No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ನವವೃಂದಾವನಕ್ಕೆ ತಾತ್ಕಾಲಿಕ ಸೇತುವೆ, ದಶಕಗಳ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 18, 2020
in ಬಳ್ಳಾರಿ
0
ನವವೃಂದಾವನಕ್ಕೆ ತಾತ್ಕಾಲಿಕ ಸೇತುವೆ, ದಶಕಗಳ ಸಮಸ್ಯೆಗೆ ತಾತ್ಕಾಲಿಕ ಪರಿಹಾರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಆನೆಗೊಂದಿ ಇದು ಗಂಗಾವತಿ ತಾಲೂಕಿನ ಒಳ್ಳೆಯ ಪ್ರವಾಸಿ ತಾಣವಾಗಿದೆ ಮತ್ತು ಕೊಪ್ಪಳ ಜಿಲ್ಲೆಯ ಐತಿಹಾಸಿಕ ಸ್ಥಳವಾಗಿದೆ. ವಿಜಯನಗರದ ಅರಸರು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಗಜಪಂಕ್ತಿ ಎನ್ನುವ ಹೆಸರಿನ ಸ್ಥಳವಿದ್ದು ಅ ಜಾಗದಲ್ಲಿ ಆನೆಗಳನ್ನು ಕಟ್ಟುತ್ತಿದ್ದರು, ರಾಮಾಯಾಣ ಕಾಲದಲ್ಲಿ ಆನೆಗೊಂದಿ ಎಂಬುದು ಕಿಷ್ಕಿಂದ ಎಂಬ ಹೆಸರಿನಿಂದ ಕೂಡಿದ್ದು, ವಾಲಿ ಮತ್ತು ಸುಗ್ರೀವರ ರಾಜಧಾನಿಯಾಗಿದೆ.

ಹಂಪಿ ಮತ್ತು ಆನೆಗುಂದಿ ವಿಜಯನಗರ ಕಾಲದಲ್ಲಿ ಅತ್ಯಂತ ಶ್ರೀಮಂತಿಕೆಯಿಂದ ಮೆರೆದಿದ್ದು ಕ್ರಿಶ 1565 ರಲ್ಲಿ ನಡೆದ ರಕ್ಕಸ ತಂಗಡಗಿ ಕಾಳಗದಲ್ಲಿ ಮುಸ್ಲಿಂ ರಾಜರುಗಳು ಧಾಳಿಗೆ ಒಳಪಟ್ಟು ಪತನಗೊಂಡಿತು. ನಂತರ ಕ್ರಿ.ಶ 1776ರಲ್ಲಿ ಈ ಸ್ಥಳವು ಟಿಪ್ಪು ಸುಲ್ತಾನನ ಆಡಳಿತ ಒಳಪಟ್ಟಿತ್ತು.

ಆನೆಗೊಂದಿಯು ತುಂಗಭದ್ರಾ ನದಿಯ ದಡದಲ್ಲಿ ಇದ್ದು, ಸುತ್ತಲು ದೊಡ್ಡ ದೊಡ್ಡ ಬಂಡೆಗಳು ಪರ್ವತವು ಆನೆಗುಂದಿ ಹತ್ತಿರವಿದ್ದು ವಾನರಸೇನಾದೇವ ಹನುಮಂತನು ಇಲ್ಲಿಯೇ ಹುಟ್ಟಿದನೆಂಬ ಪ್ರತೀತಿಯಿದೆ. ರಾಮಾಯಾಣದಲ್ಲಿ ಈ ಸ್ಥಳವು ಕಿಷ್ಕಿಂದೆಯಾಗಿದ್ದು, ವಾಲಿ ಮತ್ತು ಅವನ ತಮ್ಮ ಸುಗ್ರೀವ ಹುಟ್ಟಿದ ಸ್ಥಳವು ಆಗಿತೆಂಬ ಪ್ರತೀತಿ ಇದೆ.

ಗಗನ ಮಹಲ್ ಹತ್ತಿರ ತಳವಾರ ಘಟ್ಟ ಇದ್ದು, ತುಂಗಭದ್ರಾ ಮತ್ತೊಂದು ದಡವನ್ನು ದಾಟಿದಾಗ ವಿಶ್ವಪ್ರಸಿದ್ದ ಹಂಪೆಯನ್ನು ತಲುಪಬಹುದು. ಈ ಹಿಂದೆ ಆನೆಗೊಂದಿ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ನಂತರ ದಿನಗಳಲ್ಲಿ ಹಂಪಿಯನ್ನು ರಾಜಧಾನಿಯಾಗಿ ಮಾಡಲಾಯಿತು.

ಕನಕಗಿರಿ ಇದು ಗಂಗಾವತಿ ತಾಲೂಕಿನ ಮತ್ತೊಂದು ಪ್ರವಾಸಿ ತಾಣವಾಗಿದ್ದು ಈ ಸ್ಥಳವು ಸಹ ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು, ಗಂಗಾವತಿ-ಲಿಂಗಸೂರು ರಸ್ತೆಯಲ್ಲಿದ್ದು ಗಂಗಾವತಿಯಿಂದ 13 ಮೈಲಿ ದೂರದಲ್ಲಿದೆ,

ಕನಕಗಿರಿ ಎಂಬ ಪದದ ಅರ್ಥವು ಗುಡ್ಡಗಳ ದೇವರು ಮತ್ತು ಇದರ ಪುರಾತನ ಹೆಸರು ಸ್ವರ್ಣಗಿರಿ ಆಗಿತ್ತು. ಇದು ಮೌರ್ಯ ಸಮ್ರಾಜ್ಯದ ದಕ್ಷಿಣ ಭಾಗದ ಆಡಳಿತ ಕೇಂದ್ರವಾಗಿತ್ತು. ಇದು ಕನಕ ಮುನಿ ಎನ್ನುವ ತಪಸ್ವಿಗಳು ತಪಗೈದ ಸ್ಥಳವಾಗಿದೆ. ಈ ಸ್ಥಳದಲ್ಲಿ ಹಲವಾರು ದೇವಾಲಯಗಳು ಸ್ಥಾಪಿಸ್ಪಟ್ಟಿದ್ದು, ಇದರಲ್ಲಿ ಕನಕಚಾಲ ಪತಿ ದೇವಾಲಯವು ತುಂಬ ಪ್ರಸಿದ್ದಿಯಾಗಿದೆ. ಈ ದೇವಾಲಯದಲ್ಲಿ ವಿಜಯನಗರದ ಕಾಲದ ದಕ್ಷಿಣ ಭಾರತ ಶಿಲ್ಪ ವೈಭವವನ್ನು ಕಾಣಬಹುದು, ಸುಂದರವಾದ ಏಕಶಿಲಾ ಕೆತ್ತನೆಯ ಕಂಬಗಳು, ಆಕರ್ಷಕವಾದ ಗೋಪುರದ ವಿನ್ಯಾಸ ಮತ್ತು ಮತ್ತು ಗೋಡೆಗಳು, ಕಪ್ಪು ಶಿಲೆಯಿಂದ ಕೆತ್ತನೆಗೊಂಡ ರಾಜ ರಾಣಿಯರ ಸುಂದರ ಮೂರ್ತಿಗಳು, ಕಟ್ಟಿಗೆಯಿಂದ ತಯಾರಿಸಲಾದ ದೇವತೆಗಳ ಮೂರ್ತಿಗಳು ಇತ್ಯಾದಿ ದೃಶ್ಯ ವೈಭವವನ್ನು ಕಾಣಬಹುದು. ಕಣ್ಣಿದ್ದವರು ಕನಕಗಿರಿ ನೋಡಬೇಕು, ಕಾಲಿದ್ದವರು ಹಂಪಿಯನ್ನು ಸುತ್ತಾಡಬೇಕು ಎಂಬ ನಾಣ್ಣುಡಿ ಇದೆ.

ಪ್ರತಿ ವರ್ಷವು ಫಾಲ್ಗುಣ ಮಾಸದಲ್ಲಿ ಶ್ರೀ ಕನಕಚಾಲಪತಿ ದೇವರ ಜಾತ್ರ ಮಹೋತ್ಸವವು ವಿಜೃಂಭಣೆಯಿಂದ ಜರುಗುವುದು. ಜಾತ್ರೆಯ ಸಮಯದಲ್ಲಿ ದೇಶ-ವಿದೇಶಗಳಿಂದ ಅಸಂಖ್ಯಾತ ಜನ ಸಮೂಹ ಸೇರಲ್ಪಡುವವು.

ಆನೆಗೊಂದಿಯ ಹತ್ತಿರದಲ್ಲಿ ಪಂಪಾ ಸರೋವರ, ಅಂಜಾನಾದ್ರಿ ಬೆಟ್ಟ, ಆನೆಸಾಲು, ಗಗನ ಮಹಲ್, ರಂಗನಾಥ ದೇವಾಲಯ, ದುರ್ಗದೇವಿ ದೇವಾಲಯ, ಜೈನಬಸದಿ, 64 ಕಂಬದ ಮಂಟಪ, ಆಂಜನೇಯ ದೇವಾಲಯ, ನವವೃಂದಾವನ, ಗವಿ ರಂಗನಾಥ ದೇವಾಲಯ, ಆಶ್ರಮ, ಹುಚ್ಚಪ್ಪಯ್ಯನ ಮಠ, ಸೂರ್ಯನಾರಾಯಣ ದೇವಾಲಯ, ಚಿಂತಾಮಣಿ ದೇವಾಲಯ, ತುಂಗಭದ್ರ ನದಿಯ ತೀರ ಇತ್ಯಾದಿಗಳನ್ನು ಕಾಣಬಹುದು.

ನವವೃಂದಾವನ ನದಿ ತೀರ
ಒಂಭತ್ತು ಯತಿಗಳು ವಾಸವಾಗಿರುವ /ವೃಂದಾವನಸ್ಥರಾಗಿರುವ ಸ್ಥಳ ಎಂದರೆ ನವವೃಂದಾವನ ಇಲ್ಲಿನ ನಡುಗಡ್ಡೆಯಲ್ಲಿ ಶ್ರೀ ಪದ್ಮನಾಭತೀರ್ಥರು, ಶ್ರೀ ಕವೀಂದ್ರ ತೀರ್ಥರು, ಶ್ರೀ ವಾಗೀಶ ತೀರ್ಥರು, ಶ್ರೀ ರಘುವರ್ಯ ತೀರ್ಥರು, ಶ್ರೀ ವ್ಯಾಸರಾಯರು, ಶ್ರೀ ಸುಧೀಂದ್ರ ತೀರ್ಥರು, ಶ್ರೀಶ್ರೀನಿವಾಸತೀರ್ಥರು ಮತ್ತು ಶ್ರೀ ರಾಮತೀರ್ಥರ ಮೂಲ ವೃಂದಾವನಗಳಿವೆ.

ಪ್ರತಿ ತಿಂಗಳು ಮತ್ತು ಹಬ್ಬ ಹರಿದಿನಗಳಲ್ಲಿ ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತದೆ. ಇಲ್ಲಿ ಉತ್ತರಾಧಿಕಾರಿ ಮಠ ಮತ್ತು ಶ್ರೀ ರಾಘವೇಂದ್ರ ಸ್ವಾಮಿ ಮಠದ ಭಕ್ತರಿಂದ ಆರಾಧನಾ ಕಾರ್ಯಕಲಾಪ ನಡೆಯುತ್ತದೆ.

ಕಳೆದ ಎರಡು ವರುಷಗಳ ಹಿಂದೆ ಜಮೀನಿನ ಮಾಲೀಕತ್ವ ವಿವಾದದ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ರಾಯರ ಮಠ ಹಾಗೂ ಉತ್ತರಾದಿಮಠದವರಿಗೆ ಶ್ರೀ ಪದ್ಮನಾಭ ತೀರ್ಥರ ತಲಾ ಒಂದುವರೆ ದಿನದವರೆಗೆ ಆರಾಧನಾ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನ್ಯಾಯಾಲಯದ ಆದೇಶದಂತೆ ಇಂದು ಭಕ್ತರು ಅರಾಧನಾ ಕಾರ್ಯಕಲಾಪ ಮಾಡುತ್ತಿದ್ದಾರೆ. ಆದರೆ ಭಕ್ತರ ಆಸೆಯಂತೆ ಒಗ್ಗೂಡಿ ಪೂಜೆ ಸಲ್ಲಿಸುವ ಕಾಲ ಬರಲಿ ನ್ಯಾಯಾಲಯಗಳು ಏನೇ ತೀರ್ಪು ನೀಡಲಿ ಅಥವಾ ಬಿಡಲಿ, ಧಾರ್ಮಿಕ ಚಟುವಟಿಕೆಗಳನ್ನು ಎಲ್ಲರೂ ಸೇರಿ ಮಾಡಿದರೆ ಮಾತ್ರ ಅದಕ್ಕೊಂದು ಅರ್ಥಗರ್ಭಿತ. ಭಕ್ತರ ಆಸೆಯಂತೆ ಎರಡು ಮಠಗಳ ಶ್ರೀಗಳು ಒಟ್ಟಿಗೆ ಸೇರಿಕೊಂಡು ಪೂಜೆ ಸಲ್ಲಿಸುವ ಕಾಲ ಬೇಗ ಬರಲಿ’ ಎಂಬುವುದು ನಮ್ಮ ಆಸೆಯಾಗಿದೆ.

ನವವೃಂದಾವವು ತುಂಗಭದ್ರಾ ತಡದಲ್ಲಿ ಇದ್ದು ಸುತ್ತಲೂ ನದಿಯು ಆವರಿಸಿದೆ ಭಕ್ತರು ನವವೃಂದಾವನಕ್ಕೆ ಯತಿಗಳ ದರ್ಶನ ಮಾಡಲು ಹರಸಹಾಸ ಮಾಡಬೇಕಾಗುತ್ತಿತ್ತು. ಅಂದರೆ ನದಿಯ ಮೂಲಕ ಹರಿಗೋಲು ಹಾಕಿಕೊಂಡು ಹೋಗಬೇಕಾದ ಪರಿಸ್ಥಿತಿ ಇತ್ತು. ಇದರಿಂದ ಭಕ್ತರಿಗೆ ತೊಂದರೆಗಿಂತ ಭಯದ ವಾತಾವರಣ ಹೆಚ್ಚಾಗಿರುತ್ತಿತ್ತು. ಇರುವ ಎರಡು ಮೂರು ಹರಿಗೋಲಿನಲ್ಲಿ ಭಕ್ತರು ಹೋಗಬೇಕಾಗುತ್ತಿತ್ತು ಮತ್ತು ಸಂಜೆ ಬೇಗನೆ ವಾಪಾಸು ಬರಬೇಕಾಗುತ್ತಿತ್ತು. ಹೋಗಲು ಬರಲು ಸರಿಯಾದ ವ್ಯವಸ್ಥೆ ಮತ್ತು ಅಪಾಯಕ್ಕೆ ಹೆದರಿ ಭಕ್ತ ಸಮೂಹ ಆಸೆ ಇದ್ದರೂ ಹೋಗಲು ಆಗುತ್ತಿರಲಿಲ್ಲ. ಭಕ್ತರು ಬರುವುದು ಹೆಚ್ಚಾಗಿರುವುದರಿಂದ ಇದಕ್ಕೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿ ಓವರ್ ಬ್ರಿಡ್ಜ್‌ ಮಾಡಬೇಕಾಗಿದೆ. ಹಾಗೆಯೆ ಹೆಚ್ಚಿನ ದೀಪದ ವ್ಯವಸ್ಥೆ, ಸಿಸಿ
ಕ್ಯಾಮೆರಾ ಹಾಗೂ ಭದ್ರತಾ ವ್ಯವಸ್ಥೆ ಮಾಡಬೇಕಾಗಿದೆ.

ಭಕ್ತರು ನವವೃಂದಾವನದ ಅರಾಧನಾ ದಿನ ದಡಸೇರಲು ನದಿಯಲ್ಲಿ ಹಾರಿ ಈಜಾಡಿ ಅಪಾಯ ಮತ್ತು ಅವಘಡಕ್ಕೆ ಕಾರಣವಾಗುತ್ತಾರೆ. ಕಳೆದ ಮೂರು ತಿಂಗಳ ಹಿಂದೆ ಹೊಸಪೇಟೆ ಶ್ರೀ ಅನಂತಾಚಾರ್ ಎಂಬ ಭಕ್ತರೂಬ್ಬರು ನದಿಯಲ್ಲಿ ಹಾರಿ ಈಜಾಡಿ ದಡ ಸೇರಲು ಹೋಗಿ ಮರಣ ಹೋಂದಿದ ಘಟನೆ ಕಣ್ಣ ಮುಂದೆ ಇದೆ.

ಈ ಘಟನೆಯ ಹಿನ್ನೆಲೆಯಲ್ಲಿ ಶ್ರೀ ವ್ಯಾಸರಾಜರ ಆರಾದನೆಗೆ ಅನುಕೂಲ ಮಾಡಿಕೊಂಡು ತಾತ್ಕಾಲಿಕ ಸೇತುವೆಯನ್ನು ರಚಿಸಿ ಸುಗಮವಾಗಿ ಭಕ್ತರು ಹಾದುಹೋಗಲು ವ್ಯವಸ್ಥೆ ಮಾಡಲಾಗಿದ್ದು, ಇದು ಎಲ್ಲ ಭಕ್ತರಿಗೂ ಸಂತಸ ತಂದಿದೆ. ಕಾರಣ ಸರ್ಕಾರದಿಂದ ಈ ನವವೃಂದಾವನಕ್ಕೆ ಸುರಕ್ಷಿತವಾಗಿ ಹೋಗಿ ಬರಲು ಶಾಶ್ವತವಾದ ಸೇತುವೆಯ ನಿರ್ಮಾಣ ಮಾಡಲು ಬಯಸಿದ್ದಾರೆ. ಈಗ ಹಾಕಿರುವ ತಾತ್ಕಾಲಿಕ ಸೇತುವೆ ಮಳೆಗಾಲದಲ್ಲಿ ಯಾವುದೇ ಪ್ರಯೋಜನವಾಗುವುದಿಲ್ಲ, ನದಿಯಲ್ಲಿ ನೀರು ಹರಿದರೆ ಪ್ರಯೋಜನವಾಗುವುದಿಲ್ಲ. ಕಾರಣ ತತಕ್ಷಣ ಜಿಲ್ಲಾಡಳಿತ ಇತ್ತ ಗಮನ ಹರಿಸಲು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮನವಿ ಮಾಡಿರುತ್ತದೆ.

ಲೇಖನ: ಮುರುಳೀಧರ್ ನಾಡಿಗೇರ್, ಹೊಸಪೇಟೆ

Get in Touch With Us info@kalpa.news Whatsapp: 9481252093

Tags: AnegondiBayalu Seeme NewsHospetKanandaNewsWebiteLatestNewsKannadaNava Brindavanaಆನೆಗೊಂದಿನವವೃಂದಾವನಹೊಸಪೇಟೆ
Share209Tweet123Send
Previous Post

ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಭಕ್ತರಿಗೆ ಶ್ರೀಮಠಕ್ಕೆ ಪ್ರವೇಶ ನಿಷಿದ್ಧ: ಸುಬುಧೇಂದ್ರ ಶ್ರೀಗಳ ಕಟ್ಟೆಚ್ಚರ

Next Post

ವಿದ್ಯುತ್ ಸಹ ಇಲ್ಲದ ಮಲೆನಾಡು ಕುಗ್ರಾಮದ ಈ ಮಹಿಳೆ ಕನಸಿಗಾಗಿಯೇ ಬದುಕಿ ಸಾಧಸಿದ ಕಥೆ ಇದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯುತ್ ಸಹ ಇಲ್ಲದ ಮಲೆನಾಡು ಕುಗ್ರಾಮದ ಈ ಮಹಿಳೆ ಕನಸಿಗಾಗಿಯೇ ಬದುಕಿ ಸಾಧಸಿದ ಕಥೆ ಇದು

ವಿದ್ಯುತ್ ಸಹ ಇಲ್ಲದ ಮಲೆನಾಡು ಕುಗ್ರಾಮದ ಈ ಮಹಿಳೆ ಕನಸಿಗಾಗಿಯೇ ಬದುಕಿ ಸಾಧಸಿದ ಕಥೆ ಇದು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

March 26, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

March 26, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL