No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ದಣಿವರಿಯದ ಮಹಾನ್ ಸ್ವಾತಂತ್ರ ಹೋರಾಟಗಾರ ಸುಭಾಷ್ ಚಂದ್ರ ಬೋಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 23, 2026
in Special Articles
0
ದಣಿವರಿಯದ ಮಹಾನ್ ಸ್ವಾತಂತ್ರ ಹೋರಾಟಗಾರ ಸುಭಾಷ್ ಚಂದ್ರ ಬೋಸ್
Share on FacebookShare on TwitterShare on WhatsApp

ಭಾರತದ ಸ್ವಾತಂತ್ರ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರ ದಮನಕಾರಿ ನೀತಿ ಹೆಚ್ಚಾಗುತ್ತಿದ್ದಂತೆ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಮಿಲಿಟರಿ ಕಾರ್ಯಾಚರಣೆಯೇ ಸರಿ ಎಂಬ ಅಭಿಪ್ರಾಯ ಹೊಂದಿದರು. ಅವರು ಶಸ್ತ್ರಸಜ್ಜಿತ ಹೋರಾಟದಿಂದ ಮಾತ್ರವೇ ಭಾರತ ಬ್ರಿಟಿಷರಿಂದ ಮುಕ್ತಿ ಹೊಂದಲು ಸಾಧ್ಯ ಎಂದು ದೃಢವಾಗಿ ನಂಬಿದ್ದರು.

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ನೇತಾಜಿ ಎಂದೇ ಪ್ರಸಿದ್ಧರಾದ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಪ್ರಮುಖ ಕ್ರಾಂತಿಕಾರಿ ಹೋರಾಟಗಾರ. 1897ರ ಜನವರಿ 23ರಂದು ಒರಿಸ್ಸಾದ ಕಟಕ್’ನಲ್ಲಿ ಜನಿಸಿದ ಸುಭಾಷ್ ಚಂದ್ರ ಬೋಸರ ಶಿಕ್ಷಣ ಆಗಿದ್ದು ಇಂಗ್ಲೆಂಡ್‌’ನಲ್ಲಿ. ಅಲ್ಲಿ ಅವರು ಕೇಂಬ್ರಿಜ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ನಡೆಸಿ, ಇಂಡಿಯನ್ ಸಿವಿಲ್ ಸರ್ವಿಸಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಆದರೆ ಅವರು ಆ ಉನ್ನತ ಹುದ್ದೆಯನ್ನು ತಿರಸ್ಕರಿಸಿ, ಸ್ವಾತಂತ್ರ ಹೋರಾಟದಲ್ಲಿ ಭಾಗವಹಿಸಲು ಭಾರತಕ್ಕೆ ಮರಳಿದರು.

ಸುಭಾಷ್ ಚಂದ್ರ ಬೋಸ್ ತನ್ನ ರಾಜಕೀಯ ಜೀವನದ ಆರಂಭದಲ್ಲಿ ಅಹಿಂಸೆ ಮತ್ತು ಶಾಂತಿಯುತ ಪ್ರತಿಭಟನೆಗಳ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು. ಆದರೆ ಭಾರತದ ಸ್ವಾತಂತ್ರ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರ ದಮನಕಾರಿ ನೀತಿ ಹೆಚ್ಚಾಗುತ್ತಿದ್ದಂತೆ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಮಿಲಿಟರಿ ಕಾರ್ಯಾಚರಣೆಯೇ ಸರಿ ಎಂಬ ಅಭಿಪ್ರಾಯ ಹೊಂದಿದರು. ಅವರು ಶಸ್ತ್ರಸಜ್ಜಿತ ಹೋರಾಟದಿಂದ ಮಾತ್ರವೇ ಭಾರತ ಬ್ರಿಟಿಷರಿಂದ ಮುಕ್ತಿ ಹೊಂದಲು ಸಾಧ್ಯ ಎಂದು ದೃಢವಾಗಿ ನಂಬಿದ್ದರು.
1920ರ ದಶಕದ ಕೊನೆಯಲ್ಲಿ ಬೋಸ್ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಾಯಕರಾದರು. ಆಗ ಕಾಂಗ್ರೆಸ್ ಭಾರತದ ಸ್ವಾತಂತ್ರಕ್ಕಾಗಿ ಹೋರಾಡುತ್ತಿದ್ದ ಪ್ರಮುಖ ರಾಜಕೀಯ ಪಕ್ಷವಾಗಿತ್ತು. ಸುಭಾಷರು ಕ್ಷಿಪ್ರವಾಗಿ ಪಕ್ಷದಲ್ಲಿ ಹಂತ ಹಂತವಾಗಿ ಮೇಲೆ ಬೆಳೆಯುತ್ತಾ ಸಾಗಿದರು. 1938ರಲ್ಲಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾದರು. ಆದರೆ ಸ್ವಾತಂತ್ರಕ್ಕಾಗಿ ಮಿಲಿಟರಿ ಹೋರಾಟ ನಡೆಸಬೇಕೆಂಬ ಅವರ ವಾದ ಕಾಂಗ್ರೆಸ್ ಒಳಗೇ ಭಿನ್ನಾಭಿಪ್ರಾಯ ಮೂಡಿಸಿತು. ಅವರು ಮರುವರ್ಷವೇ ಒತ್ತಾಯಪೂರ್ವಕವಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಯಿತು.

ಆದರೆ ಇದಾವುದರಿಂದಲೂ ವಿಚಲಿತರಾಗದ ಸುಭಾಷ್ ಚಂದ್ರ ಬೋಸ್ ಭಾರತದ ಸ್ವಾತಂತ್ರಕ್ಕಾಗಿ ತನ್ನ ಪ್ರಯತ್ನ ಮುಂದುವರೆಸಿದರು. ಇದಕ್ಕಾಗಿ ಫಾರ್ವರ್ಡ್ ಬ್ಲಾಕ್ ಎಂಬ ಸಂಘಟನೆಯನ್ನು ಅದಕ್ಕಾಗಿ ಸ್ಥಾಪಿಸಿದರು. ಫಾರ್ವರ್ಡ್ ಬ್ಲಾಕ್ ಭಾರತದಲ್ಲಿದ್ದ ಎಲ್ಲ ಬ್ರಿಟಿಷ್ ವಿರೋಧಿ ಪಡೆಗಳನ್ನು ಒಂದುಗೂಡಿಸುವ ಉದ್ದೇಶ ಹೊಂದಿತ್ತು. ಅದರೊಡನೆ ಸುಭಾಷರು ಬ್ರಿಟಿಷರ ವಿರುದ್ಧ ಹೋರಾಡಲು ಇಂಡಿಯನ್ ನ್ಯಾಷನಲ್ ಆರ್ಮಿ (ಎನ್’ಐಎ) ಎಂದೇ ಹೆಸರಾದ ಒಂದು ಮಿಲಿಟರಿ ಪಡೆಯನ್ನು ನಿರ್ಮಿಸಲಾರಂಭಿಸಿದರು.

1941ರಲ್ಲಿ ಸುಭಾಷ್ ಜರ್ಮನಿಗೆ ತೆರಳಿ, ಅಡಾಲ್ಫ್ ಹಿಟ್ಲರ್ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳನ್ನು ಭೇಟಿಯಾದರು. ಅಲ್ಲಿ ಭಾರತದ ಸ್ವಾತಂತ್ರಕ್ಕಾಗಿ ಜರ್ಮನಿಯ ಸಹಕಾರ ಕೇಳಿದ ಸುಭಾಷರಿಗೆ ಜರ್ಮನಿಯಿಂದ ಹಣಕಾಸಿನ ಸಹಾಯ ಮತ್ತು ಮಿಲಿಟರಿ ಸಹಕಾರ ದೊರೆಯಿತು. ಮಾತ್ರವಲ್ಲ ಬರ್ಲಿನ್’ನಲ್ಲಿ ಫ್ರೀ ಇಂಡಿಯಾ ಸೆಂಟರ್ ಮತ್ತು ಇಂಡಿಯನ್ ಲೀಜನ್ ಸ್ಥಾಪಿಸಿದರು. ಇದು ಜರ್ಮನ್ ಸೇನೆಯ ಜೊತೆಗೂಡಿ ಹೋರಾಡುತ್ತಿದ್ದ ಭಾರತೀಯ ಯೋಧರ ಒಂದು ಪಡೆಯಾಗಿತ್ತು.
1942ರಲ್ಲಿ ಅವರು ಜರ್ಮನಿಯಿಂದ ಹೊರಟು, ಜಪಾನ್’ಗೆ ತೆರಳಿದ ಅವರು, ಅಲ್ಲಿ ಗಡಿಯಾಚೆಗಿನ ಭಾರತ ಸರ್ಕಾರವನ್ನು ಸ್ಥಾಪಿಸಿದರು. ಅದನ್ನು ‘ಮುಕ್ತ ಭಾರತದ ತಾತ್ಕಾಲಿಕ ಸರ್ಕಾರ’ ಎಂದು ಕರೆದರು. ಜಪಾನಿನಲ್ಲಿ ಐಎನ್’ಎಯ ಮರುಸ್ಥಾಪನೆಗಾಗಿ ಪ್ರಯತ್ನ ನಡೆಸಿ, ಅದರ ಸೈನಿಕರಿಗೆ ತರಬೇತಿ ನೀಡಿದರು.

1944ರಲ್ಲಿ ಸುಭಾಷ್ ಚಂದ್ರ ಬೋಸ್ ಮತ್ತು ಐಎನ್’ಎ ಬ್ರಿಟಿಷ್ ಆಡಳಿತದ ಭಾರತದ ಮೇಲೆ ದಾಳಿ ನಡೆಸಿದರು. ಆದರೆ ಆ ದಾಳಿ ವಿಫಲವಾಯಿತು. ಐಎನ್’ಎ ಸೋಲು ಅನುಭವಿಸಿತು.

ಇಂತಹ ಪರಾಕ್ರಮಿ ಸುಭಾಷ್ ಚಂದ್ರ ಬೋಸ್ ಅವರು 1945ರಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅಸುನೀಗಿದರು ಎಂದು ನಂಬಲಾಗಿದೆ. ಆದರೆ ಅವರ ಸಾವಿನ ಸುತ್ತಲಿನ ವಿಚಾರಗಳು ಇಂದಿಗೂ ವಿವಾದಾತ್ಮಕ ವಿಚಾರಗಳಾಗಿಯೇ ಉಳಿದಿವೆ.

ಐಎನ್’ಎ ಸೋಲು ಅನುಭವಿಸಿದ್ದರೂ, ಸುಭಾಷ್ ಚಂದ್ರ ಬೋಸ್ ಅವರ ಹಿರಿಮೆ ಇಂದಿಗೂ ಜೀವಂತವಾಗಿದೆ. ಅವರ ಯೋಚನೆಗಳು, ಅವರ ಕಾರ್ಯತಂತ್ರಗಳು ನಂತರದ ತಲೆಮಾರಿನ, ಭಾರತದ ಸ್ವಾತಂತ್ರ ಹೋರಾಟವನ್ನು ಮುಂದುವರೆಸಿದ ರಾಷ್ಟ್ರೀಯವಾದಿಗಳಿಗೆ ಸ್ಫೂರ್ತಿ ನೀಡಿದ್ದವು. ಸುಭಾಷರನ್ನು ಇಂದಿಗೂ ಸ್ವಾತಂತ್ರಬೋಸರ ವಿಚಾರಗಳು ಸಂಕೀರ್ಣವಾದವು ಮತ್ತು ಬಹುಮುಖವನ್ನು ಹೊಂದಿದ್ದವು.
ಸ್ವಾತಂತ್ರಕ್ಕಾಗಿ ದಣಿವರಿಯದೆ ಹೋರಾಡಿದ ವರ್ಚಸ್ವಿ, ಧೈರ್ಯಶಾಲಿ ನಾಯಕ ಎಂದು ನೆನೆಯಲಾಗುತ್ತದೆ. ಆದರೆ ಅದರೊಡನೆ ಅವರೊಬ್ಬ ವಿವಾದಾತ್ಮಕ ವ್ಯಕ್ತಿಯೂ ಆಗಿದ್ದರು. ಅವರ ವಿಚಾರಗಳು ಹಲವು ಬಾರಿ ವಿಭಜಕವೂ ಆಗಿದ್ದವು. ಆದರೆ ಭಾರತದ ಸ್ವಾತಂತ್ರ ಹೋರಾಟದಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರನ್ನು ಇಂದಿಗೂ ಭಾರತೀಯರು ರಾಷ್ಟ್ರೀಯ ನಾಯಕ ಎಂದೇ ಆರಾಧಿಸುತ್ತಾರೆ.

ಇತ್ತೀಚಿನ ವರ್ಷಗಳಲ್ಲಿ, ಭಾರತ ಸರ್ಕಾರದ ಮೇಲೆ ಸುಭಾಷ್ ಚಂದ್ರ ಬೋಸ್ ಅವರ ಸಾವಿನ ಸುತ್ತಲಿನ ವಿವಾದ ಬಯಲಾಗುವಂತೆ ಆ ವಿಚಾರದ ಕುರಿತಾದ ದಾಖಲೆಗಳನ್ನು ಸಾರ್ವಜನಿಕರ ಮುಂದಿಡುವಂತೆ ಒತ್ತಾಯಗಳೂ ನಡೆದಿವೆ. ಅದರೊಡನೆ ಅವರ ಸಾವಿನ ಕುರಿತು ಪೂರ್ಣ ಪ್ರಮಾಣದ ವಿಚಾರಣೆ ನಡೆಸುವಂತೆ ಆಗ್ರಹಿಸಲಾಗಿದೆ. ಹಲವು ಜನರು ವಿಮಾನ ಅಪಘಾತದ ಕತೆಯ ಕುರಿತಾಗಿ ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಈ ಕುರಿತು ಭಾರತ ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ.

ಒಟ್ಟಾರೆಯಾಗಿ, ಸುಭಾಷ್ ಚಂದ್ರ ಬೋಸ್ ಅವರ ಜೀವನ, ಹಿರಿಮೆ ಭಾರತೀಯರಿಗೆ ಇಂದಿಗೂ ಸ್ಫೂರ್ತಿದಾಯಕವಾಗಿದೆ. ಅವರ ಕುರಿತಾಗಿ ಇಂದಿಗೂ ಭಾರತದಲ್ಲಿ ವಾದಗಳು ನಡೆಯುತ್ತಿರುತ್ತವೆ. ಭಾರತದ ಸ್ವಾತಂತ್ರ ಹೋರಾಟಕ್ಕಾಗಿ ಅವರ ತ್ಯಾಗ, ನಿಷ್ಠೆ ಎಂದಿಗೂ ಸ್ಮರಣೀಯವಾಗಿದೆ.

ಇಂದು ಭವ್ಯ ಭಾರತದ ವೀರ ಪುತ್ರ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ. ನೇತಾಜಿ ಅವರ ಜೀವನ, ಕಾರ್ಯವೈಖರಿ, ಅವರು ಕೈಗೊಳ್ಳುತ್ತಿದ್ದ ನಿರ್ಧಾರಗಳು ಸದಾ ಪ್ರೇರಣಾದಾಯಿಯಾಗಿವೆ. ಅವರ ತ್ಯಾಗವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ ದಿನವನ್ನಾಗಿ ಆಚರಿಸುತ್ತಿದೆ. ಹೋರಾಟದ ಹೀರೋ ಮತ್ತು ಹುತಾತ್ಮ ಎಂದು ನೆನಪಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  Kalahamsa Infotech private limited

Tags: Free India CentreIndian National CongressKannada News WebsiteLatest News KannadaNetaji Subhas Chandra BoseParakram Diwasಐಎನ್'ಎಜಪಾನ್ಜರ್ಮನಿಫ್ರೀ ಇಂಡಿಯಾ ಸೆಂಟರ್ಬ್ರಿಟಿಷ್ ಆಡಳಿತಭಾರತ ಸರ್ಕಾರಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸುಭಾಷ್ ಚಂದ್ರ ಬೋಸ್ಸ್ವಾತಂತ್ರ ಹೋರಾಟ
Share200Tweet125Send
Previous Post

ಗಡಿಗಳನ್ನು ಮೀರಿ ಹರಿದ ಭಕ್ತಿ | ಓಮಾನ್‌ನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

Next Post

ಮಹಿಳೆಯರು ಸ್ವತಂತ್ರ ಯೋಚನಾ ಶಕ್ತಿ ಬೆಳೆಸಿಕೊಳ್ಳಿ: ಸುರೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಹಿಳೆಯರು ಸ್ವತಂತ್ರ ಯೋಚನಾ ಶಕ್ತಿ ಬೆಳೆಸಿಕೊಳ್ಳಿ: ಸುರೇಶ್

ಮಹಿಳೆಯರು ಸ್ವತಂತ್ರ ಯೋಚನಾ ಶಕ್ತಿ ಬೆಳೆಸಿಕೊಳ್ಳಿ: ಸುರೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

March 25, 2026
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

March 25, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

March 25, 2026
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL