No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ರಸ್ತೆ ಕಳಪೆ ಕಾಮಗಾರಿ ವಿರುದ್ಧ ಭದ್ರಾವತಿಯಲ್ಲಿ ಭುಗಿಲೆದ್ದ ಆಕ್ರೋಶ

ರಸ್ತೆ ಅಗಲೀಕರಣ ತಾರತಮ್ಯ ವಿರೋಧಿಸಿ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 10, 2020
in ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಕೋರ್ಟ್ ಮುಂದಿನ ರಸ್ತೆ ಅಗಲೀಕರಣದ ಕಾಮಗಾರಿ ನಿಗಧಿತ ವಿಸ್ತೀರ್ಣಕ್ಕೆ ತಕ್ಕಂತೆ ಮಾಡದೇ ಅಲ್ಲಲ್ಲಿ ಅದರ ವಿಸ್ತೀರ್ಣವನ್ನು ಕಿರಿದು, ಹಿರಿದುಗೊಳಿಸಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಗರದ ನ್ಯಾಯವಾದಿಗಳ ಸಂಘ ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ರಸ್ತೆಗಿಳಿದು ಬಾರಿ ಹೋರಾಟ ನಡೆಸಿತು.

ಈ ವಿಷಯ ಸಂಬಂಧಿಸಿದಂತೆ ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ನೇತೃತ್ವದಲ್ಲಿ ವಕೀಲರು ಸಭೆ ಸೇರಿ ಹೋರಾಟ ತಾರ್ಕಿಕವಾಗಿ ಅಂತ್ಯಗೊಳ್ಳುವವರೆಗೂ ಹೋರಾಟವನ್ನು ಬಿಡಬಾರದು ಎಂದು ನಿರ್ಧರಿಸಲಾಯಿತು.

ನೂರಾರು ವಕೀಲರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾ ನ್ಯಾಯಾಲಯದ ಮುಂದಿನಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿ, ಕಳಪೆ ಕಾಮಗಾರಿಯನ್ನು ನಿಲ್ಲಿಸುವಂತೆ ಆಗ್ರಹಿಸಿ ತಡೆದರು.

ನಂತರ ನ್ಯಾಯಾಲಯದ ಎದುರಿಗೆ ಪ್ರತಿಭಟನೆ ಮುಂದುವರೆಸಿದ ಪ್ರತಿಭಟನಕಾರರ ಜೊತೆಗೆ ಆಮ್ ಆದ್ಮಿಪಕ್ಷದ ಕಾರ್ಯಕರ್ತರು, ನಾಯಕರು, ಸೇರಿದಂತೆ ವಿವಿಧ ಸಂಘಸಂಸ್ಥೆಯವರು ಹಾಗೂ ನೂರಾರು ಸಾರ್ವಜನಿಕರು ಸೇರಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾದರು.

ಈಸಂಧರ್ಭದಲ್ಲಿ ಮತನಾಡಿದ ವಕೀಲರಾದ ಕೆ.ಎನ್. ಶ್ರೀಹರ್ಷ, ಟಿ.ಚಂದ್ರೇಗೌಡ, ಎಂ.ಜಿ.ರುದ್ರೇಶ್, ಎಚ್. ವಿಶ್ವನಾಥ್ ಉಪಾಧ್ಯಕ್ಷ ವೈ. ಜಯರಾಂ ಸಯ್ಯದ್ ನಿಯಾಜ್ ಆಮ್ ಆದ್ಮಿ ಮುಖಂಡ ರವಿಕುಮಾರ್, ರಾಜಾರಾವ್ ಮುಂತಾದವರು ಮಾತನಾಡಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ಹಲವಾರು ಮರಗಳನ್ನು ಕಡಿದು ಹಾಕಿ ಈಗ ರಸ್ತೆ ಅಗಲೀಕರಣದ ವಿಸ್ತೀರ್ಣವನ್ನು ಸಂಕುಚತಗೊಳಿಸಿ ಮಾಡಲಾಗುತ್ತಿದೆ. ಮಾಡುತ್ತಿರುವ ಕಾಮಗಾರಿ ಕಳಪೆಯಿಂದ ಕೂಡಿದೆ. ನ್ಯಾಯಾಲಯದ ಎದುರಿಗೆ ರಸ್ತೆ ಅಗಲ ಹೆಚ್ಚಾಗಿರಬೇಕಾದ ಅವಶ್ಯಕತೆಯಿದ್ದು ರಾಜಕಾರಣಿಗಳ ಒತ್ತಡಕ್ಕೆ ಮಣಿದು ರಸ್ತೆ ವಿಸ್ತೀರ್ಣವನ್ನು ಈ ಭಾಗದಲ್ಲಿ ಕಿರದುಗೊಳಿಸುತ್ತಿರುವುದು ಸರಿಯಲ್ಲ. ಕೂಡಲೇ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದು ಅಧಿಕಾರಿಗಳನ್ನು ಕರೆಸಿ ರಸ್ತೆ ಅಗಲೀಕರಣದಲ್ಲಿ ಆಗಿರುವ ಲೋಪದೋಷಸರಿಪಡಿಸಿ ವಿಸ್ತಾರವಾದ ರಸ್ತೆ ಮಾಡಲೇಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ನಗರಸಭಾ ಆಯುಕ್ತ ಮನೋಹರ್, ಲೋಕೋಪಯೋಗಿ ಇಲಖೆ ಇಂಜಿನಿಯರ್ ರಾಮಚಂದ್ರ, ತಹಶೀಲ್ದಾರ್ ಸೋಮಶೇಖರ್ ಹಾಗೂ ಇಂಜಿನಿಯರ್ ಮಂಜುನಾಥ ಆಗಮಿಸಿ ಪ್ರತಿಭಟನಾಕಾರರ ಮನವಿ ಆಲಿಸಿದರು.

ನಗರಸಭಾ ಆಯುಕ್ತ ಮನೋಹರ್ ಮಾತನಾಡಿ, ಈ ರಸ್ತೆ ಅಗಲೀಕರಣದ ಬಗ್ಗೆ ಅದರ ವಿಸ್ತೀರ್ಣದ ಕುರಿತು ನಮಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಿಲ್ಲ. ಇರುವ ರಸ್ತೆಯನ್ನೇ ಅಗಲೀಕರಣ ಮಾಡಿದಂತೆ ಮಾಡುವುದಾಗಿ ಹೇಳಿದ್ದರು ಎಂದರು.

ಲೋಕೋಪಯೋಗಿ ಇಲಾಖೆ ಇಂಜಿನಿಯರ್ ರಾಮಚಂದ್ರ ಮಾತನಾಡಿ, ರಸ್ತೆ ಅಗಲೀಕರಣ ಉಭಯ ಪಾರ್ಶ್ವಗಳಲ್ಲಿ 12 ಮೀಟರ್ ನಂತೆ ಮಾಡಲಾಗುತ್ತದೆ ಎಂದರು. ಆಗ ವಕೀಲರು ಅಷ್ಟು ಕಡಿಮೆ ವಿಸ್ತೀರ್ಣದ ರಸ್ತೆ ಮಾಡುವುದಾಗಿದ್ದರೆ ಮರವನ್ನು ಏಕೆ ಕಡಿದು ಹಾಕಿದಿರಿ ಎಂದು ಪ್ರಶ್ನಿಸಿ, ಸರ್ಕಾರದ ಆದೇಶದನ್ವಯ ಈ ರಸ್ತೆ ಅಗಲೀಕರಣ ಆಗಲೇ ಬೇಕು. ಕಡಿದು ಹಾಕಿರುವ ಮರಗಳ ಜಾಗದಲ್ಲಿ ಹೊಸ ಸಸಿಗಳನ್ನು ನೆಡಲು ಅವಕಾಶ ಕಲ್ಪಿಸಬೇಕು ಮತ್ತು ನ್ಯಾಯಾಲಯದ ಎದುರಿಗಿರುವ ರಸ್ತೆ ಅಗಲೀಕರಣವನ್ನು ಯಾವುದೇ ಮುಲಾಜಿಗೆ ಒಳಗಾಗದೆ ರಂಗಪ್ಪ ವೃತ್ತದವರೆಗೆ ರಸ್ತೆ ವಿಸ್ತೀರ್ಣಗೊಳಿಸಲೇಬೇಕು ಎಂದು ಆಗ್ರಹಿಸಿದರು.

ಅಂತಿಮವಾಗಿ ನಗರಸಭಾ ಆಯುಕ್ತರು ಮಾತನಾಡಿ, ಸರ್ಕಾರದ ಆದೇಶದನ್ವಯ ಈ ರಸ್ತೆ ಅಗಲೀಕರಣಗೊಳಿಸಲು ನಗರಸಭೆ ವತಿಯಿಂದ ಮಾಡಬೇಕಾದ ಕಾರ್ಯ ಮಾಡಲಾಗುವುದು. ನ್ಯಾಯಾಲಯದ ಎದುರಿಗಿರುವ ಕಟ್ಟಡಗಳು ರಸ್ತೆ ವಿಸ್ತೀರ್ಣದ ವ್ಯಾಪ್ತಿಯಲ್ಲಿ ಬರುತ್ತದೆಯೇ ಎಂದು ಅಳತೆ ಮಾಡಿ ಗುರುತು ಹಾಕಲಾಗುತ್ತದೆ. ಅಕ್ರಮ ಕಟ್ಟಡಗಳಾಗಿದ್ದರೆ ಅವುಗಳ ತೆರವಿಗೆ ಶೀಘ್ರಕ್ರಮ ಕೈಗೊಳ್ಳಲಾಗುವುದು. ಸಕ್ರಮ ಕಟ್ಟಡಗಳಾಗಿದ್ದರೆ ಅವುಗಳ ಮಾಲಿಕರಿಗೆ ಪೂರ್ವಭಾವಿ ತಿಳುವಳಿಕೆ ಪತ್ರನೀಡಿ ಕಾನೂನು ಪ್ರಕಾರ ನಿಗಧಿತ ಅವಧಿ ಪೂರೈಸಿದ ತರುವಾಯ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಇದಕ್ಕೆ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸಹಮತ ವ್ಯಕ್ತಪಡಿಸಿದರು.

ನಾಗರೀಕರ ಬೆಂಬಲ-ಮಾಲೀಕರ ಅಪಸ್ವರ
ವಕೀಲರು ಸಾರ್ವಜನಿಕ ಹಿತಾಸಕ್ತಿಯಿಂದ ರಸ್ತೆ ಅಗಲೀಕರಣದಲ್ಲಿ ಆಗುತ್ತಿರುವ ತಾರತಮ್ಯ ನೀತಿ ವಿರೋಧಿಸಿ ಮತ್ತು ಅನಗತ್ಯವಾಗಿ ಮರಗಳನ್ನು ಕಡಿದು ಹಾಕಿರುವುದನ್ನು ವಿರೋಧಿಸಿ ರಸ್ತೆಗಿಳಿದು ಹೋರಾಟ ನಡೆಸುತ್ತಿರುವುದಕ್ಕೆ ನಾಗರೀಕರು ಮುಕ್ತಕಂಠದಿಂದ ಪ್ರಶಂಸಿಸಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ಇದಕ್ಕೆ ವಿರುದ್ಧವಾಗಿ ನ್ಯಾಯಾಲಯದ ಎದುರಿಗಿರುವ ಕೆಲವು ಅಕ್ರಮ ಕಟ್ಟಡಗಳ ಮಾಲೀಕರು ಹಾಗೂ ರಾಜಕಾರಣಿಗಳ ಬೆಂಬಲಿಗರು ಸಭೆಯಲ್ಲಿ ಅಪಸ್ವರ ಎತ್ತಲು ಮುಂದಾದರು. ಆಗ ನಾಗರೀಕರು ಅವರ ವಿರುದ್ಧ ಹರಿಹಾಯ್ದ ಪರಿಣಾಮ ಅವರುಗಳು ಸುಮ್ಮನಾದರು.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್, ಉಪಾಧ್ಯಕ್ಷ ಜಯರಾಂ, ಕಾರ್ಯದರ್ಶಿ ರಾಜು, ಸಹಕಾರ್ಯದರ್ಶಿ ಮೋಹನ್, ಖಜಾಂಚಿ ರಂಗಪ್ಪ ಸೇರಿದಂತೆ ನೂರಾರು ವಕೀಲರು ಸಾರ್ವಜನಿಕರು ಭಾಗವಹಿಸಿದ್ದರು.

(ವರದಿ: ಕೆ.ಎಸ್. ಸುಧೀಂದ್ರ)

Get in Touch With Us info@kalpa.news Whatsapp: 9481252093

Tags: AdvocateBhadravathiKannada News WebsiteLatestNewsKannadaLawyers AssociationMalnad NewsprotestPWDRoad Wideningನ್ಯಾಯಾಲಯಭದ್ರಾವತಿರಸ್ತೆ ಅಗಲೀಕರಣವಕೀಲರ ಸಂಘ
Share204Tweet123Send
Previous Post

ಕೊಪ್ಪಳದ ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ 49 ನೆಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

Next Post

ಕೇಂದ್ರ, ರಾಜ್ಯ ಬಜೆಟ್ ಕೇಳಿದ್ದೀರಿ: ಆದರೆ ಗ್ರಾಮ ಪಂಚಾಯ್ತಿಗೆ ಬಜೆಟ್ ಕೇಳಿದ್ದೀರಾ? ಇಲ್ಲಿ ಮಂಡನೆಯಾಗಿದೆ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೇಂದ್ರ, ರಾಜ್ಯ ಬಜೆಟ್ ಕೇಳಿದ್ದೀರಿ: ಆದರೆ ಗ್ರಾಮ ಪಂಚಾಯ್ತಿಗೆ ಬಜೆಟ್ ಕೇಳಿದ್ದೀರಾ? ಇಲ್ಲಿ ಮಂಡನೆಯಾಗಿದೆ ನೋಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

March 25, 2026
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

March 25, 2026
Yogada Satsang Society brings out Kannada version on Kriya Yoga today

ಧಾರವಾಡ | ಇಂದು ಸಂಜೆ ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಜಾಗೃತಿ ಕಾರ್ಯಕ್ರಮ

March 25, 2026
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

March 25, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL