು ಚತುಃಷಷ್ಠಿ ಕಲೆಗಳಲ್ಲಿ ಅವರನ್ನು ಸರಿಗಟ್ಟುವವರೇ ಇರಲಿಲ್ಲವೆಂದು ಹೇಳಬಹುದು.

ಶ್ರೀವ್ಯಾಸರಾಜಗುರುಸಾರ್ವಭೌಮರ, ಶ್ರೀಸುರೇಂದ್ರಯತಿಚಕ್ರವರ್ತಿಗಳಂತಹ ಜಗನ್ಮಾನ್ಯರಿಂದ ತಯಾರಾದ ಶ್ರೀವಿಜಯಿಂದ್ರರ ವ್ಯಕ್ತಿತ್ವ ಬಹುಮುಖವಾದುದು. ಸುಮಾರು ತೊಂಭತ್ತೇಳು ವರ್ಷಗಳ ತುಂಬುಜೀವನದಲ್ಲಿ ಅವರು ಸಾಧಿಸಿದ, ಮಾಡಿದ ಅಸದೃಶ ಕಾರ್ಯಗಳನ್ನು ವಿಮರ್ಶಿಸಿದಾಗ ಆ ವಿಭೂತಿಪುರುಷರ ಭವ್ಯ ವ್ಯಕ್ತಿತ್ವ ನಮ್ಮ ಚಿತ್ತಭಿತ್ತಿಯಲ್ಲಿ ಚೆನ್ನಾಗಿ ಚಿತ್ರಿತವಾಗುವುದು. ಸಕಲ ಶಾಸ್ತ್ರಗಳು, ಕಲೆಗಳಲ್ಲಿ ಪ್ರವೀಣರಾದ ಅವರು ವೈದಿಕ, ಸದ್ವೈಷ್ಣವ ಸಿದ್ಧಾಂತ ಸ್ಥಾಪನೆಗಾಗಿ ಅನೇಕ ಮತ ಪ್ರಚಾರಕರಾದ ಪ್ರಬಲ ವಾದಿಗಳೊಡನೆ ನಡೆಸಿದ ವಾಕ್ಯಾರ್ಥ-ವಾದಗಳು ಇತಿಹಾಸ ಪ್ರಸಿದ್ಧವಾದವು.

ಸಕಲ ಶಾಸ್ತ್ರಗಳ ಪ್ರಸಾರಕ್ಕಾಗಿ ಕುಂಭಕೋಣದಲ್ಲಿ ಅವರು ಸ್ಥಾಪಿಸಿದ ಸಂಸ್ಕೃತ ಮಹಾವಿದ್ಯಾಪೀಠವು ದಕ್ಷಿಣಭಾರತದಲ್ಲಿ ಪ್ರಖ್ಯಾತಿ ಗಳಿಸಿತ್ತು. ಶ್ರೀಯವರ ಸತ್ಸಂಪ್ರದಾಯ ದೀಕ್ಷೆ, ವಿದ್ಯಾಪ್ರಸಾರ, ವಿದ್ವಜ್ಜನ, ಆಶ್ರಿತಜನ ಸಂರಕ್ಷಣ, ಪೋಷಣಗಳಲ್ಲಿನ ಶ್ರದ್ಧೆಗಳು ಅವರಿಗೆ ಲೋಕಮಾನ್ಯತೆ ತಂದುಕೊಟ್ಟಿತು. ದ್ವೈತಸಿದ್ಧಾಂತವನ್ನು ಸುಭದ್ರಗೊಳಿಸಲು ಅವರಿಂದ ರಚಿತವಾದ ನೂರಾನಾಲ್ಕು ಪ್ರೌಢಪ್ರಬಂಧಗಳು ಇಂದಿಗೂ ದ್ವೈತಸಿದ್ಧಾಂತ ಮಹಾಮಂದಿರದ ಕಳಸಗಳಂತೆ ಕಂಗೊಳಿಸುತ್ತಿವೆ. ಶ್ರೀವಿಜಯಿಂದ್ರತೀರ್ಥರ ಮಾರ್ಗದರ್ಶನ-ಉಪದೇಶಾದಿಗಳಿಂದ ಭಾರತದ ಜನತೆ ವೈದಿಕ-ಆಧ್ಯಾತ್ಮಿಕ ಹಾಗೂ ಧಾರ್ಮಿಕ ಪ್ರಗತಿಯನ್ನು ಸಾಧಿಸಿತು.


Get In Touch With Us info@kalpa.news Whatsapp: 9481252093

Tags: Dr Gururaj PoshettihalliDwait SiddhantKannadaNewsWebsiteLatestNewsKannadaSri Vijayendra Thirtharuಡಾ.ಗುರುರಾಜ ಪೋಶೆಟ್ಟಿಹಳ್ಳಿದ್ವೈತ ಸಿದ್ಧಾಂತಶ್ರೀ ವಿಜಯೀಂದ್ರತೀರ್ಥರುಸಂಸ್ಕೃತಿ
Share221Tweet123Send
Previous Post

ನೂರು ಭಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್’ಗೆ ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಸನ್ಮಾನ

Next Post

ಜಿಲ್ಲೆಯಲ್ಲಿ ಇಂದು ಮತ್ತೆ 4 ಕೊರೋನಾ ಪಾಸಿಟಿವ್, 105ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿ ಇಂದು ಮತ್ತೆ 4 ಕೊರೋನಾ ಪಾಸಿಟಿವ್, 105ಕ್ಕೇರಿದ ಸೋಂಕಿತರ ಸಂಖ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL