No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತೀಯ ಸೇನೆ ದಾಳಿಗೆ ಮ್ಯಾನ್ಮಾರ್ ಗಡಿಯಲ್ಲಿ ಉಗ್ರರ 12 ಕ್ಯಾಂಪ್ ಪುಡಿಪುಡಿ?

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದು ಇದೇ ದಾಳಿ ವಿಚಾರವೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2019
in ರಾಷ್ಟ್ರೀಯ
0
ಭಾರತೀಯ ಸೇನೆ ದಾಳಿಗೆ ಮ್ಯಾನ್ಮಾರ್ ಗಡಿಯಲ್ಲಿ ಉಗ್ರರ 12 ಕ್ಯಾಂಪ್ ಪುಡಿಪುಡಿ?
Share on FacebookShare on TwitterShare on WhatsApp

ನವದೆಹಲಿ: ಪಾಕಿಸ್ಥಾನದ ಬಾಲಾಕೋಟ್ ಮೇಲೆ ಭಾರತೀಯ ವಾಯುಸೇನೆ ನಡೆಸಿದ ಭಾರೀ ದಾಳಿಗೆ ಜೈಷ್ ಉಗ್ರ ಸಂಘಟನೆಯ ಸುಮಾರು 300ಕ್ಕೂ ಅಧಿಕ ಉಗ್ರರು ಬಲಿಯಾದ ಬೆನ್ನಲ್ಲೇ, ಮ್ಯಾನ್ಮಾರ್ ಗಡಿಯಲ್ಲೂ ಸಹ ಸೇನೆ ಭಾರೀ ದಾಳಿ ನಡೆಸಿರುವ ಕುರಿತಾಗಿ ವರದಿಯಾಗಿದೆ.

ಇಂತಹುದ್ದೊಂದು ಬೃಹತ್ ಕಾರ್ಯಾಚರಣೆಯನ್ನು ಭಾರತೀಯ ಸೇನೆ ಸದ್ದಿಲ್ಲದೇ ನಡೆಸಿದೆ ಎನ್ನಲಾಗಿದ್ದು, ಸೇನೆಯ ಅಬ್ಬರಕ್ಕೆ ಉಗ್ರರ ಸುಮಾರು 12 ಕ್ಯಾಂಪ್’ಗಳು ಪುಡಿ ಪುಡಿಯಾಗಿದ್ದು, ನೂರಾರು ಉಗ್ರರು ನಾಯಿನರಿಗಳಂತೆ ಸತ್ತಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಅಧಿಕೃತ ಮೂಲಗಳಿಂದ ಖಚಿತಗೊಳ್ಳದೇ ಇದ್ದರೂ ಇಂತಹುದ್ದೊಂದು ಸುದ್ದಿ ಅಂತಾರಾಷ್ಟ್ರೀಯ ಮಾಧ್ಯಮವೊಂದರಲ್ಲಿ ಸುದ್ದಿಯಾಗಿದೆ.
ಇನ್ನು ಈ ಕುರಿತಂತೆ ಇಂಡಿಯಾ ಟುಡೆ ಸಹ ವರದಿ ಮಾಡಿದ್ದು ಇದರಂತೆ, ಭಾರತ, ಮ್ಯಾನ್ಮಾರ್ ಸೇನೆಯು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮಿಜೋರಾಂ ಗಡಿ ಪ್ರದೇಶದಲ್ಲಿ ನಿರ್ಮಾಣವಾಗಿದ್ದ 12ಕ್ಕೂ ಹೆಚ್ಚು ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಈ ಮೂಲಕ 3ನೆಯ ಸರ್ಜಿಕಲ್ ಸ್ಟ್ರೈಕ್ ಅನ್ನು ಭಾರತೀಯ ಸೇನೆ ಸದ್ದಿಲ್ಲದೇ ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎನ್ನಲಾಗಿದೆ.

ಫೆ.17 ರಿಂದ ಮಾರ್ಚ್ 2ರ ಅವಧಿಯಲ್ಲಿ ಈ ದಾಳಿ ನಡೆಸಲಾಗಿದ್ದು, ಮ್ಯಾನ್ಮಾರ್ ನಲ್ಲಿ ತಲೆ ಎತ್ತಿದ್ದ ಅರಾಕನ್ ಆರ್ಮಿ ಉಗ್ರರ ನೆಲೆಗಳನ್ನು ನಾಶ ಪಡಿಸಲಾಗಿದೆ. ಅರಾಕನ್ ಆರ್ಮಿಗೆ ಕಚಿನ್ ಇಂಡಿಪೆಂಡೆನ್ಸ್ ಆರ್ಮಿ(ಕೆಐಎ) ಬೆಂಬಲ ನೀಡಿತ್ತು. ಈ ಎರಡು ಉಗ್ರ ಸಂಘಟನೆಗಳು ಮ್ಯಾನ್ಮರ್ ನಲ್ಲಿ ವಿಧ್ವಸಂಕ ಕೃತ್ಯಗಳನ್ನು ನಡೆಸುತ್ತಿದ್ದವು ಎಂದು ವರದಿಯಾಗಿದೆ.

ಭಾರತ ಯೋಜನೆಯನ್ನು ತಡೆಯಲು ಅರಾಕನ್ ಉಗ್ರರು ದೇಶದೊಳಗೆ ನುಸುಳಲು ಹುನ್ನಾರ ನಡೆಸುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಆಧಾರಿಸಿ ಭಾರತ ಈ ಕಾರ್ಯಾಚರಣೆಯನ್ನು ನಡೆಸಿದೆ. ಭಾರತದ ಯೋಜನೆಯನ್ನು ತಡೆಯಲು ಅರಾಕನ್ ಉಗ್ರರು ದೇಶದೊಳಗೆ ನುಸುಳಲು ಹುನ್ನಾರ ನಡೆಸುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಆಧಾರಿಸಿ ಭಾರತೀಯ ಸೇನೆ ಈ ಕಾರ್ಯಾಚರಣೆಯನ್ನು ನಡೆಸಿದೆ. ಚೀನಾದ ಗಡಿ ಪ್ರದೇಶದಿಂದ ಭಾರತಕ್ಕೆ ನುಸುಳಲು ಉಗ್ರರು ಸ್ಕೆಚ್ ರೂಪಿಸಿದ್ದರು. ಈ ಬಗ್ಗೆ ಭಾರತದ ಗುಪ್ತಚರ ಇಲಾಖೆಗೆ ಖಚಿತ ಲಭ್ಯವಾಗಿತ್ತು. ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಕಾರ್ಯಾಚರಣೆ ರೂಪರೇಷೆ ರೂಪಿಸಿದ ಸೇನೆ ಕಾರ್ಯಾಚರಣೆಯ ಮೊದಲ ಭಾಗವಾಗಿ ಮಿಜೋರಾಂ ಗಡಿ ಪ್ರದೇಶದಲ್ಲಿ ಹೊಸದಾಗಿ ನಿರ್ಮಾಣ ಮಾಡಿದ್ದ ಉಗ್ರರ ನೆಲೆಗಳನ್ನು ನಾಶ ಪಡಿಸಲಾಗಿದ್ದು, ಬಳಿಕ ನಾಗಾ ಉಗ್ರರ ಕೇಂದ್ರಗಳನ್ನು ಧ್ವಂಸ ಮಾಡಲಾಗಿದೆ. ಅರುಣಾಚಲ ಪ್ರದೇಶದಿಂದ 1 ಸಾವಿರ ಕಿಮೀ ದೂರದಲ್ಲಿದ್ದ ಉಗ್ರರ ಕೇಂದ್ರಗಳನ್ನು ನಾಶ ಪಡಿಸಲಾಗಿದೆ. 2 ವಾರದ ಕಾಲ ನಡೆದ ಈ ಆಪರೇಷನ್ ಮಾರ್ಚ್ 2 ರಂದು ಅಂತ್ಯವಾಗಿದೆ ಎನ್ನಲಾಗಿದೆ.

ಅರಾಕನ್ ಆರ್ಮಿ ಉನ್ನತ ಮಟ್ಟದ ತರಬೇತಿ ಪಡೆದ ಉಗ್ರರ ಗುಂಪಾಗಿದ್ದು, ಸುಧಾರಿತ ಸ್ಫೋಟಕಗಳನ್ನು ಬಳಸಿ ವಿಧ್ವಂಸಕ ಕೃತ್ಯ ನಡೆಸುತಿತ್ತು. ಒಂದು ಮಾಹಿತಿಯನ್ವಯ ಇದು ಪಾಕಿಸ್ಥಾನ ಉಗ್ರರಿಗಿಂತಲೂ ಸಹ ಅತ್ಯಾಧುನಿಕವಾದ ಸ್ಪೋಟಕ ಹಾಗೂ ದಾಳಿ ತಂತ್ರಗಳನ್ನು ಹೊಂದಿದೆ. ಹೀಗಾಗಿ, ಈ ಉಗ್ರ ಸಂಘಟನೆ ಮ್ಯಾನ್ಮಾರ್, ಭಾರತದ ತಲೆನೋವಿಗೆ ಕಾರಣವಾಗಿತ್ತು. ಮ್ಯಾನ್ಮಾರ್ ಸರ್ಕಾರ ನೀಡಿದ್ದ ಮಾಹಿತಿ ಆಧಾರಿಸಿ ಭಾರತ ಉಗ್ರರನ್ನು ಹೊಡೆದುರಳಿಸಿದೆ.

ಕಾರ್ಯಾಚರಣೆಯಲ್ಲಿ 12ಕ್ಕೂ ಹೆಚ್ಚು ಉಗ್ರರ ಅಡಗುತಾಣಗಳು ನಾಶವಾಗಿರುವುದು ಖಚಿತವಾಗಿದೆ. ಭಾರತ ಸೇನೆಯ ವಿಶೇಷ ದಳಗಳು, ಅಸ್ಸಾಂ ರೈಫಲ್ಸ್ ಹಾಗೂ ಮ್ಯಾನ್ಮಾರ್ ಸೇನೆಯನ್ನು ಬಳಕೆ ಮಾಡಲಾಗಿದೆ. ಕಾರ್ಯಾಚರಣೆಗೆ ಹೆಲಿಕಾಪ್ಟರ್, ಡ್ರೋನ್ ಮತ್ತು ಕಣ್ಗಾವಲು ಸಾಧನಗಳನ್ನು ಕೂಡ ಬಳಕೆ ಮಾಡಲಾಗಿದೆ.

ಮ್ಯಾನ್ಯಾರ್ ಮತ್ತು ಚೀನಾದ ಗಡಿಯನ್ನು ಹೊಂದಿರುವ ಕಚೀನ್ ರಾಜ್ಯದಲ್ಲಿ ಅರಾಕನ್ ಅರ್ಮಿ ಸಂಘಟನೆ ಹೆಚ್ಚು ಸಕ್ರಿಯವಾಗಿದೆ. ಚೀನಾ ಕೆಐಎ ಸಂಘಟನೆ ಕಳೆದ ಎರಡು ವರ್ಷಗಳಲ್ಲಿ 3000 ಅರಾಕನ್ ಉಗ್ರರಿಗೆ ತರಬೇತಿ ನೀಡಿದೆ ಎಂದು ವರದಿಯಾಗಿದೆ.

ಈಗ್ಗೆ ಕೆಲವು ದಿನಗಳ ಹಿಂದೆ ಕರ್ನಾಟಕದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ನಮ್ಮ ಸರ್ಕಾರ ಈಗಾಗಲೇ ಎರಡು ಸರ್ಜಿಕಲ್ ಸ್ಟೈಕನ್ನು ಯಶಸ್ವಿಯಾಗಿ ನಡೆಸಿದೆ. ಮೂರನೆಯ ಸರ್ಜಿಕಲ್ ಸ್ಟ್ರೈಕ್ ಕುರಿತಾಗಿ ನಾನು ಈಗಲೇ ಏನೂ ಹೇಳುವುದಿಲ್ಲ. ಶೀಘ್ರದಲ್ಲೇ ತಿಳಿಯಲಿದೆ ಎಂದಿದ್ದರು. ಮ್ಯಾನ್ಮಾರ್ ಗಡಿಯಲ್ಲಿ ಉಗ್ರರ ಕ್ಯಾಂಪ್ ಧ್ವಂಸ ಮಾಡಿರುವ ಸುದ್ದಿಯನ್ನು ಗಮನಿಸಿದರೆ, ರಾಜನಾಥ್ ಅಂದು ಹೇಳಿದ್ದು ಇದೇ ದಾಳಿ ವಿಚಾರವೇ ಎಂಬ ಪ್ರಶ್ನೆಯನ್ನೇ ಎಂಬ ವಿಚಾರವನ್ನು ಹುಟ್ಟು ಹಾಕಿದೆ.

Tags: Arakan ArmyBalakot Air Strikeindian armyKannada Newsmyanmar borderSurgical Strike 3ಅರಾಕನ್ ಆರ್ಮಿಅಸ್ಸಾಂ ರೈಫಲ್ಸ್ಭಾರತೀಯ ಸೇನೆಮ್ಯಾನ್ಮಾರ್ ಗಡಿಸರ್ಜಿಕಲ್ ಸ್ಟ್ರೈಕ್ 3ಸೇನೆ ಕಾರ್ಯಾಚರಣೆ
Share196Tweet123Send
Previous Post

ಜೈಷ್-ತಾಲಿಬಾನ್ ಜಂಟಿಯಾಗಿ ಭಾರತದ ಮೇಲೆ ಹಿಂದೆಂದೂ ಕಂಡು ಕೇಳರಿಯದ ದಾಳಿಗೆ ಸಂಚು

Next Post

ಈಶ್ವರಪ್ಪರಿಂದ ನಗರದ ಅಭಿವೃದ್ಧಿ ಶೂನ್ಯ: ಕೆ.ಬಿ. ಪ್ರಸನ್ನ ಕುಮಾರ್ ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಶ್ವರಪ್ಪರಿಂದ ನಗರದ ಅಭಿವೃದ್ಧಿ ಶೂನ್ಯ: ಕೆ.ಬಿ. ಪ್ರಸನ್ನ ಕುಮಾರ್ ವಾಗ್ದಾಳಿ

ಈಶ್ವರಪ್ಪರಿಂದ ನಗರದ ಅಭಿವೃದ್ಧಿ ಶೂನ್ಯ: ಕೆ.ಬಿ. ಪ್ರಸನ್ನ ಕುಮಾರ್ ವಾಗ್ದಾಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

ವ್ಯಕ್ತಿತ್ವ ವಿಕಸನ ಶಿಬಿರದಿಂದ ಆತ್ಮವಿಶ್ವಾಸ ವೃದ್ಧಿ: ಬ್ರಹ್ಮಕುಮಾರಿ ಸ್ವಾತಿ

April 16, 2026
ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

ಶಿವಮೊಗ್ಗದ ಪ್ರೇರಣಾ ರಾವ್’ಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL