ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಜೀವನದಲ್ಲಿ ಯಾರಿಗೆ ಸಮಯ ಮತ್ತು ಹಣದ ಅರಿವು ಇರುತ್ತದೆಯೋ ಅವರು ಸುಲಭವಾಗಿ ಯಶಸ್ಸು ಕಾಣಲು ಸಾಧ್ಯ ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಪ್ರತಿನಿಧಿಗಳು, ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಿ.ಎಸ್.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಉದ್ಘಾಟನಾ ನುಡಿಗಳನ್ನಾಡಿದರು.
ಶುಕ್ರವಾರ ಪಟ್ಟಣದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಫೋರಂನಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೈ ಕೆಸರಾದರೆ ಬಾಯಿ ಮೊಸರಾಗಲು ಸಾಧ್ಯ ಎನ್ನುವಂತೆ ವಿದ್ಯಾರ್ಥಿಗಳಾದ ನಾವು ನಿರಂತರವಾದ ಚಟುವಟಿಕೆಯಲ್ಲಿ ತೊಡಗಿ ನಾವು ಉದ್ಯೋಗಕಾಂಕ್ಷಿಗಳಾಗದೆ ಇತರರಿಗೆ ಉದ್ಯೋಗವನ್ನು ಸೃಷ್ಟಿಸುವ ಕೌಶಲ್ಯ ನಮ್ಮದಾಗಬೇಕು, ವಿಭಿನ್ನ ಶೈಲಿಯಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ತೊಡಗುವ ಮನೋಭಾವನೆ ಮಕ್ಕಳಲ್ಲಿ ಬೆಳೆಯಬೇಕೆಂದು ಅವರು ಹೇಳಿದರು.
Also read>> ಟ್ರಾನ್ಸ್ಫಾರ್ಮರ್ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ
ಮತ್ತೋರ್ವ ಮುಖ್ಯ ಅತಿಥಿಗಳಾದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ರವೀಂದ್ರ ಮಾತನಾಡಿ, ವಾಣಿಜ್ಯ ವಿಭಾಗವು ಜಗತ್ತಿನಲ್ಲಿ ಬಹುದೊಡ್ಡ ಕ್ಷೇತ್ರವಾಗಿರುವುದರಿಂದ ಒಬ್ಬ ವಿದ್ಯಾರ್ಥಿ 35 ವಿಷಯಗಳ ಕುರಿತು ಅಧ್ಯಯನ ನಡೆಸಿ ಬಹುದೊಡ್ಡ ಕಂಪನಿಗಳ ಮಾಲೀಕರಾಗಿ ಉದ್ಯೋಗವನ್ನು ಸೃಷ್ಟಿ ಮಾಡುವಂತಹ ರಾಗುತ್ತಾರೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಪೂರ್ವ ನಿರ್ಧರಿತವಾಗಿ ವೃತ್ತಿಪರ ಕೋರ್ಸ್ ಗಳ ಬಗ್ಗೆ ಪರಿಪೂರ್ಣ ಮಾಹಿತಿ ಇದ್ದಾಗ ನಿರ್ದಿಷ್ಟವಾದ ಯೋಚನೆ ಸೃಷ್ಟಿಯಾಗಲು ಸಾಧ್ಯ ಎಂದು ಸಿಎ, ಸಿಎಸ್, ಸಿಎಂಎ ಕೋರ್ಸುಗಳ ಬಗ್ಗೆ ಮತ್ತು ಕಂಪನಿಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ. ಎಮ್ ವೀರೇಂದ್ರ ಮಾತನಾಡಿ ಮಕ್ಕಳಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ನಮ್ಮ ಸಂಸ್ಥೆಯು ಪೂರೈಸುತ್ತದೆ, ಅದನ್ನು ಉಪನ್ಯಾಸಕರು ನಿಮಗೆ ನೀಡುತ್ತಾರೆ ಅದನ್ನು ಸರಿಯಾಗಿ ಬಳಸಿಕೊಳ್ಳುವುದು ಮಕ್ಕಳ ಜವಾಬ್ದಾರಿ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅನುಷ್ಕಾ ನಾಡಿಗ್ ಪ್ರಾರ್ಥಿಸಿ, ಉಪನ್ಯಾಸಕ ಚಂದ್ರಶೇಖರ್ ಸ್ವಾಗತಿಸಿ, ಶ್ರೀಮತಿ ನಳಿನ ಪಾಟೀಲ್ ವಂದಿಸಿ, ದೇವರಾಜ್ ನಿರೂಪಿಸಿದರು.
ವೇದಿಕೆಯಲ್ಲಿ ಪ್ರಾಚಾರ್ಯ ಡಾ. ಜಿ .ಎಸ್ .ಶಿವಕುಮಾರ್, ಡಾ. ರವೀಂದ್ರ, ಡಾ. ಎಂ ವೀರೇಂದ್ರ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








