ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರವೂ ಸಹ ಮುಖ್ಯವಾಗಿದ್ದು, ಇದರ ಭಾಗವಾಗಿ ಆಯುಷ್ ಇಲಾಖೆಯ ಸೇವೆಯನ್ನೂ ಸಹ ಪಡೆಯಿರಿ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಲತಾ ಕರೆ ನೀಡಿದರು.
ನಗರದ ಪೌರಕಾರ್ಮಿಕರಿಗೆ ಆಯುಷ್ ಇಲಾಖೆ ವತಿಯಿಂದ ಆರೋಗ್ಯ ವದ9ಕ ಔಷಧ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಡಾ. ವೀಣಾ ಭಟ್, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ನೀಡುವ ಸೂಚನೆಯನ್ನು ತಪ್ಪದೇ ಪಾಲಿಸಿ ಎಂದರು.
ನಗರದ ಸ್ವಚ್ಛತೆಯನ್ನು ಕಾಪಾಡುವ ಪವಿತ್ರ ಕಾರ್ಯ ಮಾಡುವ ನೀವುಗಳು ನಿಮ್ಮ ಆರೋಗ್ಯದ ಕುರಿತಾಗಿ ಹೆಚ್ಚಿನ ಜಾಗ್ರತೆ ವಹಿಸಿ. ಕಾಲ ಕಾಲಕ್ಕೆ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಕರೆ ನೀಡಿದರು.
ಆರ್ಯುವೇದ ತಜ್ಞ ಡಾ. ಸುದರ್ಶನ್ ಕೆ. ಆಚಾರ್ ಮಾತನಾಡಿ, ಆಯುಷ್ ಇಲಾಖೆ ನೀಡಿದ ಸೂಚನೆಯಂತೆ ಸಾರ್ವಜನಿಕರೊಂದಿಗೆ ನೇರವಾಗಿ ಸಂವಹನ ಮಾಡುವ ಕೆಲವು ಆಯ್ದ ವ್ಯಕ್ತಿಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ ನೀಡಿದ್ದೆವು. ನಿಯಮಿತವಾಗಿ ಔಷಧಿ ತೆಗೆದುಕೊಂಡ ನಂತರ ಅವರ ಆರೋಗ್ಯದಲ್ಲಿ ವೃದ್ಧಿಯಾಗಿರುವುದು ಲ್ಯಾಬ್ ರಿಪೋರ್ಟ್ನಿಂದ ಸಾಬೀತಾಗಿದೆ. ಹೀಗಾಗಿ, ಎಲ್ಲರೂ ಈ ಔಷಧಿಯನ್ನು ತೆಗೆದುಕೊಳ್ಳುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ದೂರವಿಡಬಹುದು ಎಂದರು.
ತಾಲೂಕಿನ ಎಲ್ಲಾ ಆಯುಷ್ ಸಿಬ್ಬಂದಿ ಮತ್ತು ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.
Get In Touch With Us info@kalpa.news Whatsapp: 9481252093
Discussion about this post