No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ-ಪಿಬತ ಭಾಗವತಂ ರಸಮಾಲಯಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2019
in Special Articles
0
ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ-ಪಿಬತ ಭಾಗವತಂ ರಸಮಾಲಯಂ
Share on FacebookShare on TwitterShare on WhatsApp

ಭಗವಂತನಾದ ಶ್ರೀ ವೇದವ್ಯಾಸ ರೂಪಿ ಪರಮಾತ್ಮನು ತಾನೇ ಸ್ವತಃ ರಚಿಸಿದ ಮಹಾನ್ ಗ್ರಂಥ. ಇದು ದೇವಲೋಕದ ಅಮೃತಕ್ಕಿಂತಲು ಮಿಗಿಲು. ಇದಕ್ಕೆ ಸಮನಾದದು ಯಾವುದು ಇಲ್ಲ. ಸಿಹಿಯುಳ್ಳ ಪಾನೀಯ, ಕುಡಿದಾಗ ಮನಸ್ಸು ಆನಂದಗೊಳ್ಳಬಹುದು. ಆದರೆ ಅತಿಯಾಗಿ ಕುಡಿದಾಗ ಅದರಿಂದ ಏನಾದರು ಒಂದು side effect ಆಗಿ ಚೂರು ಆರೋಗ್ಯ ವ್ಯತ್ಯಾಸವನ್ನು ಕಾಣಬಹುದು. ಆದರೆ ಈ ಭಾಗವತ ಅಮೃತ ಎಂಬ ಸಿಹಿಯಾದ ಪಾನೀಯ ಎಷ್ಟು ಬಾರಿಯಾದರು ದಿನಕ್ಕೆ ಪಾನ ಮಾಡಿರಿ. ಇದರಿಂದ ಯಾವುದೇ side effect ಇಲ್ಲ. ಇದರಿಂದ ಲಾಭವೇ ಹೊರತು ನಷ್ಟ ಇಲ್ಲ. ಈ ಗ್ರಂಥ ಪಾರಾಯಣ ಫಲ:

1. ಕಾಲ ದೇಶಗಳಿಂದ ಮಾಡಿದ ಪಾಪಗಳನ್ನು ಸಹ ಇದು ಭಕ್ತಿಯಿಂದ ಶ್ರವಣ, ಪಠಣ ಮನನ ಮಾಡಿದರೆ ಕಳೆದು ಹಾಕುತ್ತದೆ.

ಇದಕ್ಕೆ ಪರಿಕ್ಷೀತ ರಾಜ ಸಾಕ್ಷಿ. 2.ನಮ್ಮ ಮನೆಯಲ್ಲಿ ಹಿರಿಯರು ಹಿಂದೆ ಯಾರಾದರು ಸತ್ತು ಹೋದಾಗ,ಅವರಿಗೆ ಸರಿಯಾದ ರೀತಿಯಲ್ಲಿ ಕರ್ಮ ಸಂಸ್ಕಾರ ನಡೆಯದೇ ಹೋದಾಗ, ಅವರು ಪ್ರೇತವಾಗಿ ಉಳಿದರೆ, ಅದರ ನಿವಾರಣೆಗೋಸ್ಕರವಾಗಿ ಸಹ ಶ್ರೀ ಮದ್ ಭಾಗವತ ಪಾರಾಯಣ,ಶ್ರವಣವನ್ನು ಮಾಡಲು ಹೇಳುತ್ತಾರೆ. ಇದಕ್ಕೆ  ಇದರಲ್ಲಿ ಬರುವ ಗೋಕರ್ಣ ಹಾಗು ಅವನ ಸಹೋದರನ ನ ಕತೆಯೇ ಸಾಕ್ಷಿ. 3.ಮೋಕ್ಷ ಸಾಧನೆಗಾಗಿ ಈ ಭಾಗವತ ಶ್ರವಣ.ಇದಕ್ಕೆ ಪರಿಕ್ಷೀತ ರಾಜ ಪ್ರತ್ಯಕ್ಷವಾಗಿ ಉದಾಹರಣೆ.

ಶ್ರೀ ಮದ್ ಭಾಗವತ ದಲ್ಲಿ 18,000 ಗ್ರಂಥ ಶ್ಲೋಕಗಳಿವೆ. ಶ್ರೀಮದ್ ಭಾಗವತವು ಹನ್ನೆರಡು ಸ್ಕಂಧಗಳಿಂದ ಕೂಡಿದೆ.

ಪರೀಕ್ಷಿತ ಮಹಾರಾಜ ಹಾಗು ಶುಕ ಮುನಿಗಳ ನಡುವಿನ ಸಂವಾದ ರೂಪವಾಗಿದೆ. ಪ್ರತಿ ಒಂದು ಸಾವಿರ ಗ್ರಂಥಗಳಿಗು ಒಂದೊಂದು ಭಗವದ್ ರೂಪ ಇದೆ.ಈ ರೀತಿಯಲ್ಲಿ 18,000 ಗ್ರಂಥ ಶ್ಲೋಕಗಳಿಗೆ 18 ಭಗವದ್ ರೂಪಗಳಿವೆ. ಹನ್ನೆರಡು ಸ್ಕಂಧಗಳಿಗೆ ಹನ್ನೆರಡು ಭಗವಂತನ ರೂಪಗಳು ಇವೆ. ಕೇಶವ, ನಾರಾಯಣ, ಮಾಧವ, ಗೋವಿಂದ, ವಿಷ್ಣು, ಮಧುಸೂಧನ, ತ್ರಿವಿಕ್ರಮ, ವಾಮನ, ಶ್ರೀಧರ, ಹೃಷಿಕೇಶ, ಪದ್ಮನಾಭ, ಮತ್ತು ದಾಮೋದರ ಇವೇ ಭಗವಂತನ ಆ ಹನ್ನೆರಡು ರೂಪಗಳು..

ಈ ಭಾಗವತ ಶ್ರವಣ,ಪಾರಾಯಣದ ಫಲ ಗಂಗಾ ನದಿ ಸ್ನಾನಕ್ಕಿಂತಲು ಮಿಗಿಲು. ಗಂಗಾನದಿಯ ಸ್ನಾನ ಮಿಂದವರ ಪಾಪವನ್ನು ತೊಳೆದರೆ, ಶ್ರೀ ಮದ್ ಭಾಗವತ ಸಂಸಾರದ ಜಿಡ್ಡು ನಾಶಪಡಿಸಿ ನಮಗೆಲ್ಲ ಪಾಪವನ್ನು ಲೇಪನ ವಿಲ್ಲದಂತೆ ಮಾಡುವದು. ಗಂಗಾನದಿಯನ್ನು  ನಮ್ಮ ಅವಶ್ಯಕತೆ ಬೇಕಾದಷ್ಟು ಶೇಖರಣೆ ಮಾಡಲು ಒಂದು ಪಾತ್ರೆ ಬೇಕು. ಆದರೆ ಈ ಭಾಗವತಕ್ಕೆ ಸಂಗ್ರಹ ಮಾಡಲು ನಮ್ಮ ತಲೆ ಎನ್ನುವ ಪಾತ್ರೆ ಮಾತ್ರ ಸಾಕು. ಗಂಗಾ ನದಿಯಲ್ಲಿ  ಇಡೀ ದೇಹವನ್ನು ಮುಳುಗಿದಾಗ ಮಾತ್ರ ಸ್ನಾನ ಮಾಡಿದ ಫಲ ಬರುತ್ತದೆ. ಆದರೆ ನಿತ್ಯದಲ್ಲಿ ಈ ಭಾಗವತ ಇಡೀ ಗ್ರಂಥದ, ಎಲ್ಲಾ ಶ್ಲೋಕಗಳನ್ನು ಪಾರಾಯಣ ಮಾಡಲು ಆಗದಿದ್ದರೆ, ಕೊನೆಗೆ ಒಂದು ಶ್ಲೋಕವಾದರು ಹೇಳುವದು. ಅದು ಸಹ ಆಗದಿದ್ದರೆ ಕೊನೆಯಲ್ಲಿ ಶ್ಲೋಕದ ಕಾಲುಭಾಗ ವಾದರು ಸರಿ, ಕಿವಿಗೊಟ್ಟು ಭಕ್ತಿ ಇಂದ ಕೇಳಿದರೆ, ಸಾವಿರ ಗೋದಾನದ ಫಲ ಬರುತ್ತದೆ. ಶ್ರೀಹರಿಯ ಪ್ರೀತಿ ಎಂಬ ಉಡುಗೊರೆ ನಮಗೆ ಸಿಗುತ್ತದೆ.

ಬರಿಯ ಕಾಲುಭಾಗದಷ್ಟು ಶ್ರವಣ ಮಾಡಿದರೆ ನಮಗೆ ಕಾವಲು ಕಾಯುವ, ನಮ್ಮನ್ನು ರಕ್ಷಣೆ ಮಾಡುವ, ನಮ್ಮ ಕುಲವನ್ನು ಉದ್ದಾರ ಮಾಡುವ ಈ ಭಾಗವತಕ್ಕೆ ಎಣೆಯುಂಟೆ?? ಗಂಗಾ ಸ್ನಾನ ಸಂಕಲ್ಪ ಪೂರ್ವಕವಾಗಿ ಮಾಡಿದರೆ ಮಾತ್ರ ಫಲ. ಅದಕ್ಕೆ ಮೋಕ್ಷ ನೀಡಲು ಸಾಧ್ಯವಿಲ್ಲ. ಆದರೆ ಭಾಗವತ ಹಾಗಲ್ಲ ನಮಗೆ ಮೋಕ್ಷವನ್ನು ಸಹ ಕೊಡುತ್ತದೆ. ಶ್ರೀ ಮದ್ ಭಾಗವತ ವನ್ನು ರಚಿಸಿದವರು ಶ್ರೀ ವೇದವ್ಯಾಸರು. ರಚನೆಯನ್ನು ಮಾಡಿದ ಸ್ಥಳ ಶಮ್ಯಾಪ್ರಾಸ.(ಸರಸ್ವತಿ  ಮತ್ತು ಅಲಕನಂದಾ(ಗಂಗಾದೇವಿ ಇನ್ನೊಂದು ಹೆಸರು) ನದೀ ಸಂಗಮದ ಸ್ಥಳ) ಇದನ್ನು ಶ್ರೀವೇದವ್ಯಾಸರಿಂದ ಕೇಳಿದವರು ಗಂಗಾಧರ ನಾದ ಶ್ರೀಶುಕ ಮುನಿಗಳು. ಅವರು ಉಪದೇಶ ಮಾಡಿದ್ದು ಪರೀಕ್ಷಿತ ರಾಜನಿಗೆ ಗಂಗಾನದಿಯ ತಟದಲ್ಲಿ. ಹಾಗಾಗಿ ಪರಮ ಪವಿತ್ರ ವಾದುದು ಈ ಭಾಗವತ ಪುರಾಣ. ಇದನ್ನು ಯಾರು ಹೇಳುವರೊ ಮತ್ತು ಯಾರು ಕೇಳುವರೊ ಮತ್ತು ಯಾರು ಹೇಳಿಸುವರೊ, ಈ ಮೂವರನ್ನು ಪಾವನಗೊಳಿಸಿ ಉದ್ದಾರ ಮಾಡುತ್ತದೆ. ಇಂತಹ ಪರಮ ಮಂಗಳಕರವಾದ ಭಾಗವತ ವನ್ನು ವಿಶೇಷವಾಗಿ ಪಾರಾಯಣ ಮತ್ತು ಶ್ರವಣವನ್ನು ಮಾಡೋಣ.ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಪ್ರಯತ್ನ ಪಡೋಣ.

Tags: DrGururajPoshettihalliKaliyugaKalpaNewsKannadaArticleLordSriKrishnaSpecialArticleSrimadBhagavataಕಲಿಯುಗಡಾ_ಗುರುರಾಜಪೋಶೆಟ್ಟಿಹಳ್ಳಿಧರ್ಮಭಾಗವತ_ಪುರಾಣಶ್ರೀಮದ್_ಭಾಗವತಶ್ರೀವೇದವ್ಯಾಸ
Share216Tweet123Send
Previous Post

ತೆರಿಗೆಗಳ ರೂಪ ಬದಲಾಯಿಸಿ, ದೊಡ್ಡ ಮೊತ್ತದ ನೋಟು ಬ್ಯಾನ್ ಮಾಡಿ

Next Post

ಕಲೆಯನ್ನೇ ತಪಸ್ಸನ್ನಾಗಿಸಿಕೊಂಡ ಈ ದಾರ್ಶನಿಕರಿಗೆ ಪ್ರಶಸ್ತಿ ನೀಡಿದರೆ ಅದರ ಬೆಲೆ ಇಮ್ಮಡಿಯಾಗುತ್ತದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲೆಯನ್ನೇ ತಪಸ್ಸನ್ನಾಗಿಸಿಕೊಂಡ ಈ ದಾರ್ಶನಿಕರಿಗೆ ಪ್ರಶಸ್ತಿ ನೀಡಿದರೆ ಅದರ ಬೆಲೆ ಇಮ್ಮಡಿಯಾಗುತ್ತದೆ

ಕಲೆಯನ್ನೇ ತಪಸ್ಸನ್ನಾಗಿಸಿಕೊಂಡ ಈ ದಾರ್ಶನಿಕರಿಗೆ ಪ್ರಶಸ್ತಿ ನೀಡಿದರೆ ಅದರ ಬೆಲೆ ಇಮ್ಮಡಿಯಾಗುತ್ತದೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL