ಕಲ್ಪ ಮೀಡಿಯಾ ಹೌಸ್
ತಡಸ: ತನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಮಾತ್ರ.
-ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ.
ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಲೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದಿನ ದಿನಗಳಲ್ಲಿ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post