No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅತ್ಯಂತ ಕಠಿಣ ತರದ ಯೋಗಾಸನಗಳಲ್ಲಿ ಅಪೂರ್ವ ಆರು ವಿಶ್ವದಾಖಲೆ ಬರೆದ ತನುಶ್ರೀ ಪಿತ್ರೋಡಿ

ಏಳನೆಯ ತರಗತಿಯಲ್ಲೇ ಆರು ವಿಶ್ವ ದಾಖಲೆ ಬರೆದ ತುಳುನಾಡಿನ ಬಾಲೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 7, 2021
in Special Articles
0
ಅತ್ಯಂತ ಕಠಿಣ ತರದ ಯೋಗಾಸನಗಳಲ್ಲಿ ಅಪೂರ್ವ ಆರು ವಿಶ್ವದಾಖಲೆ ಬರೆದ ತನುಶ್ರೀ ಪಿತ್ರೋಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭಾರತೀಯ ಧರ್ಮವನ್ನು ‘ಸನಾತನ ಧರ್ಮ’ ಎಂದು ಕರೆಯುತ್ತಾರೆ. ಸನಾತನ ಎಂದರೆ ಎಂದೂ ಅಳಿಯದ, ಚಿರಂತನ, ನಿರಂತರವಾದ ಎಂದರ್ಥ.
ಸನಾತನ ಧರ್ಮದ ಅದ್ಭುತ ಜ್ಞಾನ ಭಂಡಾರದಲ್ಲಿ ಯೋಗಾಸನ ಸಹ ಒಂದು. ಯೋಗ ಎಂಬ ಶಬ್ದ ಸಂಸ್ಕೃತ ಭಾಷೆಯ ‘ಯಜ್’ ಪದದಿಂದ ನಿಷ್ಪತ್ತಿಗೊಂಡಿದೆ. ಯೋಗವೆಂದರೆ ಜೋಡಿಸು, ಸೇರಿಸು, ಜತೆ ಕೂಡಿಸು ಎಂಬ ಅರ್ಥಗಳಿವೆ. ಪತಂಜಲಿ ಮಹರ್ಷಿಗಳು ಯೋಗವೆಂದರೆ “ಯೋಗಶ್ಚಿತ್ತ ವೃತ್ತಿ ನಿರೋಧ” ಎಂದಿದ್ದಾರೆ.

ಚಿತ್ತ ವೃತ್ತಿಯನ್ನು ನಿರೋಧಿಸುವುದು ಯೋಗದ ಉದ್ದೇಶ. ಚಿತ್ತದ ವೃತ್ತಿಗಳನ್ನು, ಬಯಕೆಗಳನ್ನು ಸರ್ವಥಾ ತಡೆದು ನಿಲ್ಲಿಸಿ, ಏಕಾಗ್ರತೆ ಸಾಧಿಸುವುದು ಯೋಗ. ಬುದ್ಧಿ, ಮನಸ್ಸು, ದೇಹ ಎಲ್ಲವನ್ನೂ ನಿಯಂತ್ರಿಸಿ ಆರೋಗ್ಯ ಪ್ರದಾನಿಸುವ ಶಕ್ತಿ ಯೋಗದಲ್ಲಿದೆ. ಆಧ್ಯಾತ್ಮಿಕ, ಮಾನಸಿಕ, ದೈಹಿಕ, ಶಾಂತಿ ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ. ಇದು ಭಾರತವು ವಿಶ್ವಮಾನ್ಯಗೊಳಿಸಿದ ಚಿರಂತನ ವಿದ್ಯೆ. ಯೋಗವು ಭಾರತೀಯ ಸನಾತನ ಪರಂಪರೆಯ ತಾಯಿ ಬೇರಾಗಿದೆ. ಭಾರತವು ಸಮಸ್ತ ವಿಶ್ವಕ್ಕೆ ನೀಡಿದ ಅತಿ ಪ್ರಮುಖ ಕೊಡುಗೆಗಳಲ್ಲಿ ಯೋಗವೂ ಒಂದಾಗಿದೆ. ಪ್ರಾಚೀನ ಕಾಲದ ಸಂತರು, ಋಷಿಗಳು, ಮಹಾತ್ಮರು ಸಂಶೋಧಿಸಿದ ಯೋಗವು ಇಂದು ಜನ ಸಾಮಾನ್ಯರಿಗೂ ವಿಸ್ತರಿಸಿದೆ. ಯಾವುದೇ ವಯೋಮಾನದವರು ಕೂಡ ಯೋಗವನ್ನು ಮಾಡಿ ಸದೃಢ ದೇಹದಲ್ಲಿ ಸದೃಢ ಮನಸ್ಸನ್ನು ಹೊಂದಬಹುದು. ಯೋಗವು ವ್ಯಕ್ತಿಯೊಬ್ಬನ ಆಂತರಿಕ ಸಾಮರ್ಥ್ಯವನ್ನು ಒಂದು ಸಂತುಲಿತ ರೀತಿಯಲ್ಲಿ ಸುಧಾರಿಸಲು ಅಥವಾ ಅಭಿವೃದ್ಧಿ ಪಡಿಸಲು ಇರುವ ಒಂದು ಅಪೂರ್ವವಾದ ವಿಧಾನ. ಯೋಗಾಸನಗಳು ನಮ್ಮಲ್ಲಿನ ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯದ ಬೆಳವಣಿಗೆಗೆ ಸಹಾಯಕವಾಗುತ್ತದೆ.

ಆಧ್ಯಾತ್ಮಿಕ ವ್ಯಾಯಾಮ ಎಂದು ಕರೆಯಲ್ಪಡುವ ಯೋಗವು ಪ್ರಾಚೀನ ವ್ಯಾಯಾಮದ ವಿಧಾನವಾಗಿದೆ. ಕಾಲಿನ ಅಂಗುಷ್ಠದಿಂದ ಶಿರದವರೆಗಿನ ಎಲ್ಲ ಅಂಗಗಳಗನ್ನು ಸರಿಯಾದ ಪ್ರಮಾಣದಲ್ಲಿ ಪ್ರಚೋದಿಸಿ, ನಿಯಂತ್ರಿಸಿ ಶಿಸ್ತುಬದ್ಧ ವ್ಯಾಯಾಮವನ್ನು ಓದಗಿಸುವ ಸಾವಿರಾರು ಭಂಗಿಗಳಿವೆ. ಭಾರತವು ಯೋಗಾಸನದಲ್ಲಿ ವಿಶ್ವಗುರು ಎಂಬ ಖ್ಯಾತಿಯನ್ನು ಪಡೆದರೆ ಶ್ರೀಕೃಷ್ಣನ ನಾಡು ಉಡುಪಿಯ ತನುಶ್ರೀ ಪಿತ್ರೊಡಿ ಎಂಬ ಹನ್ನೆರಡು ವರ್ಷದ ಬಾಲಕಿ ಈಗಾಗಲೇ ಆರು ವಿಶ್ವದಾಖಲೆಗಳನ್ನು ತನ್ನ ಹೆಸರಿಗೆ ದಾಖಲಿಸಿಕೊಂಡಿದ್ದಾರೆ. ಶ್ರೀಮತಿ ಸಂಧ್ಯಾ ಹಾಗೂ ಉದಯ ಕುಮಾರ್ ಪಿತ್ರೋಡಿ ದಂಪತಿಗಳ ಪ್ರಥಮ ಪುತ್ರಿ ತನುಶ್ರೀ. ಉಡುಪಿಯ ಸೈಂಟ್ ಸಿಸಿಲೀಸ್ ಕನ್ನಡ ಮಾಧ್ಯಮ ಶಾಲೆಯ ಏಳನೆ ತರಗತಿಯಲ್ಲಿರುವ ತನುಶ್ರೀ ಅವರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ಸದಾ ಮುಂದಿದ್ದಾರೆ.

ತನುಶ್ರೀ ಅವರು ತಮ್ಮ ಹನ್ನೆರಡರ ಹರೆಯದೊಳಗೆ ಆರು ವಿಶ್ವದಾಖಲೆಗಳನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.


(1) ನವೆಂಬರ್ 11, 2017ರಂದು ಉಡುಪಿಯಲ್ಲಿ ನಿರಾಲಂಬ ಚಕ್ರಾಸನ ಎಂಬ ಅತ್ಯಂತ ಕಠಿಣ ಯೋಗಾಸನವನ್ನು ಒಂದು ನಿಮಿಷದಲ್ಲಿ ಹತ್ತೊಂಬತ್ತು ಸಲ ಮಾಡುವ ಮೂಲಕ ‘ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಇದರಲ್ಲಿ ತಮ್ಮ ಪ್ರಥಮ ವಿಶ್ವ ದಾಖಲೆಯನ್ನು ಬರೆದವರು.

(2) ಎಪ್ರಿಲ್ 7, 2018ರಂದು ವೆಂಕಟರಮಣ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ (ರಿ) ಪಿತ್ರೋಡಿ ನಡೆಸಿದ ಕಾರ್ಯಕ್ರಮದಲ್ಲಿ “ವಕ್ಷಸ್ಥಳವನ್ನು ಒಂದೇ ನಿಲುವಿನಲ್ಲಿ ನಿಲ್ಲಿಸಿ ಶರೀರದ ಉಳಿದ ಭಾಗವನ್ನು ಪ್ರದಕ್ಷಿಣಾಕಾರದಲ್ಲಿ ತಿರುಗಿಸುವ (Most full Body revolution maintaining a chest stand position) ಭಂಗಿಯನ್ನು ಒಂದು ನಿಮಿಷದಲ್ಲಿ 42 ಬಾರಿ ಮಾಡುವ ಮೂಲಕ ಗಿನ್ನಿಸ್ ಬುಕ್ ನಲ್ಲಿ ವಿಶ್ವ ದಾಖಲೆ ಬರೆದರು.

(3) ಫೆಬ್ರವರಿ 19, 2019ರಂದು ಉಡುಪಿಯ ಸೈಂಟ್ ಸಿಸಿಲೀಸ್ ಸಮೂಹ ಸಂಸ್ಥೆಗಳ ಕ್ರೀಡಾಂಗಣದಲ್ಲಿ ತನುಶ್ರೀ ಅವರು ಧನುರಾಸನ ಭಂಗಿಯಲ್ಲಿ ತಿರುಗುತ್ತ (Most number of rolls in one minute in Dhanurasana posture) ಒಂದು ನಿಮಿಷದಲ್ಲಿ ಅರುವತ್ತೊಂದು ಬಾರಿ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನಲ್ಲಿ ವಿಶ್ವದಾಖಲೆ ಮಾಡಿದ್ದಾರೆ.

(4) ಅದೇ ದಿನ ಅದೇ ಕ್ರೀಡಾಂಗಣ, ಅದೇ ಧನುರಾಸನದ ಭಂಗಿಯಲ್ಲಿ ಅವರು ಒಂದು ನಿಮಿಷ ನಲ್ವತ್ತು ಸೆಕೆಂಡಿನಲ್ಲಿ ತೊಂಬತ್ತೊಂದು ಬಾರಿ ಮಾಡಿ ನಾಲ್ಕನೆ ವಿಶ್ವದಾಖಲೆಯನ್ನು ಬರೆಸಿದ್ದಾರೆ.

(5) ಫೆಬ್ರವರಿ 22, 2020 ರಂದು ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ಚಕ್ರಾಸನ ಓಟದಲ್ಲಿ ನೂರು ಮೀಟರ್ ಅಂತರವನ್ನು ಕೇವಲ ಒಂದು ನಿಮಿಷ ಹದಿನಾಲ್ಕು ಸೆಕೆಂಡಿನಲ್ಲಿ ಕ್ರಮಿಸಿ ಐದನೆಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನಲ್ಲಿ ಐದನೆಯ ಜಾಗತಿಕ ದಾಖಲೆಯನ್ನು ದಾಖಲಿಸಿದ್ದಾರೆ.

(6) ಫೆಬ್ರವರಿ 6, 2021ರಂದು ಸಂತ ಸಿಸಿಲೀಸ್ ಕ್ರೀಡಾಂಗಣದಲ್ಲಿ ತಮ್ಮ ಹೆಸರಿಗೆ ಆರನೆಯ ವಿಶ್ವದಾಖಲೆ ಬರೆಸಿಕೊಂಡರು. Most backward body skip in one minute ಎಂಬ ಭಂಗಿಯಲ್ಲಿ ಐವತ್ತೈದು ಬಾರಿ ಉರುಳುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದ್ದಾರೆ.


ಜೂನ್ 21, 2018ರಂದು ವಿಶ್ವ ಯೋಗ ದಿನದಂದು ಕನ್ನಡ ವಾರ್ತಾ ವಾಹಿನಿ ಪಬ್ಲಿಕ್ ಟಿ. ವಿ. ಯವರಿಂದ ತನುಶ್ರೀ ಅವರು ‘ಪಬ್ಲಿಕ್ ಹೀರೋ’ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ನವೆಂಬರ್ 14, 2018ರಂದು ಇಟಲಿಯ ರೂಮಿನಲ್ಲಿ ವಿಶ್ವ ಗಿನ್ನಿಸ್ ದಾಖಲೆಯ ಸಾಧಕರೊಂದಿಗೆ ಯೋಗ ಪ್ರದರ್ಶನ ನೀಡಿದ್ದಾರೆ. ಐದನೆಯ ವಿಶ್ವ ಯೋಗ ದಿನಾಚರಣೆ ಜೂನ್ 21, 2019ರಂದು ನಡೆದಾಗ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರಿಂದ ‘ಯೋಗ ರತ್ನ’ ಪ್ರಶಸ್ತಿಯನ್ನು ಪಡೆದಿದ್ದಾರೆ. ತನುಶ್ರೀ ಅವರು ಮುನ್ನೂರಕ್ಕೂ ಅಧಿಕ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ. ಕಲ್ಹರ್ಸ್ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಮಜಾಟಾಕೀಸಿನ ಎರಡು ಸಂಚಿಕೆಗಳಲ್ಲಿ ಭಾಗವಹಿಸಿ ಯೋಗಾಸನ ಪ್ರದರ್ಶನ ನೀಡಿ ಸೃಜನ್ ಲೋಕೇಶ್, ಅರ್ಜುನ್ ಸರ್ಜಾ, ಇಂದ್ರಜಿತ್ ಲಂಕೇಶ್ ಮೊದಲಾದವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತನುಶ್ರೀ ಅವರು ಯೋಗಾಸನದಲ್ಲಿ ಅವಿರತ ಪ್ರಯತ್ನ ಪಡುತ್ತಲೇ ನೃತ್ಯ, ಯಕ್ಷಗಾನ ಮತ್ತು ಭರತನಾಟ್ಯ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತ ನಿರಂತರ ಪ್ರದರ್ಶನಗಳನ್ನು ನೀಡುತ್ತ ಬಂದಿದ್ದಾರೆ. ಮೂರರ ಹರೆಯದಲ್ಲಿ ಉಡುಪಿಯ ಮಾಸ್ಟರ್ ಡ್ಯಾನ್ಸ್ ಗ್ರೂಪ್ ಇವರಲ್ಲಿ ನೃತ್ಯ ತರಬೇತಿಗೆ ಸೇರಿದವರು. ಮುದ್ದು ಕೃಷ್ಣ ಸ್ಪರ್ಧೆ, ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಿತರಾಗಿದ್ದಾರೆ. ಅಕಾಡೆಮಿ ಆಫ್ ಮ್ಯೂಸಿಕ್ ಆ್ಯಂಡ್ ಫೈನ್ ಆರ್ಟ್ಸ್ ಉಡುಪಿ ಇಲ್ಲಿಯ ನೃತ್ಯ ಗುರು ಶ್ರೀ ರಾಮಕೃಷ್ಣ ಕೊಡಂಚ ಅವರಿಂದ ಭರತನಾಟ್ಯ, ಯೋಗಗುರು ಶ್ರೀ ಹರಿರಾಜ್ ಕಿನ್ನಿಗೋಳಿ ಅವರಿಂದ ಯೋಗ, ಯಕ್ಷಗುರು ಶ್ರೀ ಆದಿತ್ಯ ಅಂಬಲಪಾಡಿ ಅವರಿಂದ ಯಕ್ಷಗಾನವನ್ನು ಅಭ್ಯಾಸ ಮಾಡುತ್ತಿದ್ದಾರೆ. ಕಳೆದೆರಡು ವರ್ಷಗಳಿಂದ ಶ್ರೀಕೃಷ್ಣಾಷ್ಟಮಿಯಂದು ಹುಲಿವೇಷ ಹಾಕಿ ಉಡುಪಿಯ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೇವಲ ಹನ್ನೆರಡನೆಯ ಹರೆಯದಲ್ಲಿ ಆರು ವಿಶ್ವದಾಖಲೆಗಳನ್ನು ಬರೆಸಿಕೊಂಡು, ನೂರಾರು ಭರತನಾಟ್ಯ ಹಾಗೂ ಯಕ್ಷಗಾನ ಪ್ರದರ್ಶನಗಳನ್ನು ನೀಡಿರುವ ತನುಶ್ರೀ ಅವರು ಅಸಂಖ್ಯಾತ ವೇದಿಕೆಗಳಲ್ಲಿ ಸನ್ಮಾನಿತರಾಗಿದ್ದಾರೆ. ಅವರ ಸಾಧನೆಯನ್ನು ಕಂಡು ಅವರ ಹೆತ್ತವರೊಂದಿಗೆ ನಾಡಿಗೆ ನಾಡೇ ಸಂಭ್ರಮಿಸುತ್ತಿದೆ. ಭವಿತ್ಯದಲ್ಲೂ ಮತ್ತಷ್ಟು ಮಗದಷ್ಟು ಸಾಧನೆಗಳು ತನುಶ್ರೀ ಅವರಿಂದ ನಡೆಯಲಿ, ತನ್ಮೂಲಕ ಉಡುಪಿಗೆ, ರಾಜ್ಯಕ್ಕೆ, ರಾಷ್ಟ್ರಕ್ಕೆ ಗೌರವ ಪ್ರಾಪ್ತಿಯಾಗಲಿ.

(ಮಾಹಿತಿ ಚಿತ್ರಕೃಪೆ ವೀಡಿಯೋ ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaSouth KendraTanushree PitrodiUdupiWorld RecordYogasanaಆಧ್ಯಾತ್ಮಿಕಉಡುಪಿತನುಶ್ರೀ ಪಿತ್ರೊಡಿಯೋಗಾಸನವಿಶ್ವದಾಖಲೆವ್ಯಾಯಾಮಸನಾತನ ಧರ್ಮ
Share197Tweet123Send
Previous Post

ಅಯ್ಯೋ ಧಾರುಣ! ತೀರ್ಥಹಳ್ಳಿಯಲ್ಲಿ ಅಡಿಕೆ ನುಂಗಿ 1 ವರ್ಷದ ಮಗು ಸಾವು

Next Post

Vara Bhavishya in Kannada | 07.02 to 13.02.2021 | Weekly Horoscope | ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Vara Bhavishya in Kannada | 07.02 to 13.02.2021 | Weekly Horoscope | ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

Vara Bhavishya in Kannada | 07.02 to 13.02.2021 | Weekly Horoscope | ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

ಮನೆ ಕಳ್ಳತನ ಪ್ರಕರಣ ತಡೆಗೆ `ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿಗೆ: ಎಸ್‌ಪಿ ನಿಖಿಲ್

May 1, 2026
ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

ಬಳ್ಳಾರಿ | ಸಂಜೀವರಾಯ ದೇವಸ್ಥಾನದಲ್ಲಿ ವಿದುಷಿ ದಿವ್ಯಾ ಗಿರಿಧರ್ ಅದ್ಭುತ ಗಾಯನ

May 1, 2026
ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ | ಸೂಕ್ತ ಪರಿಹಾರ ನೀಡಲು ಡಾ. ಧನಂಜಯ ಸರ್ಜಿ ಮನವಿ

May 1, 2026
ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

ಸೊರಬ | ಸಂಭ್ರಮದ ಶಿಖರಕ್ಕೆ ತಲುಪಿದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ | ನೂತನ ರಥದಲ್ಲಿ ಭವ್ಯ ಮೆರವಣಿಗೆ

May 1, 2026
ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

ನಟಿ ತಾರಾ, ಹಿರಿಯ ನಟ ಶಶಿಕುಮಾರ್ ಕೃಷ್ಣ ಮಠಕ್ಕೆ ಭೇಟಿ

May 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL