No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ರಾಮಚಂದ್ರಾಪುರ ಮಠದ ಆಡಳಿತದಲ್ಲಿ ಗೋಕರ್ಣ ದೇಗುಲಕ್ಕೆ ಮತ್ತೆ ಐಎಸ್’ಒ ಗೌರವ

ಶಿವರಾತ್ರಿ ಮಹೋತ್ಸವದ ಧರ್ಮಸಭೆ: ಅಂತಾರಾಷ್ಟ್ರೀಯ ಕ್ಯಾನ್ಸರ್ ವಿಜ್ಞಾನಿಗೆ "ಸಾರ್ವಭೌಮ" ಪ್ರಶಸ್ತಿ  

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 6, 2019
in ಉತ್ತರ ಕನ್ನಡ
0
ರಾಮಚಂದ್ರಾಪುರ ಮಠದ ಆಡಳಿತದಲ್ಲಿ ಗೋಕರ್ಣ ದೇಗುಲಕ್ಕೆ ಮತ್ತೆ ಐಎಸ್’ಒ ಗೌರವ
Share on FacebookShare on TwitterShare on WhatsApp

ಗೋಕರ್ಣ: ಗೋಕರ್ಣದ ಮಹಾಬಲೇಶ್ವರ ದೇವಾಲಯ ಮಠಕ್ಕೆ ಆದಾಯದ ಮೂಲವಲ್ಲ. ಅದು ಸೇವೆಯ ಸಾಧನ ಮಾತ್ರ. ಗೋಕರ್ಣ ದೇವಾಲಯದಿಂದ ಒಂದು ರೂಪಾಯಿಯನ್ನು ಮಠ ತೆಗೆದುಕೊಂಡಿಲ್ಲ, ಕೋಟ್ಯಾಂತರ ರೂಪಾಯಿಗಳನ್ನು ಮಠ ದೇವಾಲಯದ ಅಭಿವೃದ್ಧಿಗೆ ಬಳಸಿದೆ. ಒಳ್ಳೆಯದಾಗಬೇಕು ಎಂಬುದಷ್ಟೇ ನಮ್ಮ ಅಪೇಕ್ಷೆ, ನಮ್ಮಿಂದಲೇ ಒಳ್ಳೆಯದಾಗ ಬೇಕು ಎಂಬ ಸ್ವಾರ್ಥ ನಮಗಿಲ್ಲ. ಆದರೆ ಮಠದಿಂದಲೇ ಮಹಾಬಲೇಶ್ವರನ ಸೇವೆ ನಡೆಯಲಿ ಎಂಬುದು ಮಹಾಬಲನ ಇಚ್ಛೆ. ಮಹಾಬಲನೇ ಸೇವೆಯ ಅವಕಾಶವನ್ನು ನೀಡಿರುವಾಗ  ಶಿರಸಾವಹಿಸಿ ಮಾಡಬೇಕಾದ್ದು ನಮ್ಮ ಕರ್ತವ್ಯ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಶಿವರಾತ್ರಿ ಮಹೋತ್ಸವದ ನಿಮಿತ್ತ ನಡೆದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಮಾತನಾಡಿದ ಪೂಜ್ಯ ಶ್ರೀಗಳು, ಯಾರೋ ಒಬ್ಬರಿಂದ ಬದಲಾವಣೆ ಮಾಡಲು ಸಾಧ್ಯವಿಲ್ಲ. ಎಲ್ಲರ ಸಹಕಾರ ಇದ್ದಾಗ ಮಾತ್ರ ಬದಲಾವಣೆ ಸಾಧ್ಯ. ಇತ್ತೀಚಿನ ವರ್ಷಗಳಲ್ಲಿ ಗೋಕರ್ಣದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳಾಗಿರುವುದು ನಿಜಕ್ಕೂ ಸಂತಸದ ಸಂಗತಿ. ಊರಿನವರ ಮನೋಭಾವ ಬದಲಾಗಿದೆ, ಭಕ್ತರೆಡಗಿನ ದೃಷ್ಟಿ ಬದಲಾಗಿದೆ. ಭಕ್ತ ಭಗವಂತ ಎಂಬ ದೃಷ್ಟಿ ಸೃಷ್ಟಿಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ ಶ್ರೀಗಳು, ಬದಲಾವಣೆ ಮಾಡಲು ಹೊರಟರೆ ತ್ಯಾಗಕ್ಕೆ ಸಿದ್ಧರಿರಬೇಕಾಗುತ್ತದೆ. ಸಕಾರಾತ್ಮಕ ಬದಲಾವಣೆ ಮಾಡುವಾಗ ಅಡ್ಡಪರಿಣಾಮಗಳು ಜೊತೆಗೆ ಇರುತ್ತವೆ. ಆದರೆ ವಿಷಕಂಠರಾಗಿ ಅದನ್ನು ಸ್ವೀಕರಿಸಿ ಉತ್ತಮ ಕಾರ್ಯಗಳನ್ನು ನಾವು ಮುಂದುವರಿಸಬೇಕು ಎಂದು ಅಭಿಪ್ರಾಯಪಟ್ಟರು.

ಮಹಾಬಲೇಶ್ವರ ದೇವಾಲಯವನ್ನು ಮಠಕ್ಕೆ ವಹಿಸಿಕೊಟ್ಟದ್ದನ್ನೇ ಇಟ್ಟುಕೊಂಡು ಅನೇಕ ನಕಾರಾತ್ಮಕ ಕಾರ್ಯಗಳು ಮಠದ ಮೇಲಾಗಿದೆ. ಒಳಿತನ್ನು ಮಾಡುವಾಗ ಕೆಡುಕು ಅದರ ಜೊತೆಗೆ ಬರುತ್ತದೆ. ಅದನ್ನು ನಾವು ಸಕಾರಾತ್ಮಕವಾಗಿ ಸ್ವೀಕರಿಸಿ ಎದುರಿಸಬೇಕು. ಸಮಗ್ರ ಗೋಕರ್ಣದ ಅಭಿವೃದ್ಧಿ ನಮ್ಮ ಗುರಿ, ನಾವೆಲ್ಲ ಸೇರಿ ಅದನ್ನು ಸಾಧಿಸೋಣ ಎಂದು ಕರೆನೀಡಿದರು.

ಸರ್ಕಾರದ ಆಡಳಿತದ ಅವಧಿಯಲ್ಲಿ ದುರವಸ್ಥೆ: ತಿಂಗಳುಗಳ ಹಿಂದೆ ಸರ್ಕಾರ ದೇವಾಲಯವನ್ನು ವಶಪಡಿಸಿಕೊಂಡಾಗ ದೇವಾಲಯಕ್ಕೆ ಬರುವವರ ಸಂಖ್ಯೆ ಇಳಿಮುಖವಾಯಿತು, ಆದಾಯ ಕಡಿಮೆಯಾಯಿತು, ದೇವಾಲಯದ ಸಿಬ್ಬಂದಿಗಳಿಗೆ ಸಂಬಳ ಕೊಡಲು ಸರ್ಕಾರಕ್ಕೆ  ಕಷ್ಟಸಾಧ್ಯವಾಯಿತು. ಕೇವಲ 43 ದಿನದ ಸರ್ಕಾರದ ಆಡಳಿತಾವಧಿಯಲ್ಲಿ ದೇವಾಲಯಕ್ಕಿದ್ದ ISO ಮಾನ್ಯತೆ ಕೂಡ ನಷ್ಟವಾಯಿತು. ಇದು ಜನರಿಗೂ – ದೇವರಿಗೂ ಸರ್ಕಾರದ ಆಡಳಿತ ಇಷ್ಟವಿಲ್ಲ ಎಂಬುದನ್ನು ಸೂಚಿಸುತ್ತದೆ.

ಸರ್ಕಾರದ ಆಡಳಿತಾವಧಿಯಲ್ಲಿ ಅನೇಕ ಧಾರ್ಮಿಕ ಆಚರಣೆಗಳು, ಉತ್ಸವಗಳು ನಿಲ್ಲುವ ಸಂದರ್ಭಗಳು ಎದುರಾಗಿದ್ದವು. ಆದರೆ ನಾವೇ ಉಪಾಧಿವಂತರಿಗೆ ಸೂಚನೆ ನೀಡಿ ಅವುಗಳು ನಡೆಯುವಂತೆ ನೋಡಿಕೊಂಡೆವು. ಆಡಳಿತ ಯಾರದ್ದೇ ಇರಲಿ, ಮಹಾಬಲನ ಸೇವೆಯಲ್ಲಿ ವ್ಯತ್ಯಯವಾಗಬಾರದು ಎಂಬುದು ನಮ್ಮ ಕಳಕಳಿ ಎಂದು ಪೂಜ್ಯ ಶ್ರೀಗಳು ತಿಳಿಸಿದರು.

ಅಂತಾರಾಷ್ಟ್ರೀಯ ಕ್ಯಾನ್ಸರ್ ವಿಜ್ಞಾನಿಗೆ “ಸಾರ್ವಭೌಮ” ಪ್ರಶಸ್ತಿ:
ಗೋಕರ್ಣ ಮೂಲದ ಪ್ರಸ್ತುತ ಅಮೆರಿಕಾದಲ್ಲಿ ನೆಲೆಸಿರುವ ವಿಜ್ಞಾನಿ ಡಾ. ನಾರಾಯಣ ಹೊಸಮನೆ ಇವರು ಈ ಬಾರಿಯ “ಸಾರ್ವಭೌಮ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀ ಮಹಾಬಲೇಶ್ವರ ದೇವಾಲಯದಿಂದ ಪ್ರತಿವರ್ಷ ಸಮಾಜಮುಖಿಯಾಗಿ ತೊಡಗಿಸಿಕೊಂಡವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಈ ಬಾರಿ ಮಾರಣಾಂತಿಂಕ ಕ್ಯಾನ್ಸರ್ ಸಂಶೋಧನೆಯಲ್ಲಿ ತೊಡಗಿಸಿಕೊಂಡು “ಬೋರಾನ್ ನ್ಯೂಟ್ರಾನ್ ಕ್ಯಾಪ್ಟರ್ ಥೆರಪಿ” ಪಿತಾಮಹ ಖ್ಯಾತಿಗಳಿಸಿದ ಹಾಗೂ 25ಕ್ಕೂ ಹೆಚ್ಚು ದೇಶಗಳಿಂದ ವಿಜ್ಞಾನಕ್ಷೇತ್ರದ ಪ್ರಮುಖ ಪ್ರಶಸ್ತಿಯನ್ನು ಪಡೆದ ಡಾ. ನಾರಾಯಣ್ ಹೊಸಮನೆಯವರ ಸೇವೆಯನ್ನು ಗಮನಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆಮಾಡಲಾಗಿದೆ.

ಶಿವರಾತ್ರಿಯ ಸಂದರ್ಭದಲ್ಲಿ ಮತ್ತೆ ಲಭಿಸಿದ ISO Certificate: ಸರ್ಕಾರದ ಆಡಳಿತಾವಧಿಯಲ್ಲಿ ದೇವಾಲಯಕ್ಕಿದ್ದ ISO certification  ನಷ್ಟವಾಗಿದ್ದು, ಇದೀಗ ಮತ್ತೆ ಮಠದ ಪಾರದರ್ಶಕ ಸಮರ್ಥ ಆಡಳಿತಕ್ಕೆ ಅಂತಾರಾಷ್ಟೀಯ ಮಟ್ಟದ ISO certification ಮತ್ತೆ ಲಭ್ಯವಾಗಿದ್ದು, ಶಿವರಾತ್ರಿ ಮಹೋತ್ಸವದ ಸಂದರ್ಭದಲ್ಲೇ ಇದು ಲಭ್ಯವಾಗಿರುವುದು ದೇವಾಲಯದ ಭಕ್ತರಿಗೆ ಸಂತಸವನ್ನು ಉಂಟುಮಾಡಿದೆ.


ಧರ್ಮಸಭೆಯಲ್ಲಿ ಶಿವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಆರ್ ಮಲ್ಲನ್, ಶ್ರೀ ಡಿ ಡಿ ಶರ್ಮಾ, ಹವ್ಯಕ ಮಹಾಮಂಡಲದ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಬೇರ್ಕಡವು,  ಉದ್ಯಮಿಗಳಾದ ಶ್ರೀ ಎನ್ ಎಚ್ ಇಲ್ಲೂರ, ನಿವೃತ್ತ ಅರಣ್ಯಾಧಿಕಾರಿ ಶ್ರೀ ನಾಗರಾಜ ನಾಯಕ ತೊರ್ಕೆ, ತಾ ಪಂ ಸದಸ್ಯ ಶ್ರೀ ಮಹೇಶ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಶ್ರೀಕ್ಷೇತ್ರದ  ಪದನಿಮಿತ್ತ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಅಭ್ಯಾಗತರನ್ನು ಸ್ವಾಗತಿಸಿದರು.

 

Tags: Gokarna TempleISO CertificateKannada NewsRamachandrapura muttShivaratriUttar Pradeshಗೋಕರ್ಣಶಿವರಾತ್ರಿಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಶ್ರೀರಾಮಚಂದ್ರಾಪುರಮಠ
Share196Tweet123Send
Previous Post

ಮುಲಾಜಿಲ್ಲದೇ ಬಿಜೆಪಿಗೆ ಸೇರಿ! ಸುಮಲತಾರಿಗೆ ಮಂಡ್ಯದ ಮೋದಿ ಅಭಿಮಾನಿಯ ಬಹಿರಂಗ ಪತ್ರ!

Next Post

ಪಾಪಿಯ ಮಹಾ ಸುಳ್ಳು: ಜೈಷ್ ಉಗ್ರ ಸಂಘಟನೆ ಪಾಕಿಸ್ಥಾನದಲ್ಲಿ ಅಸ್ಥಿತ್ವದಲ್ಲೇ ಇಲ್ಲಂತೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಾಪಿಯ ಮಹಾ ಸುಳ್ಳು: ಜೈಷ್ ಉಗ್ರ ಸಂಘಟನೆ ಪಾಕಿಸ್ಥಾನದಲ್ಲಿ ಅಸ್ಥಿತ್ವದಲ್ಲೇ  ಇಲ್ಲಂತೆ!

ಪಾಪಿಯ ಮಹಾ ಸುಳ್ಳು: ಜೈಷ್ ಉಗ್ರ ಸಂಘಟನೆ ಪಾಕಿಸ್ಥಾನದಲ್ಲಿ ಅಸ್ಥಿತ್ವದಲ್ಲೇ ಇಲ್ಲಂತೆ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL