ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಎಸ್ಐ ಸೌಲಭ್ಯವಿದ್ದರೂ ಕಾರ್ಮಿಕರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿದರು.
ಕಾರ್ಮಿಕರಿಗೆ ಇಎಸ್ಐ ಸೌಲಭ್ಯವೆಂಬುದು ವರದಾನವಿದ್ದಂತ್ತೆ. ಕಾರ್ಖಾನೆಯ ಮತ್ತು ಕೆಲಸ ಮಾಡುತ್ತಿರುವ ಸ್ಥಳಗಳ ಮಾಲೀಕರು ಪ್ರತಿ ತಿಂಗಳು ಇಎಸ್ಐ ಸೌಲಭ್ಯ ಪಡೆಯಲು ಕಾರ್ಮಿಕರಿಂದ ಹಣಪಡೆದು ಸರ್ಕಾರಕ್ಕೆ ಕೋಟಿ ಕೋಟಿ ರೂ.ಗಳನ್ನು ಕಟ್ಟುತ್ತಿದ್ದಾರೆ. ಆದರೆ ಇಎಸ್ಐ ಸೌಲಭ್ಯ ಕೊಡುತ್ತೇವೆ ಎಂದು ಹೇಳುವ ಆಸ್ಪತ್ರೆಗಳು ಆ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಚಿಕಿತ್ಸೆಯನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.
ಹೀಗಾಗಿ ಕಾರ್ಮಿಕರು ಅಲೆದಾಡುವಂತಹ ಪರಿಸ್ಥಿತಿ ಬಂದಿದೆ. ಆದ್ದರಿಂದ ಇಎಸ್ಐ ಸೌಲಭ್ಯವಿರುವ ಆಸ್ಪತ್ರೆಗಳಲ್ಲಿ ತಕ್ಷಣವೇ ಚಿಕಿತ್ಸೆಯನ್ನು ಆರಂಭಿಸಬೇಕು. ಇಲ್ಲದಿದ್ದರೆ ನಮ್ಮ ವೇದಿಕೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
Also read>> ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಆಗ್ರಹ | ಆ.13ರಂದು ಸಮಾವೇಶ
ಈ ಸಂದರ್ಭದಲ್ಲಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆಯ ಅಧ್ಯಕ್ಷ ವಾಟಾಳ್ ಮಂಜುನಾಥ್, ಪ್ರಮುಖರಾದ ನಿತೀನ್, ಪ್ರವೀಣ, ಮಾರುತಿ, ಜಯಣ್ಣ, ರಾಕೇಶ್, ಲೋಕೇಶ್, ಅಕ್ಬರ್ ಭಾಷಾ, ರವಿ ಮತ್ತೂರ್, ಮೈಲಾರಪ್ಪ, ಮಂಜುನಾಥ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










