ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ: ಸಚಿನ್ ಪಾರ್ಶ್ವನಾಥ್ |
ಇದು ಚಂದ್ರನ್ದು, ಇದು ಸೂರ್ಯಂದು, ಇದು ಪವಿದು, ಇದು ನಮ್ಮನೆ ಕೆಂಪನ್ದು, ಇದು ಚುಕ್ಕಿದು, ಇದು ಗೌರಿದು, ಇದು ಕುಳ್ಳಿದು, ಇದು ಗುಂಡುದು ಮತ್ತಿದು ಪಿಳ್ಳೆದು.. ಏನಿದೆಲ್ಲ ಅಂದುಕೊಂಡ್ರಾ? ಚಿಕ್ಕವರಿದ್ದಾಗ ಅಮ್ಮ #Mother ಊಟದ ತುತ್ತಿಗೆ ಇಡುತ್ತಿದ್ದ ಹೆಸರುಗಳು. ಸೂರ್ಯ, ಚಂದ್ರ, ಗೆಳೆಯರ ಹೆಸರುಗಳು ಬಿಟ್ಟರೆ ಉಳಿದಿದ್ದು ಮನೆಯಲ್ಲಿರುವ ದನ ಕರು, ಬೆಕ್ಕು ನಾಯಿಗಳ ಹೆಸರುಗಳು. ಅವುಗಳನ್ನು ತುಂಬಾ ಪ್ರೀತಿಸೋ ಬಾಲ್ಯ ಅದು. ಅವುಗಳ ಹೆಸರು ಇಟ್ಟರೆ ಖಂಡಿತ ಊಟ ಅಂತೂ ಖಾಲಿ ಆಗುತ್ತದೆ ಎಂಬ ಅಮ್ಮನ ಲೆಕ್ಕಾಚಾರ. ಅದು ಯಾವಾಗಲು ಖಾಲಿಯಾಗಿದೆ ಎಂಬುದು ಅಷ್ಟೇ ಸತ್ಯ. ವಿಷಯ ಅದೇ ಮೊನ್ನೆ ಮೊನ್ನೆ ತಾಯಿ ಭಾರತಿಯಿಂದ ರಕ್ಷಾ ಬಂಧನ #RakshaBandhana ಪಡೆದ ಚಂದಿರಮನ ಸುದ್ದಿ.
ಚಂದ್ರನ #Moon ಮೇಲೆ ನಿಂತು ಒಬ್ಬಳು ತಾಯಿ ಇದು ಭೂಮಿದು, ಇದು ಸೂರ್ಯಂದು, #Sun ಇದು ನಮ್ಮ ಇಸ್ರೋದು #ISRO ಅಂತ ಹೇಳುತ್ತಾ ಭೂಮಿ ಕಡೆ ಕೈ ತೋರಿ ಊಟ ಮಾಡಿಸುವ ದಿನಗಳು ಇನ್ನೇನು ಬಹಳ ದಿನ ಉಳಿದಿಲ್ಲ. ಅಹುದು ವಿಜ್ಞಾನ, ತಂತ್ರಜ್ಞಾನ ಮತ್ತು ಜೊತೆ ಕೊಡುವ ರಾಜಜ್ಞಾನ ಕಂಡರೆ ಆ ದಿನಗಳು ದೂರವಿಲ್ಲ. ಮತ್ತೇನೋ ಏಕೆ? ಇದೇ ಎರಡು ನೂರು ವರ್ಷಗಳ ಹಿಂದೆ ಸಹಸ್ರಾರು ಕಿ ಮೀ ದೂರದಲ್ಲಿರುವ ವ್ಯಕ್ತಿಗಳು ನೋಡುತ್ತಾ ಮಾತಾಡಬಹುದು ಎಂದಿದ್ದರೆ ಜನ ಆತನನ್ನು ಏನು ಮಾಡಿರಬಹುದು?! ಅಂದೆಲ್ಲಾ ತಾಂತ್ರಿಕತೆ ಒಮ್ಮೆಲೇ ಬೆಳೆದು ನಿಲ್ಲಲಿಲ್ಲ. ಆದರೆ ಈಗ ಹಾಗಲ್ಲ, ಜನ ಈ ಬದಲಾವಣೆಗಳಿಗೆ ಹೊಂದಿಸಿಕೊಳ್ಳುವ ಪರಿ ನೋಡಿದರೆ ಅದೊಂದು ಅನಂತ ಪ್ರಕ್ರಿಯೆ ಎಂಬುದು ಅಂತೂ ಸತ್ಯ.

ಚಂದ್ರನ ದಕ್ಷಿಣ ಧ್ರುವ #MoonSouthPole ಈ ದಶಕದೊಳಗೆ ತಾವು ತಲುಪುತ್ತೇವೆ ಎಂದು ಚೀನಾ ಮತ್ತು ಅಮೇರಿಕಾ ಇದಾಗಲೇ ಹೇಳಿಯಾಗಿದೆ. ಹಾಗಾದರೆ ಯಾಕೆ ಇಷ್ಟು ಕಾತುರ ಚಂದ್ರನ ಆ ಭಾಗ ತಲುಪಲು? ಉತ್ತರ ಸರಳ ಚಂದ್ರನನ್ನು ಎರಡು ಭಾಗ ಎಂದುಕೊಂಡರೆ ಒಂದು ಭಾಗ ಎಂದೆಂದಿಗೂ ಬೆಳಕಿನಿಂದ ಕೂಡಿರುತ್ತದೆ ಮತ್ತು ಇನ್ನೊಂದು ಭಾಗ ಕತ್ತಲಿನಿಂದ ಕೂಡಿರಲಿದೆ. ಈಗ ಭಾರತ ತಲುಪಿರುವುದು ಅದೇ ಅಂಧಕಾರ ತುಂಬಿದ ಭಾಗವನ್ನು. ನಿಮಗಿದು ಗೊತ್ತಿರಲಿ, ಇಂತಹ ಸಾಹಸ ಮಾಡಿರುವುದು ರಷ್ಯಾ ಮತ್ತು ಭಾರತ ಮಾತ್ರ. ರಷ್ಯಾ #Russia ಇದರಲ್ಲಿ ವಿಫಲ ಹೊಂದಿದ್ದು ಇತಿಹಾಸ. ಇಲ್ಲಿಯ ತನಕ ಚಂದ್ರನ ತಲುಪಿರುವ ಅಷ್ಟು ನೌಕೆಗಳು ಚಂದ್ರನ ಹೊಳಪಾದ ಬದಿಗೆ ತಲುಪಿದ್ದು, ಇದು ಲ್ಯಾಂಡಿಂಗ್ ಸ್ನೇಹಿ ಎನ್ನಬಹುದು. ಆದರೆ ದಕ್ಷಿಣ ಧ್ರುವ ಅಂತ ಯಾವ ನಾಜೂಕುತನ ಇಲ್ಲದ ಕಠೋರ ತೀರ. ಸದಾ ಕತ್ತಲು, ಪ್ರತಿಕೂಲ ಹವಾಮಾನ, ದೊಡ್ಡ ಗುಂಡಿಗಳು, ಅಷ್ಟೇ ಉಬ್ಬುಗಳು ಇದೆಲ್ಲ ಅದರ ಗುಣವೈಶಿಷ್ಟಗಳು. ಬಹುಷಃ ಇದೇ ಕಾರಣ ಯಾರೂ ಈ ದುಸ್ಸಾಹಸಕ್ಕೆ ಕೈ ಹಾಕಿರಲಿಲ್ಲ. ಮತ್ತೆ ಹೇಳುವುದಾದರೆ ರಷ್ಯಾದ 1200 ಕೋಟಿ ರೂಪಾಯಿಗಳ ಯಾನ ಮುಳುಗಿದ್ದು ಇಲ್ಲಿಯೇ ಆಗಿತ್ತು.


ಮೊದಲೇ ಹೇಳಿದಂತೆ ಜಗತ್ತನ್ನೇ ಲೂಟಿ ಮಾಡಿದ ಬ್ರಿಟಿಷರು 1765 ರಿಂದ 1938 ರವರೆಗೆ ಭಾರತದಿಂದ ಕದ್ದಿದ್ದು ಸುಮಾರು ನಲವತ್ತೈದು ಟ್ರಿಲಿಯನ್ ಡಾಲರ್. ಇದು ಆ ದೇಶದ ಒಟ್ಟು ಜಿಡಿಪಿಯ #GDP 15 ಪಟ್ಟು ಎಂದರೆ ನೀವು ನಂಬಲೇಬೇಕು. ಅಂತಹ ಒಂದು ದೇಶದ ನಾಗರೀಕ ಭಾರತಕ್ಕೆ ಬುದ್ಧಿ ಹೇಳುವುದು ಮೂಢತನ ಅಲ್ಲದೇ ಮತ್ತೇನಿಲ್ಲ. ಬಡ ದೇಶ, ಶೌಚಾಲಯಗಳೇ ಇಲ್ಲದ ದೇಶ ಎಂದು ಅವರಿಂದ ಕರೆಸಿಕೊಳ್ಳುವ ಭಾರತ ಕಳೆದ ಮೂರು ವರ್ಷಗಳಲ್ಲಿ 80 ಕೋಟಿ ಜನರಿಗೆ ದಿನನಿತ್ಯದ ಆಹಾರ ಕೊಡುತ್ತಿದೆ. ಅಷ್ಟು ಆದಾಯ ಇಲ್ಲಿಯೇ ಇರುವ ಇಂದಿಗೂ ಅಲ್ಲಿಯ ದೊರೆಗೆ ಕಾಣಿಕೆ ಕೊಡುವ ದೇಶದ ಬಳಿ ಹೋಗಿ ಬೇಡುವ ದರ್ದು ಇದೆಯೇನು?! ಖಂಡಿತ ಇಲ್ಲ.

1970 ರಿಂದ ಇಲ್ಲಿಯ ತನಕ ಇಸ್ರೋ ಅಭಿವೃದ್ಧಿ ಪಡಿಸಿದ ನಾನೂರಕ್ಕೂ ಹೆಚ್ಚಿನ ತಂತ್ರಜ್ಞಾನ ಸಂಬಂಧೀ ವಿಷಯಗಳಿಂದ 235ಕ್ಕೂ ಹೆಚ್ಚಿನ ಉದ್ಯಮಗಳು ಅನುಕೂಲ ಪಡೆದಿವೆ.
ಈಗಾಗಲೇ ನೂರಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳು ಇಸ್ರೋದೊಂದಿಗೆ ಒಪ್ಪಂದ ಮಾಡಿಕೊಂಡಿವೆ.

ಪರೋಕ್ಷವಾಗಿ ದೇಶದ ಕುರಿತ ಗೌರವ ಹೆಚ್ಚಲಿದ್ದು, ಇದರಿಂದ ಹೆಚ್ಚಿನ ಬಂಡವಾಳ, ಉದ್ಯೋಗ ಸೃಷ್ಟಿ ತನ್ಮೂಲಕ ಅಭಿವೃದ್ಧಿ ಹೊಂದಲಿದೆ. ಇಷ್ಟೆಲ್ಲಾ ಆದಾಯ ಇಸ್ರೋ ಪಡೆದರೂ ಇದು ಕೇವಲ ಪ್ರತಿಶತ 2 ಎಂದರೆ ಒಟ್ಟು ಆದಾಯ ಎಷ್ಟು ಎನ್ನುವ ಅಂದಾಜು ಸಿಗುವುದು ಕಷ್ಟ.
ಆರ್ಥಿಕವಾಗಿ ಹಿಂದುಳಿದಿರುವುದು ಭಾರತದಲ್ಲಿ ಮಾತ್ರ ಅಲ್ಲ. ಅಮೇರಿಕಾದಲ್ಲಿ #America ಸರಿ ಸುಮಾರು ಒಟ್ಟು ಜನ ಸಂಖ್ಯೆಯ 12%, ರಷ್ಯಾದಲ್ಲಿ 12% ಅಷ್ಟೇ ಏಕೆ ಬ್ರಿಟನಿನಲ್ಲಿ 20% ಬಡವರಿದ್ದಾರೆ. ಹಾಗೆಂದು ದೇಶದ ಅಭಿವೃದ್ಧಿ ಎಂದಿಗೂ ನಿಲ್ಲಬಾರದು. ದೇಶ ಕಾಯುವ ಸೈನಿಕ, ದೇಶ ಪೊರೆವ ರೈತ ಹಾಗೆಯೇ ದೇಶದ ವಿಜ್ಞಾನಿ, ಅವರನ್ನು ಗೌರವ ಕೊಟ್ಟು ಕಾಯುವ ಹಾಗೂ ಅವರ ಸಾಧನೆಗಳ ಪ್ರೋತ್ಸಾಹಿಸುವ ಜವಾಬ್ದಾರಿ ಭಾರತೀಯರ ಮೇಲಿದೆ. ಆರ್ಥಿಕ ಜಗತ್ತಿನ ಮೂರನೇ ಸ್ಥಾನಕ್ಕೆ ದಾಪುಗಾಲು ಇಡುತ್ತಿರುವ ಈ ಹೊತ್ತಿನಲ್ಲಿ ಇಸ್ರೋದ ಕನಸು; ಭಾರತದ ಕನಸು, ಭಾರತದ ಕನಸು; ಭಾರತೀಯರ ಕನಸು. ಪ್ರಿಯಂ ಭಾರತಂ ತತ್ ಸದಾ ಪೂಜನೀಯಂ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post