ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬಳ್ಳಾರಿ: ಬಳ್ಳಾರಿ, ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ರಿಸರ್ವ್ ಮಾಡಿ ಇರಿಸಲಾಗಿದ್ದು, ಅಧಿಕಾರಿಗಳ ಜೊತೆಯಲ್ಲಿ ಎಲ್ಲ ರೀತಿಯ ಸಿದ್ದತಾ ಮಾತುಕತೆಗಳು ನಡೆದಿವೆ ಎಂದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅಲ್ಲದೆ, ದಿನನಿತ್ಯ ಬಳಕೆಗೆ ಬೇಕಾಗುವ ಸಾಮಾಗ್ರಿಗಳು ಜನತೆಗೆ ಸಿಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಸೂಚನೆ ನೀಡಿದರು.
ಭತ್ತ ಕಟ್ಟಾವು ಮಾಡುವ ರೈತರಿಗೆ ಸರ್ಕಾರ ನೆರೆವು ನೀಡಲಿದೆ. ಬೇರೆ ಜಿಲ್ಲೆಯಿಂದ ಬರುವವರ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಆರೋಗ್ಯ, ಕಂದಾಯ, ಪೊಲೀಸ್ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಿಳಿಸಿ ಅಭಿನಂದನೆ ಸಲ್ಲಿಸಿದರು.
ಜನರನ್ನು ಜಾಗೃತಿ ಮಾಡುವಲ್ಲಿ ಮಾಧ್ಯಮ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಬಹುತೇಕ ಎಲ್ಲ ಕಡೆಗೆ ಬಂದ್ ಆಗಿದೆ ಎಂದವರು ತಿಳಿಸಿದರು.
(ವರದಿ: ಎಂ.ಎಂ. ನಾಡಿಗೇರ್, ಹೊಸಪೇಟೆ)
Get in Touch With Us info@kalpa.news Whatsapp: 9481252093
Discussion about this post