Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ ಬಹುಶ್ರುತ ಪ್ರತಿಭಾನ್ವಿತೆ ಸುನಿತಾ ರತೀಶ್

ಜಗನ್ಮೋಹನ ಅರಮನೆಯಲ್ಲಿ ಜ.14ರ ಸಂಜೆ ಕಾರ್ಯಕ್ರಮ | ಮೈಸೂರಿನ ನಾದ ವಿದ್ಯಾಲಯ ಸಂಸ್ಥೆ ಆಯೋಜನೆ | ವಿದುಷಿ ಮಿತ್ರಾ ನವೀನ್ ಮಾರ್ಗದರ್ಶನ

January 8, 2024
in Special Articles, ಮೈಸೂರು
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಕೌಸಲ್ಯಾ ರಾಮ  |

ಸಾಂಸ್ಕೃತಿಕ ರಾಜಧಾನಿ ಮೈಸೂರಿನ ನಾದ ವಿದ್ಯಾಲಯ ಅಕಾಡೆಮಿ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ ವಿದುಷಿ ಮಿತ್ರಾ ನವೀನ್ ಅವರ ಶಿಷ್ಯೆ ಸುನಿತಾ ರತೀಶ್ ಭರತನಾಟ್ಯ #Bharatanatya ರಂಗಪ್ರವೇಶಕ್ಕೆ ಅಣಿಯಾಗಿದ್ದಾರೆ.

ಮೈಸೂರಿನ ಜಗನ್ಮೋಹನ ಅರಮನೆ #JaganmanaPalace ಸಭಾಂಗಣದಲ್ಲಿ ಜ. 14ರ ಸಂಜೆ 5ಕ್ಕೆ ಆಯೋಜನೆಗೊಂಡಿರುವ ರಂಗಪ್ರವೇಶ ಕಾರ್ಯಕ್ರಮಕ್ಕೆ ಮೈಸೂರು #Mysore ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್, ಶಾಸಕ ಜಿ.ಟಿ. ದೇವೇಗೌಡ, ಶಾಸಕ ಹರೀಶ ಗೌಡ, ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಡಾ. ಎಂ.ಕೆ. ಪೋತರಾಜ್, ಮೈಸೂರು ಮೆಡಿಕಲ್ ಕಾಲೇಜು ನಿರ್ದೇಶಕಿ ಡಾ. ಆರ್.ಕೆ. ದಾಕ್ಷಾಯಿಣಿ, ನೂಪುರ ಟ್ರಸ್ಟ್ ನಿರ್ದೇಶಕ ಮತ್ತು ನಾಟ್ಯಾಚಾರ್ಯ ಪ್ರ. ಕೆ. ರಾಮಮೂರ್ತಿ ರಾವ್ ಮತ್ತು ಉದ್ಯಮಿ ರತೀಶ್ ಸಾಕ್ಷಿಯಾಗಲಿದ್ದಾರೆ.

ಹಿಮ್ಮೇಳ: ಕಲಾವಿದೆ ಸುನಿತಾ ರತೀಶ್ ಭರತನಾಟ್ಯ ರಂಗಪ್ರವೇಶವು #Rangapravesha ಗುರು ಮಿತ್ರಾ ನವೀನ್ ಅವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿಬರಲಿರುವುದು ವಿಶೇಷ. ವಿದ್ವನ್ಮಣಿಗಳ ತಂಡವೇ ಹಿಮ್ಮೇಳದಲ್ಲಿ ವಿಶೇಷ ಸಹಕಾರ ನೀಡಲಿದೆ. ಗುರು ಮಿತ್ರಾ ನವೀನ್ ನಟುವಾಂಗ, ವಿದ್ವಾನ್ ಎಂ. ಎಸ್. ನವೀನ್ ಅಂದಗಾರ್ ಗಾಯನ, ವಿದ್ವಾನ್ ಜಿ.ಎಸ್. ನಾಗರಾಜ್ ಮೃದಂಗ ಮತ್ತು ವಿದ್ವಾನ್ ವಿವೇಕ ಕೃಷ್ಣ ಕೊಳಲು ಪಕ್ಕವಾದ್ಯಗಳು ನೃತ್ಯ ಪ್ರಸ್ತುತಿಯ ಅಂದವನ್ನು ನೂರ್ಮಡಿಸಲಿವೆ.
ವೃತ್ತಿಯೊಂದಿಗೆ ಪ್ರವೃತ್ತಿ
ಸುನಿತಾ ರತೀಶ್ ಕೇವಲ ಒಬ್ಬ ಕಲಾವಿದೆ ಮಾತ್ರವಲ್ಲ. ಬಹುಶ್ರುತ ಪ್ರತಿಭಾನ್ವಿತೆ ಎಂದರೆ ಅತಿಶಯೋಕ್ತಿ ಆಗಲಾರದು. ಸಾಮಾನ್ಯವಾಗಿ ಒಬ್ಬರಿಗೆ ಒಂದು ಅಥವಾ ಎರಡು ಕಲೆಗಾರಿಕೆಗಳು ಒಲಿಯುವುದು ಎಂದರೆ ಅದು ಪುಣ್ಯವೇ ಸರಿ. ಆದರೆ ಕಲಾ ಸರಸ್ವತಿ ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಂಡು ಅವರಿಗೆ ಬಹುಮುಖೀ ಪ್ರತಿಭೆಗಳನ್ನು ದಯಪಾಲಿಸಿರುತ್ತಾಳೆ. ಅಂಥವರ ಸಾಲಿನಲ್ಲಿ ನಿಲ್ಲುವ ಯೋಗ ಮತ್ತು ಯೋಗ್ಯತೆ ಎರಡಕ್ಕೂ ಭಾಜನರಾಗಿರುವುದು ಸುನೀತಾ ವಿಶೇಷತೆ.

ಹೌದು. ಸುನಿತಾ ಸದ್ಯ ತ್ರಿಶೂರ್ ಮೂಲದ ಜಿ.ಡಬ್ಲುೃ. ಇನ್ನೋವೇಷನ್ಸ್ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇಂಜಿನಿಯರ್. ಆನ್‌ಲೈನ್ ವೃತ್ತಿಯ ನಡುವೆಯೇ ಪ್ರವೃತ್ತಿಯನ್ನು ಜತನವಾಗಿ ಕಾಪಾಡಿಕೊಂಡ ಚಾಣಾಕ್ಷೆ. ವೃತ್ತಿಪರತೆ ಮತ್ತು ಕಲಾ ನೈಪುಣ್ಯವನ್ನು ಹದವಾಗಿ ಕಾಪಾಡಿಕೊಂಡು ಬರುವುದು ಒಂದು ಛಾಲೆಂಜ್. ಅದರಲ್ಲಿ ಸಮತ್ವ ಪಾಲಿಸಿಕೊಂಡು ಬಂದಿರುವುದು ಸುನಿತಾ ಹೆಗ್ಗಳಿಕೆ. ಭರತನಾಟ್ಯ #Bharatanatya ಪ್ರೀ ವಿದ್ವತ್ ಪರೀಕ್ಷೆಗೆ ತಾಲೀಮು ನಡೆಸುತ್ತಿರುವ ಸಂದರ್ಭದಲ್ಲೇ ಈಕೆ ಮೈಸೂರಿನಲ್ಲಿ ರಂಗ ಪ್ರವೇಶಕ್ಕೂ ಸಿದ್ಧವಾಗುತ್ತಿರುವುದು ಗಮನಾರ್ಹ.

ವ್ಯಕ್ತಿತ್ವ ಪರಿಚಯ
ಮೈಸೂರು ಮೂಲದ ಅನಿತಾ ಮತ್ತು ಸುರೇಶ ಬಾಬು ಅವರ ಹೆಮ್ಮೆಯ ಪುತ್ರಿ ಸುನಿತಾಗೆ ಬಾಲ್ಯದಿಂದಲೂ ಕಲಾಸಕ್ತಿ ಹೆಚ್ಚು. ಅಮ್ಮ ಅನಿತಾಗೆ ನೃತ್ಯ ಕಲಿಯುವ ಆಸಕ್ತಿ ಇತ್ತಾದರೂ ಅದು ಸಾಧ್ಯವಾಗಲಿಲ್ಲ. ಮಗಳು ಕಲಿಯಲೇಬೇಕು ಎಂಬ ಒತ್ತಾಸೆ ಅವರಲ್ಲಿದ್ದ ಕಾರಣ ಈಕೆ ಕಲಾರಂಗಕ್ಕೆ ಹೆಜ್ಜೆ ಇಡಲು ಮೂಲ ಸ್ಫೂರ್ತಿ ಆಗಿ ನೆಲೆಯಾಯಿತು. ಮೈಸೂರಿನ ಆಳ್ವಾರ್ ಕಲಾಭವನದಲ್ಲಿ ಅಮ್ಮನೊಂದಿಗೆ ಎಳವೆಯಲ್ಲಿ ನೋಡಿದ ಭರತನಾಟ್ಯ ಪ್ರದರ್ಶನವೊಂದು ಕಲಿಕಾಸಕ್ತಿ ಹೊಮ್ಮಿಸಿತು ಎಂದು ನೆನಪಿಸಿಕೊಳ್ಳುತ್ತಾರೆ ಸುನಿತಾ.
ಹಿಂದಿರುಗಿ ನೋಡಿದ್ದೇ ಇಲ್ಲ
ವಿದುಷಿ ನಯನಾ ಶಿವರಾಂ ಬಳಿ ಎಳವೆಯಲ್ಲೇ ನೃತ್ಯಾಭ್ಯಾಸ ಆರಂಭಿಸಿ ಜ್ಯೂನಿಯರ್ ಪರೀಕ್ಷೆ ಉತ್ತೀರ್ಣರಾದ ಸುನಿತಾ ಹಿಂದಿರುಗಿ ನೋಡಿದ್ದೇ ಇಲ್ಲ. ಸಮಯ ಮತ್ತು ಶ್ರಮ ಎರಡನ್ನೂ ಕಲೆಗೆ ಮೀಸಲಿಟ್ಟ ಸುನಿತಾ, ಎಸ್‌ಬಿಆರ್‌ಆರ್ ಮಹಾಜನ ಕಾಲೇಜಿನಲ್ಲಿ ಬಿಎಸ್ಸಿ ಪೂರ್ಣಗೊಳಿಸಿ, ಮೈಸೂರಿನ ವಿಟಿಯು ಕಾಲೇಜಿನಲ್ಲಿ ಎಂಸಿಎ ಸ್ನಾತಕೋತ್ತರ ಪದವಿ ವಿಭೂಷಿತರಾದರು. ವಿದುಷಿ ಮಿತ್ರಾ ನವೀನ್ ಅವರಲ್ಲಿ ನರ್ತನ ಪಾಠ ಮುಂದುವರಿಸಿ, ಸೀನಿಯರ್ ಪರೀಕ್ಷೆ, ತದನಂತರ ಪ್ರೀ ವಿದ್ವತ್ ವರೆಗೆ ಅಭ್ಯಾಸ ಮುನ್ನಡೆಸಿದ್ದಾರೆ. ಗಾಯನದಲ್ಲೂ ಆಸಕ್ತಿ ಹೊಂದಿದ್ದ ಈಕೆ ವಿದುಷಿ ಮೇಘಮಾಲಾ ಸ್ವಾಮಿ ಅವರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಲಿತು, ಜೂನಿಯರ್ ಪರೀಕ್ಷೆಯಲ್ಲೂ ಪಾರಮ್ಯ ಮೆರೆದಿದ್ದಾರೆ. ಸದ್ಯ ಪೃಥ್ವಿ ಭಾರದ್ವಾಜ್ ಶಿಷ್ಯತ್ವ ಪಡೆದು ಸೀನಿಯರ್ ಹಂತದ ಗಾಯನಾಭ್ಯಾಸ ನಡೆಸುತ್ತಿದ್ದಾರೆ. ಆಕಾಶವಾಣಿ ಮೈಸೂರು ಸೇರಿದಂತೆ ವಿವಿಧ ಪ್ರತಿಷ್ಠಿತ ವೇದಿಕೆಗಳಲ್ಲಿ ಇವರ ಕಂಠಸಿರಿ ವಿಜೃಂಭಿಸಿದೆ. ಅನೇಕ ಸ್ಪರ್ಧೆಗಳಲ್ಲಿ ಬಹುಮಾನವೂ ಸಂದಿದೆ.

ವಿವಿಧ ಉತ್ಸವಗಳಲ್ಲಿ ಕಲಾಭಿವ್ಯಕ್ತಿ
ಶಾಲಾ, ಕಾಲೇಜು ಹಂತದಲ್ಲಿ (ನಿರ್ಮಲಾ ಶಾಲೆ, ಸದ್ವಿದ್ಯಾ ಮತ್ತು ಮಹಾಜನ್ಸ್ ಶಿಕ್ಷಣ ಸಂಸ್ಥೆ) ಸುನಿತಾ ಅವರ ನೃತ್ಯಾಭಿನಯಕ್ಕೆ ಹಲವು ವೇದಿಕೆ ದೊರೆತು, ಬಹುಮಾನ ಮತ್ತು ಪುರಸ್ಕಾರ ಒಲಿದು ಬಂದಿವೆ. ರೋಟರಿ, ಸಿಎಫ್‌ಟಿಆರ್‌ಐ, ರೈಲ್ವೆ ವಿಭಾಗೀಯ ಸಮ್ಮೇಳನ, ಟಿ.ನರಸೀಪುರದ ಕುಂಭಮೇಳ, ಮಲೆ ಮಹದೇಶ್ವರ ಬೆಟ್ಟದ ಉತ್ಸವ, ಮೈಸೂರು ಯುವ ದಸರಾ, ಹನುಮ ಜಯಂತಿ, ಜನ್ಮಾಷ್ಟಮಿ ವಿಶೇಷ ಸಂದರ್ಭದ ಕಾರ್ಯಕ್ರಮದಲ್ಲಿ ಸುನಿತಾ ಅವರ ನೃತ್ಯಾಭಿನಯ ಧನ್ಯತೆ ಮೆರೆದಿದೆ. ನೂಪುರ ಉತ್ಸವ, ದಾಂಡಿಯಾ ಮತ್ತು ನಾದ ನೃತ್ಯೋಪಾಸನಾ ಇವರ ಕಲಾಭಿವ್ಯಕ್ತಿಯನ್ನು ವಿಜೃಂಭಿಸಿದೆ.

ಗುರುವಿನ ಅನುಸರಣೆ
ಗುರು ಮಿತ್ರಾ ಅವರ ಮಾರ್ಗದರ್ಶನದಲ್ಲಿ ಇವರು ಹತ್ತಾರು ನೃತ್ಯ ನಾಟಕದಲ್ಲಿ ಅಭಿನಯಿಸಿ ಪ್ರೇಕ್ಷಕರಿಂದ ಶಹಬ್ಬಾಸ್ ಗಿರಿ ಪಡೆದಿದ್ದಾರೆ. ಆದಿಪೂಜ್ಯದ್ಲಿ ಕುಬೇರನಾಗಿ, ಸಪ್ತ ತಾಂಡವದಲ್ಲಿ ಮೋಹಿನಿಯಾಗಿ, ವಿಲಾಸದಲ್ಲಿ ಕೃಷ್ಣನಾಗಿ ದಶಾವತಾರದಲ್ಲಿ ರಾಮನಾಗಿ, ಶಬ್ದಂ ಮತ್ತು ವಸುದೈವ ಕುಟುಂಬಕಂ ದಲ್ಲಿ ಮಲಯಾಧ್ವಜ ಪಾಂಡ್ಯನಾಗಿ ಅಮೋಘ ಅಭಿನಯ ತೋರಿದ್ದು ಉಲ್ಲೇಖನೀಯ. ಇವೆಲ್ಲವೂ ಗುರು ಮಿತ್ರಾ ಅವರೊಂದಿಗಿನ ಅನುಸರಣೆ,  ಸಖ್ಯಭಾವ ಮತ್ತು ಕಲಾಬದ್ಧತೆಗೆ ಸಾಕ್ಷಿಯಾಗಿವೆ.
Kalahamsa Infotech private limitedವಿನಯವೇ ಭೂಷಣ
ಇಷ್ಟು ಮಾತ್ರವಲ್ಲ, ಚಿತ್ರಕಲೆ, ಗಿಟಾರ್ ಮತ್ತು ವಯೋಲಿನ್ ವಾದನ, ಯೋಗ, ನಿರೂಪಣೆ ಮತ್ತು ಫೋಟೋಗ್ರಾಫಿ- ಇತ್ಯಾದಿ ಸುನಿತಾ ಅವರ ಬಿಡುವಿನ ವೇಳೆಯ ಹವ್ಯಾಸಗಳು ಎಂದು ಹೇಳಲು ಹೆಮ್ಮೆ ಎನಿಸುತ್ತದೆ. ಪೂಜಾ ಕುಣಿತ, ಜಾನಪದ ನೃತ್ಯ ಪ್ರಸ್ತುತಿ ಪ್ಯಾಷನ್ ಆಗಿವೆ. ಜೀವನದ ಒಂದು ಘಳಿಗೆಯನ್ನೂ ಇವರು ವ್ಯರ್ಥ ಮಾಡಲೇ ಜೇನ್ನೊಣದಂತೆ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಂಡು ‘ಮಧು’ ಸಂಗ್ರಹಿಸಿ, ಆತ್ಮಾನಂದ ಹೊಂದುವ ಪ್ರವೃತ್ತಿ ರೂಢಿಸಿಕೊಂಡಿದ್ದಾರೆ. ಇದರ ಕೀರ್ತಿ ಹೆತ್ತವರಿಗೆ ಮತ್ತು ಗುರುಗಳಿಗೆ ಸಮರ್ಪಣೆ ಮಾಗಬೇಕು ಎಂದು ಧನ್ಯತೆಯಿಂದ ಹೇಳುತ್ತಾರೆ. ಒಲಿದ ಹತ್ತಾರು ವಿದ್ಯೆಗೆ ಇಂತಹಾ ‘ವಿನಯ’ವೇ ಭೂಷಣವಾಗಿದೆ.
ತುಂಬು ಕುಟುಂಬದ ಗೃಹಿಣಿ
ಪ್ರಸ್ತುತ ದಿನಮಾನದಳಲ್ಲಿ ಪತಿ-ಪತ್ನಿ ಜತೆಗಿರುವುದೇ ಜಾಯಿಂಟ್ ಫ್ಯಾಮಿಲಿ ಎಂಬಂತಾಗಿದೆ! ಆದರೆ ಸುನಿತಾ ಬಾಲ್ಯದಿಂದಲೂ ಒಟ್ಟು ಕುಟುಂಬದ ಜೀವನ ಪದ್ಧತಿಯಲ್ಲಿ ಬೆಳೆದುಬಂದವರು. ಫಾರ್ಮಸಿ ಉದ್ಯಮಿ ರತೀಶ್ ಅವರನ್ನು ವಿವಾಹವಾದ ನಂತರವೂ ಅವರು ತುಂಬು ಕುಟುಂಬದಲ್ಲೇ ವಾಸವಿದ್ದಾರೆ. ಭಾರತೀಯ ಪರಂಪರೆಯ ದ್ಯೋತಕವಾದ ಇಂಥ ತುಂಬು ಕುಟುಂಬಗಳನ್ನು ಇಂದು ಕಾಣುವುದೇ ಅಪರೂಪ ಆಗಿರುವಾಗ ಅತ್ತೆ, ಮಾವ, ಮೈದುನ, ನಾದಿನಿಯವರೊಂದಿಗೆ ಸಹಬಾಳ್ವೆ ನಡೆಸುತ್ತಲೇ ಸೈ ಎನಿಸಿಕೊಂಡು ಕಲಾಸಾಧನೆ ಮಾಡುತ್ತಿರುವುದು ಸುನಿತಾ ಅವರ ಅಹೋಭಾಗ್ಯ. ಹತ್ತು ಹಲವು ಸ್ತರದಲ್ಲಿ ಇದು ಮೈಸೂರಿನ ಮಾದರಿ ‘ಸಮಗ್ರ ಕುಟುಂಬ’ ವೇ ಸರಿ.

ನೃತ್ಯ ವಿದ್ಯಾಲಯ ಆರಂಭಿಸುವ ಸಂಕಲ್ಪ
ಸುನಿತಾ ಕೆಲ ವರ್ಷ ಸೇಂಟ್ ಜೋಸೆಫ್ ಶಿಕ್ಷಣ ಸಂಸ್ಥೆಯಲ್ಲಿ ಭರತನಾಟ್ಯ ಶಿಕ್ಷಕಿಯಾಗಿಯೂ ಸೇವೆ ಮಾಡಿದ್ದರು. ಸದ್ಯ ಇರುವ ಸಾಫ್ಟ್ ವೇರ್ ಡವಲಪ್‌ಮೆಂಟ್ ಇಂಜಿನಿಯರ್ ವೃತ್ತಿಯಲ್ಲಿ ವಾರಕ್ಕೆ ಎರಡು ದಿನ ರಜೆ ಇರುತ್ತದೆ. ಹಾಗಾಗಿ ಮುಂಬರುವ ದಿನಗಳಲ್ಲಿ ನೃತ್ಯಾ ವಿದ್ಯಾಲಯ ಆರಂಭಿಸಿ ನೂರಾರು ಮಕ್ಕಳಿಗೆ ಕಲೆಯನ್ನು ಧಾರೆ ಎರೆಯಬೇಕು ಎಂಬುದು ಸುನಿತಾ ಅವರ ಸಂಕಲ್ಪವಾಗಿದೆ. ಭಾರತೀಯ ಕಲಾಪರಂಪರೆ ಎಂಬ ಗಂಗೆ ಸುಲಲಿತವಾಗಿ ಹರಿಯಲು ಇಂಥ ನವ, ಯುವ ಕಲಾ ಸ್ವರೂಪಿಗಳ ಸೇವೆ ಸಮಾಜಕ್ಕೆ ಅತ್ಯಗತ್ಯವಾಗಿ ಬೇಕಾಗಿದೆ. ಇದು ಅನಿವಾರ್ಯವೂ ಹೌದು. ಅರ್ಥಪೂರ್ಣವೂ ಹೌದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BharatanatyaJaganmana PalaceKannada News WebsiteLatest News KannadamysoreRangapraveshaSpecial Articleಕಲಾಸಾಧನೆದಶಾವತಾರಪ್ರತಿಭಾನ್ವಿತೆಭರತನಾಟ್ಯಮೈಸೂರುರಂಗಪ್ರವೇಶವಿಶೇಷ ಲೇಖನಸುನಿತಾ ರತೀಶ್
Previous Post

ಜ.27ರಂದು ಎಮ್‌ಎಲ್‌ಸಿ ರುದ್ರೇಗೌಡರ ಸಾಧನೆ ಆಧಾರಿತ ದಿ ಐರನ್‌ ಮ್ಯಾನ್‌ ಪುಸ್ತಕ ಬಿಡುಗಡೆ

Next Post

ಎಸ್’ಟಿ ಪ್ರವರ್ಗಕ್ಕೆ ಕಾಡುಗೊಲ್ಲ ಸಮುದಾಯ: ಕೇಂದ್ರ ಸಚಿವ ಮುಂಡಾ ಜತೆ ದೇವೇಗೌಡ ಚರ್ಚೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image curtesy: Internet

ಎಸ್'ಟಿ ಪ್ರವರ್ಗಕ್ಕೆ ಕಾಡುಗೊಲ್ಲ ಸಮುದಾಯ: ಕೇಂದ್ರ ಸಚಿವ ಮುಂಡಾ ಜತೆ ದೇವೇಗೌಡ ಚರ್ಚೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!