ಕಲ್ಪ ಮೀಡಿಯಾ ಹೌಸ್ | ಹರಿಹರಪುರ |
ಹರಿಹರಪುರದ ಪೀಠಾಧೀಶ್ವರರಾದ ಜಗದ್ಗುರು ಶಂಕರಾಚಾರ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರ ಈ ಸಾಲಿನ ಚಾತುರ್ಮಾಸ್ಯ ವ್ರತವು ಪರಿಸಮಾಪ್ತಿ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಆಯೋಜಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಪಾಲ್ಗೊಂಡಿದ್ದರು.
ಶ್ರೀಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜಗ್ಗೇಶ್, ಶ್ರೀಗಳಿಗೆ ಗುರುವಂದನೆ ಸಲ್ಲಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ವಯಂಪ್ರಕಾಶ ಶ್ರೀಗಳು, ಎಲ್ಲರೂ ಪರೋಪಕಾರದಿಂದ ಪರಸ್ಪರ ಪ್ರೀತಿ ಸಹೋದರತ್ವದಿಂದ ಬಾಳಿದರೆ ಬಾಳು ಹಸನಾಗುವುದು ಎಂದು ತಿಳಿಸಿದರು ಎಲ್ಲರೂ ಶುದ್ದವಾದ ಜೀವನವನ್ನು ಮಾಡಿ ಪರಮಾತ್ಮನ ಕೃಪೆಗೆ ಪಾತ್ರರಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ಶೃಂಗೇರಿ ಶಾಸಕ ರಾಜೇಗೌಡ ಮತ್ತು ಮಾಜಿ ಸಚಿವ ಎಂ.ಬಿ. ಪಾಟೀಲ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post