No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನ.24ರಿಂದ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆ ವಾರ್ಷಿಕೋತ್ಸವ | ಸಾಧಕರಿಗೆ ಗೌರವ

ವಿದುಷಿ ಸುಮಿತ್ರಾ ನಿತಿನ್, ವಿದ್ವಾನ್ ಸಿ. ಚೆಲುವರಾಜುಗೆ ಸುಸ್ವರಲಯ ಪ್ರಶಸ್ತಿ | ಶ್ರೀರಾಮ ಲಲಿತಕಲಾ ಮಂದಿರದಲ್ಲಿ ಕಾರ್ಯಕ್ರಮ

kalpa News by kalpa News
November 22, 2023
in Special Articles, ಬೆಂಗಳೂರು ನಗರ
0
ನ.24ರಿಂದ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆ ವಾರ್ಷಿಕೋತ್ಸವ | ಸಾಧಕರಿಗೆ ಗೌರವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜಧಾನಿಯ ಜಯನಗರ 4ನೇ ಬ್ಲಾಕ್‌ನಲ್ಲಿರುವ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆಗೆ ಈಗ 24 ವಸಂತ.

ಕರ್ನಾಟಕ ಸಂಗೀತದಲ್ಲಿ ಗಾಯನ ಮತ್ತು ಮೃದಂಗ ವಾದನಕ್ಕೆ ಮಾತ್ರ ಸೀಮಿತಗೊಳಿಸಿಕೊಳ್ಳದೇ ಇನ್ನೂ ಹಲವಾರು ಪ್ರಕಾರಗಳಲ್ಲಿ ತನ್ನ ಸಂಗೀತ ಕೈಂಕರ್ಯವನ್ನು ಸಲ್ಲಿಸುತ್ತಾ ಸಂಗೀತ ಪ್ರಪಂಚದಲ್ಲಿ ಹೆಮ್ಮರವಾಗಿ ಬೆಳೆಯುತ್ತಿರುವ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆಯು 24ನೇ ಅರ್ಥಪೂರ್ಣ ವಾರ್ಷಿಕೋತ್ಸವ ನ.24 ರಿಂದ 26 ರವರೆಗೆ ಬನಶಂಕರಿ 2ನೇ ಹಂತದ ಶ್ರೀ ರಾಮಲಲಿತ ಕಲಾಮಂದಿರದ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಳ್ಳಲಿದೆ.
24ರ ಸಂಜೆ 4.30ಕ್ಕೆ ಖ್ಯಾತ ವೀಣಾ ವಾದಕಿ ವಿದುಷಿ ಡಾ. ಸುಮಾ ಸುಧೀಂದ್ರ ಅವರು ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಸಂಸ್ಥೆ ಕೊಡಮಾಡುವ ಬೆಂಗಳೂರು ನಾಗರತ್ನಮ್ಮ ಸ್ಮರಣಾರ್ಥ ಪ್ರಶಸ್ತಿ ‘ಸ್ವರಲಯ ರತ್ನ’ವನ್ನು ವಿದುಷಿ ಸುಮಿತ್ರಾ ನಿತಿನ್‌ಗೆ, ‘ಸ್ವರಲಯ ಶೃಂಗ’ ಪ್ರಶಸ್ತಿಯನ್ನು ಖ್ಯಾತ ಮೃದಂಗ ಪಟು ವಿದ್ವಾನ್ ಸಿ. ಚೆಲುವರಾಜು ರವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಸಂಸ್ಥೆ ಪ್ರಾಚಾರ್ಯ ವಿದ್ವಾನ್ ಎಚ್.ಎಸ್. ಸುಧೀಂದ್ರ ತಿಳಿಸಿದ್ದಾರೆ.

ವಿದ್ವಾನ್ ಸಿ. ಚೆಲುವರಾಜು

ವಾಸುದೇವರಾವ್‌ಗೆ ಗೌರವ
ನಾಡು ಕಂಡ ಹಿರಿಯ ಮೃದಂಗ ವಿದ್ವಾಂಸ, ಕರ್ನಾಟಕ ಕಲಾಚಾರ್ಯ ಪುರಸ್ಕೃತ ಎಂ. ವಾಸುದೇವರಾವ್ ರವರು 80 ವಸಂತ ಪೂರೈಸಿರುವ ಸಂದರ್ಭದಲ್ಲಿ ಅವರನ್ನು ಮತ್ತೊಬ್ಬ ಹಿರಿಯ ಮೃದಂಗ ವಾದನ ಪಟು ಶ್ರೀಮುಷ್ಣಂ ವಿ. ರಾಜಾರಾವ್ ಅವರು ಗೌರವಿಸಲಿದ್ದಾರೆ. ನಂತರ ವಿದುಷಿ ಸುಮಿತ್ರಾ ನಿತಿನ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಲಿದೆ.

25ರ ಬೆಳಗ್ಗೆ 9.30ಕ್ಕೆ ಕಲಾಶಾಲೆಯ ಮಕ್ಕಳಿಂದ ತಾಳವಾದ್ಯವಿದೆ. ನಂತರ ವಿದ್ವಾನ್ ಮತ್ತೂರು ಶ್ರೀನಿಧಿ ಅವರಿಂದ ಪಿಟೀಲು-ಒಂದು ಬಹುಮುಖ್ಯ ವಾದ್ಯ-ಪ್ರಾತ್ಯಕ್ಷಿಕೆ ಇದೆ. ನಂತರ ವಿದ್ವಾನ್ ಅನೂರ್ ವಿನೋದ್ ಶ್ಯಾಮ್ ಮತ್ತು ತಂಡದವರಿಂದ ಲಯವಿನ್ಯಾಸ-ನಿರೂಪಣೆ ಮತ್ತು ಪ್ರಸ್ತುತಿ ಆಯೋಜನೆಗೊಂಡಿದೆ. ಸಂಜೆ 4ಕ್ಕೆ ಕಲಾಶಾಲೆಯ ವಿದ್ಯಾರ್ಥಿಗಳಿಂದ ಲಯವಿನ್ಯಾಸ, ವಿದುಷಿ ವರದಾ ಕುಲಕರ್ಣಿ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನವಿದೆ. ಸಂಜೆ ಖ್ಯಾತ ವಿದುಷಿ ಸಿಕ್ಕಿಲ್ ಮಾಲಾ ಚಂದ್ರಶೇಖರ್ ಅವರಿಂದ ಕೊಳಲು ವಾದನ ನೆರವೇರಲಿದೆ.

ವಿದ್ವಾನ್ ಎಚ್.ಎಸ್. ಸುಧೀಂದ್ರ

ಪ್ರಾತ್ಯಕ್ಷಿಕೆ – ಉಪನ್ಯಾಸ
26ರ ಬೆಳಗ್ಗೆ 9.30ಕ್ಕೆ ಕಲಾಶಾಲೆಯ ಮಕ್ಕಳಿಂದ ತಾಳವಾದ್ಯವಿದೆ. ನಂತರ ವಿದ್ವಾನ್ ಡಾ. ವೆಂಕಟೇಶಾಚಾರ್ಯರು ‘ವಿಜಯದಾಸರ ಜೀವನ ದರ್ಶನ ಮತ್ತು ಕೊಡುಗೆಗಳು’ ವಿಷಯ ಕುರಿತು, ವಿದುಷಿ ಡಾ. ಮೀರಾ ರಾಜಾರಾಮ್ ಪ್ರಾಣೇಶ್ ಅವರು ‘ಸಂಗೀತಕ್ಕೆ ಮೈಸೂರು ಒಡೆಯರ ಪ್ರೋತ್ಸಾಹ ಮತ್ತು ಪೋಷಣೆ’ ವಿಷಯ ಕುರಿತು ಪ್ರಾತ್ಯಕ್ಷಿಕೆ – ಉಪನ್ಯಾಸ ನೀಡಲಿದ್ದಾರೆ. ಸಂಜೆ 4ಕ್ಕೆ ಉದಯೋನ್ಮುಖ ಪ್ರತಿಭೆ ಬಿ.ಎಸ್. ಸರ್ವಜಿತ್ ಅವರಿಂದ ಗಾಯನವಿದೆ. ನಂತರ ಪ್ರಖ್ಯಾತ ಗಾಯಕ ವಿದ್ವಾನ್ ಶೆಂಕೋಟ್ಟೈ ಹರಿಹರ ಸುಬ್ರಹ್ಮಣ್ಯಮ್ ಅವರ ಸಂಗೀತ ಕಛೇರಿ ನಡೆಯಲಿದೆ.
Kalahamsa Infotech private limitedಸುಸ್ವರಲಯ ಬೆಳೆದುಬಂದ ಹಾದಿ
ರಾಜಧಾನಿ ಬೆಂಗಳೂರಿನಲ್ಲಿ 1999 ರಲ್ಲಿ ವಿದ್ವಾನ್ ಎಚ್.ಎಸ್. ಸುಧೀಂದ್ರ ಹಾಗೂ ವಿದ್ವಾನ್ ಬಾಲು ರಘುರಾಮನ್‌ ಅವರಿಂದ ಸ್ಥಾಪನೆಗೊಂಡ ಸುಸ್ವರಲಯ ಪ್ರೌಢ ಸಂಗೀತ ಕಲಾ ಶಾಲೆ ಒಂದು ಅಂಗೀಕೃತ ಸಂಸ್ಥೆಯಾಗಿ ಭಾರತೀಯ ಪರಂಪರೆಯ ಪ್ರದರ್ಶಿತ ಕಲೆಗಳನ್ನು ಪೋಷಿಸಿ ಬೆಳೆಸುವ ಘನ ಉದ್ದೇಶ ಹೊಂದಿದೆ. ಕಲಾಶಾಲೆಯು ಪರಿಣತ ವಿದ್ವಾಂಸರ ತಂಡವನ್ನು ಹೊಂದಿದೆ. ಯುವ ಮತ್ತು ಉದಯೋನ್ಮುಖ ವಿದ್ಯಾರ್ಥಿಗಳಿಗೆ ಸಮರ್ಥ ಮಾರ್ಗದರ್ಶನ ನೀಡುವುದರೊಂದಿಗೆ ಬೋಧಪ್ರದವಾದ, ಆಸಕ್ತಿಯಿಂದ ಕೂಡಿದ ಸಂಗೀತ ಕಛೇರಿಗಳನ್ನೂ ಆಗಾಗ್ಗೆ ಆಯೋಜಿಸುತ್ತದೆ. ಕಳೆದ 23 ವರ್ಷಗಳಿಂದ ವಾದನ, ಹಾಗೂ ತಾಳವಾದ್ಯ ಕ್ಷೇತ್ರಗಳಲ್ಲಿ ಶಿಕ್ಷಣ ನೀಡುತ್ತಾ ಬಂದಿದೆ.

ಸಾಹಿತ್ಯ ಮತ್ತು ಲಯದ ತಿಳಿವಳಿಕೆಗೆ ವಿಶೇಷ ಆದ್ಯತೆ ನೀಡುವ ಮಹತ್ತರವಾದ ಸೇವೆ ಮಾಡುತ್ತಿದೆ. ಈ ಶಾಲೆಯ ಆಶ್ರಯದಲ್ಲಿ ಬೆಳೆದ ನೂರಾರು ಕಲಾವಿದರು ಆಕಾಶವಾಣಿ ಮತ್ತು ದೂರದರ್ಶನದ ಕಲಾವಿದರಾಗಿ, ದೇಶ-ವಿದೇಶಗಳಲ್ಲಿ ಶುದ್ಧ ಭಾರತೀಯ ಶಾಸ್ತ್ರೀಯ ಸಂಗೀತದ ವಿದ್ವಾಂಸರಾಗಿ ಖ್ಯಾತರಾಗಿರುವುದು ಹೆಮ್ಮೆಯ ಸಂಗತಿ. ಕಲೆಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ವಿದ್ವಾನ್ ಎಚ್.ಎಸ್. ಸುಧೀಂದ್ರ ಈ ಪ್ರೌಢ ಸಂಗೀತ ಕಲಾಶಾಲೆಯ ಸಾಧನೆಗಳ ಹಿಂದಿನ ರೂವಾರಿ. ಶಾಲೆಯ ಪ್ರಾಂಶುಪಾಲರಾಗಿ ಇವರು ಅಹರ್ನಿಷಿ ಸೇವೆ ಸಲ್ಲಿಸುತ್ತಿರುವುದು ಕಲಾರಂಗದ ಸುಕೃತವೇ ಆಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AkashavaniCarnatic classical musicDooradarshanKannada News WebsiteLatest News KannadaMusic Programಆಕಾಶವಾಣಿಕರ್ನಾಟಕ ಶಾಸ್ತ್ರೀಯ ಸಂಗೀತಕೊಳಲು ವಾದನದೂರದರ್ಶನಬೆಂಗಳೂರುಮೃದಂಗವಿಜಯದಾಸರುಸಂಗೀತ ಕಛೇರಿಸುಸ್ವರಲಯ ಪ್ರೌಢ ಸಂಗೀತ ಕಲಾ ಶಾಲೆಸ್ವರಲಯ ರತ್ನಸ್ವರಲಯ ಶೃಂಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಹಾರ ಕ್ರಮದಿಂದ ಮೂಲವ್ಯಾದಿ ನಿಯಂತ್ರಣ ಸಾಧ್ಯ: ಡಾ.ಸಿದ್ಧನಗೌಡ ಪಾಟೀಲ್ ಸಲಹೆ

Next Post

ಗಡಿಯಲ್ಲಿ ಗುಂಡಿನ ಚಕಮಕಿ | ಇಬ್ಬರು ಉಗ್ರರು ಅರೆಸ್ಟ್ | ನಾಲ್ವರು ಯೋಧರು ಹುತಾತ್ಮ

kalpa News

kalpa News

Next Post
ಹೆಪ್ಪಗಟ್ಟಿಸುವ ಚಳಿಯಲ್ಲೂ ಶತ್ರುಗಳನ್ನು ಬೇಟೆಯಾಡಿದ ಯೋಧರು

ಗಡಿಯಲ್ಲಿ ಗುಂಡಿನ ಚಕಮಕಿ | ಇಬ್ಬರು ಉಗ್ರರು ಅರೆಸ್ಟ್ | ನಾಲ್ವರು ಯೋಧರು ಹುತಾತ್ಮ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL