ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗಗಳಲ್ಲಿ ನಾಳೆಯಿಂದ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ರಾಜ್ಯವನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜಾರಿ ಮಾಡಲಾಗಿದ್ದ ಲಾಕ್ ಡೌನ್ ನಾಳೆಯಿಂದ ಇರುವುದಿಲ್ಲ. ಮಾತ್ರವಲ್ಲ ರಾಜ್ಯದ ಯಾವುದೇ ಜಿಲ್ಲೆಗಳಲ್ಲಿ ನಾಳೆಯಿಂದ ಲಾಕ್ ಡೌನ್ ಇರುವುದಿಲ್ಲ. ಜನರು ತಮ್ಮ ತಮ್ಮ ಕೆಲಸಗಳಲ್ಲಿ ಸರಾಗವಾಗಿ ತೊಡಗಿಕೊಳ್ಳಬಹುದು ಎಂದರು.
ಕೋವಿಡ್19 ತಡೆಗೆ ಲಾಕ್ ಡೌನ್ ಒಂದೇ ಮಾರ್ಗವಲ್ಲ. ಇದರ ತಡೆ ಎಷ್ಟು ಮುಖ್ಯವೋ ಜನರ ಜೀವನ ಹಾಗೂ ರಾಜ್ಯದ ಆದಾಯವೂ ಸಹ ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಲಾಕ್ ಡೌನ್ ತೆಗೆಯಲಾಗಿದೆ ಎಂದರು.
Get In Touch With Us info@kalpa.news Whatsapp: 9481252093
Discussion about this post