No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

5 ವರ್ಷಗಳಲ್ಲಿ ಜಿಲ್ಲೆಗೊಂದು ಅತ್ಯುತ್ಕೃಷ್ಟ ಎಂಜಿನಿಯರಿಂಗ್ ಕಾಲೇಜು: ಸಚಿವ ಅಶ್ವತ್ಥ್ ನಾರಾಯಣ್ ಗುರಿ

ಶಿವಮೊಗ್ಗ ಜಿಲ್ಲೆಯಿಂದ ಆಯ್ಕೆಯಾಗಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜು ಯಾವುದು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 6, 2022
in ರಾಷ್ಟ್ರೀಯ
0
ಆಧುನಿಕ ತಂತ್ರಜ್ಞಾನಗಳೊಂದಿಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವಿವಿ ಸ್ಥಾಪನೆ: ಸಚಿವ ಅಶ್ವತ್ಥನಾರಾಯಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | 

ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಇನ್ನು 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಬೆಳೆಸುವ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದ ಉನ್ನತ ಸಮಿತಿಯು ಸರಕಾರಕ್ಕೆ ತನ್ನ ವರದಿ ಸಲ್ಲಿಸಿದೆ.

`ಜಿಲ್ಲೆಗೆ ತಲಾ ಒಂದರಂತೆ ಒಟ್ಟು 30 ಕಾಲೇಜುಗಳನ್ನು `ಪ್ರಾದೇಶಿಕ ಉತ್ಕೃಷ್ಟ ತಾಂತ್ರಿಕ ಶಿಕ್ಷಣ ವ್ಯವಸ್ಥೆ(`ರೀತಿ’) ಯೋಜನೆಯಡಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇವುಗಳನ್ನು ಪರಿಪೋಷಣೆ ಇನ್ಕ್ಯುಬೇಷನ್), ಆ್ಯಕ್ಸಲೇಟರ್ ಮತ್ತು ಸೂಪರ್-30 ಎನ್ನುವ ಮೂರು ವಿಭಾಗಗಳಡಿ ಪರಿಗಣಿಸಲಾಗಿದ್ದು, ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಸಂಸ್ಥೆಗಳನ್ನು ಆರಿಸಿಕೊಳ್ಳಲಾಗುತ್ತದೆ.
ಸರ್ಕಾರ, ಉದ್ಯಮರಂಗ ಮತ್ತು ವಿಟಿಯು ಮೂರೂ ಸೇರಿಕೊಂಡು `ರೀತಿ’ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲಿದ್ದು, ತಲಾ ಶೇ.33ರಷ್ಟು ವೆಚ್ಚ ಭರಿಸಲಿವೆ. ಇದು ಐತಿಹಾಸಿಕ ಕ್ರಮವಾಗಿದ್ದು, ಇದಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಸೂಕ್ತ ಅವಕಾಶ ಒದಗಿಸಿದೆ. 2 ಮತ್ತು 3ನೇ ಸ್ತರದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳನ್ನು ಉನ್ನತೀಕರಿಸುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಔದ್ಯಮಿಕ ಅರಿವು ಮತ್ತು ಸಂಶೋಧನೆ ಆಧರಿತ ತಾಂತ್ರಿಕ ಶಿಕ್ಷಣ ನೀಡುವುದು ಇದರ ಹೆಗ್ಗುರಿಯಾಗಿದೆ. ಈ ಮೂಲಕ ರಾಜ್ಯದ ಉದ್ದಗಲಕ್ಕೂ ಉತ್ಕೃಷ್ಣ ಗುಣಮಟ್ಟದ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಿರಬೇಕೆಂಬ ಕನಸನ್ನು ನನಸು ಮಾಡಲಾಗುತ್ತಿದೆ.

ಜಾಗತಿಕ ಅಗತ್ಯಗಳಿಗೆ ತಕ್ಕಂತೆ ಈ ಕಾಲೇಜುಗಳಲ್ಲಿ ವಿದ್ಯಾರ್ಥಿ ಕೇಂದ್ರಿತ ಕೌಶಲ್ಯ ಮತ್ತು ಸಂಶೋಧನಾ ಬಹುಶಿಸ್ತೀಯ ಶಿಕ್ಷಣ ಒದಗಿಸಲು ಕರ್ನಾಟಕ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ಮೂಲಕ ವಿದ್ಯಾರ್ಥಿಗಳನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಿ, ಅವರಲ್ಲಿ ಉದ್ಯಮಶೀಲತೆಯನ್ನೂ ಬೆಳೆಸಲು ಸಹಾಯವಾಗುತ್ತದೆ. ಅಲ್ಲದೇ ಕಳೆದ 03 ವರ್ಷಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಉನ್ನತ ಶಿಕ್ಷಣ ಸಚಿವಾಲಯ ಹಾಗೂ ಕೌಶಲ್ಯ ಅಭಿವೃದ್ಧಿ ಇಲಾಖೆ ಹಲವಾರು ಮಹತ್ತರ ಬದಲಾವಣೆಯನ್ನು ತಂದಿದೆ. ಜತೆಗೆ, ಈ 30 ಕಾಲೇಜುಗಳಲ್ಲಿ ಸ್ವಯಂ ಮೌಲ್ಯಮಾಪನ ಮತ್ತು `ಮೆಂಟರ್-ಆಡಿಟ್ ಮಾದರಿ’ ಮೂಲಕ ಉತ್ತರದಾಯಿತ್ವವನ್ನು ತರಲಾಗುತ್ತಿದೆ.
ಸೂಪರ್-30’ ಷರತ್ತುಗಳು
ಈ ಕಾಲೇಜುಗಳು ಅತ್ಯುತ್ಕೃಷ್ಟ ಮಟ್ಟವನ್ನು ಸಾಧಿಸಲು ಹಲವು ನಿಯಮಗಳನ್ನು ಪಾಲಿಸಲಾಗುವುದು. ಆ ನಿಯಮಗಳು ಹೀಗಿವೆ:

  • 3 ತಿಂಗಳಿಗೊಮ್ಮೆ ನೋಡಲ್ ಅಧಿಕಾರಿ ಮೂಲಕ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಲಾಗುವುದು.
  • ಕಾಲೇಜುಗಳು ಅಪೇಕ್ಷಿತ ಮಟ್ಟವನ್ನು ಮುಟ್ಟಲು ವಿಫಲವಾದಲ್ಲಿ ಮಧ್ಯದಲ್ಲೇ `ಸೂಪರ್-30’ ಸ್ಥಾನಮಾನವನ್ನು ಹಿಂತೆಗೆದುಕೊಳ್ಳಲಾಗುವುದು.
  • ಯೋಜನೆಯ ಅವಧಿಯಾದ 5 ವರ್ಷಗಳ ಕೊನೆಯ ವೇಳೆಗೆ ಈ ಕಾಲೇಜುಗಳು ತಮ್ಮ ಶೈಕ್ಷಣಿಕ ಕಾರ್ಯಕ್ರಮಗಳ ಪೈಕಿ ಶೇ.80ರಷ್ಟಕ್ಕಾದರೂ    ಎನ್.ಬಿ.ಎ ಮಾನ್ಯತೆ ಹೊಂದಿರಬೇಕು.
  • ಐ.ಟಿ. ಉದ್ದಿಮೆ ಮತ್ತು ಪ್ರಮಖ ಎಂಜಿನಿಯರಿಂಗ್ ಶಾಖೆಗೆ ಸೇರಿದ ತಲಾ 1 ಉದ್ದಿಮೆ ಸೇರಿ ಒಟ್ಟು 3 ಉದ್ದಿಮೆಗಳೊಂದಿಗೆ ಯಶಸ್ವಿ ಸಹಭಾಗಿತ್ವವನ್ನು ಹೊಂದಿರಬೇಕು.
  • ಅಂತಿಮ ವರ್ಷದ ಬಿ.ಇ.ಯಲ್ಲಿರುವ ವಿದ್ಯಾರ್ಥಿಗಳು ತಮ್ಮ ಪದವಿ ಪಡೆಯುವ ಹೊತ್ತಿಗೆ ಶೇ.50ರಷ್ಟು ವಿದ್ಯಾರ್ಥಿಗಳಾದರೂ ಉದ್ಯೋಗಾವಕಾಶ ಗಿಟ್ಟಿಸಿಕೊಂಡಿರಬೇಕು.
  • ಆಯಾ ಕಾಲೇಜುಗಳಲ್ಲಿ ಶೇ.75ರಷ್ಟು ವಿದ್ಯಾರ್ಥಿಗಳು ಪ್ರತೀವರ್ಷವೂ ಗುಣಮಟ್ಟದ ಇಂಟರ್ನ್-ಶಿಪ್ ಅನ್ನು ಕಡ್ಡಾಯವಾಗಿ ಮಾಡಬೇಕು.
  • ಅಗತ್ಯವೆನಿಸಿದರೆ ವಿಟಿಯು ಕಡೆಯಿಂದ ಶಾಶ್ವತ ಮಾನ್ಯತೆ ಪಡೆದುಕೊಳ್ಳಬೇಕು.

ಕರ್ನಾಟಕದಲ್ಲಿ ಆಯ್ಕೆಯಾಗಿರುವ ಖಾಸಗಿ ಕಾಲೇಜುಗಳು

  1. ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್, ಬೆಳಗಾವಿ
  2. ಚನ್ನಬಸವೇಶ್ವರ ಎಂಜಿನಿಯರಿಂಗ್ ಕಾಲೇಜು, ಗುಬ್ಬಿ (ತುಮಕೂರು ಜಿಲ್ಲೆ)
  3. ಶ್ರೀಮಧ್ವ ವಾದಿರಾಜ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಕಾಲೇಜು, ಉಡುಪಿ
  4. ಜಿಎಸ್ಎಸ್ಎಸ್ ಮಹಿಳಾ ಎಂಜಿನಿಯರಿಂಗ್ & ಟೆಕ್ನಾಲಜಿ ಸಂಸ್ಥೆ, ಮೈಸೂರು.
  5. ಡಾ.ಟಿ ತಿಮ್ಮಯ್ಯ ತಾಂತ್ರಿಕ ಶಿಕ್ಷಣ ಕಾಲೇಜು, ಕೆಜಿಎಫ್ (ಕೋಲಾರ ಜಿಲ್ಲೆ)
  6. ಬಿಳುಗೂರು ಗುರುಬಸವ ಮಹಾಸ್ವಾಮೀಜಿ ಇನ್ಸ್ಟಿಟ್ಯೂಟ್, ಮುಧೋಳ (ಬಾಗಲಕೋಟೆ ಜಿಲ್ಲೆ)
  7. ಪಿ.ಜಿ.ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿ, ವಿಜಯಪುರ
  8. ಆದಿಚುಂಚನಗಿರಿ ತಾಂತ್ರಿಕ ಕಾಲೇಜು, ಚಿಕ್ಕಮಗಳೂರು
  9. ಎಸ್.ಜೆ.ಸಿ. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ, ಚಿಕ್ಕಬಳ್ಳಾಪುರ
  10. ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು, ಬಳ್ಳಾರಿ
  11. ಪಿಇಎಸ್ ತಾಂತ್ರಿಕ & ಮ್ಯಾನೇಜ್ಮೆಂಟ್ ಸಂಸ್ಥೆ, ಶಿವಮೊಗ್ಗ
  12. ಭೀಮಣ್ಣ ಖಂಡ್ರೆ ತಾಂತ್ರಿಕ ಕಾಲೇಜು, ಭಾಲ್ಕಿ (ಬೀದರ್ ಜಿಲ್ಲೆ)
  13. ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ಗದಗ
  14. ವಿವೇಕಾನಂದ ಎಂಜಿನಿಯರಿಂಗ್ & ತಾಂತ್ರಿಕ ಕಾಲೇಜು, ಪುತ್ತೂರು (ದಕ್ಷಿಣ ಕನ್ನಡ ಜಿಲ್ಲೆ)
  15. ಜೈನ್ ಎಂಜಿನಿಯರಿಂಗ್ ಕಾಲೇಜು, ಹುಬ್ಬಳ್ಳಿ
  16. ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜು, ಸುರಪುರ (ಯಾದಗಿರಿ ಜಿಲ್ಲೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCollege of EngineeringKannada News WebsiteLatest News KannadaMinister Ashwath NarayanRegional Advanced Technical Education SystemRETEShimogaShivamoggaಎಂಜಿನಿಯರಿಂಗ್ ಕಾಲೇಜುಪ್ರಾದೇಶಿಕ ಉತ್ಕೃಷ್ಟ ತಾಂತ್ರಿಕ ಶಿಕ್ಷಣ ವ್ಯವಸ್ಥೆಬೆಂಗಳೂರುರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್ಶಿವಮೊಗ್ಗಸಚಿವ ಅಶ್ವತ್ಥ್ ನಾರಾಯಣ್
Share202Tweet123Send
Previous Post

ಮಡಿಕೇರಿ-ತಾಯಿಯ ಎದೆಹಾಲು ದ್ರವರೂಪದ ಅಪರಂಜಿ: ಡಾ.ಆರ್. ವೆಂಕಟೇಶ್ ಬಣ್ಣನೆ

Next Post

ಸೊರಬ: ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ

ಸೊರಬ: ಒಂದು ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL