No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

ಪಕ್ಷಮಾಸದ ಮಹತ್ವ: ಶ್ರಾದ್ಧ ಯಜ್ಞ ಎಂದರೇನು? ಅದರ ಮಹತ್ವ ತಿಳಿಯಲು ಮರೆಯದಿರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 23, 2019
in ಡಾ.ಗುರುರಾಜ ಪೋಶೆಟ್ಟಿಹಳ್ಳಿ, Small Bytes
0
ಪಕ್ಷಮಾಸದ ಮಹತ್ವ: ಶ್ರಾದ್ಧ ಯಜ್ಞ ಎಂದರೇನು? ಅದರ ಮಹತ್ವ ತಿಳಿಯಲು ಮರೆಯದಿರಿ

Image Courtesy: Internet

Share on FacebookShare on TwitterShare on WhatsApp

ನಾವು ನಿತ್ಯ ಪೀಠದಲ್ಲಿ ಮಾಡುವ ಪೂಜೆ ತತ್ವಾಭಿಮಾನಿ ದೇವತೆಗಳನ್ನು ಕುರಿತು ಮಾಡುವ ಯಜ್ಞವಾದರೆ, ಶ್ರಾದ್ಧ- ಪಿತೃದೇವತೆಗಳನ್ನು ಕುರಿತು ಮಾಡುವ ಯಜ್ಞ. ನಮ್ಮಲ್ಲಿ ಅನೇಕರಿಗೆ ಒಂದು ತಪ್ಪು ಕಲ್ಪನೆ ಇದೆ. ಶ್ರಾದ್ಧ ದೇಹ ತ್ಯಾಗ ಮಾಡಿದ ಜೀವಕ್ಕೆ’ ಎಂದು. ಆದರೆ ಇದು ಸರಿಯಲ್ಲ. ಶ್ರಾದ್ಧ ಸ್ಥೂಲ ದೇಹವನ್ನು ತ್ಯಜಿಸಿ ಸೂಕ್ಷ್ಮ ಶರೀರದಲ್ಲಿರುವ ಜೀವವನ್ನು ನಿಯಂತ್ರಿಸುವ ಪಿತೃದೇವತೆಗಳಿಗೆ’ ಮಾಡುವಂತದ್ದು.

ವಿಶೇಷವಾಗಿ ಹತ್ತು ಮಂದಿ ವಿಶ್ವೇದೇವತೆಗಳು(ಕ್ರತು, ದಕ್ಷ, ವಾಸು, ಸತ್ಯ, ಕಾಮ, ಕಾಲ, ಧುರಿ, ಲೋಚನ, ಪುರೂರವ ಆರ್ದ್ರವ); ಇವರಲ್ಲಿ ಪುರೂರವ ಮತ್ತು ಆರ್ದ್ರವರದ್ದು ಪಿತೃಗಣದ ನಿಯಮನ ಮಾಡತಕ್ಕಂತಹ ಖಾತೆ. ಪಿತೃದೇವತೆಗಳ ಗಣ ಹತ್ತು(ನೂರು ಮಂದಿ ಪಿತೃಗಳಲ್ಲಿ ಇವರು ಪ್ರಧಾನರು): ಯಮ, ಸೋಮ, ಕವ್ಯವಾಹ(ಇವರು ಮೂವರು ಪಿತೃಪತಿಗಳು), ಸೋಮಸದರು, ಅಗ್ನಿಷ್ವಾತ್ತರು, ಬಹಿರ್ಷದರು, ಸೋಮಪರು, ಹವಿರ್ಭುಜರು, ಅಜ್ಯಪರು, ಸುಕಾಲಿಗಳು.

ನಾವು ಪಿಂಡ ಹಾಕುವುದು ಜೀವದ ಹಸಿವು ನೀಗಲಿಕ್ಕೆ ಅಲ್ಲ. ನಮ್ಮ ಹಿರಿಯರು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುವುದು ಅವರು ಮಾಡಿದ ಕರ್ಮಫಲದಿಂದ ಹೊರತು ನಾವು ಹಾಕಿದ ಶ್ರಾದ್ಧದಿಂದಲ್ಲ. ಶ್ರಾದ್ದ ಏಕೆಂದರೆ ಪಿತೃದೇವತೆಗಳ ಸ್ವಾದೀನದಲ್ಲಿರುವ ಜೀವ ಯಾವುದೋ ದುರಿತದ ಪ್ರಭಾವದಿಂದ ದಾರಿಯಲ್ಲಿ ತಡೆಯನ್ನು ಎದುರಿಸಬೇಕಾಬಹುದು. ಆ ಸಮಯದಲ್ಲಿ ಅದನ್ನು ನಿವಾರಣೆ ಮಾಡುವ ಕರ್ಮಾನುಷ್ಠಾನ ಆ ಸೂಕ್ಷ್ಮ ಶರೀರದಲ್ಲಿ ಇರುವುದಿಲ್ಲ. ಅದಕ್ಕೋಸ್ಕರ ಅಂತಹ ಪ್ರತಿಬಂಧಕಗಳಿಂದ ಅವರನ್ನು ಪಾರು ಮಾಡಿ ಮುಂದೆ ಸಾಗಲು ನೆರವು ಕೋರಿ ಮಾಡುವ ಪಿತೃದೇವತೆಗಳ ಪೂಜೆಯೇ ಶ್ರಾದ್ಧ. ಒಟ್ಟಾರೆ ಇದು ಹಿರಿಯರು ಸತ್ತ ದಿನದ ನೆನಪು, ಅವರಿಗೆ ಕೃತಜ್ಞತೆ ಮತ್ತು ಪಿತೃದೇವತೆಗಳ ಪೂಜೆ.

ಕೃಷ್ಣ ಹೇಳುತ್ತಾನೆ ಸ್ವಧಾ ಅಹಮ್ ಎಂದು. ಮಂತ್ರಗಳು ವಿಳಾಸದಂತೆ, ಸ್ವಾಹ’ ತತ್ವಾಭಿಮಾನಿ ದೇವತೆಗಳಿಗಾದರೆ ಸ್ವಧಾ’ ಪಿತೃದೇವತೆಗಳಿಗೆ. ನನ್ನ ಮುಖೇನವೇ ಶ್ರಾದ್ಧ ಪಿತೃದೇವತೆಗಳಿಗೆ ಸಲ್ಲುವುದು ಎನ್ನುತ್ತಾನೆ ಕೃಷ್ಣ.

ತತ್ವಾಭಿಮಾನಿದೇವತೆಗಳು ಮತ್ತು ಪಿತೃದೇವತೆಗಳ ನಂತರ ಮನುಷ್ಯರು. ಮನುಷ್ಯರ ಮುಖ್ಯವಾದ ಆಹಾರ ಓಷಧಿ’. ಫಲ ಕೊಟ್ಟು ಸಾಯುವ ಗಿಡವನ್ನು ಸಂಸ್ಕೃತದಲ್ಲಿ ಓಷಧಿ’ ಎನ್ನುತ್ತಾರೆ. ಆ ಗಿಡದ ಪ್ರಸವವೇ ಅದರ ಸಾವು. ಮನುಷ್ಯ ತಿನ್ನುವ ದವಸಧಾನ್ಯ ಎಲ್ಲವೂ ಓಷಧಿಗಳು. ಇಂತಹ ಓಷಧಿಗಳ ಸಮುದಾಯವೇ ಔಷಧಿ. ಕೃಷ್ಣ ಹೇಳುತ್ತಾನೆ ಅಹಮ್ ಔಷಧಮ್ ಎಂದು. ನಾವು ತಿನ್ನುವ ದವಸ ಧಾನ್ಯ ಸಲ್ಲುವುದು ಕೂಡಾ ವೈಶ್ವಾನರನಾಗಿ ಒಳಗೆ ಕುಳಿತಿರುವ ಭಗವಂತನಿಗೆ. ಔಷಧ ಕೊಡತಕ್ಕವ, ಅದರಿಂದ ರೋಗ ನಿವಾರಿಸುವವ, ಹಸಿವು ನಿವಾರಿಸಿ ರಕ್ಷಣೆ ಮಾಡುವವ ಭಗವಂತ.

ನಾವು ಬೇರೆ ಬೇರೆ ಮಂತ್ರಗಳಿಂದ ಆಹುತಿಯನ್ನು ಕೊಡುತ್ತೇವೆ. ಈ ಹಿಂದೆ ಹೇಳಿದಂತೆ ಮಂತ್ರ ವಿಳಾಸವಿದ್ದಂತೆ. ಕೊಡುವ ಆಹುತಿ ಎಲ್ಲವೂ ಭಗವಂತನಿಗೆ ಸೇರುವುದಾದರೆ ಬೇರೆಬೇರೆ ವಿಳಾಸವೇಕೆ? ಕೃಷ್ಣ ಹೇಳಿದ ಬೇರೆ ಬೇರೆ ವಿಳಾಸದಲ್ಲಿರುವ ನನಗೆ ಎಂದು! ಭಗವಂತ ಏಕ ಆದರೆ ಆತನ ರೂಪ ಅನೇಕ. ನಾವು ಯಾವ ಮಂತ್ರದಿಂದ ಕಳುಹಿಸಿದರೂ ಕೂಡಾ-ಅದು ಸೇರುವುದು ಎಲ್ಲಾ ಮಂತ್ರದಿಂದ ವಾಚ್ಯನಾದ, ಸರ್ವಶಬ್ದವಾಚ್ಯ ಭಗವಂತನನ್ನು. ಹೀಗೆ ಬೇರೆ ಬೇರೆ ಶಕ್ತಿ ರೂಪವನ್ನು ಬೇರೆ ಬೇರೆ ದೇವತಾ ಪ್ರತೀಕದಲ್ಲಿ ಪೂಜಿಸಿದರೂ ಕೂಡಾ ಪ್ರತಿಯೊಂದು ನಾಮವೂ ಸಹ ಅಂತತಃ ಭಗವಂತನನ್ನೇ ಹೇಳುತ್ತದೆ. ಎಲ್ಲವುದರ ಸಾರವೂ ಭಗವಂತ. ಇದಕ್ಕೆ ಉತ್ತಮ ಉದಾಹರಣೆ ತೆಂಗಿನಕಾಯಿ. ಸಿಪ್ಪೆ ಸಹಿತವಾಗಿರುವ ತೆಂಗಿನಕಾಯಿ ಉರಿಯುವ ಬೆಂಕಿಯಂತೆ; ಸಿಪ್ಪೆಯೊಳಗಿನ ಕಾಯಿ ಬೆಂಕಿಯ ಅಂತರ್ಯಾಮಿ ಅಗ್ನಿ ದೇವತೆಯಂತೆ; ಚಿಪ್ಪಿನ ಒಳಗಿನ ಕೊಬ್ಬರಿ ಅಗ್ನಿ ದೇವತೆಯೊಳಗಿನ ಭಗವಂತನಂತೆ. ಇಲ್ಲಿ ನಾವು ಎಲ್ಲವನ್ನೂ ಕರೆಯುವುದು ತೆಂಗಿನಕಾಯಿ ಅಥವಾ ಅಗ್ನಿ ಎಂತಲೆ. ಹೇಗೆ ನಿಜವಾದ ತೆಂಗಿನಕಾಯಿ ಒಳಗಿನ ಸಾರವೋ ಹಾಗೇ ನಿಜವಾದ ಅಗ್ನಿ ಅಂತತಃ ಅಂತರ್ಯಾಮಿ ಭಗವಂತ. ಈ ಶ್ಲೋಕದಲ್ಲಿ ಕೃಷ್ಣ ಇದನ್ನೇ ಅಹಮ್ ಅಗ್ನಿಃ ಎಂದಿರುವುದು.

ಕೃಷ್ಣ ನಾವು ಆಹುತಿಯಾಗಿ ಕೊಡುವ ಒಂದು ಪ್ರಮುಖ ವಸ್ತುವನ್ನು ಉದಾಹರಣೆಯಾಗಿ ತೆಗೆದುಕೊಂಡು ಹೇಳುತ್ತಾನೆ ಅಹಮ್ ಏವ ಆಜ್ಯಮ್ ಎಂದು. ಆಜ್ಯ ಎಂದರೆ ತುಪ್ಪ. ಆಜ್ಯದಲ್ಲಿ ದೇವತೆಗಳನ್ನು ತಣಿಸುವ ವಿಶಿಷ್ಟ ಶಕ್ತಿ ಇದೆ. ಆಜ್ಯದಲ್ಲಿ ವಿಶಿಷ್ಟ ಶಕ್ತಿಯಾಗಿ ನಾನಿದ್ದೇನೆ ಎನ್ನುವ ಕೃಷ್ಣ ನಾನೇ ಹೋಮದ ಹವಿ (ಅಹಮ್ ಹುತಮ್) ಎನ್ನುತ್ತಾನೆ.

ಹವಿಸ್ಸು ಎಂದರೆ ಭಗವಂತನಿಗೆ ಅರ್ಪಿಸುವ ಹೋಮ ದ್ರವ್ಯ. ಆ ಹವಿಸ್ಸಿನಲ್ಲಿ ವಿಶೇಷ ಶಕ್ತಿ ಇರುವುದು ಆ ಭಗವಂತನಿಂದ. ನಾವು ಅರ್ಪಿಸುವ ಹವಿಸ್ಸು ಎಂದೂ ವ್ಯರ್ಥವಲ್ಲ. ಅಗ್ನಿಗೆ ಅರ್ಪಿಸಿದ ಹವಿಸ್ಸು ಅಗ್ನಿಯಿಂದ ಹೊರ ಹೊಮ್ಮುವ ಏಳು ಬಣ್ಣಗಳ ಮುಖೇನ ವಾತಾವರಣದಲ್ಲಿನ ಸೂರ್ಯ ಕಿರಣದೊಂದಿಗೆ ಸೇರಿ ಸಮಾಜಕ್ಕೆ ಫಲವನ್ನು ಕೊಡುತ್ತದೆ. ಹವಿರ್ಭಾಗವನ್ನು ಸ್ವೀಕರಿಸುವ ಭಗವಂತ ಹವಿರ್ಹರಿಃ . ನಾವು ಯಾವುದೇ ನಾಮವನ್ನುಚ್ಚರಿಸಿ ಹವಿಸ್ಸನ್ನು ಅರ್ಪಿಸಿದರೂ ಅದು ಸೇರುವುದು ಸರ್ವಶಬ್ದ ವಾಚ್ಯನಾದ ಭಗವಂತನನ್ನು. ಸರ್ವ ದೇವ ನಮಸ್ಕಾರಃ ಕೇಶವಂ ಪ್ರತಿಗಚ್ಛತಿ. ಭಗವಂತ ಎಲ್ಲಾ ಶಬ್ದಗಳಿಂದ ವಾಚ್ಯನಾದವನು. ಆದ್ದರಿಂದ ಯಾವ ಶಬ್ದವನ್ನು ಹೇಳಿದರೂ ಅದು ಸೇರುವುದು ಅವನನ್ನೇ. ಹೀಗೆ ಹವಿಸ್ಸನ್ನು ಸ್ವೀಕರಿಸಿ ಭಕ್ತರ ಪಾಪವನ್ನು ಪರಿಹರಿಸುವ ಭಗವಂತ ಹವಿರ್ಹರಿಃ

ಈ ಶ್ಲೋಕವನ್ನು ಇನ್ನೊಂದು ಆಯಾಮದಲ್ಲಿ ನೋಡಿದರೆ, ಇಲ್ಲಿ ಬರುವ ಒಂದೊಂದು ಶಬ್ದವನ್ನು ಭಗವಂತನಲ್ಲಿ ಅನುಸಂಧಾನ ಮಾಡು ಎನ್ನುವ ಸಂದೇಶವನ್ನು ಕಾಣುತ್ತೇವೆ.

ಕ್ರತುಃ ಭಗವಂತನೇ ಕ್ರತು ಶಬ್ದದ ಮುಖ್ಯಾರ್ಥ. ’ಕ್ರತು’ ಕ್ರಿಯೆ, ಜ್ಞಾನ, ಇತ್ಯಾದಿ ಅರ್ಥವನ್ನು ಕೊಡುತ್ತದೆ. ಕ್ರಿಯಾ ಸ್ವರೂಪ, ಜ್ಞಾನ ಸ್ವರೂಪ ಭಗವಂತ ಕ್ರತುಃ’. ನಮ್ಮಲ್ಲಿ ನಂಬಿಕೆ, ಇಚ್ಛಾಶಕ್ತಿ, ಕ್ರಿಯಾಶಕ್ತಿ ಹಾಗೂ ಅನುಕೂಲತೆ ಕೊಟ್ಟು, ನಮ್ಮ ಹಿಂದೆ ನಿಂತು, ಕ್ರಿಯಾ ಕಲಾಪಗಳನ್ನು ನಡೆಸುವ, ಜ್ಞಾನ ಸ್ವರೂಪನೂ, ಕರ್ಮದ ಕಟ್ಟಿನಿಂದ ನಮ್ಮನ್ನು ಪಾರು ಮಾಡುವನೂ ಆದ ಭಗವಂತ ಕ್ರತುಃ’.

ಯಜ್ಞ -ಯಜ್ಞ ಅಂದರೆ ಎಲ್ಲವನ್ನೂ ತಿಳಿದವನು. ಜ್ಞಾನರೂಪಿಯಾಗಿ ಎಲ್ಲೆಡೆ ಇರುವ ಭಗವಂತ, ಎಲ್ಲಾ ಕ್ರಿಯೆಗಳಿಂದ ಎಲ್ಲರೂ ಆರಾಧಿಸಬೇಕಾದ ಯಜ್ಞದ ಅಂತರ್ಯಾಮಿ.

ಸ್ವಧಾಃ ಎಂದರೆ ತನ್ನನ್ನು ತಾನು ಆದರಿಸಿ ನಿಂತ ಸರ್ವ ನಿಯಾಮಕ. ಭಗವಂತ ಔಷಧಃ’. ಎಂದರೆ ಸಂಸಾರ ತಾಪದಲ್ಲಿ ಬಿದ್ದು ಒದ್ದಾಡುವವ(ಔಷರು)ರಿಗೆ ಆಸರೆ-ಮೋಕ್ಷ ಪ್ರದ.

ಮಂತ್ರಃ ಜ್ಞಾನಪೂರ್ವಕವಾಗಿ ಅನುಸಂಧಾನ ಮಾಡುವವರನ್ನು ರಕ್ಷಣೆ ಮಾಡುವ ಭಗವಂತ ಮಂತ್ರಃ’. ಮಂತ್ರ ನಮ್ಮನ್ನು ರಕ್ಷಣೆ ಮಾಡುವುದು ನಾವು ತಿಳಿದು ಪಠಿಸಿದಾಗ ಮಾತ್ರ. ಇಲ್ಲದಿದ್ದರೆ ಕಿಂಚಿತ್ ಫಲ ಮಾತ್ರ. ಮಹಾಫಲದಿಂದ ವಂಚಿತರಾಗುತ್ತೇವೆ.

ಭಗವಂತ ಎಲ್ಲಕ್ಕಿಂತ ದೊಡ್ಡ ವಸ್ತು ಆದ್ದರಿಂದ ಆತ ಆಜ್ಯಃ. ಚಲಿಸದೇ ಇರುವ ವಸ್ತುವಿಗೆ ಚಲನೆ ಕೊಡುವ ಭಗವಂತ ಅಗ್ನಿಃ. ಎಲ್ಲ ಭಕ್ತರಿಂದ ಆಹುತನಾದ್ದರಿಂದ ಭಗವಂತ ಹುತಃ.

Tags: Dr. Gururaja PoshettihalliKannada ArticleMahalaya AmavasyePaksha MasaParamapadaPitru PakshaShraddaSpecial Articleಡಾ. ಗುರುರಾಜ ಪೋಶೆಟ್ಟಿಹಳ್ಳಿಪಕ್ಷಮಾಸಪಿತೃಪಕ್ಷಮಹಾಲಯ ಅಮಾವಾಸ್ಯೆಶ್ರಾದ್ಧಕರ್ಮ
Share207Tweet123Send
Previous Post

ಪಿತೃಕಾರ್ಯ ಮಾಡದಿದ್ದರೆ ಎಂತಹ ಶಾಪವಿದೆ? ಯಾರದ್ದೆಲ್ಲಾ ಋಣಗಳಿರುತ್ತವೆ ಗೊತ್ತಾ?

Next Post

ಕೆಣಕಿದ ಫೇಕ್ ಐಡಿ ವೀರರಿಗೆ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಉತ್ತರಿಸಿದ ನಟ ಜಗ್ಗೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇದು ಆಧುನಿಕ ಭಾರತ, ಕಳ್ಳ ಗುಣದವರು ಜೈಲಲ್ಲಿ ಮುಂದೆ: ಜಗ್ಗೇಶ್ ಟ್ವೀಟ್ ಚಾಟಿ

ಕೆಣಕಿದ ಫೇಕ್ ಐಡಿ ವೀರರಿಗೆ ರೇಷ್ಮೆ ಬಟ್ಟೆಯಲ್ಲಿ ಸುತ್ತಿ ಹೊಡೆದಂತೆ ಉತ್ತರಿಸಿದ ನಟ ಜಗ್ಗೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

April 14, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ – ನ್ಯೂ ಜಲ್ಪೈಗುರಿ ನಡುವೆ ವಿಶೇಷ ರೈಲು ಸೇವೆ

April 14, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Work in connection with Yard Remodelling at Channasandra Station Diversion of trains

April 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Summer Special Train Service Between Yesvantpur and New Jalpaiguri

April 14, 2026
SWR to run special trains for Good Friday, Easter rush

ಬೆಂಗಳೂರು – ರೂಪ್ಸಾ ನಡುವೆ ವಿಶೇಷ ರೈಲು ಸೇವೆ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL