ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಪ್ರತಿಷ್ಠಿತ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಆಗಸ್ಟ್ 24ರ ನಾಳೆ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಾಳೆ ಶನಿವಾರ ಸಂಜೆ 5.30ರಿಂದ ವಿನೋಬ ನಗರದಲ್ಲಿರುವ ಶುಭಮಂಗಳ ಸಮುದಾಯ ಭವನದಲ್ಲಿ ಶ್ರೀನಿವಾಸ ಕಲ್ಯಾಣ ದಾಸ ಸಾಹಿತ್ಯ ಪದ್ದತಿಯಲ್ಲಿ ನಡೆಯಲಿದೆ.
ಬೆಂಗಳೂರಿನ ಶ್ರೀವಾರಿ ಫೌಂಡೇಶನ್’ನ ಎಸ್. ವೆಂಕಟೇಶ್ ಮೂರ್ತಿ ಅವರಿಂದ ಕಾರ್ಯಕ್ರಮ ನಡೆಯಲಿದೆ.
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಕೆ.ಈ. ಕಾಂತೇಶ್ ಅವರ ನೇತೃತ್ವದಲ್ಲಿ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಈ ಕಾರ್ಯಕ್ರಮ ನಡೆಯಲಿದ್ದು, ಶಿವಮೊಗ್ಗ ಭಜನಾ ಪರಿಷತ್ ಹಾಗೂ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಸಹಕಾರವಿದೆ.
ಶಿವಮೊಗ್ಗದ ಶ್ರೀನಿವಾಸ ದೇವರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post