ಕಲ್ಪ ಮೀಡಿಯಾ ಹೌಸ್
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬಳಿ ಚೆಂಬು ಗ್ರಾಮದಲ್ಲಿ ಬಾಲಕನೊಬ್ಬ ಜೋಕಾಲಿ ಆಟವಾಡುತ್ತಿರುವಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡು ಸಾವನ್ನಪಿರುವ ಘಟನೆ ನಡೆದಿದೆ.
ಪನೇಡ್ಕ ತಾರಾಕುಮಾರ ಎಂಬುವರ ಮಗ ಭರತ್ (10) ಮೃತಪಟ್ಟ ಬಾಲಕ ಎಂದು ತಿಳಿದು ಬಂದಿದೆ.
ಬುಧವಾರ ಸಂಜೆ ಮನೆಯಲ್ಲಿ ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಈ ಘಟನೆ ನಡೆದ್ದು, ಬಾಲಕನ ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post