No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಂಗನ ಕಾಯಿಲೆಗೆ ಕಾರಣರಾದ ಭ್ರಷ್ಟರು ಇವರುಗಳೇ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 3, 2019
in ಶಿವಮೊಗ್ಗ
0
ಮಂಗನ ಕಾಯಿಲೆಗೆ ಕಾರಣರಾದ ಭ್ರಷ್ಟರು ಇವರುಗಳೇ!
Share on FacebookShare on TwitterShare on WhatsApp

ದಿನ ಬೆಳಗಾದರೆ ಕರ್ನಾಟಕ ರಾಜ್ಯದಾದ್ಯಂತ ದಿನಪತ್ರಿಕೆಗಳಲ್ಲಿ, ಮಾಧ್ಯಮಗಳಲ್ಲಿ ಒಂದೇ ಸುದ್ದಿ. ಪಶ್ಚಿಮ ಘಟ್ಟ ಶ್ರೇಣಿ, ಸಹ್ಯಾದ್ರಿ ಶ್ರೇಣಿಯ ಕಾಡಿನಂಚಿನಲ್ಲಿ ವಾಸಿಸುತ್ತಿರುವ ಜನರಿಗೆ ಮಂಗನ ಕಾಯಿಲೆ ಬಿಸಿ ಹಾಗೂ ಹಲವಾರು ಜನರ ಸಾವು, ಅನೇಕರು ಅಸ್ಪತ್ರೆಗೆ ದಾಖಲು, ಲಸಿಕೆ ಹಾಕುವ ಕಾರ್ಯಕ್ರಮ ಪ್ರಾರಂಭ.

ಸಾಗರ ತಾಲೂಕಿನಿಂದ ಆರಂಭವಾದ ಮಂಗನಕಾಯಿಲೆ ವ್ಯಾಧಿ, ಸೊರಬ, ತೀರ್ಥಹಳ್ಳಿ, ಭದ್ರಾವತಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದೂರದ ಊರಾದ ಕೋಲಾರಗಳಲ್ಲಿ ಪ್ರತಿನಿತ್ಯ ಮಂಗಗಳ ಶವಗಳು ಪತ್ತೆಯಾಗುತ್ತಿವೆ. ವ್ಯಾಧಿಯ ಪ್ರಮಾಣ ದಿನೇ ದಿನೇ ಏರುಮುಖವಾಗುತ್ತಿದೆ. ಸಾವಿನ ಸುದ್ದಿಯೂ ದಿನನಿತ್ಯದ ಸುದ್ದಿಯಾಗಿದೆ. ಮಂಗನ ಕಾಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ನಿಷ್ಕಿçಯವಾಗಿದೆ.

ಈ ಕಾಯಿಲೆ ಕಾಣಿಸಿಕೊಂಡ ಎಲ್ಲ ಗ್ರಾಮಗಳು ಕಾಡಿನ ಅಂಚಿನಲ್ಲಿಯೇ ಇವೆ. ಅವರಿಗೆ ಹಲವು ಸವಾಲುಗಳು, ರೈತ ಮತ್ತು ವನ್ಯಪ್ರಾಣಿಗಳ ಸಂಘರ್ಷಗಳು, ಮೂಲಭೂತ ಸೌಕರ್ಯದಿಂದ ವಂಚಿತರಾದವರು ಇಲ್ಲಿ ಬದುಕನ್ನು ಸವೆಸುತ್ತಿದ್ದಾರೆ. ಸರ್ಕಾರ ಬಗರ್‌ಹುಕುಂ ಸಾಗುವಳಿ ಕಾನೂನು, ಅಕ್ರಮ ಸಕ್ರಮ, 94-ಸಿ, ಕೆರೆ ಕುಂಟೆಗಳ ಅತಿಕ್ರಮಣ, ಭೂ ಕಬಳಿಕೆ, ಒತ್ತುವರಿಗಾಗಿ ಕಾಡಿಗೆ, ಹುಲ್ಲಿನ ಗುಡ್ಡಗಳಿಗೆ ಬೆಂಕಿ ಹಚ್ಚುವ ಮೂಲಕ ಕಾಡು – ಹುಲ್ಲುಗಾವಲುಗಳು ನಾಶಹೊಂದಿ ಆ ಜಾಗದಲ್ಲಿ ಲಂಟಾನ, ಕಾಂಗ್ರೆಸ್ ಕಳೆಗಳೇ ಮೊದಲಾದ ಉಣುಗಿಗೆ ಅನುಕೂಲವಾದ ಪೊದೆಗಳು ಬೆಳೆದು ನಿಲ್ಲುವಂತಾಗಿದೆ. ಪೊದೆಗಳ ನಡುವೆ ಬೆಳೆದ ಉಣುಗುಗಳು ಜನ ಜಾನುವಾರುಗಳ ಸಂಪರ್ಕಕ್ಕೆ ಬಂದು ನಾಡಿಗೆ ಲಗ್ಗೆ ಇಟ್ಟಿವೆ.

ತಲತಲಾಂತರದಿಂದ ನ್ಯಾಯಯುತವಾಗಿ ರೈತ ಕುಟುಂಬಗಳು ಬಗರ್‌ಹುಕುಂ ಮಾಡಿ ಸಾಗುವಳಿ ಮಾಡುತ್ತಿರುವವರಿಗೆ ಇಂದಿಗೂ ಹಕ್ಕುಪತ್ರಗಳು ದೊರೆಯದೇ ಅತಂತ್ರವಾಗಿವೆ. ರಾಜಕಾರಣಿಗಳು ಓಟಿನ ದುರಾಸೆಗಾಗಿ ಹಾಗೂ ಹಣ ಸಂಪಾದನೆಗಾಗಿ ಬೇಕಾಬಿಟ್ಟಿ ಅತಿಕ್ರಮಣದ ಮೂಲಕ, ಕಾಡಿಗೆ ಬೆಂಕಿ ಹಚ್ಚಿಸಿ ಕಾಡು ಮುಕ್ತವನ್ನಾಗಿಸಿ ಸದರಿ ಜಾಗಗಳನ್ನು ತಾವು ಮತ್ತು ತಮ್ಮವರಿಗೆ ಮಂಜೂರು ಮಾಡಿಸಿಕೊಡುತ್ತಿದ್ದಾರೆ.

ಮಾಜಿ ಕಂದಾಯ ಮಂತ್ರಿಗಳು ಸೇರಿದಂತೆ ಅನೇಕ ರಾಜಕಾರಣಿಗಳು ನೀಡಿ ನೀರು, ಮರಳು, ಸರ್ಕಾರದ ಜಾಗಗಳು, ಮನುಷ್ಯರಿಗೇ ಹೊರತು ಪ್ರಾಣಿಗಳಿಗಲ್ಲ ಎಂದು ಹೇಳಿ ಇದಕ್ಕೆ ಮನಸೋಇಚ್ಛೆ ಕುಮ್ಮಕ್ಕು ನೀಡುತ್ತಿರುವುದು ವಿಷಾದನೀಯ. ಇದಕ್ಕೆ ಭ್ರಷ್ಟ ಅಧಿಕಾರಿಗಳೂ ಕಾನೂನು ಸಮ್ಮತವಲ್ಲದಿದ್ದರೂ ಹಕ್ಕುಪತ್ರ ದೊರೆಯುವಂತೆ ಮಾಡಲು ಸಹಕರಿಸುತ್ತಿದ್ದಾರೆ. ಹೀಗೆ ನಾಶವಾದ ಕಾಡಿನ ಮಂಗಗಳೂ ಸೇರಿದಂತೆ ಇತರೆ ವನ್ಯ ಮೃಗಗಳು ನಾಡಿಗೆ ಬರುತ್ತಿರುವುದು, ಇಲ್ಲೂ ಆಹಾರ ನೀರು ದೊರೆಯದೇ ಸನಿಹದಲ್ಲಿಯೇ ಸಾಯುತ್ತಿರುವುದು ಮಂಗನ ಕಾಲೆ ಹರಡಲು ಕಾರಣವಾಗಿದೆ.

ಈಗಲಾದರೂ ಜನರು ಇಂತಹ ದುರಾಸೆಯನ್ನು ಬಿಟ್ಟು ತಮ್ಮ ಕೈಯಲ್ಲೇ ಇರುವ ಕಾಡು, ನದಿ, ಗುಡ್ಡ, ಬೆಟ್ಟಗಳ ಸಂರಕ್ಷಣೆಯ ಮೂಲಕ ಪ್ರಾಣಿ ಸಂಕುಲಕ್ಕೆ ಅವುಗಳನ್ನು ಬಿಟ್ಟುಕೊಟ್ಟಲ್ಲಿ ಮಾತ್ರ ಈ ದುರಂತಕ್ಕೊಂದು ಅಂತ್ಯ ಕಾಣಬಹುದೇನೋ. ಇಲ್ಲವಾದಲ್ಲಿ ಕೇರಳ – ಕೊಡಗಿನಲ್ಲಿ ಹೇಳಿದಂತೆ ಪ್ರಕೃತಿಯೇ ನಮಗೆ ಮುಟ್ಟಿ ನೋಡಿಕೊಳ್ಳುವಂತೆ ಪಾಠ ಹೇಳುತ್ತದೆ.

ಇನ್ನಾದರೂ ಯೋಚಿಸಿ, ಇದು ನಮಗೆ ಎಚ್ಚರಿಕೆಯ ಗಂಟೆ. ರಾಜಕಾರಣ, ಹಣದ ಆಮಿಷ, ಅತಿ ಆಸೆಗಳನ್ನು ಬದಿಗಿಟ್ಟು ನಮ್ಮ ಬದುಕನ್ನು ಹಸನು ಮಾಡಿಕೊಳ್ಳುವುದು ಬಿಡುವುದು ನಮ್ಮ ಕೈಯಲ್ಲಿದೆ. ಇಂತಹ ಕಾಲೆಗಳ ಬಿಸಿ ನಗರ ಪ್ರದೇಶಗಳಲ್ಲಿಯೇ ಕಾಲ ಕಳೆಯುತ್ತಿರುವ ರಾಜಕಾರಣಿಗಳು, ಅಧಿಕಾರಿಗಳಿಗೆ ತಗುಲಿದರೆ ಇದಕ್ಕೊಂದು ಪಶ್ಚಿಮಘಟ್ಟವೂ ಉಳಿದೀತು.

ಲೇಖನ: ಕೆ. ವೆಂಕಟೇಶ್, ಕವಲಕೋಡು

Tags: Kannada ArticleKannada NewsMangana KayilePoliticianSagaraShivamoggaWestern Ghatsಕಂದಾಯ ಮಂತ್ರಿಪಶ್ಚಿಮ ಘಟ್ಟಮಂಗನ ಕಾಯಿಲೆರೈತ ಕುಟುಂಬ
Share196Tweet123Send
Previous Post

ಪ್ರವಾಸಗರೇ ಗಮನಿಸಿ: ಫೆ.4ರಂದು ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವೇಶವಿಲ್ಲ

Next Post

ಶಿವಮೊಗ್ಗದಲ್ಲಿ ನಡೆದ ಫಲಪುಷ್ಪ ಪ್ರದರ್ಶನದ ಅಪರೂಪದ ಚಿತ್ರ ಸಂಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ನಡೆದ ಫಲಪುಷ್ಪ ಪ್ರದರ್ಶನದ ಅಪರೂಪದ ಚಿತ್ರ ಸಂಗ್ರಹ

ಶಿವಮೊಗ್ಗದಲ್ಲಿ ನಡೆದ ಫಲಪುಷ್ಪ ಪ್ರದರ್ಶನದ ಅಪರೂಪದ ಚಿತ್ರ ಸಂಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL