Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕರಾವಳಿಯ ಈ ಯುವತಿಯ ಸಾಧನೆಗೆ ಕ್ಷೇತ್ರಗಳೇ ಸಾಲದು

July 28, 2019
in Special Articles
0 0
0
Share on facebookShare on TwitterWhatsapp
Read - 3 minutes

ಸಾಧಿಸಿದರೆ ಸಬಲವನ್ನೂ ನುಂಗಬಹುದು ಎಂಬ ಉಕ್ತಿಯಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಾ ತಾನು ಜನಿಸಿರುವಾಗ, ಯಾರು ಈಕೆ ಒಂದು ಹೆಣ್ಣೆಂದು ಕೀಳಾಗಿ ಕಂಡಿದ್ದಾರೆಯೋ…. ಅಂಥವರ ಮುಂದೆ ಇಂದು ಗಂಡಿಗಿಂತ ಯಾವುದೇ ರೀತಿಯಲ್ಲೂ ಕಡಿಮೆ ಇಲ್ಲ ಎಂಬುದನ್ನು ತೋರಿಸಿಕೊಟ್ಟು, ಇಂದು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವವರು ನಮ್ಮ ಪುನರೂರಿನ ಕುಮಾರಿ ಶ್ರೀಲತಾ ಎಸ್. ತಂತ್ರಿ.

ಹೌದು, ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬಂತೆ, ಇವರನ್ನು ಕೀಳೆಂದು ಕಂಡ ಸಮಾಜದಲ್ಲಿ ಒಬ್ಬ ಮಾದರಿ ಹೆಣ್ಣಾಗಿ ಕಾಣಬೇಕೆಂಬ ಹಂಬಲದೊಂದಿಗೆ ಸಾಧನೆಯ ಹಾದಿಯಲ್ಲಿದ್ದಾರೆ ಈಕೆ.

ನೃತ್ಯ ಪ್ರಕಾರಗಳ ಆಗರ
ಮನೆಯೇ ಮೊದಲ ಪಾಠಶಾಲೆ-ಜನನಿ ತಾನೆ ಮೊದಲ ಗುರು ಎಂಬಂತೆ ತಾನು ಎರಡು ವರ್ಷದವಳಿದ್ದಾಗ ತನಗೆ ತಾಯಿಯೇ ನೃತ್ಯ ಅಭ್ಯಾಸವನ್ನು ಕಲಿಸುತ್ತಾ ಮುಂದೆ ತಾನು ನಾಲ್ಕನೆಯ ತರಗತಿಯಲ್ಲಿರುವ ಸಂದರ್ಭದಲ್ಲಿ ಪುನರೂರಿನ ಡಮರು ನಾಟ್ಯಾಲಯದ ವಿದುಷಿ ಸುಜಾತ ಶ್ಯಾಮ್ ಸುಂದರ್ ಇವರಲ್ಲಿ ಶಿಷ್ಯೆಯಾಗಿ ಸೇರಿಕೊಂಡು ಭರತನಾಟ್ಯ, ಕೂಚುಪುಡಿ, ಮೋಹಿನಿಯಾಟ್ಟಂನಂತಹ ಇನ್ನೂ ಹಲವಾರು ನೃತ್ಯ ಪ್ರಕಾರಗಳನ್ನು ಕಲಿತರು.

ತನ್ನ ಪ್ರಾಥಮಿಕ ಶಿಕ್ಷಣವನ್ನು ಪುನರೂರಿನ ಭಾರತ ಮಾತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿದ ಈಕೆ, ಮುಂದಿನ ಪ್ರೌಢಶಿಕ್ಷಣವನ್ನು ಕಟೀಲಿನ ಶ್ರೀದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕ್ರೀಡಾ ಚಟುವಟಿಕೆಯಲ್ಲಿದ್ದ ಆಸಕ್ತಿಯನ್ನು ಗಮನಿಸಿದ ಅಲ್ಲಿಯ ದೈಹಿಕ ಶಿಕ್ಷಕರಾಗಿದ್ದ ಶ್ರೀ ಪುಂಡರೀಕ ಕೊಟ್ಟಾರಿ ಅವರು ವಿಶೇಷ ತರಬೇತಿಯನ್ನು ನೀಡುತ್ತಾರೆ.

ಪ್ರತಿಭಾ ಚೇತನ
ನಂತರ ಕಬಡ್ಡಿ ಹಾಗೂ ಫುಟ್ಬಾಲ್ ಆಟಗಳಲ್ಲಿ ಉತ್ತಮ ಆಟಗಾರ್ತಿಯಾಗಿ ಮಿಂಚಿದ್ದಾರೆ. ಜೊತೆಗೆ ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ರಾಜ್ಯ ಮಟ್ಟಕ್ಕೆ ಹಾಗೂ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಮಿಂಚಿರುತ್ತಾರೆ. ಇಷ್ಟು ಮಾತ್ರವಲ್ಲದೆ ಪ್ರಾಥಮಿಕ ಶಾಲೆಯಲ್ಲಿ ಉತ್ತಮ ಸಂಸದೀಯ ಪಟು ಎಂದೂ ಗುರುತಿಸಿಕೊಂಡಿರುತ್ತಾರೆ. ಅದೇ ರೀತಿ ಕಲಿಕೆಯಲ್ಲೂ ತಾನು ಯಾವುದೇ ರೀತಿಯಲ್ಲೂ ಕಡಿಮೆಯಿಲ್ಲವೆಂಬಂತೆ ಎಸ್’ಎಸ್’ಎಲ್’ಸಿಯಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಶೇ.94ರಷ್ಟು ಅಂಕ ಪಡೆದು ಶಾಲೆಗೆ ಹಾಗೂ ಊರಿಗೆ ಕೀರ್ತಿ ತಂದ ಹೆಗ್ಗಳಿಕೆ ಇವರದು.

ಮುಂದೆ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿ ಕಟೀಲಿನ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಸಂದರ್ಭ ನಡೆದ ಬಾಲಕಿಯರ ಕಬ್ಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಬಿಎಸ್’ಸಿ ವ್ಯಾಸಾಂಗ ಮಾಡುತ್ತಿದ್ದು, ರಾಷ್ಟ್ರೀಯ ಸೇವಾ ಯೋಜನೆ(ಎನ್’ಎಸ್’ಎಸ್)ಯ ಸ್ವಯಂ ಸೇವಕಿಯಾಗಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ನಾಯಕತ್ವ ಶಿಬಿರದಲ್ಲಿ ಹಾಗೂ ಧಾರವಾಡದಲ್ಲಿ ನಡೆದ National Integration Campನಲ್ಲಿ ಭಾಗವಹಿಸುವುದರ ಜೊತೆಗೆ ಇದುವರೆಗೆ ಢಮರು ನಾಟ್ಯಾಲಯದ ಮುಖೇನ ಹಲವಾರು ಕಡೆಗಳಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದ್ದಾರೆ.

ಮಾತ್ರವಲ್ಲದೇ, ಅನೇಕ ಕಡೆಗಳಲ್ಲಿ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲೂ ಬಹುಮಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದು, ಹಲವು ಪ್ರಕಾರದ ನಾಟಕಗಳಲ್ಲಿ ಅಭಿನಯಿಸಿದ ಕೀರ್ತಿ ಇವರಿಗೆ ಸಲ್ಲುವಂತಹದ್ದು.

ಇಷ್ಟು ಮಾತ್ರವಲ್ಲದೇ ಪ್ರೌಢಶಾಲೆಯಲ್ಲಿ All Rounder ಹಾಗೂ Out Going Student ಪದವಿ ಪೂರ್ವ ಕಾಲೇಜಿನಲ್ಲಿ Best Out Going Student ಪ್ರಶಸ್ತಿಗೆ ಪಾತ್ರರಾಗಿರುವ ಇವರು ಏಕಪಾತ್ರಾಭಿನಯ, ನಿರೂಪಣೆ, ಚೆಸ್ ಆಟಗಳಲ್ಲಿ ಒಳ್ಳೆಯ ಅಭಿರುಚಿ ಹೊಂದಿದ್ದು, ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದೆ.

ಹೆಚ್ಚಿನ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಇವರಿಗೆ ಯಕ್ಷಗಾನದಲ್ಲಿ ಕುಣಿಯಬೇಕೆಂಬ ಹಂಬಲ ಮನದ್ದಲ್ಲಿ ತುಡಿಯುತ್ತಿತ್ತು. ತಮ್ಮ ಕಾಲೇಜು ವಾರ್ಷಿಕೋತ್ಸವ ಸಮಯದಲ್ಲಿ ಯಕ್ಷಗಾನಕ್ಕೆ ತಮ್ಮ ಹೆಸರು ನೋಂದಾಯಿಸಿದರು. ಯಕ್ಷಗಾನ ಅಭ್ಯಾಸ ಮಾಡದೇ ಇದ್ದರೂ ಇವರ ಹೆಜ್ಜೆಗಾರಿಕೆಯನ್ನು ಕಂಡು ಯಕ್ಷ ನಿರ್ದೇಶಕರಾಗಿದ್ದ ಕಟೀಲು ಮೇಳದ ಕಲಾವಿದರೂ ಹಾಗೂ ಯೋಗ ಶಿಕ್ಷಕರು ಆದ ಶ್ರೀ ಹರಿರಾಜ್ ಶೆಟ್ಟಿಗಾರ್ ಇವರು ಪ್ರಧಾನ ನಾಟ್ಯ ವೇಷವನ್ನೇ ಕೊಟ್ಟರು.

ಬೆಳೆಯೋ ಬಳ್ಳಿಗೆ ಆಸರೆ ಎಂಬಂತೆ ಈಕೆಯ ಈ ಎಲ್ಲಾ ಸಾಧನೆಗೆ ಬೆನ್ನೆಲುಬಾಗಿ ನಿಂತವರು ತಂದೆ ಶ್ರೀಪತಿ ತಂತ್ರಿ, ತಾಯಿ ಸುಧಾ ತಂತ್ರಿ, ಅಕ್ಕ ಶ್ರೀಕೃಪಾ ತಂತ್ರಿ ಹಾಗೂ ಎಲ್ಲಾ ಗುರುಗಳು.

ಹೆತ್ತವರಿಗೆ ಒಳ್ಳೆಯ ಮಗಳಾಗಿ, ಗುರುಗಳಿಗೆ ಉತ್ತಮ ಶಿಷ್ಯೆಯಾಗಿ, ಊರಿಗೆ ಹೆಮ್ಮೆಯ ಪ್ರಜೆಯಾಗಿರುವ ಸರಳ ಸಜ್ಜನಿಕೆಯೊಂದಿಗೆ ಎಲ್ಲರಲ್ಲೂ ನಗುಮೊಗದಿಂದ ಬೆರೆವ ತಮ್ಮ ಮುಂದಿನ ಬಾಳಲ್ಲಿ ಇನ್ನಷ್ಟೂ ಸಾಧನೆಯನ್ನ ಮಾಡುತ್ತಾ ಇನ್ನೂ ಹಲವಾರು ಪ್ರಶಸ್ತಿಗಳು ತಮ್ಮನ್ನು ಅರಸುತ್ತಾ ಬರಲೆಂದು ಆಶಿಸುತ್ತೇನೆ.

ಲೇಖನ: ಕಿರಣ್ ಶೆಟ್ಟಿ, ಅತ್ತೂರು

Tags: Best out going studentCoastal ArticleFoolballKannada ArticleKateel Sri DurgaparameshwariSriLatha S TantriYakshaganaಕಟೀಲು ಶ್ರೀದುರ್ಗಾಪರಮೇಶ್ವರಿಕರಾವಳಿಫುಟ್ಬಾಲ್ಯಕ್ಷಗಾನಶ್ರೀಲತಾ ಎಸ್. ತಂತ್ರಿ
Previous Post

ಭದ್ರಾವತಿ: ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಒದಗಿಸಿದ ಮ್ಯಾನ್ ಕೈಂಡ್

Next Post

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ 'ಚಳ್ಳಕೆರೆ'ಯಲ್ಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!