ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಅಪ್ರಾಪ್ತನಿಗೆ ಚಲಾಯಿಸಲು ಅವಕಾಶ ಕೊಟ್ಟಿದ್ದ ಮಾಲೀಕನಿಗೆ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ವಿಧಿಸಿರುವ ಘಟನೆ ನಡೆದಿದೆ.
ಘಟನೆ ಹಿನ್ನೆಲೆಯೇನು?
ತೀರ್ಥಹಳ್ಳಿ ಡಿವೈಎಸ್’ಪಿ ಗಜಾನನ ವಾಮನ ಅವರು ನಿನ್ನೆ ಕುಶಾವತಿ ಬಳಿಯಲ್ಲಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿಕೊಂಡು ಬಂದ ಅಪ್ತಾಪ್ತ (17)ನನ್ನು ತಡೆದು ತಪಾಸಣೆ ನಡೆಸಿದ್ದಾರೆ.
ಈ ವೇಳೆ ಆತ ಅಪ್ರಾಪ್ತ ಎಂದು ತಿಳಿದಬಂದಿದೆ. ಹೆಲ್ಮೆಟ್ ಸಹ ಧರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಪ್ರಾಪ್ತನಿಗೆ ಚಲಾಯಿಸಲು ಬೈಕ್ ನೀಡಿದ ಅದರ ಮಾಲೀಕ ಪ್ರಮೋದ್ ಎನ್ನುವವರ ವಿರುದ್ಧ ದೂರು ದಾಖಲಿಸಲಾಗಿತ್ತು.
ಅಲ್ಲದೇ, ದೂರಿನ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬೈಕ್ ಮಾಲೀಕನಿಗೆ ರೂ.20 ಸಾವಿರ ದಂದ ವಿಧಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















