ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು–ತಾಳಗುಪ್ಪ ಮಾರ್ಗದ ಕೆಲವು ರೈಲುಗಳ ಅರಸಾಳು ಹಾಗೂ ಕುಂಸಿ ನಿಲ್ದಾಣಗಳಲ್ಲಿನ ತಾತ್ಕಾಲಿಕ ನಿಲುಗಡೆ ಅವಧಿಯನ್ನು ಇನ್ನೂ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 16227/16228 ಮೈಸೂರು–ತಾಳಗುಪ್ಪ–ಮೈಸೂರು ಡೈಲಿ ಎಕ್ಸ್ಪ್ರೆಸ್ ರೈಲಿನ ಅರಸಾಳು ನಿಲ್ದಾಣದಲ್ಲಿನ ತಾತ್ಕಾಲಿಕ ನಿಲುಗಡೆ ಹಾಗೂ ರೈಲು ಸಂಖ್ಯೆ 16205/16206 ತಾಳಗುಪ್ಪ–ಮೈಸೂರು–ತಾಳಗುಪ್ಪ ಡೈಲಿ ಎಕ್ಸ್ಪ್ರೆಸ್ ರೈಲಿನ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿನ ತಾತ್ಕಾಲಿಕ ನಿಲುಗಡೆಯನ್ನು ವಿಸ್ತರಿಸಲಾಗಿದೆ.
Also read>> ಶಿವಮೊಗ್ಗ | KPS ಕಟ್ಟಡಕ್ಕೆ ಶಂಕುಸ್ಥಾಪನೆ | ಎಷ್ಟು ರೂಂ ಇರಲಿವೆ? ಕಾಮಗಾರಿ ಯಾವಾಗ ಮುಕ್ತಾಯ?
ಈ ರೈಲುಗಳು 2026ರ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಆಯಾ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ. ಪ್ರಸ್ತುತ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆಯೇ ರೈಲುಗಳು ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ನಿಲ್ಲಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









