ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿಯಲ್ಲಿ ಕಂಬ ಬದಲಾವಣೆ ಹಮ್ಮಿಕೊಂಡಿರುವುದರಿಂದ ಈ ವಿವಿ ವ್ಯಾಪ್ತಿಯಲ್ಲಿ ಬರುವ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವುಟಾಗಲಿದೆ.
ಕೋಟೆರಸ್ತೆ, ಕೋಟೆ ಪೊಲೀಸ್ ಸ್ಟೇಷನ್ ರಸ್ತೆ, ಅರೆ ದುರ್ಗಮ್ಮನ ಕೇರಿ, ಓಲ್ಡ್ ಬಾರಲೈನ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಪ್ಪಾಜಿರಾವ್ ಕಾಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ ಎಂದು ನಗರ ಉ ವಿ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post