No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಶ್ರೀನಿವಾಸನ ದರ್ಶನದಿಂದ ಜ್ಞಾನ, ಭಕ್ತಿ, ವೈರಾಗ್ಯ ಪ್ರಾಪ್ತಿ: ಸೋಸಲೆ ಶ್ರೀ ಅಭಿಮತ

ತಿರುಮಲದಲ್ಲಿ ವ್ಯಾಸರಾಜ ಮಠದ ನವೀಕೃತ ಶ್ರೀವಿಶ್ವ ಪಾವನ ಭವನ ಉದ್ಘಾಟನೆ

kalpa News by kalpa News
December 18, 2022
in ರಾಷ್ಟ್ರೀಯ
0
ಶ್ರೀನಿವಾಸನ ದರ್ಶನದಿಂದ ಜ್ಞಾನ, ಭಕ್ತಿ, ವೈರಾಗ್ಯ ಪ್ರಾಪ್ತಿ: ಸೋಸಲೆ ಶ್ರೀ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತಿರುಪತಿ/ಮೈಸೂರು  |

ತಿರುಮಲ ಬೆಟ್ಟದಲ್ಲಿ ಶ್ರೀನಿವಾಸದ ದರ್ಶನ ಪಡೆದರೆ ಜ್ಞಾನ ಭಕ್ತಿ ಹಾಗೂ ವೈರಾಗ್ಯಗಳು ಪ್ರಾಪ್ತಿಯಾಗಿ ಅದು ಮೋಕ್ಷಕ್ಕೆ ರಹದಾರಿಯಾಗುತ್ತದೆ ಎಂದು ಸೋಸಲೆ ಶ್ರೀ ವ್ಯಾಸರಾಜ ಮಠದ ಪೀಠಾಧಿಪತಿ ಶ್ರೀವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ತಿರುಪತಿ ತಿರುಮಲ ಬೆಟ್ಟದಲ್ಲಿ ವ್ಯಾಸರಾಜ ಮಠದ ವತಿಯಿಂದ ನವೀಕರಣಗೊಳಿಸಿರುವ ಶ್ರೀ ವಿಶ್ವ ಪಾವನ ಭವನ ಉದ್ಘಾಟನಾ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಆರ್ಶೀವಚನ ನೀಡಿ ಅವರು ಮಾತನಾಡಿದರು.

ಗುರುಮುಖೇನ ಜ್ಞಾನ ಪಡೆಯುವುದು ಅತ್ಯಂತ ಶ್ರೇಷ್ಠ. ಇದು ಸಾಧನೆಗೆ ಮಹೋನ್ನತ ಮಾರ್ಗವನ್ನು ತೋರಲಿದೆ. ತಿರುಮಲ ಬೆಟ್ಟದಲ್ಲಿ ಶ್ರೀನಿವಾಸನ ದರ್ಶನ ಮಾಡಿ ಜ್ಞಾನ, ಭಕ್ತಿ ಮತ್ತು ವೈರಾಗ್ಯಗಳನ್ನು ಬೇಡಬೇಕು. ಇದು ಮೋಕ್ಷಕ್ಕೂ ರಹದಾರಿಯಾಗಬೇಕು. ಆಗಲೇ ಬದುಕು ಸಾರ್ಥಕವಾಗುತ್ತದೆ ಎಂದರು.
ಧರ್ಮದ ಹಾದಿಯಲ್ಲಿ ಸಾಗಿದರೆ ವಿಜಯ ಪ್ರಾಪ್ತಿಯಾಗುತ್ತದೆ. ಕಲಿಯುಗದ ಕಲ್ಪದೃಮನಾದ ವೆಂಕಟೇಶನ ದರ್ಶನ ಮಾತ್ರದಿಂದಲೇ ಲೌಕಿಕ ಜೀವನದ ಸಕಲ ಸಂಕಟಗಳೂ ಪರಿಹಾರವಾಗುತ್ತವೆ. ಆತನ ಸ್ಮರಣೆಯನ್ನು ಸದಾ ಮನದಲ್ಲಿ ಧರಿಸಿಕೊಂಡು ಜೀವನವನ್ನು ಪಾವನ ಮಾಡಿಕೊಳ್ಳಿ ಎಂದು ಸಂದೇಶ ನೀಡಿದರು.

ನಿತ್ಯ ಅನ್ನದಾನ ಸೇವೆ
ತಿರುಮಲದಲ್ಲಿ ವೆಂಕಟೇಶದ ದರ್ಶನಕ್ಕೆ ನಿತ್ಯವೂ ಸಾವಿರಾರು ಸಾತ್ವಿಕ ಭಕ್ತರು ದೂರದೂರದ ಪ್ರದೇಶದಿಂದ ಬರುತ್ತಾರೆ. ಜೀವನದಲ್ಲಿ ಕಠಿಣ ಅನುಷ್ಠಾನಗಳನ್ನು ಇಟ್ಟುಕೊಂಡವರು ಇಲ್ಲಿ ತಂಗಲು ಪರದಾಡುತ್ತಾರೆ. ಅಂಥವರು ದೇವರ ದರ್ಶನವನ್ನು ಸುಖವಾಗಿ ಮಾಡಲು ಮಠವು ಸುಸಜ್ಜಿತ ವಸತಿಗೃಹಗಳನ್ನು ನಿರ್ಮಿಸಿದೆ. ಇಲ್ಲಿ ನಿತ್ಯವೂ ಅನ್ನದಾನದ ಸೇವೆ ನಡೆಯಲಿದೆ ಎಂದರು.

ಶ್ರೀಮಠದ ಯತಿಗಳ ಅನನ್ಯ ಸೇವೆ
ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ. ಧರ್ಮಾರೆಡ್ಡಿ ಮಾತನಾಡಿ, ತಿರುಪತಿ ತಿಮ್ಮಪ್ಪನಿಗೆ 12 ವರ್ಷಗಳ ಕಾಲ ವಿಶೇಷ ಸೇವೆ ಸಲ್ಲಿಸಿ, ಪುರಾತನ ದೇಗುಲದ ಮಹತ್ವವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರೀ ವ್ಯಾಸರಾಜರು ಮಹತ್ತರ ಸೇವೆ ಸಲ್ಲಿಸಿದ್ದಾರೆ ಎಂದರು.
ಪ್ರಸ್ತುತ ತಿರುಮಲದ ಹತ್ತು ಹಲವು ಸೇವಾ ಚಟುವಟಿಕೆಗಳಲ್ಲಿ ಶ್ರೀ ವ್ಯಾಸರಾಜಮಠದ ವಿದ್ವತ್’ಪೂರ್ಣ ಸಲಹೆ, ಸಹಕಾರಗಳು ದೊರಕುತ್ತಿರುವುದು ನಮ್ಮೆಲ್ಲರ ಸುಕೃತ. ಇಂದು ಟಿಟಿಡಿ ವಿಶ್ವಖ್ಯಾತಿ ಪಡೆದಿದೆ ಎಂದರೆ ಅದಕ್ಕೆ ಶ್ರೀ ವ್ಯಾಸರಾಜಮಠದ ಪರಂಪರೆಯ ಯತಿಗಳ ಅನನ್ಯ ಸೇವೆಯೇ ಕಾರಣ ಎಂದರು.

ಸ್ವಾಮಿ ಪುಷ್ಕರಣಿ ತೀರದಲ್ಲಿರುವ ಶ್ರೀ ವ್ಯಾಸರಾಜರ ಅಹ್ನೀಕ ಮಂಟಪ ಸದ್ಯಶಿಥಿಲಾವಸ್ಥೆಯಲ್ಲಿದ್ದು, ಇದನ್ನು ಟಿಟಿಡಿ ವತಿಯಿಂದ ಸಮಗ್ರವಾಗಿ ಪುನರುತ್ಥಾನ ಮಾಡಲಾಗುವುದು ಎಂದು ಧರ್ಮಾರೆಡ್ಡಿ ಭರವಸೆ ನೀಡಿದರು.

ಕನ್ನಡದಲ್ಲೂ ಜ್ಞಾನ ಪ್ರಸಾರ
ಶ್ರೀ ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕ ಡಾ. ಆನಂದತೀರ್ಥ ನಾಗಸಂಪಿಗೆ ಮತನಾಡಿ, ಮಧ್ವಶಾಸ್ತçಕ್ಕೆ ವ್ಯಾಸರಾಜರು ಹಲವು ರೀತಿಯಲ್ಲಿ ಮಹತ್ತರ ಕೊಡುಗೆ ನೀಡಿದ್ದಾರೆ. ಕನ್ನಡದಲ್ಲಿಯೂ ಈ ಎಲ್ಲ ಗ್ರಂಥಗಳನ್ನು ಪ್ರಕಟಿಸಿರುವುದು ಈ ಸಂಸ್ಥಾನದ ಹೆಮ್ಮೆ ಎಂದರು.
ನಿವೃತ್ತ ಐಎಎಸ್ ಅಧಿಕಾರಿ ಮತ್ತು ಶ್ರೀ ವ್ಯಾಸರಾಜಮಠದ ಮುಖ್ಯ ಆಡಳಿತಾಧಿಕಾರಿ ಸುರಂಜನ್, ಮಠದ ದಿವಾನರಾದ ಡಾ. ಎ.ಪಿ. ವಿಜೇಂದ್ರಾಚಾರ್, ಬ್ರಹ್ಮಣ್ಯಾಚಾರ್, ಮಠದ ಸಲಹಾ ಸಮಿತಿ ಸದಸ್ಯ ನಾಗೇಂದ್ರ ಪ್ರಸಾದ್, ನಿವೃತ್ತ ನ್ಯಾಯಾಧೀಶ ಸುಧೀಂದ್ರ, ಟಿಟಿಡಿ ಮಂಡಳಿ ಸದಸ್ಯ ಡಿ.ಪಿ. ಅನಂತಾಚಾರ್ಯ, ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂದನಾಚಾರ್ಯ ಮತ್ತಿತರರು ಹಾಜರಿದ್ದರು.

ನಂತರ ಶ್ರೀವಿದ್ಯಾಶ್ರೀಶ ತೀರ್ಥರಿಗೆ ಟಿಟಿಡಿ ಸಕಲ ಗೌರವಾದರಗಳೊಡನೆ ಶ್ರೀ ವೆಂಕಟೇಶ್ವರನ ದರ್ಶನ ಮಾಡಿಸಿ ಮಹಾ ಪ್ರಸಾದ ನೀಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: accommodation in tirupatigovernment accommodationsKannada News WebsiteLatest News KannadamysoreSosale Vyasaraja MathTirumalaTirupatiVidyesha Thirtha Sriತಿರುಪತಿತಿರುಮಲಮೈಸೂರುಮೋಕ್ಷವ್ಯಾಸರಾಜ ಮಠಶ್ರೀವಿದ್ಯಾಶ್ರೀಶ ತೀರ್ಥ ಸ್ವಾಮೀಜಿ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಂದು ಮೂಗುತಿ, ಓಲೆಗಾಗಿ ಭದ್ರಾವತಿಯಲ್ಲಿ ವೃದ್ಧೆಯನ್ನು ಕೊಂದ ಪಾಪಿ: ಆರೋಪಿ ಅಂದರ್

Next Post

ಭದ್ರಾವತಿ ನ್ಯಾಯಾಲಯ ಮುಂಭಾಗ ರಸ್ತೆ ಅಗಲೀಕರಣ ವಿಳಂಬ: ವಕೀಲರ ಸಂಘದ ಆಕ್ರೋಶ

kalpa News

kalpa News

Next Post
ಭದ್ರಾವತಿ ನ್ಯಾಯಾಲಯ ಮುಂಭಾಗ ರಸ್ತೆ ಅಗಲೀಕರಣ ವಿಳಂಬ: ವಕೀಲರ ಸಂಘದ ಆಕ್ರೋಶ

ಭದ್ರಾವತಿ ನ್ಯಾಯಾಲಯ ಮುಂಭಾಗ ರಸ್ತೆ ಅಗಲೀಕರಣ ವಿಳಂಬ: ವಕೀಲರ ಸಂಘದ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL