Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಹೊಸನಗರ

ಸೇವೆಯ ಮುಂದೆ ಸಂಪತ್ತು ಗೌಣ: ರಾಘವೇಶ್ವರ ಶ್ರೀ ಅಭಿಮತ

April 13, 2019
in ಹೊಸನಗರ
0 0
0
Share on facebookShare on TwitterWhatsapp
Read - 2 minutes

ರಾಮಚಂದ್ರಾಪುರ ಮಠ: ಸಾಮೂಹಿಕ ಪ್ರಾರ್ಥನೆಗೆ ಬಹಳ ದೊಡ್ಡ ಶಕ್ತಿ ಇದ್ದು, ಜನ ಮನ ಸೇರಿದಲ್ಲಿ ಜನಾರ್ಧನ ಪ್ರೀತಿ ಇರುತ್ತದೆ. ಜೀವ ಚೈತನ್ಯಗಳು ಸೇರಿದಾಗ ದೇವ ಚೈತನ್ಯದ ಪ್ರಾವಿರ್ಭಾಗ್ಯವಾಗುತ್ತದೆ. ಧಾರಾಕಾರವಾದ ಭಕ್ತಿಯ ಸಮರ್ಪಣೆ ಮಾಣಿಮಠದಲ್ಲಿ ನಡೆದಿದ್ದು, ಮಹಾಕ್ಷೇತ್ರವಾಗಿದೆ. ಸೇವೆಯ ಮುಂದೆ ಸಂಪತ್ತು ಗೌಣ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದರು.

ಅವರು ಗುರುವಾರ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ 26ನೆಯ ಯೋಗಪಟ್ಟಾಭಿಷೇಕ ದಿನದ ಅಂಗವಾಗಿ ನಡೆದ ಮಹಾಪಾದುಕಾ ಪೂಜೆ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು.


ಮಾಣಿ ಮಠದಲ್ಲಿ ಸ್ಥಳವಕಾಶದ ಕೊರತೆ ಆಗುವಷ್ಟು ರೀತಿಯಲ್ಲಿ ಪಾದ ಪೂಜೆ ನಡೆದಿದೆ. ಮಠದ ಹಾಗೂ ಮಠಗಳ ಇತಿಹಾಸದಲ್ಲಿ ಈ ಪಾದುಕಾಪೂಜೆ ವಿಶ್ವವಿಕ್ರಮವಾಗಿದೆ. ಸಾವಿರ ಸಾವಿರ ಸದ್ಭಾವಗಳ ಸಮಾವೇಶ ಮಹಾಪಾದಪೂಜೆಯ ಮೂಲಕ ನಡೆದಿದೆ. ಮಹಾಗುರು ಸಮಾರಾಧನೆಯಿಂದ ಈ ಮಣ್ಣಿನ ಕಣಕ್ಕೆ ಮಹಾಪುಣ್ಯ ಒದಗಿ ಬಂತು. ಮಾಣಿಯ ಮಣ್ಣು ಮಾಣಿಕ್ಯವಾಗಿದ್ದು, ಎಸೆಯುವ ಕಲ್ಲುಗಳೂ ವಜ್ರವಾಗುವುದು ಈ ಕ್ಷೇತ್ರದ ವಿಶೇಷ ಎಂದರು.


ಬಿ.ಕೆ.ಎಸ್ ವರ್ಮಾ ಹಾಗೂ ನೀರ್ನೈ ಗಣಪತಿ ಅವರುಗಳ ಕುಂಚಕೌಶಲ್ಯ ಹಾಗೂ ಡಾ. ಶಾರದಾ ಜಯಗೋವಿಂದ ಅವರ ಶಬ್ದಕೌಶಲ್ಯದಿಂದ ಮೂಡಿಬಂದಿರುವ ಶ್ರೀರಾಘವೇಶ್ವರ ಮಹಾಸ್ವಾಮಿಗಳವರ ಜೀವನ ಚಿತ್ರಕಥೆ ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು. ಗೋಸ್ವರ್ಗದಲ್ಲಿ ಮೇ ತಿಂಗಳಲ್ಲಿ ನಡೆಯುವ ಮಕ್ಕಳ ಮಹಾ ಸಮ್ಮೇಳನ ಆಮಂತ್ರಣ ಬಿಡುಗಡೆ ಮಾಡಲಾಯಿತು.


ಶ್ರೀ ಮಠದ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜಿ. ಭಟ್, ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಭಾರತೀ ಪ್ರಕಾಶನದ ಕಾರ್ಯದರ್ಶಿ ಅನುರಾಧಾ ಪಾರ್ವತಿ, ಗೋಸ್ವರ್ಗದ ಅಧಕ್ಷ ಆರ್.ಎಸ್. ಹೆಗಡೆ, ಭಾರತೀಯ ಗೋಪರಿವಾರದ ಮಹೇಶ್ ಚಟ್ನಳ್ಳಿ, ಜೀವನದಾನ ಮತ್ತು ಯೋಗಪಟ್ಟಾಭಿಷೇಕ ದಿನ ಆಯೋಜನ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಆಯೋಜನ ಸಮಿತಿ ಪ್ರಧಾನ ಕಾರ್ಯದರ್ಶಿ ಸೇರಾಜೆ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಬಂಗಾರಡ್ಕ ಜನಾರ್ದನ ಭಟ್, ಗಣೇಶ್ ಭಟ್ ಮೈಕೆ ಮತ್ತು ಮಠದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಬಂಗಾರಡ್ಕ ಜನಾರ್ದನ ಭಟ್ ದಂಪತಿಗಳು ಸಭಾ ಪೂಜೆ ನಡೆಸಿದರು. ಕಾರ್ಯದರ್ಶಿ ಸತ್ಯನಾರಾಯಣ ಶರ್ಮ ಪ್ರಸ್ತಾವನೆಗೈದರು. ಹವ್ಯಕ ಮಹಾಮಂಡಲ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು ಅವಲೋಕಿಸಿದರು. ಜೀವನ ಚಿತ್ರ ಪುಸ್ತಕ ಮಾಹಿತಿಯನ್ನು ಶಾರದಾ ಜಯಗೋವಿಂದ ನಡೆಸಿದರು. ಯು.ಎಸ್. ವಿಶ್ವೇಶ್ವರ ಭಟ್ ಕಾರ್ಯಕ್ರಮ ನಿರೂಪಿಸಿದರು.


ಭಕ್ತಿಗೆ ದೇವರು ಒಲಿದ ಪರಿ
ಪಾದಪೂಜೆ ಆರಂಭಕ್ಕೂ ಮೊದಲಿನ ಮಿಂಚು ರಾಮನ ಮಂದಹಾಸದ ಬೆಳಕಾದರೆ, ಗುಡುಗು ರಾಮನ ನಗುವಿನ ನಾದವಾಗಿದೆ. ಬಳಿಕ ಬಿದ್ದ ನಾಲ್ಕಾರು ಹನಿಗಳು ರಾಮನ ಆನಂದ ಭಾಷ್ಪವಾಗಿದೆ. ಭಕ್ತರ ಭಕ್ತಿಗೆ ರಾಮ ಸೇರಿ ಗುರು ಪರಂಪರೆ ಸಂತೋಷ ವ್ಯಕ್ತ ಪಡಿಸಿದ ಪರಿ ಇದು ಎಂದು ಶ್ರೀ ಗಳು ಹೇಳಿದರು.

ಮಹಾಪಾದುಕಾ ಪೂಜೆ
102 ವಲಯದ 4414 ಮಂದಿ ಮಹಾ ಪಾದುಕಾ ಪೂಜೆಯಲ್ಲಿ ಭಾಗವಹಿಸಿದ್ದು, ಪ್ರಾತಃಕಾಲ 6 ರಿಂದ ಪೂಜಾಕಾರ್ಯ ಆರಂಭವಾಗಿದ್ದು, ಮೂರು ತಂಡಗಳಾಗಿ ವಿಭಾಗಿಸಿ ಅವಕಾಶ ಕಲ್ಪಿಸಲಾಯಿತು. 5 ಸಾವಿರಕ್ಕೂ ಅಧಿಕ ಮಂದಿ ಕುಟುಂಬ ಸಮೇತರಾಗಿ ಧಾಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Tags: HosanagaraKannada NewsMalnad NewsRaghaveshwara SwamijiRamachandrapura muttShivamoggaರಾಮಚಂದ್ರಾಪುರ ಮಠಶ್ರೀ ರಾಘವೇಶ್ವರ ಭಾರತೀ ಸ್ವಾಮಿ
Previous Post

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಉಳವಿ, ನಿಸರಾಣಿ ಭಾಗದಲ್ಲಿ ಹೇಗಿದೆ ಗೊತ್ತಾ ಫೈಟ್?

Next Post

ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!