ಕಲ್ಪ ಮೀಡಿಯಾ ಹೌಸ್ | ಸೂರ್ಯಪೇಟ(ತೆಲಂಗಾಣ) |
ತೆಲಂಗಾಣದ (Telangana Accident) ಸೂರ್ಯಪೇಟ ಜಿಲ್ಲೆಯಲ್ಲಿ ಹೈದರಾಬಾದ್ನಿಂದ (Hyderabad) ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಬುಧವಾರ ಬೆಳಗಿನ ಜಾವ ಸುಮಾರು 5.20ರ ವೇಳೆಗೆ ದುರ್ಗಾಪುರಂ ಸ್ಟೇಜ್ ಸಮೀಪ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಅಪಘಾತದ ಸಮಯದಲ್ಲಿ ಒಟ್ಟು 43 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ ಮುಂಭಾಗದಲ್ಲಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಬಸ್ನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಕೆಲ ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.
ಅಪಘಾತದಲ್ಲಿ ಮೃತಪಟ್ಟ ಆರು ಮಂದಿಯ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಾಲಕನ ಅಜಾಗರೂಕತೆ, ಅತಿವೇಗ ಅಥವಾ ಇತರ ತಾಂತ್ರಿಕ ಕಾರಣಗಳಿಂದ ಅಪಘಾತ ಸಂಭವಿಸಿತೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.
Also Read>> ಉಡುಪಿ | ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
Telangana Accident : Six Killed as Private Bus Collides with Truck
Hyderabad: Six people were killed and several others seriously injured after a private bus collided with a truck in Telangana’s Suryapet district early Wednesday morning.
The accident occurred at around 5.20 am near Durgapuram Stage when the bus was travelling from Hyderabad to Vijayawada, police said.
A total of 43 passengers were travelling on the bus at the time of the accident. The impact of the collision left several passengers seriously injured.
Police and local residents rushed to the spot and carried out rescue operations. The injured were immediately shifted to nearby hospitals for treatment, while the condition of some passengers is said to be critical.
The bodies of the six deceased have been sent for post-mortem examination. Local police have reached the accident site and are investigating the circumstances that led to the crash.
The exact cause of the accident is yet to be determined. Police are probing whether overspeeding, driver negligence or any other technical factor led to the fatal collision.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








