ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಮಸ್ಯೆ ಮುಕ್ತಾಯಗೊಂಡ ನಂತರ ಹೊಸದಾಗಿ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ಹೇಳಿದರು.
ಪಡಿತರ ಅಂಗಡಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, ಇಂದಿನಿಂದ ಇದೇ 30ರ ವರಗೆ ಪಡಿತರ ಚೀಟಿ ಇಲ್ಲವರಿಗೆ ಸರ್ಕಾರಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಪ್ರತಿ ಒಬ್ಬ ವ್ಯಕ್ತಿಗೆ 5 ಕೆ ಜಿ ಅಕ್ಕಿ, ಎರಡು ಕೆಜಿ ಬೇಳೆ ವಿತರಿಸಲಾಗುತ್ತಿದೆ ಎಂದರು.
ರಾಜ್ಯ ಹಾಗೂ ಹೊರ ರಾಜ್ಯದ ಕಾರ್ಮಿಕರು, ಅಂತರ್ ಜಿಲ್ಲೆಯವರು, ರೇಷನ್ ಕಾರ್ಡ್ ಹೊಂದಿರದವರು ಇಂದಿನಿಂದ ಜೂನ್ ಹತ್ತರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಅಕ್ಕಿ ಮತ್ತು ಬೇಳೆ ತೆಗೆದುಕೊಳ್ಳಬಹುದಾಗಿದೆ. ಕೊರೋನಾ ಸಮಸ್ಯೆ ಮುಗಿದ ಬಳಿಕ ಹೊಸದಾಗಿ ರೇಶನ ಕಾರ್ಡ್ಗೆ ಅರ್ಜಿ ಸಲ್ಲಕೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
(ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post