No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ರಾಷ್ಟ್ರಪ್ರೇಮದ ಜ್ಯೋತಿ ಪ್ರಜ್ವಲಿಸುವ ಪರೀಕ್ಷೆ ನಿರ್ಮಾಣಂ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 19, 2018
in Special Articles
0
ರಾಷ್ಟ್ರಪ್ರೇಮದ ಜ್ಯೋತಿ ಪ್ರಜ್ವಲಿಸುವ ಪರೀಕ್ಷೆ ನಿರ್ಮಾಣಂ
Share on FacebookShare on TwitterShare on WhatsApp

ಶ್ರೀರಾಮಕೃಷ್ಣ- ವಿವೇಕಾನಂದರ ಜೀವನ ಮತ್ತು ಸಂದೇಶಗಳನ್ನು ಪ್ರಸಾರ ಮಾಡುವ ಉದ್ದೇಶವನ್ನು ಇಟ್ಟುಕೊಂಡು ಮಂಡ್ಯದಲ್ಲಿ ಆರಂಭವಾಗಿರುವ ವಿವೇಕ ಶಿಕ್ಷಣ ವಾಹಿನಿ ಸಂಸ್ಥೆಯು ಒಂದು ವರ್ಷದಿಂದ ಅನೇಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ.
ವಾಹಿನಿಯ ವತಿಯಿಂದ ಕಳೆದ ವರ್ಷ 10,000 ವಿದ್ಯಾರ್ಥಿಗಳಿಗೆ ನಿರ್ಮಾಣಂ ಪರೀಕ್ಷೆಯನ್ನು ಬರೆಸಲಾಗಿತ್ತು. ಅದರಂತೆ ಈ ವರ್ಷವೂ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳಿಗೋಸ್ಕರ ಸ್ವಾಮಿ ಪುರುಷೋತ್ತಮಾನಂದರು ಬರೆದಿರುವ, ರಾಮಕೃಷ್ಣ ಆಶ್ರಮದ ಪ್ರಕಟಣೆಯಾದ, ವಿದ್ಯಾರ್ಥಿಗಾಗಿ ಪುಸ್ತಕವನ್ನು ಆಧರಿಸಿದ 100 ಅಂಕಗಳ ನಿರ್ಮಾಣಂ ಲಿಖಿತ ಪರೀಕ್ಷೆಯನ್ನು ಮತ್ತೊಮ್ಮೆ ಆಯೋಜಿಸಲಾಗುತ್ತಿದೆ.
ಪರೀಕ್ಷಾ ಶುಲ್ಕ ಪ್ರತಿ ವಿದ್ಯಾರ್ಥಿಗೆ 30 ರೂಪಾಯಿ. ವಿದ್ಯಾರ್ಥಿಗಾಗಿ ಪುಸ್ತಕ, ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆ, ಪ್ರತಿ ತರಗತಿಗೆ ನಾಲ್ವರಂತೆ ಅತಿ ಹೆಚ್ಚು ಅಂಕ ಗಳಿಸಿದ ವಿಜೇತರಿಗೆ ಬಹುಮಾನವಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆಯ ಅರ್ಧದಷ್ಟು ಭಾರತ ಭಾರತಿ ಸರಣಿಯ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯ ಪುಟ್ಟ ಪುಟ್ಟ ಪುಸ್ತಕಗಳು, ಮೌಲ್ಯಮಾಪಕರಿಗೆ ಒಂದು, ಸಂಯೋಜಕರಿಗೆ ಒಂದು, ಶಾಲೆಗೆ ಒಂದು ಸ್ಮರಣಿಕೆ ಮತ್ತು ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರಗಳನ್ನು ಸಂಸ್ಥೆಯ ವತಿಯಿಂದ ಒದಗಿಸಲಾಗುತ್ತದೆ.
ಪುಸ್ತಕಗಳು ದೊರೆತ ಕೂಡಲೇ ಮಕ್ಕಳಿಗೆ ಅದನ್ನು ವಿತರಿಸಿ ಅದರಲ್ಲಿರುವ ನಾಲ್ಕು ಅಧ್ಯಾಯಗಳನ್ನು ಶಿಕ್ಷಕರ ಸಹಾಯದೊಂದಿಗೆ ತರಗತಿಗಳಲ್ಲಿ ಬೋಧಿಸಿ, ನವಂಬರ್ ಅಥವಾ ಡಿಸಂಬರ್ ತಿಂಗಳಲ್ಲಿ ಪರೀಕ್ಷೆಯನ್ನು ಆಯೋಜಿಸಿ, ಉತ್ತರಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ಜನವರಿ 12 ರ ಸ್ವಾಮಿ ವಿವೇಕಾನಂದ ಜಯಂತಿಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡುವುದು ಸಂಯೋಜಕರ ಕೆಲಸ.

ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು ಸಮಯಾವಕಾಶ ನೀಡುವ ಸಲುವಾಗಿ ಪುಸ್ತಕಗಳನ್ನು ಅತ್ಯಂತ ಶೀಘ್ರದಲ್ಲಿ ತಲುಪಿಸಬೇಕಾಗುತ್ತದೆ. ಶುಲ್ಕವನ್ನು ಸಂಗ್ರಹಿಸಿ ನಮಗೆ ಕಳುಹಿಸಿದ ಕೂಡಲೇ ನಿಮಗೆ ಪುಸ್ತಕಗಳನ್ನು ತಲುಪಿಸಲಾಗುವುದು. ಪ್ರಶ್ನೆ ಪತ್ರಿಕೆ, ಉತ್ತರಪತ್ರಿಕೆ, ಪ್ರಮಾಣಪತ್ರ, ಸ್ಮರಣಿಕೆ ಮತ್ತು ಬಹುಮಾನಗಳನ್ನು ಪರೀಕ್ಷಾ ದಿನಾಂಕಕ್ಕೆ ಒಂದು ವಾರ ಮುಂಚಿತವಾಗಿ ಸಂಯೋಜಕರಿಗೆ ತಲುಪಿಸಲಾಗುವುದು. ದಾನಿಗಳು ಲಭ್ಯವಿದ್ದಲ್ಲಿ ನಿಮ್ಮ ಶಾಲೆಯ ಪೂರ್ಣ ಪರೀಕ್ಷಾ ಶುಲ್ಕವನ್ನು ನೀವೇ ಭರಿಸಿ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷೆ ಬರೆಯಲೂ ಅವಕಾಶ ಕಲ್ಪಿಸಬಹುದು.
ಸ್ವಾಮಿ ಪುರುಷೋತ್ತಮಾನಂದರು ಬರೆದಿರುವ ವಿದ್ಯಾರ್ಥಿಗಾಗಿ ಎನ್ನುವ ಈ ಪುಸ್ತಕದಲ್ಲಿ ಒಂದು ದಿವ್ಯ ಶಕ್ತಿ ಇದೆ. ಸ್ವಾಮಿ ವಿವೇಕಾನಂದರ ಜಯಂತಿಯ ಸಂದರ್ಭದಲ್ಲಿ ಈ ಪುಸ್ತಕವನ್ನು ವಿದ್ಯಾರ್ಥಿಗಳ ಭವ್ಯ ಭವಿಷ್ಯವನ್ನು ರೂಪಿಸುವ ಮಾಧ್ಯಮವನ್ನಾಗಿ ಬಳಸಲು ನಮ್ಮೊಡನೆ ಕೈಜೋಡಿಸಿ. ನೀವೂ ಈ ಪರೀಕ್ಷೆಯ ಆಯೋಜಕರಾಗಲು ಬಯಸಿದರೆ ತಕ್ಷಣ ಸಂಪರ್ಕಿಸಿ – ವಿವೇಕ ಶಿಕ್ಷಣ ವಾಹಿನಿ : 9880649290
ವಿದ್ಯಾರ್ಥಿಗಾಗಿ ಪುಸ್ತಕದ ಬಗ್ಗೆ
ಹೈಸ್ಕೂಲು ಓದುವ ಪ್ರತೀ ವಿದ್ಯಾರ್ಥಿಗೂ ತಾನು ಜೀವನದಲ್ಲಿ ಹೇಗೆ ಬದುಕಬೇಕು ಎನ್ನುವ ಪ್ರಶ್ನೆ ಉದ್ಭವ ಆಗಿಯೇ ಆಗುತ್ತದೆ. ಆದರೆ ತನ್ನಲ್ಲಿ ಉದ್ಭವವಾಗುವ ಪ್ರಶ್ನೆಗಳಿಗೆ ಆತನಿಗೆ ಅನೇಕ ಬಾರಿ ಸರಿಯಾದ ಉತ್ತರ ಸಿಗುವುದಿಲ್ಲ. ಈ ವಿಚಾರದಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತದೆ. ಶಿಕ್ಷಕರು ತಂದೆತಾಯಿಯರಿಗೂ ಕೆಲವೊಮ್ಮೆ ಇದೆಲ್ಲವನ್ನು ಹೇಗೆ ತಿಳಿಸಿಕೊಡಬೇಕೆನ್ನುವ ಸರಿಯಾದ ಜ್ಞಾನವಿರುವುದಿಲ್ಲ. ಇದೆಲ್ಲವನ್ನೂ ಗಮನಿಸಿಯೇ ರಾಮಕೃಷ್ಣ ಆಶ್ರಮದ ಪೂಜ್ಯ ಸ್ವಾಮಿ ಪುರುಷೋತ್ತಮಾನಂದರು ಬರೆದಿರುವ ವಿದ್ಯಾರ್ಥಿಗಾಗಿ ಎನ್ನುವ ಈ ಪುಸ್ತಕ ವಿದ್ಯಾರ್ಥಿಗಳಿಗೆ ಅದರಲ್ಲೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಒಂದು ಸಮರ್ಥ ಮಾರ್ಗದರ್ಶಿ.
ಬೆಳಿಗ್ಗೆ ಏಳುವುದರಿಂದ ಹಿಡಿದು ರಾತ್ರಿ ಮಲಗುವವರೆಗೆ ಒಬ್ಬ ವಿದ್ಯಾರ್ಥಿ ಹೇಗಿರಬೇಕು ಎಂಬುದನ್ನು ಅತ್ಯಂತ ಸರಳ ಭಾಷೆಯಲ್ಲಿ ಆದರೆ ಅಷ್ಟೇ ಪರಿಣಾಮಕಾರಿಯಾಗಿ ತಿಳಿಸಿದ್ದಾರೆ. ಅನೇಕ ವಿದ್ಯಾರ್ಥಿಗಳು ಈ ಪುಸ್ತಕದಿಂದ ಸ್ಫೂರ್ತಿ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ತಮ್ಮ ಜೀವನವನ್ನು ಉತ್ತಮಪಡಿಸಿಕೊಂಡಿದ್ದಾರೆ. ಈ ಪುಸ್ತಕ ಬರೆದು ಸುಮಾರು ಎರಡು ದಶಕಗಳು ಕಳೆದುಹೋಗಿವೆ. 32 ಕ್ಕೂ ಹೆಚ್ಚು ಮರುಮುದ್ರಣ ಕಂಡು 8 ಲಕ್ಷಕ್ಕೂ ಅಧಿಕ ಪ್ರತಿಗಳು ವಿದ್ಯಾರ್ಥಿಗಳ ಕೈ ಸೇರಿವೆ. ಹಿಡಿದರೆ ಒಂದೇ ಗುಕ್ಕಿನಲ್ಲಿ ಓದಿ ಮುಗಿಸಬಹುದಾದ ಆದರೆ ಜೀವನ ಪೂರ್ತಿ ಪಾಲಿಸಬೇಕಾದ ಅಮೂಲ್ಯ ವಿಚಾರಗಳುಳ್ಳ, ಪ್ರತಿಯೊಬ್ಬ ವಿದ್ಯಾರ್ಥಿಯೂ ಅವಶ್ಯವಾಗಿ ಓದಲೇಬೇಕಿರುವ ಈ ಪುಸ್ತಕದ ಕುರಿತಾದ ನಿರ್ಮಾಣಂ ಪರೀಕ್ಷೆಯನ್ನು ನಿಮ್ಮ ಮಗುವಿನ ಕೈಲಿ ಬರೆಸಲಾರಿರಾ?
ನಿರ್ಮಾಣಂ ನಲ್ಲಿ ನೀವು ಹೇಗೆ ಭಾಗವಹಿಸಬಹುದು?
ಸಂಯೋಜಕ: ಶಾಲೆಯೊಂದರಲ್ಲಿ ಪರೀಕ್ಷೆ ಸಂಯೋಜಿಸುವ ಮೂಲಕ ನೂರಾರು ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡಬಹುದು.
ಸಂರಕ್ಷಕ: ಶಾಲೆಯೊಂದರ ಎಲ್ಲ ವಿದ್ಯಾರ್ಥಿಗಳ ಪೂರ್ಣ ಶುಲ್ಕವನ್ನು ಭರಿಸುವ ಮೂಲಕ ವಿದ್ಯಾರ್ಥಿಗಾಗಿ ಉಚಿತ ಪರೀಕ್ಷೆ ಬರೆಯುವಂತೆ ಮಾಡಬಹುದು.
ಪ್ರಾಯೋಜಕ: ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ನೀಡುವ ಬಹುಮಾನಗಳನ್ನು ಪ್ರಾಯೋಜಿಸಬಹುದು. ಪ್ರಶ್ನೆ ಪತ್ರಿಕೆ ಮತ್ತು ಪ್ರಮಾಣ ಪತ್ರಗಳನ್ನು ಮುದ್ರಿಸಿಕೊಡಬಹುದು.
ಪ್ರಚಾರಕ: ಈ ಯೋಜನೆಯ ಬಗ್ಗೆ ನಿಮಗೆ ಗೊತ್ತಿರುವ ಶಿಕ್ಷಕರಿಗೆ, ಮುಖ್ಯೋಪಾಧ್ಯಾಯರಿಗೆ, ಸಮಾಜಸೇವಕರಿಗೆ, ಸ್ನೇಹಿತರಿಗೆ ಮಾಹಿತಿ ನೀಡಿ ಪರೀಕ್ಷೆ ಆಯೋಜಿಸಲು ಮನವೊಲಿಸಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಬಹುದು.
ನಿರ್ಮಾಣಂ ಪರೀಕ್ಷೆಯ ಸಂಯೋಜಕರಿಗೆ ಸೂಚನೆಗಳು:
1. ನಿರ್ಮಾಣಂ ಪರೀಕ್ಷೆ ನಡೆಸಬೇಕಿರುವುದು ನವಂಬರ್ ಅಥವಾ ಡಿಸಂಬರ್ ತಿಂಗಳಲ್ಲಿ. ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಪ್ರಕಟಿಸಿದ ದಿನಾಂಕದಂದು ಬೆಳಗಿನಿಂದ ಮಧ್ಯಾಹ್ನದವರೆಗೆ ಯಾವುದೇ ಅನುಕೂಲಕರ ಸಮಯದಲ್ಲಿ ನಡೆಸಬಹುದು. ಪರೀಕ್ಷೆಯ ಅವಧಿ ಗರಿಷ್ಠ ಎರಡು ಗಂಟೆ. ಗರಿಷ್ಠ ಅಂಕಗಳು 100.
2. ಮೊದಲು ಶಾಲೆಯ ಮುಖ್ಯೋಪಾಧ್ಯಾರಿಗೆ ಮನವಿ ಪತ್ರ ನೀಡಿ ಅನುಮತಿ ಪಡೆಯುವುದು. (ಅನುಮತಿ ಪತ್ರದ ಮಾದರಿ ಕೆಳಗಿದೆ) ಪರೀಕ್ಷೆಗಾಗಿ ಆಸಕ್ತ ವಿದ್ಯಾರ್ಥಿಗಳ ಬಳಿ ಪಡೆಯಬೇಕಾದ ಶುಲ್ಕ 30 ರೂಪಾಯಿಗಳು. ದಾನಿಗಳು ದೊರಕಿದಲ್ಲಿ ಶುಲ್ಕದಲ್ಲಿ ಕಡಿತ ಮಾಡಬಹುದು ಅಥವಾ ಉಚಿತ ಪರೀಕ್ಷೆಯನ್ನೂ ನಡೆಸಬಹುದು.
3. ನೀವು ಪರೀಕ್ಷೆ ತೆಗೆದುಕೊಳ್ಳಲಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ದೂರವಾಣಿ ಮೂಲಕ ನಮಗೆ ತಿಳಿಸಿ, ಪರೀಕ್ಷಾ ಶುಲ್ಕವನ್ನು ಅಕೌಂಟ್ ಗೆ ಜಮಾ ಮಾಡಿದ ಕೂಡಲೇ ನಿಮಗೆ 50 ಪುಟಗಳ ವಿದ್ಯಾರ್ಥಿಗಾಗಿ ಪುಸ್ತಕಗಳನ್ನು ಕಳುಹಿಸಲಾಗುವುದು. ಪುಸ್ತಕಗಳು ನಿಮಗೆ ತಲುಪಿದ ತಕ್ಷಣ ವಿದ್ಯಾರ್ಥಿಗಳಿಗೆ ತಲುಪಿಸುವುದು ನಿಮ್ಮ ಜವಾಬ್ದಾರಿ. ಏಕೆಂದರೆ ನೀವು ಎಷ್ಟು ಬೇಗ ತಲುಪಿಸುತ್ತೀರೋ ಅಷ್ಟು ಹೆಚ್ಚಿನ ಸಮಯ ಮಕ್ಕಳಿಗೆ ಓದಿಕೊಳ್ಳಲು ಅವಕಾಶ ಸಿಗುತ್ತದೆ.
4. ಈ ಪುಸ್ತಕದಲ್ಲಿ ಒಟ್ಟು 4 ಅಧ್ಯಾಯಗಳಿದ್ದು, ಶಿಕ್ಷಕರ ಸಹಾಯದಿಂದ ಮಕ್ಕಳಿಗೆ ತರಗತಿಗಳಲ್ಲಿ ಇದನ್ನು ಬೋಧಿಸಿ, ನವಂಬರ್ / ಡಿಸೆಂಬರ್ ತಿಂಗಳಲ್ಲಿ ಪರೀಕ್ಷೆ ನಡೆಸಿ ಉತ್ತರ ಪತ್ರಿಕೆಗಳನ್ನುಮೌಲ್ಯಮಾಪನ ಮಾಡಿ ಜನವರಿ 12 ರಂದು ಸ್ವಾಮಿ ವಿವೇಕಾನಂದ ಜಯಂತಿಯಂದು ಬಹುಮಾನವನ್ನು ವಿತರಿಸಬೇಕು.
5. ಪ್ರಶ್ನೆ ಪತ್ರಿಕೆ – ಉತ್ತರ ಪತ್ರಿಕೆ (ಎರಡೂ ಒಟ್ಟಿಗೇ ಇರುತ್ತದೆ), ಪ್ರತಿ ತರಗತಿಗೆ ನಾಲ್ಕರಂತೆ ವಿಜೇತರಿಗೆ ಬಹುಮಾನವಾಗಿ ಭಾರತ ಭಾರತಿ ಪುಸ್ತಕಗಳು ಮತ್ತು ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಮತ್ತು ಶಾಲೆ, ಸಂಯೋಜಕ, ಮೌಲ್ಯಮಾಪಕರಿಗೆ ಸ್ಮರಣಿಕೆಗಳನ್ನು ಪರೀಕ್ಷೆಗೆ ಒಂದು ವಾರ ಮುಂಚಿತವಾಗಿ ನಿಮ್ಮ ವಿಳಾಸಕ್ಕೆ ಪೋಸ್ಟ್ ಅಥವಾ ಕೊರಿಯರ್ ಮೂಲಕ ತಲುಪಿಸಲಾಗುವುದು.
6. ಒಂದು ವೇಳೆ ಯಾರಾದರೂ ದಾನಿಗಳು ಮಕ್ಕಳಿಗಾಗಿ ಹೆಚ್ಚುವರಿ ಬಹುಮಾನ ನೀಡಲು ಮುಂದೆ ಬಂದರೆ ಅವಶ್ಯವಾಗಿ ಸ್ವೀಕರಿಸಿ. ಮಕ್ಕಳಿಗೆ ಕೊಟ್ಟು ಪ್ರೋತ್ಸಾಹಿಸಿ. ಇಲ್ಲಿ ಸ್ಪರ್ಧೆಗಿಂತಲೂ ಪುಸ್ತಕಗಳನ್ನು ವಿದ್ಯಾರ್ಥಿಗಳು ಓದಬೇಕೆಂಬ ಉದ್ದೇಶವಿರುವುರಿಂದ ಆ ಅಂಶಕ್ಕೆ ಹೆಚ್ಚು ಮಹತ್ವ ಕೊಟ್ಟು ಪುಸ್ತಕದಲ್ಲಿರುವ ಹಲವಾರು ಉತ್ತಮ ಮೌಲ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವುದಕ್ಕೆ ಹೆಚ್ಚಿನ ಮಹತ್ವ ನೀಡಬೇಕೆಂದು ಉಳಿದ ಎಲ್ಲ ಸಣ್ಣಪುಟ್ಟ ವಿಚಾರಗಳನ್ನು ಬದಿಗೆ ಸರಿಸಬೇಕೆಂದು ಕೋರಿಕೊಳ್ಳುತ್ತೇವೆ.
ಬನ್ನಿ ಸಹೋದರರೇ, ಸಮಾಜ ಹಾಳಾಗುತ್ತಿದೆ, ಹುಡುಗರು ಸರಿ ಇಲ್ಲ, ಯುವ ಜನತೆ ದಾರಿ ತಪ್ಪಿದೆ, ಅದೂ ಇದು ಅಂತ ಬರೀ ದೂರುವ ಬದಲು ಕಟ್ಟುವ ಕೆಲಸ ಮಾಡೋಣ. ವಿದ್ಯಾರ್ಥಿಗಳ ಮನಸ್ಸನ್ನು ಶಕ್ತಿಯುತವಾಗಿ ನಿರ್ಮಾಣ ಮಾಡಲು ನಮ್ಮದೊಂದು ಅಳಿಲು ಸೇವೆ ಸಲ್ಲಿಸೋಣ. ಈ ಮೇಲಿನ ನಾಲ್ಕು ಅಂಶಗಳಲ್ಲಿ ಯಾವುದಾದರೂ ಒಂದರಲ್ಲಾದರೂ ಭಾಗಿಯಾಗುವುದರ ಮೂಲಕ ನಿರ್ಮಾಣಂ ಅನ್ನು ಯಶಸ್ವಿಗೊಳಿಸೋಣ. ಸ್ವಾಮಿ ವಿವೇಕಾನಂದರ ಜಗದ್ಗುರು ಭಾರತದ ಕನಸನ್ನು ನನಸು ಮಾಡೋಣ. ಜೈ ಹಿಂದ್
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – ವಿವೇಕ ಶಿಕ್ಷಣ ವಾಹಿನಿ: 9880649290

Tags: Kannada ArticleKannada NewsNirmanam ExamSwami Vivekanandaನಿರ್ಮಾಣಂವಿವೇಕ ಶಿಕ್ಷಣ ವಾಹಿನಿವಿವೇಕಾನಂದಶ್ರೀರಾಮಕೃಷ್ಣಸ್ವಾಮಿ ಪುರುಷೋತ್ತಮಾನಂದ
Share196Tweet123Send
Previous Post

ಸಿಎಂ ಪಿಣರಾಯಿಗೂ ತಟ್ಟಿತು ಅಯ್ಯಪ್ಪ ಭಕ್ತರ ಪ್ರತಿಭಟನೆ ಬಿಸಿ

Next Post

Highlights: 20.11.2018

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Highlights: 20.11.2018

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL