ಕಲ್ಪ ಮೀಡಿಯಾ ಹೌಸ್ | ಕೇರಳ |
ಚಂದ್ರಯಾನ-3ರ #Chandrayana3 ಐತಿಹಾಸಿಕ ಯಶಸ್ಸಿನ ನಂತರ ಸೂರ್ಯಯಾನ ಆದಿತ್ಯ ಎಲ್1 #AdityaL1 ಯೋಜನೆಗೆ ಅಂತಿಮ ಸಿದ್ದತೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇರಳದ ಭದ್ರಕಾಳಿ ದೇಗುಲದಲ್ಲಿ ಇಸ್ರೋ #ISRO ಅಧ್ಯಕ್ಷ ಎಸ್. ಸೋಮನಾಥ್ #SSomanath ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು ಭದ್ರಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿರುವ ಸೋಮನಾಥ್ ಅವರ ಈ ನಡೆಯನ್ನು ದೇಶ ಕುತೂಹಲದಿಂದ ವೀಕ್ಷಿಸುತ್ತಿದೆ.
ಚಂದ್ರಯಾನ-3ರ ಲ್ಯಾಂಡರ್ ವಿಕ್ರಂ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಿದಾಗ ಇತಿಹಾಸ ಸೃಷ್ಟಿಸಿದೆ. ಭಾರತವು ಆ ಸಾಧನೆಯನ್ನು ಸಾಧಿಸಿದ ನಾಲ್ಕನೆಯ ದೇಶವಾಗಿದೆ. ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲನೆಯ ರಾಷ್ಟ್ರ ಎನಿಸಿಕೊಂಡಿದೆ.
ಚಂದ್ರಯಾನ-3 ಮಿಷನ್ ಉಡಾವಣೆಗೂ ಮುನ್ನ ತಿರುಪತಿ #Tirupati ದೇಗುಲಕ್ಕೆ ತೆರಳಿದ್ದ ಸೋಮನಾಥ್ ಅವರು ಈಗ ಸೂರ್ಯನತ್ತ ಉಪಗ್ರಹ ಉಡಾವಣೆಗೂ ಮುನ್ನ ಕೇರಳದ ಪೌರ್ಣಮಿಕಾವು – ಭದ್ರಕಾಳಿ ದೇವಸ್ಥಾನಕ್ಕೆ #BhadrakaliTemple ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಚಂದ್ರಯಾನ-3 ಮಿಷನ್ ಯಶಸ್ಸಿನ ಕುರಿತು ಮಾತನಾಡಿದ ಸೋಮನಾಥ್, ಭಾರತವು ಈಗ ಚಂದ್ರ, ಮಂಗಳ ಮತ್ತು ಶುಕ್ರಕ್ಕೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರಧಾನಿ ಮೋದಿಯವರು ನೀಡಿದ ದೂರದೃಷ್ಟಿಯನ್ನು ಈಡೇರಿಸಲು ಇಸ್ರೋ #ISRO ಸನ್ನದ್ಧವಾಗಿದೆ ಎಂದಿದ್ದಾರೆ.
ಭಾರತವು ಚಂದ್ರ, ಮಂಗಳ ಮತ್ತು ಶುಕ್ರಕ್ಕೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ನಾವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಬೇಕಾಗಿದೆ. ನಮಗೆ ಹೆಚ್ಚಿನ ಹೂಡಿಕೆಯ ಅಗತ್ಯವಿದೆ. ಬಾಹ್ಯಾಕಾಶ ಕ್ಷೇತ್ರವು ಅಭಿವೃದ್ಧಿ ಹೊಂದಬೇಕು. ಇದರಿಂದ ಇಡೀ ರಾಷ್ಟ್ರವು ಅಭಿವೃದ್ಧಿ ಹೊಂದಬೇಕು. ಅದು ನಮ್ಮ ಧ್ಯೇಯವಾಗಿದೆ ಎಂದಿದ್ದಾರೆ.
Discussion about this post