No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಕ್ಕಳು ಮನೆಯಿಂದಲೇ ಕಲಿಯಲು ಆರಂಭವಾಗಿದೆ ಯುಟ್ಯೂಬ್ ಚಾನೆಲ್

kalpa News by kalpa News
April 17, 2020
in Small Bytes, ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯವು ಸಂಕಷ್ಟದಲ್ಲಿರುವ ಈ ಸಮಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಮನೆಯಲ್ಲಿರುವ ಮಕ್ಕಳನ್ನು ತಲುಪಲು ಒಂದು ಯುಟ್ಯೂಬ್ ಚಾನೆಲ್ ಅನ್ನು ಪ್ರಾರಂಭಿಸಿದೆ.

ಈ ಯುಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲು ಉದ್ದೇಶಿಸಿರುವ ಸಾಮಗ್ರಿಗಳನ್ನು ಇತರೆ ಮಾಧ್ಯಮಗಳಾದ ರೇಡಿಯೋ/ಟಿವಿ/ಇಂಟರ್ ನೆಟ್‌ನಲ್ಲಿಯೂ ಪ್ರಸಾರ ಮಾಡಲು ಸೂಕ್ತವಾಗಿರುವಂತೆ ರೂಪಿಸಲಾಗಿದೆ.

ರಜೆಯ ಕಾರಣ ಮನೆಯಲ್ಲಿರುವ ಮಕ್ಕಳಿಗೆ ಕತೆ, ಹಾಡು, ಚಿತ್ರ ಕಲೆ, ಸಂಗೀತ, ಕಿರು ನಾಟಕ, ಕ್ರಾಫ್ಟ್‌, ಒಗಟು, ಗಾದೆ, ಮ್ಯಾಜಿಕ್, ಪದಬಂಧ ಇತ್ಯಾದಿಗಳ ಮೂಲಕ ತಲುಪಿ, ಅವರನ್ನು ರಂಜಿಸಲು ಹಾಗೂ ಅವರನ್ನು ತೊಡಗಿಸಿಕೊಳ್ಳಲು ಉದ್ದೇಶಿಸಿದೆ. ಈ ಮಕ್ಕಳ ಯುಟ್ಯೂಬ್ ಚಾನೆಲ್ ಗೆ ’ಮಕ್ಕಳ ವಾಣಿ: ನಲಿಯೋಣ, ಕಲಿಯೋಣ’ ಎಂದು ಹೆಸರಿಸಲಾಗಿದೆ.

ಪ್ರತಿ ದಿನ ಮುಂಜಾನೆ 10.30 ಗಂಟೆಗೆ ಯುಟ್ಯೂಬ್ ಚಾನೆಲ್’ನಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲು ಉದ್ದೇಶಿಸಿದೆ. ಈ ಸಮಯದಲ್ಲಿ ಕಾರ್ಯಕ್ರಮಗಳ ವೀಕ್ಷಣೆ ಮಾಡಲು ಶಿಕ್ಷಕರು ಅಥವಾ ಕುಟುಂಬದ ಸ್ನೇಹಿತರ ಬಳಿ ಇಂಟರ್ ನೆಟ್ ಸಂಪರ್ಕವಿರುವ ಇರುವ ಸ್ಮಾರ್ಟ್ ಫೋನ್ ಅನ್ನು ಮಕ್ಕಳಿಗೆ ನೀಡಲು ಪೋಷಕರಿಗೆ ಮನವಿ ಮಾಡಲಾಗುವುದು.

ಯುಟ್ಯೂಬ್’ನಲ್ಲಿ ಪ್ರಸಾರ ಮಾಡುವ ಸಾಮಗ್ರಿಗಳನ್ನು ಶಿಕ್ಷಕರು, ಶಿಕ್ಷಣಾಸಕ್ತರಿಂದ ಪಡೆಯಲು ಕರೆ ನೀಡಲಾಗಿದೆ. ಸ್ವೀಕೃತದ ಸಾಮಗ್ರಿಗಳನ್ನು ಅವುಗಳ ನಾವೀನ್ಯತೆ, ಸೂಕ್ತತೆ ಹಾಗೂ ಸಮಂಜಸತೆಯ ಬಗ್ಗೆ ಪರಿಶೀಲಿಸಿ, ಪ್ರಸಾರ ಮಾಡುವ ಕುರಿತ ನಿರ್ಧಾರವನ್ನು ತೆಗೆದುಕೊಳ್ಳಲು ಸಂಪಾದಕ ಮಂಡಳಿಯನ್ನು ರಚಿಸಲಾಗಿದೆ. ಎಲ್ಲಾ ವಯೋಮಾನದ ಗುಂಪುಗಳಿಗೆ ಸರಿಹೊಂದುವಂತೆ ಪ್ರಾರಂಭದಲ್ಲಿ ಅರ್ಧ ಗಂಟೆ ನಂತರದ ದಿನಗಳಲ್ಲಿ ಪ್ರತಿ ದಿನ ಒಂದು ಗಂಟೆಯಂತೆ ಕಾರ್ಯಕ್ರಮವನ್ನು ಶಾಲೆಗಳು ಪುನರಾರಂಭ ಆಗುವವರೆಗೆ ಪ್ರಸಾರ ಮಾಡಲು ಯೋಜನೆ ರೂಪಿಸಲಾಗಿದೆ.

ಶಿಕ್ಷಕರು ಅಥವಾ ಶಿಕ್ಷಣಾಸಕ್ತರು ಸೃಜಿಸುವ ವಿಷಯವು ಹೊಸದಾಗಿದ್ದು, ಮಕ್ಕಳಲ್ಲಿ ಆಸಕ್ತಿ, ಕುತೂಹಲ ಹುಟ್ಟಿಸುವಂತಿರಬೇಕು ಹಾಗೂ ಅವರನ್ನು ತೊಡಗಿಸುವಂತಹ ಕೆಲವು ಚಟುವಟಿಕೆಗಳನ್ನೂ ಸಹ ಸಿದ್ಧಪಡಿಸಬಹುದು. ಸಿದ್ಧಪಡಿಸುವ ಸಾಮಗ್ರಿಗಳು ತರಗತಿಗಳ ಪಾಠಗಳು ಅಥವಾ ಪಠ್ಯಕ್ರಮಕ್ಕೆ ಸಂಬಂಧಿಸಿರುವ ಅಗತ್ಯತೆ ಇಲ್ಲ. ದೃಕ್ ಶ್ರವಣ ಸಾಮಗ್ರಿಯಾಗಿ ಪ್ರಸಾರ ಮಾಡಬಹುದಾದ ಯಾವುದೇ ಸಾಮಗ್ರಿಯನ್ನು ನೀವು ಸಿದ್ಧಪಡಿಸಬಹುದು. ಉದಾಹರಣೆಗೆ ಕಥಾವಾಚನ, ಪುಸ್ತಕ ಪರಿಚಯ ಓದು, ಪ್ರಯೋಗಗಳು/ಚಟುವಟಿಕೆಗಳು/ಮ್ಯಾಜಿಕ್ ಇತ್ಯಾದಿಗಳ ವಿವರಣೆಯುಕ್ತ ಪ್ರದರ್ಶನ, ಗಾದೆಗಳು, ಒಗಟುಗಳು, ಓರೆಗಾಮಿ, ಇತ್ಯಾದಿ. ಇಲ್ಲಿ ನೀಡಿರುವುದು ಕೆಲವು ಉದಾಹರಣೆಗಳು ಮಾತ್ರ. ಕಲ್ಪನಾ ಶಕ್ತಿ, ಸೃಜನಶೀಲತೆಗಳಿಗನುಗುಣವಾಗಿ ಮಕ್ಕಳಿಗೆ ಸೂಕ್ತ ಹಾಗೂ ಸಮಂಜಸವೆನಿಸುವ ಯಾವುದೇ ಸಾಮಗ್ರಿಯನ್ನು ಸಿದ್ದಪಡಿಸಬಹುದಾಗಿದೆ.

ಸೃಜಿಸಿದ ಸಾಮಗ್ರಿಯನ್ನು ವೀಕ್ಷಿಸಲು ಉತ್ಸಾಹ, ಆಸಕ್ತಿಗಳನ್ನು ತೋರಿಸುತ್ತಾರಾ ಮತ್ತು ಅಂತಹುದೇ ಕಾರ್ಯಕ್ರಮಗಳನ್ನು ಮತ್ತೆ ನೋಡಲು ಇಚ್ಚಿಸುತ್ತಾರಾ ಎಂಬುದೇ ಸಿದ್ಧಪಡಿಸಿದ ಸಾಮಗ್ರಿಗಳು ಪ್ರಸಾರಕ್ಕೆ ಅರ್ಹವಿವೆ ಎಂಬುದನ್ನು ನಿರ್ಧರಿಸಬಲ್ಲವು. ಈ ಅಂಶಗಳನ್ನು ಆಧಾರಿಸಿ ವಿಡಿಯೋಗಳನ್ನು ಸಲ್ಲಿಸಲು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣದ ಮೂಲಕ ಕೋರಲಾಗಿದೆ.

ಶಿಕ್ಷಕರು, ಶಿಕ್ಷಣಾಸಕ್ತರು ಹಾಗೂ ಶಿಕ್ಷಣ ಕುರಿತಂತೆ ಕೆಲಸ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಂದ ಅಭೂತಪೂರ್ವ ಎನಿಸುವಷ್ಟು ಸ್ಪಂದನೆ ದೊರೆತಿದೆ. ಸ್ವೀಕೃತವಾದ ಸಾಮಗ್ರಿಗಳನ್ನು ಸಂಪಾದಕ ಮಂಡಳಿಯು ಗಮನಿಸಿ, ಸೂಕ್ತವಾದವುಗಳನ್ನು ಆಯ್ಕೆ ಮಾಡಿ, ಯುಟ್ಯೂಬ್ ಚಾನಲ್’ನಲ್ಲಿ ಪ್ರಸಾರ ಮಾಡಲು ಸಿದ್ಧಗೊಳಿಸಲಾಗಿದೆ.

ಈ ಚಾನೆಲ್ ಗೆ ಅಧಿಕ ಪ್ರಮಾಣದಲ್ಲಿ ಎಲ್ಲರೂ ಚಂದಾದಾರರಾಗಲು ಕೋರಿದೆ. ಇದರ ಲಿಂಕ್ ಈ ಕೆಳಗಿನಂತಿದೆ.

https://www.youtube.com/channel/UCDaVbK0F5b7y4hgSZrTwZNg

ಮಕ್ಕಳ ವಾಣಿ ಯುಟ್ಯೂಬ್ ಚಾನೆಲ್ ಗೆ ಮಕ್ಕಳೂ ಸೇರಿದಂತೆ ಎಲ್ಲರೂ ಸೂಕ್ತವಾದ 5 ರಿಂದ 6 ನಿಮಿಷಗಳ ವಿಡಿಯೋಗಳನ್ನು ಞ್ಝ್ಞಜಿಃಜಞಜ್ಝಿ.್ಚಟಞಗೆ ಅಥವಾ ವಾಟ್ಸಪ್ ಅಥವಾ ಟೆಲಿಗ್ರಾಂ (ಸಂಖ್ಯೆ: 9449432614)ಮೂಲಕ ಕಳುಹಿಸಲು ಶಿಕ್ಷಕರು ಹಾಗೂ ಶಿಕ್ಷಣಾಸಕ್ತರಿಗೆ ವಿನಂತಿಸಿದೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUDepartment of Primary and Secondary EducationKannadaNewsWebsiteKarnataka EducationMakkalavani youtube channelYoutube Channelಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಬೆಂಗಳೂರುಮಕ್ಕಳ ವಾಣಿ ಯುಟ್ಯೂಬ್ ಚಾನೆಲ್ಯುಟ್ಯೂಬ್ ಚಾನೆಲ್‌
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲ: ರಾಜು ತಲ್ಲೂರು ಆರೋಪ

Next Post

ಕೂಡ್ಲಿಗೆರೆಯ ಮೊಬೈಲ್ ಅಂಗಡಿಯಲ್ಲಿ ಭಾರೀ ಕಳ್ಳತನ

kalpa News

kalpa News

Next Post
ಕೂಡ್ಲಿಗೆರೆಯ ಮೊಬೈಲ್ ಅಂಗಡಿಯಲ್ಲಿ ಭಾರೀ ಕಳ್ಳತನ

ಕೂಡ್ಲಿಗೆರೆಯ ಮೊಬೈಲ್ ಅಂಗಡಿಯಲ್ಲಿ ಭಾರೀ ಕಳ್ಳತನ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL