No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Sunday, February 8, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಸಚಿನ್ ಪಾರ್ಶ್ವನಾಥ್

ಚಂದ್ರನ ಮೇಲೆ ನಿಂತು ಇದು ಭೂಮಿದು ಅಂತ ಅಮ್ಮ ಊಟ ಮಾಡಿಸುವ ದಿನಗಳು ದೂರವಿಲ್ಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2023
in ಸಚಿನ್ ಪಾರ್ಶ್ವನಾಥ್
0
ಚಂದ್ರನ ಮೇಲೆ ನಿಂತು ಇದು ಭೂಮಿದು ಅಂತ ಅಮ್ಮ ಊಟ ಮಾಡಿಸುವ ದಿನಗಳು ದೂರವಿಲ್ಲ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಸಚಿನ್ ಪಾರ್ಶ್ವನಾಥ್  |

ಇದು ಚಂದ್ರನ್ದು, ಇದು ಸೂರ್ಯಂದು, ಇದು ಪವಿದು, ಇದು ನಮ್ಮನೆ ಕೆಂಪನ್ದು, ಇದು ಚುಕ್ಕಿದು, ಇದು ಗೌರಿದು, ಇದು ಕುಳ್ಳಿದು, ಇದು ಗುಂಡುದು ಮತ್ತಿದು ಪಿಳ್ಳೆದು.. ಏನಿದೆಲ್ಲ ಅಂದುಕೊಂಡ್ರಾ? ಚಿಕ್ಕವರಿದ್ದಾಗ ಅಮ್ಮ #Mother ಊಟದ ತುತ್ತಿಗೆ ಇಡುತ್ತಿದ್ದ ಹೆಸರುಗಳು. ಸೂರ್ಯ, ಚಂದ್ರ, ಗೆಳೆಯರ ಹೆಸರುಗಳು ಬಿಟ್ಟರೆ ಉಳಿದಿದ್ದು ಮನೆಯಲ್ಲಿರುವ ದನ ಕರು, ಬೆಕ್ಕು ನಾಯಿಗಳ ಹೆಸರುಗಳು. ಅವುಗಳನ್ನು ತುಂಬಾ ಪ್ರೀತಿಸೋ ಬಾಲ್ಯ ಅದು. ಅವುಗಳ ಹೆಸರು ಇಟ್ಟರೆ ಖಂಡಿತ ಊಟ ಅಂತೂ ಖಾಲಿ ಆಗುತ್ತದೆ ಎಂಬ ಅಮ್ಮನ ಲೆಕ್ಕಾಚಾರ. ಅದು ಯಾವಾಗಲು ಖಾಲಿಯಾಗಿದೆ ಎಂಬುದು ಅಷ್ಟೇ ಸತ್ಯ. ವಿಷಯ ಅದೇ ಮೊನ್ನೆ ಮೊನ್ನೆ ತಾಯಿ ಭಾರತಿಯಿಂದ ರಕ್ಷಾ ಬಂಧನ #RakshaBandhana ಪಡೆದ ಚಂದಿರಮನ ಸುದ್ದಿ.

ಚಂದ್ರನ #Moon ಮೇಲೆ ನಿಂತು ಒಬ್ಬಳು ತಾಯಿ ಇದು ಭೂಮಿದು, ಇದು ಸೂರ್ಯಂದು, #Sun ಇದು ನಮ್ಮ ಇಸ್ರೋದು #ISRO ಅಂತ ಹೇಳುತ್ತಾ ಭೂಮಿ ಕಡೆ ಕೈ ತೋರಿ ಊಟ ಮಾಡಿಸುವ ದಿನಗಳು ಇನ್ನೇನು ಬಹಳ ದಿನ ಉಳಿದಿಲ್ಲ. ಅಹುದು ವಿಜ್ಞಾನ, ತಂತ್ರಜ್ಞಾನ ಮತ್ತು ಜೊತೆ ಕೊಡುವ ರಾಜಜ್ಞಾನ ಕಂಡರೆ ಆ ದಿನಗಳು ದೂರವಿಲ್ಲ. ಮತ್ತೇನೋ ಏಕೆ? ಇದೇ ಎರಡು ನೂರು ವರ್ಷಗಳ ಹಿಂದೆ ಸಹಸ್ರಾರು ಕಿ ಮೀ ದೂರದಲ್ಲಿರುವ ವ್ಯಕ್ತಿಗಳು ನೋಡುತ್ತಾ ಮಾತಾಡಬಹುದು ಎಂದಿದ್ದರೆ ಜನ ಆತನನ್ನು ಏನು ಮಾಡಿರಬಹುದು?! ಅಂದೆಲ್ಲಾ ತಾಂತ್ರಿಕತೆ ಒಮ್ಮೆಲೇ ಬೆಳೆದು ನಿಲ್ಲಲಿಲ್ಲ. ಆದರೆ ಈಗ ಹಾಗಲ್ಲ, ಜನ ಈ ಬದಲಾವಣೆಗಳಿಗೆ ಹೊಂದಿಸಿಕೊಳ್ಳುವ ಪರಿ ನೋಡಿದರೆ ಅದೊಂದು ಅನಂತ ಪ್ರಕ್ರಿಯೆ ಎಂಬುದು ಅಂತೂ ಸತ್ಯ.
ಮೊನ್ನೆ ಮೊನ್ನೆ ಚಂದ್ರಯಾನ-3 #Chandrayana3 ನಿರೀಕ್ಷಿತ ಯಶಸ್ಸು ಗಳಿಸಿ, ಜನಮಾನಸದಲ್ಲಿ ಇನ್ನು ಹಾಗೆ ಉಳಿದಿದೆ. ಆದರೆ ಈಗಲೂ ಅದರ ಗೆಲುವು ಹಲವೆಡೆ ಅಳಿಸಲಾಗದ ಉರಿ ಹಚ್ಚಿ ಹೋಗಿದೆ. ಈಗ ಅದರ ಕುರಿತ ಪ್ರತಿಕ್ರಿಯೆ ಮತ್ತು ಯಾನದಿಂದ ಆಗುವ ಉಪಯೋಗ ನೋಡಿದರೆ ಈ ವಿಷಯ ಗಂಭೀರತೆ ಅರ್ಥ ಆಗಬಹುದು ಎನ್ನಿಸುತ್ತದೆ.

ಚಂದ್ರನ ದಕ್ಷಿಣ ಧ್ರುವ #MoonSouthPole ಈ ದಶಕದೊಳಗೆ ತಾವು ತಲುಪುತ್ತೇವೆ ಎಂದು ಚೀನಾ ಮತ್ತು ಅಮೇರಿಕಾ ಇದಾಗಲೇ ಹೇಳಿಯಾಗಿದೆ. ಹಾಗಾದರೆ ಯಾಕೆ ಇಷ್ಟು ಕಾತುರ ಚಂದ್ರನ ಆ ಭಾಗ ತಲುಪಲು? ಉತ್ತರ ಸರಳ ಚಂದ್ರನನ್ನು ಎರಡು ಭಾಗ ಎಂದುಕೊಂಡರೆ ಒಂದು ಭಾಗ ಎಂದೆಂದಿಗೂ ಬೆಳಕಿನಿಂದ ಕೂಡಿರುತ್ತದೆ ಮತ್ತು ಇನ್ನೊಂದು ಭಾಗ ಕತ್ತಲಿನಿಂದ ಕೂಡಿರಲಿದೆ. ಈಗ ಭಾರತ ತಲುಪಿರುವುದು ಅದೇ ಅಂಧಕಾರ ತುಂಬಿದ ಭಾಗವನ್ನು. ನಿಮಗಿದು ಗೊತ್ತಿರಲಿ, ಇಂತಹ ಸಾಹಸ ಮಾಡಿರುವುದು ರಷ್ಯಾ ಮತ್ತು ಭಾರತ ಮಾತ್ರ. ರಷ್ಯಾ #Russia ಇದರಲ್ಲಿ ವಿಫಲ ಹೊಂದಿದ್ದು ಇತಿಹಾಸ. ಇಲ್ಲಿಯ ತನಕ ಚಂದ್ರನ ತಲುಪಿರುವ ಅಷ್ಟು ನೌಕೆಗಳು ಚಂದ್ರನ ಹೊಳಪಾದ ಬದಿಗೆ ತಲುಪಿದ್ದು, ಇದು ಲ್ಯಾಂಡಿಂಗ್ ಸ್ನೇಹಿ ಎನ್ನಬಹುದು. ಆದರೆ ದಕ್ಷಿಣ ಧ್ರುವ ಅಂತ ಯಾವ ನಾಜೂಕುತನ ಇಲ್ಲದ ಕಠೋರ ತೀರ. ಸದಾ ಕತ್ತಲು, ಪ್ರತಿಕೂಲ ಹವಾಮಾನ, ದೊಡ್ಡ ಗುಂಡಿಗಳು, ಅಷ್ಟೇ ಉಬ್ಬುಗಳು ಇದೆಲ್ಲ ಅದರ ಗುಣವೈಶಿಷ್ಟಗಳು. ಬಹುಷಃ ಇದೇ ಕಾರಣ ಯಾರೂ ಈ ದುಸ್ಸಾಹಸಕ್ಕೆ ಕೈ ಹಾಕಿರಲಿಲ್ಲ. ಮತ್ತೆ ಹೇಳುವುದಾದರೆ ರಷ್ಯಾದ 1200 ಕೋಟಿ ರೂಪಾಯಿಗಳ ಯಾನ ಮುಳುಗಿದ್ದು ಇಲ್ಲಿಯೇ ಆಗಿತ್ತು.
ಹಾಗಾದರೆ ಚಂದ್ರನ ಈ ಭಾಗ ಇಷ್ಟೊಂದು ರೋಚಕ ಮತ್ತು ಪ್ರಯೋಜನಕಾರಿ ಅನ್ನಿಸಿಕೊಳ್ಳುವುದು ಏಕೆ? ಪ್ರಥಮ ಚಂದ್ರಯಾನ ಹಾಗೂ ದ್ವಿತೀಯ ಚಂದ್ರಯಾನದ ಫಲಿತಾಂಶವಾಗಿ ಅಲ್ಲಿ ಹಿಮದ ಅಂಶ ಇರುವ ಸೂಚನೆ ಸಿಕ್ಕಿತ್ತು. ಅದು ಬಾಹ್ಯಾಕಾಶ ಜೀವಿಯೇ ಸಿಕ್ಕಷ್ಟು ಸಂಭ್ರಮ ಪಡುವ ಸುದ್ದಿ ಯಾಕೆಂದರೆ ಈ ಹಿಮ ಮುಂದಿನ ದಿನಗಳಲ್ಲಿ ಪ್ರಾಣಜಲ, ಇಂಧನ ಮತ್ತು ಪ್ರಾಣವಾಯು ಕೂಡ ಆಗಬಹುದಾದ ವಸ್ತು. ಈ ಹಿಮವೇ ಆಧಾರವಾಗಿ ಮುಂದಿನ ಎಲ್ಲಾ ಬಾಹ್ಯಾಕಾಶ ಯಾತ್ರೆಗಳು ಚಂದ್ರನ ಒಡಲಿಂದ ಮೇಲೆದ್ದರೆ ಅದು ಅಂತಹ ಜೇಬುಸ್ನೇಹಿ ಕೂಡ ಆಗಿರಲಿದೆ. ಭೂಮಿಯ ಗುರುತ್ವಾಕರ್ಷಣೆ ತಪ್ಪಿಸುವ ಮತ್ತು ಇಲ್ಲಿಂದ ತೆರಳಲು ತಗಲುವ ವೆಚ್ಚದಲ್ಲಿ ದೊಡ್ಡ ಮಟ್ಟದಲ್ಲಿ ಉಳಿತಾಯ ಆಗಲಿದೆ.
ಎಲಾ ಭಾರತವೇ ನಮ್ಮ ಹತ್ತಿರವೇ ಪ್ರತಿ ವರ್ಷ ಧರ್ಮದ ದುಡ್ಡು ತೆಗೆದುಕೊಂಡು, ನೀವು ಚಂದ್ರಯಾನ ಮಾಡುತ್ತಿದ್ದೀರಾ ಅಂತ ಪ್ಯಾಟ್ರಿಕ್ ಕ್ರಿಷ್ಟಿ ಎಂಬಾತ ಊಳಿಟ್ಟಿದ್ದು ಇದಾಗಲೇ ವೈರಲ್ ಆಗಿದೆ. ಈತ ಗ್ರೇಟ್ ಬ್ರಿಟನ್ ಎಂಬ ಸುದ್ದಿ ಸಂಸ್ಥೆಗೆ ಸೇರಿದ ಪತ್ರಕರ್ತ. ಮೊದಲು ಆತನ ವರಾತ ಕೇಳಿ, ‘2016-21ರ ವರೆಗೆ ಭಾರತಕ್ಕೆ ಯುಕೆ ಕೊಟ್ಟಿರುವ ದುಡ್ಡು 2.3 ಬಿಲಿಯನ್ ಪೌಂಡ್ಸ್ ಹಾಗೂ ಮುಂದಿನ ವರ್ಷ ಕೊಡಲಿರುವ ಐವತ್ತೇಳು ಮಿಲಿಯನ್ ಪೌಂಡ್ಸ್ ಅನ್ನು ತಡೆಯಬೇಕು. ಭಾರತದ ಬಳಿ ರಾಕೆಟ್ ಹಾರಿಸಲು ದುಡ್ಡಿದೆ. ಬ್ರಿಟನ್ ಗೆ ತನ್ನ ತೆರಿಗೆದಾರರ ಹಣ ಪೋಲು ಮಾಡಿ ಭಾರತಕ್ಕೆ ನೀಡುವ ಅವಶ್ಯಕತೆ ಏನಿದೆ? ನೀವು ಬಾಹ್ಯಾಕಾಶ ಯಾನ ಮಾಡುತ್ತೀರಿ ಎಂದಾದರೆ ನಮ್ಮ ಬಳಿ ಕೈಯ್ಯೊಡ್ಡಲು ಯಾಕೆ ಬಂದಿರಿ?’ ಎಂಬುದು. ಅರ್ಧ ಭಾರತ ಬಡವರಿಂದ ತುಂಬಿದೆ, ಈಗ ಯಾಕೆ ಚಂದ್ರಯಾನ ಎನ್ನುವುದು ಅವರ ಮೊಂಡು ವಾದ. ನೈಜ ವಿಷಯ ಏನು ಎಂದರೆ, ಭಾರತ ಜಗತ್ತಿನ ಐದನೇ ಅತೀ ದೊಡ್ಡ ಆರ್ಥಿಕತೆ. ಯುನೈಟೆಡ್ ಕಿಂಗ್ಡಮ್ ಎಂದು ಕರೆಸಿಕೊಳ್ಳುವ ದರೋಡೆಕೋರ ದೇಶಕ್ಕೆ ತನಗಿಂತ ಮೊದಲು ತಾನು ಎರಡು ನೂರು ವರ್ಷಗಳ ಕಾಲ ದೋಚಿದ ದೇಶ ಚಂದ್ರನ ತಲುಪಿದ್ದು ತಾಳಲು ಆಗಲೇ ಇಲ್ಲ. ಭಾರತ 2015 ರಿಂದಲೇ ಬ್ರಿಟನ್ ಒಂದು ಬಿಡಿಗಾಸು ಧರ್ಮಕ್ಕೆ ಪಡೆದಿಲ್ಲ. ಹಾಗಾದರೆ ಆತ ಹೇಳುವ ಬಿಲಿಯನ್ ಕಥೆ ಯಾವದಕ್ಕೆ ಸಂಬಂಧ ಪಟ್ಟಿದ್ದು ಎಂದರೆ, #ICAI ಪ್ರಕಾರ ಇದು ಬಹುಪಕ್ಷೀಯ ಮೂಲಗಳ ಮೂಲಕ ಹೂಡಿಕೆ ಮತ್ತು ಆದಾಯ. ಇದು ಕೇವಲ ಭಾರತದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಯುಕೆ ಖರ್ಚು ಮಾಡುತ್ತಿರುವ ಮೊತ್ತ. ಇನ್ನು ಸರಳವಾಗಿ ಹೇಳುವುದಾದರೆ, ದೊಡ್ಡ ಪ್ರಮಾಣದಲ್ಲಿ #NGO ಗಳಿಗೆ ಹರಿದು ಬಂದ ಹಣ. ಇದರಿಂದ ಭಾರತಕ್ಕೆ ನಷ್ಟ ಆಗಿದೆಯೇ ಹೊರತು ಉಪಯೋಗವಂತು ಇಲ್ಲ. ಭಾರತದಲ್ಲಿ ಬ್ರಿಟಿಷ್ ಸಂಬಂಧೀ ಧನಾತ್ಮಕ ವಾತಾವರಣ ಬೆಳೆಸಲು, ದೇಶ ವಿರೋಧಿ ಚಟುವಟಿಕೆಗಳಿಗೆ ಬಲ ತುಂಬಲು ಬಳಕೆ ಆಗಿದ್ದೇ ಜಾಸ್ತಿ. ವಿಪರ್ಯಾಸವೆಂದರೆ, ಅದೇ ಕ್ರಿಷ್ಟಿಯ ದೇಶದಲ್ಲಿ ಭಾರತ ಎರಡನೇ ಅತೀ ದೊಡ್ಡ ವಿದೇಶೀ ಹೂಡಿಕೆದಾರವಾಗಿದೆ. ಅಂದರೆ, ಸರಿ ಸುಮಾರು 954 ಭಾರತೀಯ ಕಂಪನಿಗಳು ಅಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಮೊದಲೇ ಹೇಳಿದಂತೆ ಜಗತ್ತನ್ನೇ ಲೂಟಿ ಮಾಡಿದ ಬ್ರಿಟಿಷರು 1765 ರಿಂದ 1938 ರವರೆಗೆ ಭಾರತದಿಂದ ಕದ್ದಿದ್ದು ಸುಮಾರು ನಲವತ್ತೈದು ಟ್ರಿಲಿಯನ್ ಡಾಲರ್. ಇದು ಆ ದೇಶದ ಒಟ್ಟು ಜಿಡಿಪಿಯ #GDP 15 ಪಟ್ಟು ಎಂದರೆ ನೀವು ನಂಬಲೇಬೇಕು. ಅಂತಹ ಒಂದು ದೇಶದ ನಾಗರೀಕ ಭಾರತಕ್ಕೆ ಬುದ್ಧಿ ಹೇಳುವುದು ಮೂಢತನ ಅಲ್ಲದೇ ಮತ್ತೇನಿಲ್ಲ. ಬಡ ದೇಶ, ಶೌಚಾಲಯಗಳೇ ಇಲ್ಲದ ದೇಶ ಎಂದು ಅವರಿಂದ ಕರೆಸಿಕೊಳ್ಳುವ ಭಾರತ ಕಳೆದ ಮೂರು ವರ್ಷಗಳಲ್ಲಿ 80 ಕೋಟಿ ಜನರಿಗೆ ದಿನನಿತ್ಯದ ಆಹಾರ ಕೊಡುತ್ತಿದೆ. ಅಷ್ಟು ಆದಾಯ ಇಲ್ಲಿಯೇ ಇರುವ ಇಂದಿಗೂ ಅಲ್ಲಿಯ ದೊರೆಗೆ ಕಾಣಿಕೆ ಕೊಡುವ ದೇಶದ ಬಳಿ ಹೋಗಿ ಬೇಡುವ ದರ್ದು ಇದೆಯೇನು?! ಖಂಡಿತ ಇಲ್ಲ.
ಅಲ್ಲ ಕಣ್ರಿ ಇವ್ರೇ ಯಾರಿಗೆ ಬೇಕ್ರಿ ಈ ರಾಕೆಟ್ ಬಿಡೋದು, ನೂರಾರು ಕೋಟಿ ಖರ್ಚು… ದೇಶದ ತುಂಬಾ ಬಡತನ, ಅರ್ಧ ಜನರ ಹತ್ರ ಟಾಯ್ಲೆಟ್ ಇಲ್ವಂತೆ ಎನ್ನುವ ಇನ್ನೊಂದು ವರ್ಗ ಇದೆ. ಜಗತ್ತಿನ ದೊಡ್ಡ ಪ್ರತಿಮೆ ಕಟ್ಟಿದರೂ ಇದೇ ಗೋಳು, ಚಂದ್ರನ ಸೂರ್ಯನ ಮುಟ್ಟಿ ಬಂದರೂ ಇದೇ ಗೋಳು ಅದು ಬಿಡಿ ಭಾರತದ ಅಸ್ಮಿತೆ ಶ್ರೀರಾಮನ ಮಂದಿರವೂ ಇವರಿಗೆ ಬೇಡ. ಅದರಿಂದ ಬರುವ ಆದಾಯಗಳ ಇನ್ನೊಮ್ಮೆ ನೋಡೋಣ. ಈಗ ಇಸ್ರೋ ಬಗ್ಗೆ ಹೇಳುವುದಾದರೆ,

1970 ರಿಂದ ಇಲ್ಲಿಯ ತನಕ ಇಸ್ರೋ ಅಭಿವೃದ್ಧಿ ಪಡಿಸಿದ ನಾನೂರಕ್ಕೂ ಹೆಚ್ಚಿನ ತಂತ್ರಜ್ಞಾನ ಸಂಬಂಧೀ ವಿಷಯಗಳಿಂದ 235ಕ್ಕೂ ಹೆಚ್ಚಿನ ಉದ್ಯಮಗಳು ಅನುಕೂಲ ಪಡೆದಿವೆ.

ಈಗಾಗಲೇ ನೂರಕ್ಕೂ ಹೆಚ್ಚು ಸ್ಟಾರ್ಟ್ ಅಪ್ ಗಳು ಇಸ್ರೋದೊಂದಿಗೆ ಒಪ್ಪಂದ ಮಾಡಿಕೊಂಡಿವೆ.
ಕೇವಲ ವಿದೇಶೀ ಉಪಗ್ರಹಗಳಿಗೆ ಜೊತೆಯಾಗುವ ಮೂಲಕ ಇಸ್ರೋ ಸರಿ ಸುಮಾರು 3300 ಕೋಟಿ ರೂಪಾಯಿಗಳ ಆದಾಯ ಗಳಿಸಿದೆ ಎಂದರೆ ನಂಬಲೇಬೇಕಾದ ವಿಷಯ.

ಪರೋಕ್ಷವಾಗಿ ದೇಶದ ಕುರಿತ ಗೌರವ ಹೆಚ್ಚಲಿದ್ದು, ಇದರಿಂದ ಹೆಚ್ಚಿನ ಬಂಡವಾಳ, ಉದ್ಯೋಗ ಸೃಷ್ಟಿ ತನ್ಮೂಲಕ ಅಭಿವೃದ್ಧಿ ಹೊಂದಲಿದೆ. ಇಷ್ಟೆಲ್ಲಾ ಆದಾಯ ಇಸ್ರೋ ಪಡೆದರೂ ಇದು ಕೇವಲ ಪ್ರತಿಶತ 2 ಎಂದರೆ ಒಟ್ಟು ಆದಾಯ ಎಷ್ಟು ಎನ್ನುವ ಅಂದಾಜು ಸಿಗುವುದು ಕಷ್ಟ.

ಆರ್ಥಿಕವಾಗಿ ಹಿಂದುಳಿದಿರುವುದು ಭಾರತದಲ್ಲಿ ಮಾತ್ರ ಅಲ್ಲ. ಅಮೇರಿಕಾದಲ್ಲಿ #America ಸರಿ ಸುಮಾರು ಒಟ್ಟು ಜನ ಸಂಖ್ಯೆಯ 12%, ರಷ್ಯಾದಲ್ಲಿ 12% ಅಷ್ಟೇ ಏಕೆ ಬ್ರಿಟನಿನಲ್ಲಿ 20% ಬಡವರಿದ್ದಾರೆ. ಹಾಗೆಂದು ದೇಶದ ಅಭಿವೃದ್ಧಿ ಎಂದಿಗೂ ನಿಲ್ಲಬಾರದು. ದೇಶ ಕಾಯುವ ಸೈನಿಕ, ದೇಶ ಪೊರೆವ ರೈತ ಹಾಗೆಯೇ ದೇಶದ ವಿಜ್ಞಾನಿ, ಅವರನ್ನು ಗೌರವ ಕೊಟ್ಟು ಕಾಯುವ ಹಾಗೂ ಅವರ ಸಾಧನೆಗಳ ಪ್ರೋತ್ಸಾಹಿಸುವ ಜವಾಬ್ದಾರಿ ಭಾರತೀಯರ ಮೇಲಿದೆ. ಆರ್ಥಿಕ ಜಗತ್ತಿನ ಮೂರನೇ ಸ್ಥಾನಕ್ಕೆ ದಾಪುಗಾಲು ಇಡುತ್ತಿರುವ ಈ ಹೊತ್ತಿನಲ್ಲಿ ಇಸ್ರೋದ ಕನಸು; ಭಾರತದ ಕನಸು, ಭಾರತದ ಕನಸು; ಭಾರತೀಯರ ಕನಸು. ಪ್ರಿಯಂ ಭಾರತಂ ತತ್ ಸದಾ ಪೂಜನೀಯಂ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Chandrayaan-3ICAIIndiaISROSachin ParswanathStart upUnited Kingdomಅಸ್ಮಿತೆಇಸ್ರೋಚಂದ್ರಚಂದ್ರಯಾನ-3ಭಾರತಯುನೈಟೆಡ್ ಕಿಂಗ್’ಡಮ್ವಿಜ್ಞಾನಶ್ರೀರಾಮ ಮಂದಿರಸಚಿನ್ ಪಾರ್ಶ್ವನಾಥ್ಸ್ಟಾರ್ಟ್ ಅಪ್
Share196Tweet123Send
Previous Post

ಭದ್ರಾವತಿ | ಸಣ್ಣಪುಟ್ಟ ವ್ಯಾಜ್ಯಗಳನ್ನು ಸರಿಪಡಿಸಿಕೊಳ್ಳಿ, ಶಾಂತಿ ಕದಡಬೇಡಿ: ಎಸ್’ಪಿ ಮಿಥುನ್ ಕುಮಾರ್

Next Post

`ಇಂಡಿಯಾ’ ಇನ್ಮುಂದೆ `ಭಾರತ್’? ನಿರ್ಣಯ ಮಂಡಿಸಲಿದ್ದಾರಾ ಪ್ರಧಾನಿ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
PM attends third ‘No Money for Terror’ Ministerial Conference

`ಇಂಡಿಯಾ' ಇನ್ಮುಂದೆ `ಭಾರತ್'? ನಿರ್ಣಯ ಮಂಡಿಸಲಿದ್ದಾರಾ ಪ್ರಧಾನಿ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಹುಗಲವಳ್ಳಿ ಚಿನ್ನೇಗೌಡ ನಿಧನ

ಹುಗಲವಳ್ಳಿ ಚಿನ್ನೇಗೌಡ ನಿಧನ

February 7, 2026
ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆ | ಇಬ್ಬರು ಆರೋಪಿಗಳಿಗೆ 2 ವರ್ಷ ಜೈಲು

February 7, 2026
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

February 7, 2026
ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

ತೀರ್ಥಹಳ್ಳಿ | ಜಾನುವಾರು ಕಳ್ಳತನ ಪ್ರಕರಣ | ಮೂವರ ಬಂಧನ

February 7, 2026
ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ವಿದೇಶಿ ಹೂಡಿಕೆ ವಂಚನೆ |11 ಜನರ ಬಂಧನ

February 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL