No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

ದಾಸ ಸಾಹಿತ್ಯದ ಧೃವತಾರೆ ಶ್ರೀಪಾದರಾಜರು

ಶ್ರೀಪಾದರಾಜರು ಆಡಿದ ಮಾತುಗಳೆಲ್ಲವೂ ಆತ್ಮಾನುಭವದ ಕಲ್ಲುಸಕ್ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
sripadararaja-is-the-jyoti-form-of-haridasa

sripadararaja-is-the-jyoti-form-of-haridasa

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕರ್ನಾಟಕದ ಮಧ್ಯಕಾಲೀನ ಸಂಸ್ಕೃತಿಗೆ ದಾಸರ ಕೊಡುಗೆ ಅಪಾರ. ದಾಸಸಾಹಿತ್ಯ ಮತ್ತು ಸಂಗೀತದ ಸಮನ್ವಯ ಜನರ ಮೇಲೆ ವಿಶೇಷವಾದ ಪ್ರಭಾವ ಬೀರಿತು. ಪರಿಶುದ್ಧ ಭಕ್ತಿಯಿಂದ ಶುಭ್ರಮನಸ್ಸಿನಿಂದ ಭಗವಂತನನ್ನು ಭಜಿಸಬೇಕೆಂದು ಸಾಧಿಸಿ ತೋರಿಸಿದವರು ಶ್ರೀಪಾದರಾಜರು.

ಧ್ಯಾನವು ಕೃತಯುಗದಿ ಯಜನ ಯಜ್ಞವು ತ್ರೇತಾಯುಗದಿ ದಾನವಾಂತಕನ ದೇವತಾರ್ಚನೆ ದ್ವಾಪರಯುಗದಿ ಆ ಮಾನವರಿಗೆಷ್ಟು ಫಲವೋ ಅಷ್ಟು ಫಲವು ಕಲಿಯುಗದಿ ಗಾನದಲಿ ಕೇಶವನೆನಲು ಕೈಗೊಡುವನು ರಂಗವಿಠಲ ಭಕ್ತಿ ಬೇಕು ವಿರಕ್ತಿ ಬೇಕು ಸರ್ವಶಕ್ತಿ ಬೇಕು ಮುಕ್ತಿ ಬಯಸುವವರಿಗೆ ಎಂದು ಹಾಡಿ ಶ್ರೀಪಾದರಾಜರು ಭಕ್ತ ನಾಗುವುದನ್ನು ಸೂಚ್ಯವಾಗಿ ತಿಳಿಸಿದ್ದಾರೆ. ನೆಲದ ಭಾಷೆಯನ್ನು ಮೈಲಿಗೆ ಎಂದು ಭಾವಿಸುತ್ತಿದ್ದ ಕಾಲದಲ್ಲಿ ಮಠಾಧಿಪತಿಯಾಗಿ ಕನ್ನಡದಲ್ಲಿ ದೇವರ ನಾಮಗಳನ್ನು ಹಾಡಿ ಅಂದಿನ ಜನಸಾಮಾನ್ಯರಿಗೆ ರೋಮಾಂಚನ ಉಂಟು ಮಾಡಿದವರು ಶ್ರೀಪಾದರಾಜರು.

ದಾಸ ಪರಂಪರೆಗೆ ಅಂಕಿತ ಹಾಗೂ ವಿಠಲನ ಪರಿಕಲ್ಪನೆ ನೆಲೆಗೊಂಡಿದ್ದು ಶ್ರೀಪಾದರಾಜರಿಂದಾಗಿಯೇ ಹರಿದಾಸ ಸಾಹಿತ್ಯದ ಅರುಣೋದಯವಾಗಿ ಅನೇಕ ದಾಸಶ್ರೇಷ್ಠರನ್ನು ತಯಾರಿಸಲು ಕಾರಣರಾದ ಶ್ರೀಪಾದರಾಜರು ಭಕ್ತಿಯ ಬೆಳಕಿನಲ್ಲಿ ಹೊಸ ದಾರಿ ತೋರಿದರು. ಬಾಲಕ ಲಕ್ಷ್ಮೀನಾರಾಯಣ ಹಿರಿಯ ಯತಿಗಳ ಮುಂದೆ ತನ್ನೆಲ್ಲಾ ಬುದ್ಧಿಮತ್ತೆಯನ್ನು ಪ್ರದರ್ಶಿಸಿ ಶ್ರೀಪಾದರಾಜರಾದುದು ಸಣ್ಣ ಸಾಧನೆಯಲ್ಲ.

ಆ ಕಾಲಕ್ಕೆ ತಮಿಳುನಾಡು ಮತ್ತು ಕರ್ನಾಟಕದಲ್ಲಿ ದೇಶ್ಯ ಭಾಷೆಯಲ್ಲಿ ಶೈವ ಸಾಹಿತ್ಯವು ಗಂಭೀರವಾಗಿ ಬೆಳೆದು ಬಂದಿತ್ತು. ಅಲ್ಲದೆ ಅವರು ಸಂನ್ಯಾಸ ಸ್ವೀಕರಿಸಿ ಶ್ರೀರಂಗಂನಲ್ಲಿದ್ದಾಗ ಅಲ್ಲಿ ಆಳ್ವಾರರ ತಮಿಳು ದ್ರಾವಿಡ ಪ್ರಬಂಧಂನಂತಹ ಸಾಹಿತ್ಯದಿಂದ ಪ್ರಭಾವಿತರಾಗಿದ್ದರು. ಅಲ್ಲದೆ ಅವರ ಸರಿ ಸುಮಾರಿನವರೇ ಆದಂತಹ ಅನ್ನಮಾಚಾರ್ಯರು ತೆಲುಗಿನಲ್ಲಿ ಕೀರ್ತನೆಗಳನ್ನು ಬರೆದು ಪ್ರಖ್ಯಾತರಾಗಿದ್ದು ಇಲ್ಲಿ ಗಮನಾರ್ಹ, ಹೀಗೆ ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಆ ಕಾಲಕ್ಕೆ ಸಂಸ್ಕೃತವನ್ನು ಬಿಟ್ಟು ತಂತಮ್ಮ ದೇಶಿಯ ಭಾಷೆಗಳಲ್ಲಿ ಬರೆದಿದ್ದು ಸಾಂಸ್ಕೃತಿಕವಾಗಿ ಬಹಳ ಗಂಭೀರವಾದ ಸಂಗತಿ. ಶ್ರೀಪಾದರಾಜರು ಕೂಡ ಈ ಪರ್ಯಾವರಣವನ್ನು ಸ್ವೀಕರಿಸಿ ಕನ್ನಡದಲ್ಲಿ ಅನೇಕ ಗೇಯ ಪ್ರಕಾರದಲ್ಲಿ ಸ್ತುತಿಗೀತೆ ಅಥವಾ ಸಾಹಿತ್ಯವನ್ನು ರಚಿಸಿ ಕನ್ನಡ ಸಾಂಸ್ಕೃತಿಕತೆಗೆ ಅಡಿಪಾಯ ರೂಪಿಸಿದರು.

ದಂಡಕಮಂಡಲದ ಸನ್ಯಾಸಿಗಳಾಗಿ ಮಾತ್ರವೇ ಉಳಿಯದೆ ದಂಡಕ, ವೃತ್ತನಾಮ, ಉಗಾಭೋಗ, ಸುಳಾದಿ, ಕೀರ್ತನೆಗಳ ಮೂಲಕ ದಾಸ ಸಾಹಿತ್ಯಕ್ಕೆ ಪ್ರಾರಂಭ ಹಾಗು ವೈವಿಧ್ಯತೆಯನ್ನು ತಂದುಕೊಟ್ಟರು.

ಶ್ರೀಪಾದರಾಜರು ಆಡಿದ ಮಾತುಗಳೆಲ್ಲವೂ ಆತ್ಮಾನುಭವದ ಕಲ್ಲುಸಕ್ಕರೆ. ಸಹೃದಯ ಸಮೂಹಕ್ಕೆ ರಸದೌತಣ. ಅವರ ಕೃತಿಗಳಲ್ಲಿ ಮರಳು ಮಾಡುವ ಮೋಹಕತೆಯಿದೆ. ಮೈಮರೆಸುವ ರಂಜಕತ್ವವೂ ಇದೆ. ಹರಿನಾಮ ಸಂಕೀರ್ತನೆಯ ಮೂಲಕ ಒಳತು-ಕೆಡಕುಗಳ ಅರಿವು ಮೂಡಿಸುವ ಸಂತ, ದಾರ್ಶನಿಕ, ಉದಾರಚರಿತ, ಪರಮ ಭಾಗವತ ಮತ್ತು ಕನ್ನಡ ಹರಿದಾಸ ಸಾಹಿತ್ಯದ ಆದ್ಯ ಪ್ರವರ್ತಕ, ಇಲ್ಲಕ್ಕಿಂತ ಮಿಗಿಲಾಗಿ ಸಾರ್ವಕಾಲಿಕ ಜೀವನ ದರ್ಶನವನ್ನು ಬೆಳಕಿಗೆ ತಂದವರು. ನಾಡಿನ ದಾಸರು ಮತ್ತು ತಾಯಂದಿರು ಇದನ್ನು ಜನಪ್ರಿಯಗೊಳಿಸಿದ್ದು ಮೆಚ್ಚಬೇಕಾದ ಸಂಗತಿ.

ನಾಲಿಗೆಗೆ ನಾರಾಯಣ ನಾಮ ಭೂಷಣ, ಕಾಲಿಗೆ ಹರಿಯಾತ್ರೆ, ಮನೆಗೆ ತುಲಸಿ ಬೃಂದಾವನ…..ರಂಗವಿಠಲ ನಿನ್ನ ನಾಮ ಅತಿ ಭೂಷಣ ಎನ್ನುವ ಶ್ರೀಪಾದರಾಜರು ಮಾನವರಿಗೆ ಮಾನವೇ ಭೂಷಣ ಎಂಬ ಲೋಕ ನೀತಿಯನ್ನು ಹೇಳಿ ಸಾರ್ವತ್ರಿಕ ಎಚ್ಚರಿಕೆ ಕೊಟ್ಟಿದ್ದಾರೆ.

ಮಾತು ಮತ್ತು ಧಾತುಗಳೆರಡರ ಒಟ್ಟು ಸಂಗಮವಾಗಿರುವ ಶ್ರೀಪಾದರಾಜರ ರಚನೆಗಳು ಮುಂದೆ ದಾಸವಾಣಿಯು ಗೇಯತೆಯಿಂದ ಕೂಡಿ ಉಜ್ವಲವಾಗಿ ಕೇಳಿಸುವುದಕ್ಕೆ ಹೊಸ ಪ್ರೇರಣೆ ಹಾಗು ಆಯಾಮವನ್ನು ಒದಗಿಸಿತು, ಹಾಗೆಯೇ ಮುಂದೆ ವ್ಯಾಸರಾಜರು, ಪುರಂದರದಾಸರು ಹಾಗೂ ಕನಕದಾಸರಂತಹ ಶ್ರೇಷ್ಠ ಸಾಂಸ್ಕೃತಿಕ ಧೃವತಾರೆಗಳನ್ನು ಬೆಳೆಸಿದರು ಎಂಬುದನ್ನು ಗಮನಿಸಿದರೆ ಅವರ ಸಾಂಸ್ಕೃತಿಕ ದೃಷ್ಠಿಧೋರಣೆಗಳು ಎಷ್ಟು ಉಜ್ವಲವಾದವು ಎಂದು ಮನದಟ್ಟಾಗುತ್ತದೆ.

ಸಂಸ್ಕೃತದ ಘಟ-ಪಟಗಳ ನಡುವೆ ಒದ್ದಾಡುತ್ತಿದ್ದ ದೇವರನ್ನು, ಧರ್ಮದ ತಿರುಳನ್ನು ಮನೆ ಮಾತುಗಳಲ್ಲಿ ಹೇಳುತ್ತ ಕಂಗಳಿದ್ಯಾತಕೋ ಕಾವೇರಿ ರಂಗನ ನೋಡದ ಎಂಬುದಾಗಿ ಪಂಡಿತ ಪಾಮರರಿಬ್ಬರಿಗೂ ಮನಮುಟ್ಟುವಂತೆ ತಿಳಿ ಹೇಳಿದರು.

ಸೂಕ್ಷ್ಮ ಭಾವನೆಗಳನ್ನು ಹೊತ್ತು ಸಂವೇದನೆಗಳನ್ನು ಅಭಿವ್ಯಕ್ತಗೊಳಿಸಲು ಸಂಗೀತವೇ ಸಮರ್ಥವಾದ ಮಾಧ್ಯಮವೆಂದು ಅರಿತ ಈ ತಪಸ್ವಿಗಳು ಪಲ್ಲವಿ, ಅನುಪಲ್ಲವಿ ಚರಣಗಳನ್ನು ಹೊಂದಿದ ಕೀರ್ತನೆಗಳನ್ನು ಪ್ರಥಮ ಬಾರಿಗೆ ಭಜನೆಯ ಸಲುವಾಗಿ ರಚಿಸಿ ಹೊಸ ಪದ್ದತಿಯೊಂದನ್ನು ಆವಿಷ್ಕರಿಸಿದರು.

ಕೈಯಲ್ಲಿ ತಂಬೂರಿ, ಚಿಟಕಿ, ಕಾಲಲ್ಲಿ ಗೆಜ್ಜೆ-ಶ್ರೀಪಾದರಾಜರ ಕಾಲಕ್ಕೆ ಹರಿದಾಸರ ವೇಷಭೂಷಣ ಎನ್ನುವುದು ಗಮನಾರ್ಹ. ಒಟ್ಟಿನಲ್ಲಿ ರಾಜರು ಬಳಕೆಗೆ ತಂದ ಉದಯರಾಗ, ಲಾಲಿಪದ, ಸುವ್ವಿ, ಮುಂತಾದ ಗೇಯಪ್ರಕಾರಗಳನ್ನು ನೆಲೆಸಿದ ನೆಲದ ಜನಪದ ಲೋಕದಿಂದ ಎತ್ತಿಕೊಂಡು ಅವುಗಳನ್ನು ಸಂಗೀತ ಶಾಸ್ತ್ರ ಮಾರ್ಗದಲ್ಲಿ ಮುನ್ನಡೆಸಿದರು. ಹೀಗೆ ದಾಸ ಸಾಹಿತ್ಯ-ಸಂಸ್ಕೃತಿಯನ್ನು ಹೊಸಹಾದಿಯಲ್ಲಿ ಸಾಗಿಸಿದ ಶ್ರೀಪಾದರು ವೇದ, ಉಪನಿಷತ್ತು, ರಾಮಾಯಣ, ಭಾರತ, ಭಾಗವತ ಇತ್ಯಾದಿಗಳನ್ನು ದಾಸಸಾಹಿತ್ಯದಲ್ಲಿ ದೃಷ್ಟಾಂತಗಳಾಗಿ ಬಳಸಬೇಕೆಂಬುದಕ್ಕೆ ಅವರೇ ಮೂಲ ಮತ್ತು ಮಾದರಿ.

ಪರಮಾತ್ಮನ ಪ್ರೀತಿ ಗಳಿಸಲು ಬಹಳ ಕಷ್ಟ ಪಡಬೇಕಿಲ್ಲ, ಕಲಿಯುಗವನ್ನು ಬಹುಶಃ ಎಲ್ಲರೂ ಹಳಿಯುವುದುಂಟು. ಆದರೆ ಶ್ರೀಪಾದರಾಜರು ಹೊಗಳುತ್ತ ಕಾರಣ ತಿಳಿಸುತ್ತಾರೆ. ಕಲಿಕಾಲಕೆ ಸಮಯುಗವಿಲ್ಲವಯ್ಯ ಕಲುಷಹರಿಸಿ ಕೈವಲ್ಯವೀವುದಯ್ಯ ಸೆಲೆ ನಾಮ ಕೀರ್ತನೆ ಸ್ಮರಣೆ ಸಾಕಯ್ಯ, ಸ್ಮರಿಸಲು ಸಾಯುಜ್ಯಪದವೀಯುದಯ್ಯ ಬಲವಂತ ಶ್ರೀರಂಗವಿಠ್ಠಲನ ನೆನೆದರೆ ಕಲಿಯುಗವೆ ಕೃತಯುಗವಾಗುವುದಯ್ಯ.

ಮೋಡ ಮುಸುಕಿದ ಮಳೆಗಾಲದಲ್ಲಿ ಬೆಳದಿಂಗಳು ಯಾವ ರೀತಿ ಇರಬಹುದು, ಸಂಸಾರವೂ ಹಾಗೆಯೆ ಎನ್ನುತ್ತಾರೆ. ಬಂಧು ಬಾಂಧವರ ಸ್ಥಿತಿಗತಿಗಳನ್ನು ವಿವರಿಸಿ ಮಾರ್ಗದರ್ಶನ ಮಾಡಿಸುತ್ತಾರೆ. ಇಂದ್ರಿಯಗಳ ಶಕ್ತಿ ಕುಂಠಿತಗೊಂಡಾಗ ಧರ್ಮಾಚರಣೆಯ ಬಗ್ಗೆ ಆಸಕ್ತಿ ಹುಟ್ಟಿದರೂ ಕೂಡ ಅದನ್ನು ಮಾಡಲು ಸಾಧ್ಯವಿಲ್ಲ. ಚಂಚಲವಾದ ಮನಸನ್ನು ನಿಯಂತ್ರಿಸಿ ಹರಿಯನ್ನು ಸದಾ ಆರಾಧಿಸುತ್ತ ಶಾಶ್ವತ ಸುಖ ಅರ್ಥಾತ್ ಮೋಕ್ಷವನ್ನು ಸಾಧಿಸಲು ತದೇಕಚಿತ್ತದಿಂದ ಸನ್ನದ್ದರಾಗಬೇಕೆಂಬುದೆ ಶ್ರೀಪಾದರಾಜರ ಅಂತರಂಗದ ಕಳಕಳಿ.

ಒಂದರಘಳಿಗೆಯೂ ಬಿಡದೆ ಶ್ರೀರಂಗವಿಠ್ಠಲನನ್ನು ಭಜಿಸಿ ಅವನೊಂದಿಗೆ ಆಡಿ, ಅರವತ್ತು ಬಗೆಯ ಅಡುಗೆಗಳನ್ನು ಪ್ರತಿ ನಿತ್ಯ ನಿವೇದಿಸುತ್ತಿದ್ದ ಶ್ರೀಪಾದರಾಜರು ರಂಗನನ್ನೆ ಪ್ರಶ್ನಿಸುತ್ತಾರೆ: ನೀನೇ ಬಲ್ಲಿದನೋ ರಂಗ ನಿನ್ನ ದಾಸರು ಬಲ್ಲಿದರೋ? ಭಕ್ತಿ ಮಾರ್ಗ ರಾಜಮಾರ್ಗ ಎಂದು ವಿವರಿಸುವ ಭವಚಿಂತನೆಯ ಸೆಲೆ ಇದು.

ಶ್ರೀಕೃಷ್ಣನು ಗೀತೆಯಲ್ಲಿ ಉಪದೇಶಿಸಿದ ಸ್ಥಿತಪ್ರಜ್ಞನ ಲಕ್ಷಣದ ವಿವರಣ ರೂಪವಾಗಿ ಹೊರಹೊಮ್ಮಿದ ಪ್ರಸಿದ್ಧವಾದ ಕೃತಿಯೇ ಇಟ್ಟಾಂಗೆ ಇರುವನೋ ಹರಿಯೇ ಎಂಬುದು ಇದು ಈಶೋಪನಿಷತ್ತಿನ ತ್ಯಕ್ತೇನ ಭುಂಜೀಥಾಃ ಎಂಬ ಮಾತಿನ ಸಾರವೇ ಆಗಿದೆ.

ಶ್ರೀಪದ್ಮನಾಭತೀರ್ಥರ ಪರಂಪರೆಯ ಮಾಧ್ವ ವಾಙ್ಮಯ ಸಾಮ್ರಾಜ್ಯದ ವೀರ ಸೇನಾನಿಗಳೆನಿಸಿದ ಶ್ರೀವ್ಯಾಸರಾಜರನ್ನು ತಯಾರು ಮಾಡಿದ ಮಹಾಮಲ್ಲರು ಶ್ರೀಪಾದರಾಜರು. ವ್ಯಾಸರಾಜರ ಮಹಿಮೆಯನ್ನು ಸಾಸಿರ ಜಿಹ್ವೆಯುಳ್ಳ ಶೇಷನೇ ಕೊಂಡಾಡಬೇಕು ಎಂಬ ಕೀರ್ತನೆಯಲ್ಲಿ ಹಾಡಿ ಹೃತ್ಪೂರ್ವಕವಾಗಿ ಹರಸಿದ್ದಾರೆ. ಗುಣಶಾಲಿಯಾದ ಶಿಷ್ಯನನ್ನು ಗುಣಗ್ರಾಹಿಯಾದ ಗುರುವು ಈ ರೀತಿಯಾಗಿ ಕೊಂಡಾಡಿರುವುದು ವೈಶಿಷ್ಟಪೂರ್ಣ. (ಮುಂದೆ ಇದೇ ಸಂಸ್ಕೃತಿಯನ್ನು ಮುಂದುವರೆಸಿದ ಶ್ರೀವ್ಯಾಸರಾಜರು ಪುರಂದರದಾಸರನ್ನು ಮೆಚ್ಚಿಕೊಂಡಿರುವುದು ಗಮನಾರ್ಹ).

ಇಂದು ಶ್ರೀಪಾದರಾಜರು ಅವತರಿಸಿ 600ಕ್ಕೂ ಅಧಿಕ ವರ್ಷಗಳೇ ಆಗಿದೆ. ಅವರ ಸಾಹಿತ್ಯವನ್ನು ಹಲವು ಮಗ್ಗಲುಗಳಿಂದ ಅಧ್ಯಯನಿಸಬೇಕಾದ ಅವಶ್ಯಕತೆ ಇದೆ. ನಮ್ಮೆಲ್ಲ ಸಂಕಟ, ಆತಂಕಗಳು ದೂರ ಮಾಡಲು ಸ್ಥಿತಪ್ರಜ್ಞತೆಯನ್ನು ರೂಢಿಸಿಕೊಳ್ಳಲು ಶ್ರೀಪಾದರಾಜರ ಕೃತಿಗಳನ್ನು ಅರಿಯು ಪ್ರಯತ್ನ ಮಾಡಬೇಕು. ಅವರ ಸಂದೇಶಗಳನ್ನು ಎಲ್ಲರಿಗೂ ತಿಳಿಸುವ ಪ್ರಯತ್ನದಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು.


Get In Touch With Us info@kalpa.news Whatsapp: 9481252093

Tags: Dr Gururaj PoshettihalliSri KrishnaSripadarajaruಡಾ.ಗುರುರಾಜ ಪೋಶೆಟ್ಟಿಹಳ್ಳಿತಮಿಳುನಾಡುದಾಸ ಪರಂಪರೆದಾಸವಾಣಿಶ್ರೀಕೃಷ್ಣಶ್ರೀಪದ್ಮನಾಭತೀರ್ಥರುಶ್ರೀಪಾದರಾಜರು
Share210Tweet123Send
Previous Post

ಶಿವಮೊಗ್ಗದಲ್ಲಿ ಇಂದು ಎರಡು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

Next Post

ಕೊರೋನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆ ಇರಲಿ: ಡಿಸಿ ಶಿವಕುಮಾರ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆ ಇರಲಿ: ಡಿಸಿ ಶಿವಕುಮಾರ್ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL