ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಂಸತ್ತಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ 141 ಸಂಸದರನ್ನು ಅಮಾನತು ಮಾಡಿರುವ ಕ್ರಮ ಸರ್ವಾಧಿಕಾರವನ್ನೂ ಸಹ ಮೀರಿದ್ದು ಎಂದು ಸಿಎಂ ಸಿದ್ದರಾಮಯ್ಯ #Siddharamaiah ಕಿಡಿ ಕಾರಿದ್ದಾರೆ.
ಈ ಕುರಿತಂತೆ ನವದೆಹಲಿಯಲ್ಲಿ ಮಾತನಾಡಿರುವ ಅವರು, ಸಂಸತ್ತಿನ ಇತಿಹಾಸದಲ್ಲೇ ಮೊದಲ ಬಾರಿಗೆ 141 ಸಂಸದರನ್ನು ಒಂದೇ ಬಾರಿಗೆ ಅಮಾನತ್ತು ಮಾಡಿದ ಉದಾಹರಣೆ ಇಲ್ಲ. 141 ಮಂದಿ ಸಂಸದರನ್ನು ಅಮಾನತ್ತು ಮಾಡಿರುವುದು ಸರ್ವಾಧಿಕಾರವನ್ನೂ #Dictatorship ಮೀರಿದ ಕ್ರಮ. ಇದನ್ನು ಪ್ರಜಾಪ್ರಭುತ್ವ #Democracy ಅಂತ ಕರೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಜಾತಿ ಗಣತಿ ವರದಿ ಇನ್ನೂ ಕೊಟ್ಟಿಲ್ಲ. ಕೆಲವರು ಊಹೆ ಮಾಡಿಕೊಂಡು ವಿರೋಧ ಮಾಡ್ತಿದ್ದಾರೆ. ಅವರು ವರದಿ ಯಾವಾಗ ಕೊಡ್ತಾರೆ ಎನ್ನುವುದು ಖಚಿತವಾಗಿ ಕೊಟ್ಟಿಲ್ಲ ಎಂದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post