ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಗೆ ಪೂರ್ಣ ತಡೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಕೆಲವು ಅಂಶಗಳಿಗೆ ಮಾತ್ರ ತಡೆ ನೀಡಿದೆ.
ಎ.ಜಿ. ಮನೀಶ್ ಅವರಿದ್ದ ನ್ಯಾಯಪೀಠ, ಪ್ರತಿಯೊಂದು ಸೆಕ್ಷನ್ ಸವಾಲನ್ನು ಮೇಲ್ನೋಟಕ್ಕೆ ಪರಿಗಣಿಸಿದ್ದು, ಇಡೀ ಕಾಯ್ದೆಗೆ ತಡೆ ನೀಡಬೇಕು ಎಂಬುದು ಕಂಡುಬಂದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಅವರಿದ್ದ ನ್ಯಾಯಪೀಠ ಮಧ್ಯಂತರ ಆದೇಶವನ್ನು ಪ್ರಕಟಿಸಿದೆ.
ಹಕ್ಕುಗಳನ್ನು ನಿರ್ಧರಿಸುವ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳನ್ನು ನೀಡುವುದು ಅಧಿಕಾರ ಪ್ರತ್ಯೇಕಿರಕರಣಕ್ಕೆ ವಿರುದ್ಧವಾಗಿದ್ದು, ನಾಗರೀಕರ ಹಕ್ಕನ್ನು ಕಾರ್ಯಾಂಗ ನಿರ್ಧರಿಸಲಾಗದು ಎಂದು ಮುಖ್ಯ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.
ಯಾವೆಲ್ಲಾ ಸೆಕ್ಷನ್’ಗೆ ತಡೆ?
ಇಡೀ ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಿರಾಕರಿಸಿರುವ ನ್ಯಾಯಾಲಯ, ಆಸ್ತಿಯನ್ನು ವಕ್ಫ್ ಮಾಡಬೇಕಿದ್ದರೆ ವ್ಯಕ್ತಿಯೊಬ್ಬ ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷಗಳಿಂದ ಅನುಸರಿಸುತ್ತಿರಬೇಕು ಎನ್ನುವ ಸೆಕ್ಷನ್ 3(1)(ಆರ್)ಗೆ ಸೇರಿದಂತೆ ಕೆಲವೊಂದು ಅಂಶಗಳಿಗೆ ಮಾತ್ರ ತಡೆ ನೀಡಿದೆ.
- ಸೆಕ್ಷನ್ 3ಸಿ(3)ರ ಒಂದು ವೇಳೆ ಆಸ್ತಿಯು ಸರ್ಕಾರಿ ಜಮೀನು ಎನ್ನುವುದನ್ನು ನಿಯೋಜಿತ ಅಧಿಕಾರಿ ನಿರ್ಧರಿಸಿದರೆ, ಈ ಬಗ್ಗೆ ಕಂದಾಯ
- ದಾಖಲೆಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎನ್ನುವ ವಿಚಾರ
- ಸೆಕ್ಷನ್ 3ಸಿ(4)ರ ನಿಯೋಜಿತ ಅಧಿಕಾರಿ ಸಲ್ಲಿಸಿದ ವರದಿ ಆಧರಿಸಿ, ದಾಖಲೆಗಳಲ್ಲಿ ಅಗತ್ಯ ಬದಲಾವಣೆ ಮಾಡಬೇಕು ಎಂದು ವಕ್ಫ್ ಬೋರ್ಡ್ ಗೆ ರಾಜ್ಯ ಸರ್ಕಾರ ಸೂಚಿಸಬೇಕು ಎನ್ನುವ ವಿಚಾರ
- ಸೆಕ್ಷನ್ 3ಸಿ(2)ರ ಆಸ್ತಿ ಅತಿಕ್ರಮಣವಾಗಿದೆಯೇ ಎಂದು ನಿಯೋಜಿತ ಅಧಿಕಾರ ವರದಿ ಸಲ್ಲಿಸುವವರಿಗೆ ಆಸ್ತಿಯನ್ನು ವಕ್ಫ್ ಎಂದು ಪರಿಗಣಿಸಲಾಗದು ಎನ್ನುವ ವಿಚಾರ
ಈ ವಿಚಾರಕ್ಕೆ ತಡೆಗೆ ನಿರಾಕರಣೆ
ತಿದ್ದುಪಡಿ ಕಾಯ್ದೆಯಂತೆ ವಕ್ಫ್ ಬೋರ್ಡ್’ನಲ್ಲಿ ಮುಸ್ಲಿಂ ಅಲ್ಲದ ವ್ಯಕ್ತಿಯನ್ನು ಸದಸ್ಯರಾಗಿ ನೇಮಕ ಮಾಡುವುದಕ್ಕೆ ನ್ಯಾಯಾಲಯ ತಡೆ ನೀಡಲು ನಿರಾಕರಿಸಿದೆ. ಆದರೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಸ್ಲಿಂ ಆಗಿರಬೇಕು ಎಂದು ಸ್ಪಷ್ಟಪಡಿಸಿದೆ.
ಇದೇ ವೇಳೆ, ಕೇಂದ್ರ ವಕ್ಫ್ ಕೌನ್ಸಿಲ್’ನಲ್ಲಿ 4 ಮಂದಿಗಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದಿದ್ದು, ರಾಜ್ಯ ವಕ್ಫ್ ಬೋರ್ಡ್’ಗಳಲ್ಲಿ ಈ ಸಂಖ್ಯೆ 3 ಮೀರಬಾರದು ಎಂದು ಸೂಚಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post