No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಮ್ಮ ಭವಿಷ್ಯಕ್ಕಾಗಿ ಹಿಂದೂ ರಾಷ್ಟ್ರ ನಿರ್ಮಾಣವಾಗಬೇಕು

kalpa News by kalpa News
June 2, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಗೋವಾ: ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಹಿಂದೂಗಳ ಮತಾಂತರವಾಗುತ್ತಿದ್ದು ಅದನ್ನು ತಡೆಯುವುದು ಆವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ಕಾನೂನನ್ನು ರೂಪಿಸಲು ನ್ಯಾಯವಾದಿಗಳು ಪ್ರಯತ್ನಿಸಬೇಕು. ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಬೇಕೆಂದಿದ್ದರೆ ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಪ್ರಯತ್ನಿಸಬೇಕು ಎಂದು ಹಿಂದೂ ಫ್ರಂಟ್ ಫಾರ ಜಸ್ಟಿಸ್ ಅಧ್ಯಕ್ಷ ನ್ಯಾ. ಹರಿ ಶಂಕರ್ ಜೈನ್ ಕರೆ ನೀಡಿದರು.

ಶ್ರೀ ರಾಮನಾಥ ದೇವಸ್ಥಾನದ ಶ್ರೀವಿದ್ಯಾಧೀರಾಜ ಸಭಾಗೃಹದಲ್ಲಿ ಆಯೋಜಿಸಿದ ಎರಡು ದಿನಗಳ ರಾಷ್ಟ್ರೀಯ ನ್ಯಾಯವಾದಿ ಅಧಿವೇಶನದಲ್ಲಿ ಅವರು ಮಾತನಾಡಿದರು.

1947 ರಲ್ಲಿ ದೇಶದ ವಿಭಜನೆಯಾದಾಗ ಅದು ಸ್ವತಂತ್ರವಾಯಿತು. ಅನಂತರ 1950 ರಲ್ಲಿ ಸಂವಿಧಾನವನ್ನು ಜಾರಿಗೊಳಿಸಲಾಯಿತು. ಆಗ ಎಲ್ಲರಿಗೂ ನ್ಯಾಯ ಸಿಗುವುದು ಎಂದು ಹೇಳಲಾಯಿತು. ಹಾಗಾಗಿ ಎಲ್ಲ ದೌರ್ಜನ್ಯಗಳನ್ನು ಮರೆತು ಹಿಂದೂಗಳು ಅದನ್ನು ಸ್ವೀಕರಿಸಲು ಸಿದ್ಧರಾದರು. ಆದರೆ ಪ್ರತ್ಯಕ್ಷದಲ್ಲಿ ಜಾತ್ಯತೀತವಾದದ ಹೆಸರಿನಲ್ಲಿ ಅಲ್ಪಸಂಖ್ಯಾತರಿಗೆ ಸೌಲಭ್ಯ ನೀಡಿ ಹಿಂದೂಗಳನ್ನು ದಮನಿಸಲಾಗುತ್ತಿದೆ ಎಂದು ವಿಷಾಧಿಸಿದರು.

ಇಂದು ಮುಸಲ್ಮಾನರು ತಮ್ಮ ಧರ್ಮಕ್ಕಾಗಿ ಸಮರ್ಪಿತರಾಗಿ ಪ್ರಸಂಗ ಬಂದರೆ ಜೀವ ನೀಡಲು ಸಿದ್ಧರಾಗುತ್ತಾರೆ. ಹೀಗಿರುವಾಗ ನಾವು ಹಿಂದೂ ನ್ಯಾಯವಾದಿಗಳೂ ಕಾನೂನಿನ ಅಧ್ಯಯನ ಮಾಡಿ, ನ್ಯಾಯಾಲಯದಲ್ಲಿ ಸಮರ್ಪಿತರಾಗಿ ಹಿಂದೂಗಳಿಗೆ ನ್ಯಾಯ ದೊರಕಿಸಿಕೊಡಲು ನಿಸ್ವಾರ್ಥವೃತ್ತಿಯಿಂದ ಜೀವವನ್ನು ಪಣಕ್ಕಿಟ್ಟು ಪ್ರಯತ್ನಿಸಬೇಕು. ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಹಿಂದೂಗಳ ಮತಾಂತರವಾಗುತ್ತಿದ್ದು ಅದನ್ನು ತಡೆಯುವುದು ಆವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಮತಾಂತರನಿಷೇಧ ಕಾನೂನನ್ನು ರೂಪಿಸಲು ನ್ಯಾಯವಾದಿಗಳು ಪ್ರಯತ್ನಿಸಬೇಕು ಎಂದರು.

ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಬೇಕೆಂದಿದ್ದರೆ ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಪ್ರಯತ್ನಿಸಬೇಕು ಎಂದರು.

ಈ ವೇಳೆ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕ ಸದ್ಗುರು (ಡಾ.) ಚಾರುದತ್ತ ಪಿಂಗಳೆ, ನ್ಯಾಯವಾದಿಗಳ ಇತಿಹಾಸವು ಪುರಾತನ ಹಾಗೂ ಅಧ್ಯಾತ್ಮಿಕವಾಗಿದೆ. ಲೋಕಮಾನ್ಯ ತಿಲಕ್, ಪಂಡಿತ ಮದನಮೋಹನ ಮಾಳವೀಯ, ಸ್ವಾತಂತ್ರ್ಯವೀರ ಸಾವರಕರ ಇಂತಹ ಅನೇಕ ನ್ಯಾಯವಾದಿಗಳು ಸ್ವಾತಂತ್ರ್ಯಹೋರಾಟದಲ್ಲಿ ಸಕ್ರಿಯವಾಗಿ ಸಹಭಾಗಿಯಾಗಿ ಒಂದು ಆದರ್ಶವನ್ನು ನಿರ್ಮಿಸಿದರು. ಅದೇ ಆದರ್ಶವನ್ನು ಮುಂದಿಟ್ಟುಕೊಂಡು ಧರ್ಮಪ್ರೇಮಿ ನ್ಯಾಯವಾದಿಗಳು ಹಿಂದೂ ರಾಷ್ಟ್ರ ಸ್ಥಾಪನೆಯ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಅದು ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ದಾಖಲಾಗುವುದು. ಇಲ್ಲಿ ನೆರೆದ ನ್ಯಾಯವಾದಿಗಳು ಕೇವಲ ಪ್ರವಾಹದ ವಿರುದ್ಧ ಈಜುವುದು ಅಪೇಕ್ಷಿತವಿರದೇ, ಪ್ರವಾಹದ ದಿಕ್ಕನ್ನೇ ಬದಲಾಯಿಸಿ ಧರ್ಮಾಧಿಷ್ಠಿಯ ಹಿಂದೂ ರಾಷ್ಟ್ರದ ವ್ಯವಸ್ಥೆಯನ್ನು ನಿರ್ಮಿಸಬೇಕು ಎಂದರು.

ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸಗಡ ರಾಜ್ಯ ಸಂಘಟಕ ಸುನೀಲ್ ಘನವಟರ್ ಮಾತನಾಡಿ, ಹಿಂದುತ್ವನಿಷ್ಠರಿಗೆ ಕಾನೂನಿನ ಪೂರ್ಣ ಮಾಹಿತಿ ಇಲ್ಲದ್ದರಿಂದ ಅವರಿಗೆ ಹಿಂದುತ್ವದ ಕಾರ್ಯ ಮಾಡುವಾಗ ಆಗಾಗ ಅನೇಕ ಅಡಚಣೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಸಮಯದಲ್ಲಿ ಹಿಂದುತ್ವನಿಷ್ಠರಿಗೆ ಧರ್ಮಪ್ರೇಮಿ ನ್ಯಾಯವಾದಿಗಳು ಕಾನೂನು ವಿಷಯದಲ್ಲಿ ಮಾರ್ಗದರ್ಶನ ಮಾಡಿ ಸಹಾಯ ಮಾಡಬೇಕು ಎಂದರು.

ಅಧಿವೇಶನದ ಆರಂಭದಲ್ಲಿ ಶಂಖನಾದ ಮಾಡಲಾಯಿತು. ದೀಪಪ್ರಜ್ವಲನೆಯ ನಂತರ ಸನಾತನ ಪುರೋಹಿತ ಪಾಠಶಾಲೆಯ ಪುರೋಹಿತರು ವೇದಮಂತ್ರ ಪಠಣ ಮಾಡಿದರು. ಹಿಂದೂ ಜನಜಾಗೃತಿ ಸಮಿತಿಯ ಪ್ರೇರಣಾಸ್ಥಾನ ಪರಾತ್ಪರ ಗುರು ಡಾ. ಜಯಂತ ಬಾಳಾಜಿ ಆಠವಲೆಯವರು ಅಧಿವೇಶನದ ನಿಮಿತ್ತ ನೀಡಿದ ಸಂದೇಶವನ್ನು ಸಮಿತಿಯ ಪೂರ್ವಭಾರತದ ಮಾರ್ಗದರ್ಶಕರಾದ ಪೂ. ನಿಲೇಶ ಸಿಂಗಬಾಳರವರು ಓದಿದರು. ಸಮಿತಿಯ ಸುಮಿತ ಸಾಗವೇಕರ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕೇರಳದ ನ್ಯಾಯವಾದಿ ಗೋವಿಂದ ಕೆ. ಭರತನ್, ಇಂಡಿಯಾ ವಿಥ ವಿಸ್ಡಂ ಗ್ರೂಪ್ ನ ರಾಷ್ಟ್ರೀಯ ಅಧ್ಯಕ್ಷರಾದ ನ್ಯಾಯವಾದಿ ಕಮಲೇಶಚಂದ್ರ ತ್ರಿಪಾಠಿ, ಹಿಂದೂ ವಿಧಿಜ್ಞ ಪರಿಷತ್ತಿನ ಸಂಸ್ಥಾಪಕ ಸದಸ್ಯರಾದ ನ್ಯಾಯವಾದಿ ಸುರೇಶ ಕುಲಕರ್ಣಿ ಮತ್ತು ಇತರ ಗಣ್ಯರು ದೀಪಪ್ರಜ್ವಲನೆ ಮಾಡಿದರು. ಈ ಸಮಯದಲ್ಲಿ 80 ಕ್ಕೂ ಹೆಚ್ಚು ಧರ್ಮಪ್ರೇಮಿ ನ್ಯಾಯವಾದಿಗಳು ಉಪಸ್ಥಿತರಿದ್ದರು.

Tags: hindu janajagruti samitiಗೋವಾ ಸಪ್ತಮ ಅಖಿಲ ಭಾರತೀಯ ಹಿಂದೂ ಅಧಿವೇಶನಹಿಂದೂ ಜನಜಾಗೃತಿ ಸಮಿತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೀತೆ-3: ಭಗವದ್ಗೀತೆ ನಮ್ಮ ಭರವಸೆಯಾದೀತೆ?

Next Post

ಹಿಂದೆ ನಡೆದ ಐಟಿ ದಾಳಿಗೆ ಕಾಂಗ್ರೆಸ್ ಕುಮ್ಮಕ್ಕು ಇತ್ತಾ: ಈಶ್ವರಪ್ಪ ಪ್ರಶ್ನೆ

kalpa News

kalpa News

Next Post

ಹಿಂದೆ ನಡೆದ ಐಟಿ ದಾಳಿಗೆ ಕಾಂಗ್ರೆಸ್ ಕುಮ್ಮಕ್ಕು ಇತ್ತಾ: ಈಶ್ವರಪ್ಪ ಪ್ರಶ್ನೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL