No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಸಚಿನ್ ಪಾರ್ಶ್ವನಾಥ್

ಸ್ವಸ್ತಿಶ್ರೀ ಭಟ್ಟಾರಕರು ವ್ಯಕ್ತಿಯಲ್ಲ, ವ್ಯಕ್ತಿತ್ವವೂ ಅಲ್ಲ, ಅವರೊಂದು ಪರಂಪರೆ

ನಶ್ವರತೆಯ ಬದುಕಿನಲ್ಲಿ ಅಜರಾಮರವಾಗಿ ಸಾಗಿ ಹೋದ ಭಟ್ಟಾರಕರು ಶತಮಾನದ ಬೆಳಕೇ ಸರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 29, 2023
in ಸಚಿನ್ ಪಾರ್ಶ್ವನಾಥ್
0
ಸ್ವಸ್ತಿಶ್ರೀ ಭಟ್ಟಾರಕರು ವ್ಯಕ್ತಿಯಲ್ಲ, ವ್ಯಕ್ತಿತ್ವವೂ ಅಲ್ಲ, ಅವರೊಂದು ಪರಂಪರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಸಚಿನ್ ಪಾರ್ಶ್ವನಾಥ್  |

ಅವರೊಂದು ವ್ಯಕ್ತಿಯಲ್ಲ, ವ್ಯಕ್ತಿತ್ವವೂ ಅಲ್ಲ, ಅಹುದು ಅವರೊಂದು ಪರಂಪರೆ. ನಾಲ್ಕು ಸಾಲು, ನಲವತ್ತು ಪದಗಳಲ್ಲಿ ಕಟ್ಟಿಕೊಡಲಾಗದ ಇತಿಹಾಸ ಅವರು. ಭಟ್ಟಾರಕ ಸಂಕುಲದ ಅಕಳಂಕ ಜ್ಯೋತಿ ಕುರಿತು ತಿಲದಷ್ಟು ತಿಳಿಸಲು ಕೂತದ್ದೆನೋ ಸರಿ, ಆದರೆ ಎದೆಯೊಳಗಿನ ಪದಗಳು ಉಸಿರು ಬಿಗಿ ಹಿಡಿದು ಕುಳಿತಿವೆ. ಕಟ್ಟಿಕೊಂಡ ದುಃಖ ಹೊರ ಚೆಲ್ಲಿದರೆ ಎಂಬ ಆತಂಕವಿರಲೂ ಸಾಕು. ಬೆಳಗೊಳದ ಬಾಗಿಲಲಿ ತುಳುನಾಡಿನ ತರುಣ ನಿಂತಾಗ ಇಪ್ಪತ್ತು ವಸಂತಗಳ ಕಂಡಾಗಿತ್ತು. ಅಂದು ಮಹಾವೀರ ತೀರ್ಥಂಕರರ ಜನುಮೋತ್ಸವ. ಎದುರಿಗೆ ಗಿರಿಯಷ್ಟು ಜವಾಬ್ದಾರಿ, ಮನದಲ್ಲಿ ಅಪರಿಮಿತ ಜಿನ ಭಕ್ತಿ. ಬಹುಷಃ ಆ ಶಕ್ತಿ ಅದೇ ಹನ್ನೊಂದು ವರುಷಗಳಲಿ ಕಂಡ ಸಹಸ್ರಮಾನದ ಮಸ್ತಕಾಭಿಷೇಕದಂತಹ ಬೃಹತ್ ಸತ್ಕಾರ್ಯವನ್ನು ಅನೂಚಾನವಾಗಿ ನೆರವೇರಿಸಿತ್ತು. ಅಷ್ಟೊಂದು ಹೇಳತೀರದ ಜವಾಬ್ದಾರಿಗಳ ಎಡೆಯಲ್ಲಿ ಕನ್ನಡದ ಔನತ್ಯಕ್ಕೆ ಜೊತೆಯಾದದ್ದು ಅವರ ಹಿರಿತನಕ್ಕೆ ಸಾಕ್ಷಿ. ಅದೂ ಒಮ್ಮೆಯಲ್ಲ, ಎರಡು ಬಾರಿಯಲ್ಲ. ಅವಕಾಶ ಸಿಕ್ಕಾಗೆಲ್ಲ ಕನ್ನಡ ಎಂದಾಗೆಲ್ಲ ಗುರುವರ್ಯರ ಚಿತ್ತ ಸದಾ ಮುಂದು. ಅವರ ವರ್ಣಿಸಲು ಕುಳಿತರೆ ಕೀರ್ತಿ ಎಂಬ ಪದವೂ ಕ್ಷೀಣವಾಗುತ್ತದೆ. ನಾಲ್ಕು ದಿಕ್ಕುಗಳ ಮೀರಿ ಅವರು ಜ್ಞಾನವನ್ನು, ಅಕ್ಷರದ ದಾಸೋಹವನ್ನು ಅವಿರತವಾಗಿ ಹರವಿ ನಿಂತಾಗ ಅವರೇ ಒಂದು ಸಾಕ್ಷಾತ್ ಪರಂಪರೆಯಾಗಿ ಬಿಡುತ್ತಾರೆ. ಸಾರ್ಥಕ ಬದುಕಿನ ಸಂಕಲ್ಪವನ್ನು ಮುಗಿಸಿ ಅವರು ಜಿನನೂರಿಗೆ ತೆರಳಿದ್ದಾರೆ. ಅವರು ಪರಮಾರ್ಥಿಕ ಮೋಕ್ಷಕ್ಕೆ ಸಾಗಿದರೂ ಅನಂತ ಭಕ್ತಸಂಕುಲ ಶೋಕದಲ್ಲಿ ಮುಳುಗಿದೆ. ಸ್ವಸ್ತಿಶ್ರೀ ಭಟ್ಟಾರಕರ ಪಾದಗಳಿಗೆ ಈ ಪದಮಾಲೆ.

ಅದು ಎಪ್ಪತ್ತರ ದಶಕದ ಉತ್ತರಾರ್ಧ, ತೀರ್ಥಂಕರ ಮಹಾವೀರರ ಜನುಮ ಜಯಂತಿ. ಇಪ್ಪತ್ತೊಂದರ ತರುಣನ ಹೆಗಲ ಮೇಲೆ ಐತಿಹಾಸಿಕ ಕ್ಷೇತ್ರದ ಜವಾಬ್ದಾರಿ ಬಂದಿತು. ದುಃಖದ ಸಂಗತಿ ಎಂದರೆ ಪೂಜ್ಯರು ಅಗಲಿದಾಗ ಇನ್ನೊಂದು ಮಹಾವೀರ ಜಯಂತಿಗೆ ಬೆರಳೆಣಿಕೆಯ ದಿನಗಳಷ್ಟೇ ಉಳಿದಿದ್ದವು. ಸುಮಾರು ಐವತ್ತು ವರ್ಷಗಳನ್ನು ಮೀರಿದ ಅವರ ಅವಧಿಯಲ್ಲಿ ನಾಲ್ಕು ಮಹಾಮಸ್ತಕಾಭಿಷೇಕಗಳನ್ನು ಯಶಸ್ವಿಯಾಗಿ ನಡೆಸಿದ್ದರು.

ಅದಕ್ಕೂ ಮೊದಲು ಸಂಕ್ಷಿಪ್ತ ಪರಿಚಯ ಹೇಳುವುದಾದರೆ ಮೇ 3, 1949 ರಂದು ಕಾರ್ಕಳದ ವರಂಗದಲ್ಲಿ ಜನನ. ಪೂರ್ವಾಶ್ರಮದ ಹೆಸರು ರತ್ನವರ್ಮ. ತಂದೆ ಚಂದ್ರರಾಜ ಇಂದ್ರ, ತಾಯಿ ಶ್ರೀಕಾಂತಮ್ಮ. ಐದನೇ ತರಗತಿ ಓದಿದ್ದು. ದೀಕ್ಷೆ ಪಡೆದಿದ್ದು 1969 ರ ಡಿಸೆಂಬರ್ 12 ರಂದು. ಮುಂದೆ ಜಗತ್ತು ಕಂಡ ಶ್ರೇಷ್ಠ ಚಕ್ರವರ್ತಿಗಳಲ್ಲಿ ಒಬ್ಬರು ಚಂದ್ರಗುಪ್ತ ಮೌರ್ಯ ದೀಕ್ಷೆ ಪಡೆದ ನಾಡಾದ ಬೆಳಗೊಳದ ಜವಾಬ್ದಾರಿ ಹೊತ್ತರು. ಉಸ್ತುವಾರಿ ಹೊತ್ತ ಹನ್ನೊಂದು ವರ್ಷಗಳಷ್ಟೇ ಕಳೆದಿದ್ದವು. ಆಗ ಎದುರಾಗಿದ್ದು ಸಹಸ್ರಮಾನದ 1980 ರ ಮಹಾಮಸ್ತಕಾಭಿಷೇಕ. ಅಲ್ಲೂ ಯಶಸ್ಸು, 1993 ರಲ್ಲಿ ಎರಡನೆಯ ಮಹಾಮಸ್ತಕಾಭಿಷೇಕ ಅಲ್ಲಿಯೂ ಪ್ರಾಕೃತದ ಉದ್ಘೋಷ. ಇನ್ನು 2006 ರಲ್ಲಿ ಭಾರತದ ರಾಷ್ಟ್ರಪತಿಗಳು ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರಿಂದ ದೀಪ ಬೆಳಗಿಸಿದ ಮೂರನೇಯ ಮಹಾಮಸ್ತಕಾಭಿಷೇಕ. ಇನ್ನು 2018 ರ ಫೆಬ್ರವರಿಯಲ್ಲಿ ನಡೆದ ಮಹಾಮಸ್ತಕಾಭಿಷೇಕ. ಓರ್ವ ಬಾಹುಬಲಿ, ಎರಡು ಸಾವಿರ ವರ್ಷಗಳ ಇತಿಹಾಸ, ಒಂಬೈನೂರು ವರ್ಷಗಳ ಪರಂಪರೆ, ಹತ್ತೊಂಬತ್ತು ಭಟ್ಟಾರಕರು ಸಹಸ್ರಾರು ವಸಂತಗಳ ಉಜ್ವಲವಾಗಿ ಬೆಳಗಿದ ಬೆಳಗೊಳ.
ಅದು 2015 ರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಯ. ಹಾವೇರಿಯಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಕಡೆಯ ಕ್ಷಣದಲ್ಲಿ ತಪ್ಪಿ ಹೋಗುವಂತೆ ಆಯಿತು. ಪರಿಷತ್ತಿನ ಅಂದಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಇಡೀ ಕಾರ್ಯಕ್ರಮವನ್ನು ಹೇಗೆ ಮುಂದುಡುವುದು ಎಂದು ಯೋಚಿಸಿ ಸೀದಾ ಬಂದಿದ್ದು ಸೀದಾ ಶ್ರೀಗಳ ಬಳಿಗೆ. ಮುಂದೆ ನಡೆದದ್ದು ಇತಿಹಾಸ. ನಂಬಿ ಬಂದವರ ಕೈ ಬಿಡದ ಭಟ್ಟಾರಕರು ನಲ್ಲೂರು ಪ್ರಸಾದರ ಮೂಲಕ ಅಗತ್ಯ ಕಾರ್ಯಗಳನ್ನು ನಡೆಸಿಕೊಟ್ಟರು. ನಂಬಲೂ ಅಸಾಧ್ಯವಾಗುವಂತೆ ಒಂದು ನಗರವನ್ನೇ ನಿರ್ಮಿಸಿ ಅದರಲ್ಲಿ ಸಂಪೂರ್ಣ ಸಮ್ಮೇಳನ ಅದ್ದೂರಿಯಾಗಿ ನಡೆಯಿತು. ಅಕ್ಷರ ದಾಸೋಹ ಮತ್ತು ಅನ್ನ ದಾಸೋಹ ಹೇಗೆ ನಡೆಯಿತು ಎಂದರೆ ಇಂದಿಗೂ ಅದನ್ನು ಮೆಲುಕು ಹಾಕುವವರಿದ್ದಾರೆ. ಕಾರ್ಯಕ್ರಮ ಏನೋ ಆಯಿತು, ಲೆಕ್ಕ ಹಾಕಿದರೆ ವೆಚ್ಚ ಒಂದು ಕೋಟಿಯನ್ನು ದಾಟಿದೆ. ಸರ್ಕಾರ ಇದೊಂದು ತಮ್ಮ ಕಾರ್ಯಕ್ರಮ, ನಾವು ಅಷ್ಟು ಹಣ ಸಂದಾಯ ಮಾಡುತ್ತೇವೆ ಎಂದು ಬಂದಾಗ ಚಾರುಕೀರ್ತಿ ಶ್ರೀಗಳು ಅದನ್ನು ನಿರಾಕರಿಸಿದರಲ್ಲದೆ ಅನ್ನ ನೀಡುವ ಕಾರ್ಯ ನಮ್ಮ ಪುಣ್ಯ. ಅದಕ್ಕೆ ನಾವು ಎಂದೂ ಹಣ ಪಡೆಯುವುದಿಲ್ಲ ಎಂದು ಹೇಳಿ ಕಳಿಸಿದರು.

ಸರಿ ಸುಮಾರು ನಲವತ್ತಕ್ಕೂ ಹೆಚ್ಚು ಬಸದಿಗಳ ಜೀರ್ಣೋದ್ಧಾರ ಮಾಡಿದ ಕೀರ್ತಿ ಅವರದು. ಇಂದಿಗೂ ಅಲ್ಲಿ ಪೂಜೆ ನಡೆಯುತ್ತಿದೆ. ಅಲ್ಲದೇ ಹಲವಾರು ಗ್ರಾಮಗಳನ್ನು ದತ್ತು ಪಡೆದು ಎಲ್ಲಾ ತರಹದ ಮೂಲಭೂತ ಸೌಕರ್ಯಗಳನ್ನು ದೊರಕಿಸಿ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. 1988 ರಲ್ಲಿ ಇಂಗ್ಲೆಂಡಿನ ಲೀಸೆಸ್ಟನರ್ ನಲ್ಲಿ ಜೈನ ಬಸದಿಯ ಜೀರ್ಣೋದ್ಧಾರ ಮಾಡಿದರು.

ಜೈನ ಪದ್ಧತಿಗಳಲ್ಲಿ ದೈವಾಭಿಷೇಕಕ್ಕೆ ಅಗ್ರ ಸ್ಥಾನ. ಅಂತಹ ವಾಡಿಕೆಯಲ್ಲಿ ಹನ್ನೆರಡು ವರ್ಷಗಳಿಗೆ ಒಮ್ಮೆ ನಡೆಯುವ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಬಾಹುಬಲಿ ಮೂರುತಿಗೆ ನಡೆಯುವ ಅಭಿಷೇಕದ ಕಳಶಗಳ ಹರಾಜು ನಡೆಯುತ್ತದೆ. ಸಹಸ್ರಮಾನದ ಮಹಾಮಸ್ತಕಾಭಿಷೇಕದ ನೆನಪಿಗಾಗಿ ನೇತ್ರ ತಪಾಸಣಾ ಶಿಬಿರ ನಡೆಸಿದ್ದು ಅಲ್ಲದೇ, ಸಂಚಾರಿ ಆಸ್ಪತ್ರೆ, ಆಯುರ್ವೇದ ಆಸ್ಪತ್ರೆ ಅಲ್ಲದೇ ವೈದ್ಯಕೀಯ ಲ್ಯಾಬ್ ಗಳನ್ನು ಆರಂಭಿಸಿದ್ದರು. ಮಹಾಮಸ್ತಕಾಭಿಷೇಕದ ನಿಧಿಯಿಂದ ಮಕ್ಕಳ ಆಸ್ಪತ್ರೆ ತೆರೆದು ಹಲವು ಕುಟುಂಬಗಳ ದೇವರೇ ಆಗಿದ್ದಾರೆ. ಈಗ 2018 ರ ಮಹಾಮಸ್ತಕಾಭಿಷೇಕದ ದತ್ತಿಯಿಂದ ಇನ್ನೊಂದು ಆಧುನಿಕ ಮತ್ತು ಹೆಚ್ಚಿನ ಸವಲತ್ತುಗಳ ಆಸ್ಪತ್ರೆ ತೆರೆಯುವ ಆಲೋಚನೆ ನಡೆಯುತ್ತಿದೆ.
Kalahamsa Infotech private limitedತಮ್ಮ ಅವಧಿಯಲ್ಲಿ ಹದಿನಾರಕ್ಕೂ ಹೆಚ್ಚು ವಿದೇಶ ಪ್ರವಾಸಗಳು ಮಾಡಿದ ಅವರು ಧಾರ್ಮಿಕತೆಯನ್ನು ಸನ್ಮಾರ್ಗದಲ್ಲಿ ಹೇಗೆ ಪಸರಿಸಿದ್ದರು ಎಂದರೆ 2006 ರ ಮಹಾಮಸ್ತಕಾಭಿಷೇಕಕ್ಕೆ ಪ್ರಪಂಚದ ಆರು ಖಂಡಗಳಿಂದ ಹೂವು, ಕುಂಕುಮಗಳನ್ನು ಸಂಗ್ರಹಿಸಿ ಬಳಸಿದ್ದರು. ತನ್ಮೂಲಕ ಭಾರತೀಯ ಪರಂಪರೆಯನ್ನು ಉಪಖಂಡದ ಎಲ್ಲೆ ಮೀರಿ ಕೊಂಡೊಯ್ದ ಹಿರಿತನ ಅವರದು.

ರಾಷ್ಟ್ರೀಯ ಪ್ರಾಕೃತ ಅಧ್ಯಯನ ಕೇಂದ್ರ ಇರುವುದು ಬೆಳಗೊಳದಲ್ಲಿ. ದೇಶದ ಪ್ರಥಮ ಪ್ರಾಕೃತ ವಿಶ್ವ ವಿದ್ಯಾಲಯ ಇರುವುದು ಶ್ರವಣ ಬೆಳಗೊಳದಲ್ಲಿ. ಅವರದೇ ಕನಸಿನ ಈ ವಿಶ್ವವಿದ್ಯಾಲಯಕ್ಕೆ ಶ್ರೀ ಮಠದ ಮೂವತ್ತೆರಡು ಎಕರೆಗಳನ್ನು ದತ್ತಿಯಾಗಿ ನೀಡಿದ್ದರು. ಜೈನ ಧರ್ಮದ ಪವಿತ್ರ ಗ್ರಂಥಗಳಲ್ಲಿ ಸೇರುವ ಧವಳ ಗ್ರಂಥಗಳ ಪ್ರಾಕೃತದಿಂದ ಕನ್ನಡನುವಾದ ಮಾಡಿದ್ದು ಪೂಜ್ಯರ ಅನುಗ್ರಹದಿಂದ ಎಂಬುದು ವಿಶೇಷ. ತಪಸ್ಸಿನಂತೆ ಕುಳಿತು ಅವುಗಳನ್ನು ಕನ್ನಡದಲ್ಲೂ ಪಸರಿಸಿ ತಾವು ಶ್ರೇಯವನ್ನು ಪಡೆಯದೇ ಉಳಿದರು.

ಮೊದಲೇ ಹೇಳಿದಂತೆ ಅವರೆಂದೂ ಪ್ರಚಾರ ಬಯಸಲೇ ಇಲ್ಲ. ಮಾಧ್ಯಮಗಳಿಂದ ಅಷ್ಟೇ ಏಕೆ? ದೂರವಾಣಿ ಕೂಡ ಇಲ್ಲ. ಸಾರ್ವಜನಿಕವಾಗಿ ಕಾಣಿಸಿದ್ದು ತೀರಾ ಕಡಿಮೆಯೇ. ಈಗ ಅನ್ನದ, ಅಕ್ಷರದ, ಆರೋಗ್ಯದ ಮತ್ತು ಬೆಳಗೊಳದ ಒಡೆಯ ಅನಂತ ಆರಾಧಕರನ್ನು ಅಗಲಿ ಜಿನೈಕ್ಯರಾಗಿದ್ದಾರೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ಬರುವ ಪೀಳಿಗೆ ಸಾಗಲಿ. ಅವರೊಂದು ಸಾರ್ಥಕ ಜಿನಬಿಂಬ. ಬರಿ ಬೆಳಗೊಳವಲ್ಲ, ಬರಿ ಜೈನರಲ್ಲ ನಾಳಿನ ಪೀಳಿಗೆ ಕೂಡ ಇಂದ್ರಗಿರಿಯೊಡೆಯನ ಕುರಿತು ಅರಿಯುವಾಗ ಭಟ್ಟಾರಕರ ತಿಳಿದೇ ಸಾಗಲಿದೆ. ಅದ್ವಿತೀಯ ಸಾಧಕರ ಇರುವು ಅನುರೂಪವಾದ ಧನಾತ್ಮಕ ತೇಜಸ್ಸನ್ನು ಅವಗಾಹನೆಗೆ ಬಿಡುತ್ತದೆ. ಅಂತಹ ದಿವ್ಯ ತೇಜಸ್ಸು ಅವರ ಪ್ರತಿ ಚಿತ್ರದಲ್ಲೂ ಕಾಣಸಿಗುತ್ತದೆ. ಈಗ ಅವರ ನೆನಪುಗಳು, ಆಶೀರ್ವಾದ ಮತ್ತು ಸತ್ಕಾರ್ಯಗಳು ಆರಾಧಕರ ಸದಾಕಾಲ ಕಾಯಲಿ. ನಶ್ವರತೆಯ ಬದುಕಿನಲ್ಲಿ ಅಜರಾಮರವಾಗಿ ಸಾಗಿ ಹೋದ ಭಟ್ಟಾರಕರು ಶತಮಾನದ ಬೆಳಕೇ ಸರಿ.

ಅಹಿಂಸೋ ಪರಮೋಧರ್ಮಃ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bhattarak SankulaJainKannada News WebsiteLatest News KannadaMahamastakabhishekaMahaveeraSachin Parshwanathಜಿನ ಭಕ್ತಿಭಟ್ಟಾರಕ ಸಂಕುಲಮಹಾಮಸ್ತಕಾಭಿಷೇಕಮಹಾವೀರಸಚಿನ್ ಪಾರ್ಶ್ವನಾಥ್ಸ್ವಸ್ತಿಶ್ರೀ ಭಟ್ಟಾರಕ
Share197Tweet123Send
Previous Post

ಲಿಂಗತ್ವ ಅಲ್ಪಸಂಖ್ಯಾತರನ್ನು ಕಡೆಗಣಿಸದಿರಿ: ನ್ಯಾ. ಮಲ್ಲಿಕಾರ್ಜುನಗೌಡ

Next Post

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL