No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕರಾವಳಿಯ ಈ ಯುವತಿಯ ಸಾಧನೆಗೆ ಕ್ಷೇತ್ರಗಳೇ ಸಾಲದು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2019
in Special Articles
0
ಕರಾವಳಿಯ ಈ ಯುವತಿಯ ಸಾಧನೆಗೆ ಕ್ಷೇತ್ರಗಳೇ ಸಾಲದು
Share on FacebookShare on TwitterShare on WhatsApp

ಸಾಧಿಸಿದರೆ ಸಬಲವನ್ನೂ ನುಂಗಬಹುದು ಎಂಬ ಉಕ್ತಿಯಂತೆ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಾ ತಾನು ಜನಿಸಿರುವಾಗ, ಯಾರು ಈಕೆ ಒಂದು ಹೆಣ್ಣೆಂದು ಕೀಳಾಗಿ ಕಂಡಿದ್ದಾರೆಯೋ…. ಅಂಥವರ ಮುಂದೆ ಇಂದು ಗಂಡಿಗಿಂತ ಯಾವುದೇ ರೀತಿಯಲ್ಲೂ ಕಡಿಮೆ ಇಲ್ಲ ಎಂಬುದನ್ನು ತೋರಿಸಿಕೊಟ್ಟು, ಇಂದು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವವರು ನಮ್ಮ ಪುನರೂರಿನ ಕುಮಾರಿ ಶ್ರೀಲತಾ ಎಸ್. ತಂತ್ರಿ.

ಹೌದು, ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬಂತೆ, ಇವರನ್ನು ಕೀಳೆಂದು ಕಂಡ ಸಮಾಜದಲ್ಲಿ ಒಬ್ಬ ಮಾದರಿ ಹೆಣ್ಣಾಗಿ ಕಾಣಬೇಕೆಂಬ ಹಂಬಲದೊಂದಿಗೆ ಸಾಧನೆಯ ಹಾದಿಯಲ್ಲಿದ್ದಾರೆ ಈಕೆ.

ನೃತ್ಯ ಪ್ರಕಾರಗಳ ಆಗರ
ಮನೆಯೇ ಮೊದಲ ಪಾಠಶಾಲೆ-ಜನನಿ ತಾನೆ ಮೊದಲ ಗುರು ಎಂಬಂತೆ ತಾನು ಎರಡು ವರ್ಷದವಳಿದ್ದಾಗ ತನಗೆ ತಾಯಿಯೇ ನೃತ್ಯ ಅಭ್ಯಾಸವನ್ನು ಕಲಿಸುತ್ತಾ ಮುಂದೆ ತಾನು ನಾಲ್ಕನೆಯ ತರಗತಿಯಲ್ಲಿರುವ ಸಂದರ್ಭದಲ್ಲಿ ಪುನರೂರಿನ ಡಮರು ನಾಟ್ಯಾಲಯದ ವಿದುಷಿ ಸುಜಾತ ಶ್ಯಾಮ್ ಸುಂದರ್ ಇವರಲ್ಲಿ ಶಿಷ್ಯೆಯಾಗಿ ಸೇರಿಕೊಂಡು ಭರತನಾಟ್ಯ, ಕೂಚುಪುಡಿ, ಮೋಹಿನಿಯಾಟ್ಟಂನಂತಹ ಇನ್ನೂ ಹಲವಾರು ನೃತ್ಯ ಪ್ರಕಾರಗಳನ್ನು ಕಲಿತರು.

ತನ್ನ ಪ್ರಾಥಮಿಕ ಶಿಕ್ಷಣವನ್ನು ಪುನರೂರಿನ ಭಾರತ ಮಾತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿದ ಈಕೆ, ಮುಂದಿನ ಪ್ರೌಢಶಿಕ್ಷಣವನ್ನು ಕಟೀಲಿನ ಶ್ರೀದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕ್ರೀಡಾ ಚಟುವಟಿಕೆಯಲ್ಲಿದ್ದ ಆಸಕ್ತಿಯನ್ನು ಗಮನಿಸಿದ ಅಲ್ಲಿಯ ದೈಹಿಕ ಶಿಕ್ಷಕರಾಗಿದ್ದ ಶ್ರೀ ಪುಂಡರೀಕ ಕೊಟ್ಟಾರಿ ಅವರು ವಿಶೇಷ ತರಬೇತಿಯನ್ನು ನೀಡುತ್ತಾರೆ.

ಪ್ರತಿಭಾ ಚೇತನ
ನಂತರ ಕಬಡ್ಡಿ ಹಾಗೂ ಫುಟ್ಬಾಲ್ ಆಟಗಳಲ್ಲಿ ಉತ್ತಮ ಆಟಗಾರ್ತಿಯಾಗಿ ಮಿಂಚಿದ್ದಾರೆ. ಜೊತೆಗೆ ಪ್ರಾಥಮಿಕ ಶಿಕ್ಷಣದ ಸಂದರ್ಭದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ರಾಜ್ಯ ಮಟ್ಟಕ್ಕೆ ಹಾಗೂ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಮಿಂಚಿರುತ್ತಾರೆ. ಇಷ್ಟು ಮಾತ್ರವಲ್ಲದೆ ಪ್ರಾಥಮಿಕ ಶಾಲೆಯಲ್ಲಿ ಉತ್ತಮ ಸಂಸದೀಯ ಪಟು ಎಂದೂ ಗುರುತಿಸಿಕೊಂಡಿರುತ್ತಾರೆ. ಅದೇ ರೀತಿ ಕಲಿಕೆಯಲ್ಲೂ ತಾನು ಯಾವುದೇ ರೀತಿಯಲ್ಲೂ ಕಡಿಮೆಯಿಲ್ಲವೆಂಬಂತೆ ಎಸ್’ಎಸ್’ಎಲ್’ಸಿಯಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಶೇ.94ರಷ್ಟು ಅಂಕ ಪಡೆದು ಶಾಲೆಗೆ ಹಾಗೂ ಊರಿಗೆ ಕೀರ್ತಿ ತಂದ ಹೆಗ್ಗಳಿಕೆ ಇವರದು.

ಮುಂದೆ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿ ಕಟೀಲಿನ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಸಂದರ್ಭ ನಡೆದ ಬಾಲಕಿಯರ ಕಬ್ಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಬಿಎಸ್’ಸಿ ವ್ಯಾಸಾಂಗ ಮಾಡುತ್ತಿದ್ದು, ರಾಷ್ಟ್ರೀಯ ಸೇವಾ ಯೋಜನೆ(ಎನ್’ಎಸ್’ಎಸ್)ಯ ಸ್ವಯಂ ಸೇವಕಿಯಾಗಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ನಾಯಕತ್ವ ಶಿಬಿರದಲ್ಲಿ ಹಾಗೂ ಧಾರವಾಡದಲ್ಲಿ ನಡೆದ National Integration Campನಲ್ಲಿ ಭಾಗವಹಿಸುವುದರ ಜೊತೆಗೆ ಇದುವರೆಗೆ ಢಮರು ನಾಟ್ಯಾಲಯದ ಮುಖೇನ ಹಲವಾರು ಕಡೆಗಳಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದ್ದಾರೆ.

ಮಾತ್ರವಲ್ಲದೇ, ಅನೇಕ ಕಡೆಗಳಲ್ಲಿ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲೂ ಬಹುಮಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದು, ಹಲವು ಪ್ರಕಾರದ ನಾಟಕಗಳಲ್ಲಿ ಅಭಿನಯಿಸಿದ ಕೀರ್ತಿ ಇವರಿಗೆ ಸಲ್ಲುವಂತಹದ್ದು.

ಇಷ್ಟು ಮಾತ್ರವಲ್ಲದೇ ಪ್ರೌಢಶಾಲೆಯಲ್ಲಿ All Rounder ಹಾಗೂ Out Going Student ಪದವಿ ಪೂರ್ವ ಕಾಲೇಜಿನಲ್ಲಿ Best Out Going Student ಪ್ರಶಸ್ತಿಗೆ ಪಾತ್ರರಾಗಿರುವ ಇವರು ಏಕಪಾತ್ರಾಭಿನಯ, ನಿರೂಪಣೆ, ಚೆಸ್ ಆಟಗಳಲ್ಲಿ ಒಳ್ಳೆಯ ಅಭಿರುಚಿ ಹೊಂದಿದ್ದು, ಚಿತ್ರಕಲೆಯಲ್ಲಿ ಆಸಕ್ತಿ ಹೊಂದಿದೆ.

ಹೆಚ್ಚಿನ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಇವರಿಗೆ ಯಕ್ಷಗಾನದಲ್ಲಿ ಕುಣಿಯಬೇಕೆಂಬ ಹಂಬಲ ಮನದ್ದಲ್ಲಿ ತುಡಿಯುತ್ತಿತ್ತು. ತಮ್ಮ ಕಾಲೇಜು ವಾರ್ಷಿಕೋತ್ಸವ ಸಮಯದಲ್ಲಿ ಯಕ್ಷಗಾನಕ್ಕೆ ತಮ್ಮ ಹೆಸರು ನೋಂದಾಯಿಸಿದರು. ಯಕ್ಷಗಾನ ಅಭ್ಯಾಸ ಮಾಡದೇ ಇದ್ದರೂ ಇವರ ಹೆಜ್ಜೆಗಾರಿಕೆಯನ್ನು ಕಂಡು ಯಕ್ಷ ನಿರ್ದೇಶಕರಾಗಿದ್ದ ಕಟೀಲು ಮೇಳದ ಕಲಾವಿದರೂ ಹಾಗೂ ಯೋಗ ಶಿಕ್ಷಕರು ಆದ ಶ್ರೀ ಹರಿರಾಜ್ ಶೆಟ್ಟಿಗಾರ್ ಇವರು ಪ್ರಧಾನ ನಾಟ್ಯ ವೇಷವನ್ನೇ ಕೊಟ್ಟರು.

ಬೆಳೆಯೋ ಬಳ್ಳಿಗೆ ಆಸರೆ ಎಂಬಂತೆ ಈಕೆಯ ಈ ಎಲ್ಲಾ ಸಾಧನೆಗೆ ಬೆನ್ನೆಲುಬಾಗಿ ನಿಂತವರು ತಂದೆ ಶ್ರೀಪತಿ ತಂತ್ರಿ, ತಾಯಿ ಸುಧಾ ತಂತ್ರಿ, ಅಕ್ಕ ಶ್ರೀಕೃಪಾ ತಂತ್ರಿ ಹಾಗೂ ಎಲ್ಲಾ ಗುರುಗಳು.

ಹೆತ್ತವರಿಗೆ ಒಳ್ಳೆಯ ಮಗಳಾಗಿ, ಗುರುಗಳಿಗೆ ಉತ್ತಮ ಶಿಷ್ಯೆಯಾಗಿ, ಊರಿಗೆ ಹೆಮ್ಮೆಯ ಪ್ರಜೆಯಾಗಿರುವ ಸರಳ ಸಜ್ಜನಿಕೆಯೊಂದಿಗೆ ಎಲ್ಲರಲ್ಲೂ ನಗುಮೊಗದಿಂದ ಬೆರೆವ ತಮ್ಮ ಮುಂದಿನ ಬಾಳಲ್ಲಿ ಇನ್ನಷ್ಟೂ ಸಾಧನೆಯನ್ನ ಮಾಡುತ್ತಾ ಇನ್ನೂ ಹಲವಾರು ಪ್ರಶಸ್ತಿಗಳು ತಮ್ಮನ್ನು ಅರಸುತ್ತಾ ಬರಲೆಂದು ಆಶಿಸುತ್ತೇನೆ.

ಲೇಖನ: ಕಿರಣ್ ಶೆಟ್ಟಿ, ಅತ್ತೂರು

Tags: Best out going studentCoastal ArticleFoolballKannada ArticleKateel Sri DurgaparameshwariSriLatha S TantriYakshaganaಕಟೀಲು ಶ್ರೀದುರ್ಗಾಪರಮೇಶ್ವರಿಕರಾವಳಿಫುಟ್ಬಾಲ್ಯಕ್ಷಗಾನಶ್ರೀಲತಾ ಎಸ್. ತಂತ್ರಿ
Share199Tweet124Send
Previous Post

ಭದ್ರಾವತಿ: ಮಾನಸಿಕ ಅಸ್ವಸ್ಥನಿಗೆ ಆಶ್ರಯ ನೀಡಿದ ಒದಗಿಸಿದ ಮ್ಯಾನ್ ಕೈಂಡ್

Next Post

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ 'ಚಳ್ಳಕೆರೆ'ಯಲ್ಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL